Homeಅಂತರಾಷ್ಟ್ರೀಯದೇಶದಲ್ಲಿ ಯುವತಿಯರ ಮದುವೆಯ ವಯಸ್ಸು 21 ಕ್ಕೆ ಏರಿಕೆ: ಇತರ ದೇಶಗಳಲ್ಲಿ ಮದುವೆ ವಯಸ್ಸು ಹೇಗಿದೆ?

ದೇಶದಲ್ಲಿ ಯುವತಿಯರ ಮದುವೆಯ ವಯಸ್ಸು 21 ಕ್ಕೆ ಏರಿಕೆ: ಇತರ ದೇಶಗಳಲ್ಲಿ ಮದುವೆ ವಯಸ್ಸು ಹೇಗಿದೆ?

- Advertisement -
- Advertisement -

ದೇಶದಲ್ಲಿ ಯುವತಿಯರ ಮದುವೆಯ ವಯಸ್ಸನ್ನು 18ರಿಂದ 21ಕ್ಕೆ ಏರಿಸಲಾಗಿದ್ದು, ಈ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ. ವರ್ಷದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಯುವತಿಯರ ವಿವಾಹ ವಯಸ್ಸನ್ನು ಕನಿಷ್ಠ 18 ರಿಂದ 21ಕ್ಕೆ ಏರಿಸುವ ಯೋಜನೆ ಪರಿಶೀಲನೆಯಲ್ಲಿದೆ ಎಂದು ಹೇಳಿದ್ದರು.

ಈ ಪ್ರಸ್ತಾಪವನ್ನು ಜಯಾ ಜೇಟ್ಲಿ ನೇತೃತ್ವದ ನೀತಿ ಆಯೋಗದ ಕಾರ್ಯಪಡೆಯು ಬೆಂಬಲಿಸಿದ್ದು, ಸರ್ಕಾರದ ಉನ್ನತ ತಜ್ಞ ವಿಕೆ ಪಾಲ್, ಆರೋಗ್ಯ ಸಚಿವಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಕಾನೂನು ಸಚಿವಾಲಯದ ಹಿರಿಯ ಅಧಿಕಾರಿಗಳು ಕಳೆದ ವರ್ಷ ಜೂನ್‌ನಲ್ಲಿ ರಚಿಸಲಾದ ಕಾರ್ಯಪಡೆಯ ಸದಸ್ಯರಾಗಿದ್ದರು.

ಮೊದಲ ಗರ್ಭಧಾರಣೆಯ ಸಮಯದಲ್ಲಿ ಯುವತಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಎಂದು ಟಾಸ್ಕ್ ಫೋರ್ಸ್ ಒತ್ತಿ ಹೇಳಿದ್ದರಿಂದ ಡಿಸೆಂಬರ್‌ನಲ್ಲಿ ಪ್ರಸ್ತಾವನೆಯ ಶಿಫಾರಸುಗಳನ್ನು ಸಲ್ಲಿಸಲಾಗಿತ್ತು. ಈಗ ಇದಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಇದೇ ವೇಳೆ ವಿಶ್ವದ ಕೆಲವು ರಾಷ್ಟ್ರಗಳಲ್ಲಿ ಇರುವ ಮದುವೆ ವಯಸ್ಸಿನ ಮಿತಿ ಹೀಗಿದೆ.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌…!

ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ

ಇಲ್ಲಿ ಒಂದೊಂದು ರಾಜ್ಯದಲ್ಲೂ ಒಂದೊಂದು ನೀತಿಯಿದೆ. ಸಾಮಾನ್ಯವಾಗಿ 18 ವರ್ಷದ ಮೇಲ್ಪಟ್ಟವರು ಮದುವೆಯಾಗಲು ಅಡ್ಡಿಯಿಲ್ಲ. ಆದರೆ, ನೆಬ್ರಾಸ್ಕಾದಲ್ಲಿ 19 ವರ್ಷ, ಮಿಸಿಸಿಪ್ಪಿ (Mississippi) ಯಲ್ಲಿ 21 ವರ್ಷ ವಯಸ್ಸಿನ ಮಿತಿಯಿದೆ.

ಕೆನಡಾ

ಕೆನಡಾದಲ್ಲಿ ಪೋಷಕರ ಒಪ್ಪಿಗೆಯೊಂದಿಗೆ 16 ವರ್ಷಕ್ಕೆ ಮತ್ತು ಯಾರ ಒಪ್ಪಿಗೆ ಇಲ್ಲದೆ ಸ್ವಯಂ ನಿರ್ಧಾರ ತೆಗೆದುಕೊಂಡರೆ 18/19 ವರ್ಷಕ್ಕೆ ಮದುವೆಯಾಗಬಹುದು.

ಜಪಾನ್

ಜಪಾನ್‌ನಲ್ಲಿ 20 ವರ್ಷ ತುಂಬಿದ ಯುವಕ, ಯುವತಿ ಮದುವೆಯಾಗಬಹುದು. ಪೋಷಕರ ಒಪ್ಪಿಗೆಯೊಂದಿಗೆ ಯುವತಿಗೆ 16 ಮತ್ತು ಯುವಕನಿಗೆ 18 ವರ್ಷ ವಾಗಿದ್ದರೆ ಮದುವೆ ಮಾಡಬಹುದಾಗಿದೆ.

ಚೀನಾ

ಚೀನಾ ಯುವಕರ ಮದುವೆ ವಯಸ್ಸನ್ನು 22 ವರ್ಷಕ್ಕೆ ಹೆಚ್ಚಿಸಿರುವ ಏಕೈಕ ದೇಶವಾಗಿದೆ. ಇಲ್ಲಿ ಯುವಕರಿಗೆ 22 ವರ್ಷ ಯುವತಿಯರಿಗೆ 20 ವರ್ಷ ವಯಸ್ಸು ಆಗಿರಬೇಕು.

ಫ್ರಾನ್ಸ್

ಫ್ರಾನ್ಸ್‌ನಲ್ಲಿ ಮದುವೆಯಾಗಲು ಯುವಕ ಯುವತಿ ಇಬ್ಬರಿಗೂ 18 ವರ್ಷವಾಗಿರಬೇಕು.

ರಷ್ಯಾ

ರಷ್ಯಾದಲ್ಲಿ ಮದುವೆಯ ವಯಸ್ಸು 18 ವರ್ಷವಾಗಿದೆ. ಆದರೆ, ಗರ್ಭಧಾರಣೆಯಂತಹ ಸನ್ನಿವೇಶದಲ್ಲಿ ಕಾನೂನಿನ ಒಪ್ಪಿಗೆಯೊಂದಿಗೆ 16 ವರ್ಷಕ್ಕೆ ಮದುವೆಯಾಗಬಹುದು.

ಬ್ರಿಟನ್

ಬ್ರಿಟನ್‌ನಲ್ಲಿ ಮದುವೆಯ ವಯಸ್ಸು 18 ವರ್ಷವಾಗಿದೆ. ಆದರೆ, ಸ್ಕಾಟ್‌ಲ್ಯಾಂಡ್‌ನಲ್ಲಿ ಮಾತ್ರ 16ನೇ ವಯಸ್ಸಿಗೆ ಮದುಯಾಗಬಹುದು. ಪೋಷಕರು ಮತ್ತು ಕಾನೂನಿನ ಒಪ್ಪಿಗೆಯೊಂದಿಗೆ 16ನೇ ವಯಸ್ಸಿನಲ್ಲಿ ಮದುವೆ ಮಾಡಬಹುದು.

ಪಾಕಿಸ್ತಾನ

ಇಲ್ಲಿ ಯುವಕನಿಗೆ 18 ವರ್ಷವಾಗಿರಬೇಕು. ಯುವತಿಗೆ 16 ವರ್ಷ ಆದರೆ, ಪಂಜಾಬ್ ಮತ್ತು ಸಿಂಧ್ ಪ್ರಾಂತ್ಯಗಳಲ್ಲಿ ಕೆಲವೊಮ್ಮೆ 18 ವರ್ಷಕ್ಕೆ ಅನುಮತಿ ನೀಡಲಾಗಿದೆ.

ಅಫ್ಘಾನಿಸ್ತಾನ

ಇಲ್ಲಿ ಯುವಕರಿಗೆ 18 ವರ್ಷ. ಯುವತಿಗೆ 16 ವರ್ಷ. ಪೋಷಕರು ಮತ್ತು ಕಾನೂನಿನ ಒಪ್ಪಿಗೆಯೊಂದಿಗೆ ಯುವಕನಿಗೆ 18, ಯುವತಿಗೆ 15 ವರ್ಷ ವಯಸ್ಸು ನಿಗಧಿ ಮಾಡಲಾಗಿದೆ.

ಬಾಂಗ್ಲಾದೇಶ

ಬಾಂಗ್ಲಾದಲ್ಲಿ ಯುವಕರಿಗೆ 21 ವರ್ಷ ಮತ್ತು ಯುವತಿಯರಿಗೆ 18 ನಿಗಧಿಮಾಡಲಾಗಿದೆ.

ಇರಾನ್

ಇರಾನ್‌ನಲ್ಲಿ ಯುವಕನಿಗೆ 18, ಯುವತಿಗೆ 15 ತುಂಬಿದರೆ ಮದುವೆಯಾಗಬಹುದು. ಪೋಷಕರು ಮತ್ತು ಕಾನೂನಿನ ಒಪ್ಪಿಗೆಯೊಂದಿಗೆ ಯುವಕನಿಗೆ 15 ಮತ್ತು ಯುವತಿಗೆ 13 ವರ್ಷವಾಗಿದ್ದರೆ ಮದುವೆ ಮಾಡಬಹುದು.


ಇದನ್ನೂ ಓದಿ: ಯುವತಿಯರ ವಿವಾಹ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಪ್ರಸ್ತಾಪಕ್ಕೆ ಸಂಪುಟ ಒಪ್ಪಿಗೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...