Homeಅಂತರಾಷ್ಟ್ರೀಯದೇಶದಲ್ಲಿ ಯುವತಿಯರ ಮದುವೆಯ ವಯಸ್ಸು 21 ಕ್ಕೆ ಏರಿಕೆ: ಇತರ ದೇಶಗಳಲ್ಲಿ ಮದುವೆ ವಯಸ್ಸು ಹೇಗಿದೆ?

ದೇಶದಲ್ಲಿ ಯುವತಿಯರ ಮದುವೆಯ ವಯಸ್ಸು 21 ಕ್ಕೆ ಏರಿಕೆ: ಇತರ ದೇಶಗಳಲ್ಲಿ ಮದುವೆ ವಯಸ್ಸು ಹೇಗಿದೆ?

- Advertisement -
- Advertisement -

ದೇಶದಲ್ಲಿ ಯುವತಿಯರ ಮದುವೆಯ ವಯಸ್ಸನ್ನು 18ರಿಂದ 21ಕ್ಕೆ ಏರಿಸಲಾಗಿದ್ದು, ಈ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ. ವರ್ಷದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಯುವತಿಯರ ವಿವಾಹ ವಯಸ್ಸನ್ನು ಕನಿಷ್ಠ 18 ರಿಂದ 21ಕ್ಕೆ ಏರಿಸುವ ಯೋಜನೆ ಪರಿಶೀಲನೆಯಲ್ಲಿದೆ ಎಂದು ಹೇಳಿದ್ದರು.

ಈ ಪ್ರಸ್ತಾಪವನ್ನು ಜಯಾ ಜೇಟ್ಲಿ ನೇತೃತ್ವದ ನೀತಿ ಆಯೋಗದ ಕಾರ್ಯಪಡೆಯು ಬೆಂಬಲಿಸಿದ್ದು, ಸರ್ಕಾರದ ಉನ್ನತ ತಜ್ಞ ವಿಕೆ ಪಾಲ್, ಆರೋಗ್ಯ ಸಚಿವಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಕಾನೂನು ಸಚಿವಾಲಯದ ಹಿರಿಯ ಅಧಿಕಾರಿಗಳು ಕಳೆದ ವರ್ಷ ಜೂನ್‌ನಲ್ಲಿ ರಚಿಸಲಾದ ಕಾರ್ಯಪಡೆಯ ಸದಸ್ಯರಾಗಿದ್ದರು.

ಮೊದಲ ಗರ್ಭಧಾರಣೆಯ ಸಮಯದಲ್ಲಿ ಯುವತಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಎಂದು ಟಾಸ್ಕ್ ಫೋರ್ಸ್ ಒತ್ತಿ ಹೇಳಿದ್ದರಿಂದ ಡಿಸೆಂಬರ್‌ನಲ್ಲಿ ಪ್ರಸ್ತಾವನೆಯ ಶಿಫಾರಸುಗಳನ್ನು ಸಲ್ಲಿಸಲಾಗಿತ್ತು. ಈಗ ಇದಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಇದೇ ವೇಳೆ ವಿಶ್ವದ ಕೆಲವು ರಾಷ್ಟ್ರಗಳಲ್ಲಿ ಇರುವ ಮದುವೆ ವಯಸ್ಸಿನ ಮಿತಿ ಹೀಗಿದೆ.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌…!

ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ

ಇಲ್ಲಿ ಒಂದೊಂದು ರಾಜ್ಯದಲ್ಲೂ ಒಂದೊಂದು ನೀತಿಯಿದೆ. ಸಾಮಾನ್ಯವಾಗಿ 18 ವರ್ಷದ ಮೇಲ್ಪಟ್ಟವರು ಮದುವೆಯಾಗಲು ಅಡ್ಡಿಯಿಲ್ಲ. ಆದರೆ, ನೆಬ್ರಾಸ್ಕಾದಲ್ಲಿ 19 ವರ್ಷ, ಮಿಸಿಸಿಪ್ಪಿ (Mississippi) ಯಲ್ಲಿ 21 ವರ್ಷ ವಯಸ್ಸಿನ ಮಿತಿಯಿದೆ.

ಕೆನಡಾ

ಕೆನಡಾದಲ್ಲಿ ಪೋಷಕರ ಒಪ್ಪಿಗೆಯೊಂದಿಗೆ 16 ವರ್ಷಕ್ಕೆ ಮತ್ತು ಯಾರ ಒಪ್ಪಿಗೆ ಇಲ್ಲದೆ ಸ್ವಯಂ ನಿರ್ಧಾರ ತೆಗೆದುಕೊಂಡರೆ 18/19 ವರ್ಷಕ್ಕೆ ಮದುವೆಯಾಗಬಹುದು.

ಜಪಾನ್

ಜಪಾನ್‌ನಲ್ಲಿ 20 ವರ್ಷ ತುಂಬಿದ ಯುವಕ, ಯುವತಿ ಮದುವೆಯಾಗಬಹುದು. ಪೋಷಕರ ಒಪ್ಪಿಗೆಯೊಂದಿಗೆ ಯುವತಿಗೆ 16 ಮತ್ತು ಯುವಕನಿಗೆ 18 ವರ್ಷ ವಾಗಿದ್ದರೆ ಮದುವೆ ಮಾಡಬಹುದಾಗಿದೆ.

ಚೀನಾ

ಚೀನಾ ಯುವಕರ ಮದುವೆ ವಯಸ್ಸನ್ನು 22 ವರ್ಷಕ್ಕೆ ಹೆಚ್ಚಿಸಿರುವ ಏಕೈಕ ದೇಶವಾಗಿದೆ. ಇಲ್ಲಿ ಯುವಕರಿಗೆ 22 ವರ್ಷ ಯುವತಿಯರಿಗೆ 20 ವರ್ಷ ವಯಸ್ಸು ಆಗಿರಬೇಕು.

ಫ್ರಾನ್ಸ್

ಫ್ರಾನ್ಸ್‌ನಲ್ಲಿ ಮದುವೆಯಾಗಲು ಯುವಕ ಯುವತಿ ಇಬ್ಬರಿಗೂ 18 ವರ್ಷವಾಗಿರಬೇಕು.

ರಷ್ಯಾ

ರಷ್ಯಾದಲ್ಲಿ ಮದುವೆಯ ವಯಸ್ಸು 18 ವರ್ಷವಾಗಿದೆ. ಆದರೆ, ಗರ್ಭಧಾರಣೆಯಂತಹ ಸನ್ನಿವೇಶದಲ್ಲಿ ಕಾನೂನಿನ ಒಪ್ಪಿಗೆಯೊಂದಿಗೆ 16 ವರ್ಷಕ್ಕೆ ಮದುವೆಯಾಗಬಹುದು.

ಬ್ರಿಟನ್

ಬ್ರಿಟನ್‌ನಲ್ಲಿ ಮದುವೆಯ ವಯಸ್ಸು 18 ವರ್ಷವಾಗಿದೆ. ಆದರೆ, ಸ್ಕಾಟ್‌ಲ್ಯಾಂಡ್‌ನಲ್ಲಿ ಮಾತ್ರ 16ನೇ ವಯಸ್ಸಿಗೆ ಮದುಯಾಗಬಹುದು. ಪೋಷಕರು ಮತ್ತು ಕಾನೂನಿನ ಒಪ್ಪಿಗೆಯೊಂದಿಗೆ 16ನೇ ವಯಸ್ಸಿನಲ್ಲಿ ಮದುವೆ ಮಾಡಬಹುದು.

ಪಾಕಿಸ್ತಾನ

ಇಲ್ಲಿ ಯುವಕನಿಗೆ 18 ವರ್ಷವಾಗಿರಬೇಕು. ಯುವತಿಗೆ 16 ವರ್ಷ ಆದರೆ, ಪಂಜಾಬ್ ಮತ್ತು ಸಿಂಧ್ ಪ್ರಾಂತ್ಯಗಳಲ್ಲಿ ಕೆಲವೊಮ್ಮೆ 18 ವರ್ಷಕ್ಕೆ ಅನುಮತಿ ನೀಡಲಾಗಿದೆ.

ಅಫ್ಘಾನಿಸ್ತಾನ

ಇಲ್ಲಿ ಯುವಕರಿಗೆ 18 ವರ್ಷ. ಯುವತಿಗೆ 16 ವರ್ಷ. ಪೋಷಕರು ಮತ್ತು ಕಾನೂನಿನ ಒಪ್ಪಿಗೆಯೊಂದಿಗೆ ಯುವಕನಿಗೆ 18, ಯುವತಿಗೆ 15 ವರ್ಷ ವಯಸ್ಸು ನಿಗಧಿ ಮಾಡಲಾಗಿದೆ.

ಬಾಂಗ್ಲಾದೇಶ

ಬಾಂಗ್ಲಾದಲ್ಲಿ ಯುವಕರಿಗೆ 21 ವರ್ಷ ಮತ್ತು ಯುವತಿಯರಿಗೆ 18 ನಿಗಧಿಮಾಡಲಾಗಿದೆ.

ಇರಾನ್

ಇರಾನ್‌ನಲ್ಲಿ ಯುವಕನಿಗೆ 18, ಯುವತಿಗೆ 15 ತುಂಬಿದರೆ ಮದುವೆಯಾಗಬಹುದು. ಪೋಷಕರು ಮತ್ತು ಕಾನೂನಿನ ಒಪ್ಪಿಗೆಯೊಂದಿಗೆ ಯುವಕನಿಗೆ 15 ಮತ್ತು ಯುವತಿಗೆ 13 ವರ್ಷವಾಗಿದ್ದರೆ ಮದುವೆ ಮಾಡಬಹುದು.


ಇದನ್ನೂ ಓದಿ: ಯುವತಿಯರ ವಿವಾಹ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಪ್ರಸ್ತಾಪಕ್ಕೆ ಸಂಪುಟ ಒಪ್ಪಿಗೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...