Homeಕರ್ನಾಟಕಅಂಬೇಡ್ಕರ್-ವಾಲ್ಮೀಕಿ ಭಾವಚಿತ್ರದ ಮುಂದೆ ಮದುವೆಯಾದ ಪ್ರೇಮಿಗಳು.

ಅಂಬೇಡ್ಕರ್-ವಾಲ್ಮೀಕಿ ಭಾವಚಿತ್ರದ ಮುಂದೆ ಮದುವೆಯಾದ ಪ್ರೇಮಿಗಳು.

ಸಂವಿಧಾನ ಪೀಠಿಕೆ ಓಧಿಸಿದ ಪಿಎಸ್ಐ.

- Advertisement -
- Advertisement -

ವಿವಾಹಗಳು ಅದ್ದೂರಿಯಾಗಿರಬಹುದು, ಸರಳವಾಗಿರಬಹುದು. ಅವರವರ ಶಕ್ತಿ ಸಾಮರ್ಥ್ಯಕ್ಕೆ ಅನುಗುಣವಾಗಿ ವಿವಾಹಗಳು ಜರುಗುತ್ತವೆ. ಆದರೆ ಕೊರೊನ ಕಾಲಘಟ್ಟದಲ್ಲಿ ಅದ್ದೂರಿ ವಿವಾಹಗಳು ಸರಳಗೊಂಡಿವೆ. ಕೆಲವೇ ಮಂದಿ ಸೇರಿ ಸದ್ದಗದ್ದಲವಿಲ್ಲದೆ ನೂರಾರು ವಿವಾಹಳಳು ನಡೆದು ಹೋಗಿವೆ. ವಿವಾಹಗಳು ಸರಳಗೊಳ್ಳಬೇಕು. ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕು. ಮಂತ್ರಮಾಂಗಲ್ಯ ವಿವಾಹಗಳು ನಡೆಯಬೇಕು ಎಂಬ ಆಶಯ ಎಲ್ಲೆಡೆ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ತುಮಕೂರಿನ ಮಧುಗಿರಿಯಲ್ಲಿ ಪ್ರೇಮಿಗಳ ಜೋಡಿ ಸರಳಾತಿಸರಳವಾಗಿ ಭೀಮನ ಅಮಾವಾಸ್ಯೆಯ ದಿನ ನವ ದಾಂಪತ್ಯಗೀತೆ ಹಾಡಿದೆ.

ಹೌದು, ಇದು ಹಲವು ವಿಶಿಷ್ಠದಮದುವೆ. ಆರು ತಿಂಗಳಿಂದ ಪ್ರೀತಿಸುತ್ತಿದ್ದ ಯುವಜೋಡಿ ಸ್ಪಶ್ಯ-ಅಸ್ಪೃತೆ ಬೇಲಿಗಳ ದಾಟಿ ನವದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಶ್ರೀಧರ್ ಮತ್ತು ಚಂದನ ಅವರದ್ದು ಅಂತರಜಾತಿ ವಿವಾಹ. ಮನೆಯೊಂದರಲ್ಲಿ ಪ್ರೇಮಿಗಳಿಬ್ಬರು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಮತ್ತು ವಾಲ್ಮೀಕಿ ಭಾವ ಚಿತ್ರಗಳನ್ನು ಮುಂದಿಟ್ಟುಕೊಂಡು ವಿವಾಹವಾಗಿದ್ದಾರೆ. ಸಂವಿಧಾನದ ಪೀಠಿಕೆ ಓದಿ ಹೊಸ ಸಂಪ್ರದಾಯಕ್ಕೆ ನಾಂದಿಯಾಡಿದ್ದಾರೆ. ಇದರ ನೇತೃತ್ವ ವಹಿಸಿದವರು ಮಾತ್ರ ಮಧುಗಿರಿಯ ಪಿಎಸ್ಐ ಕಾಂತರಾಜು.

ಡಾ. ಬಿ. ಆರ್. ಅಂಬೇಢ್ಕರ್ ಮತ್ತು ವಾಲ್ಕೀಕಿ ತಮಗೆ ದಾರಿದೀಪ ಎಂಬುದನ್ನು ಈ ಜೋಡಿ ಸಾರಿ ಹೇಳಿದೆ. ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುತ್ತೇವೆ ಎಂದು ಪ್ರತಿಜ್ಞೆ ಮಾಡಿದೆ. ವಾಲ್ಮೀಕಿ ಸಮುದಾಯದ ಶ್ರೀಧರ್ (ಆಟೋಚಾಲಕ) ಮತ್ತು ಮಾದಿಗ ಸಮುದಾಯದ ಚಂದನ ಪರಸ್ಪರ ಆರು ತಿಂಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಮದುವೆಯಾಗಲು ಶ್ರೀಧರ್ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಜಾತಿಯನ್ನು ಮೀರಿ ವಿವಾಹವಾಗಿಯೇ ತೀರುತ್ತೇವೆಂಬ ಪಣ ತೊಟ್ಟರು.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಬಿಟ್ಟರು. ಪ್ರೇಮ ವಿವಾಹಕ್ಕೆ ಅಡ್ಡಿ ಮಾಡುತ್ತಿದ್ದಾರೆ. ನಮಗೆ ರಕ್ಷಣೆ ಬೇಕು ಎಂದು ವಿಡಿಯೋದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದರು. ಹುಡುಗಿ ಮಾದಿಗ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಹುಡುಗನ ಕಡೆಯವರು ಸುತಾರಾಂ ಒಪ್ಪಿಕೊಳ್ಳಲಿಲ್ಲ. ಹೀಗಾಗಿ ಹುಡುಗಿಯನ್ನು ಮಧುಗಿರಿ ತಾಲೂಕು ಸೋಂಪುರದಲ್ಲಿಟ್ಟರು. ಪ್ರೇಮಿಗಳು ರಕ್ಷಣೆ ಕೋರಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ವಿಡಿಯೋ ಪಿಎಸ್ಐ ಕಾಂತರಾಜು ಅವರ ಗಮನಕ್ಕೆ ಬಂದಿತ್ತು.

ಕೂಡಲೇ ಪಿಎಸ್ಐ ಕಾಂತರಾಜು ಕಾರ್ಯಾಚರಣೆಗೆ ಇಳಿದು, ಪ್ರೇಮಿಗಳನ್ನು ಒಂದುಗೂಡಿಸುವ ಯತ್ನಕ್ಕೆ ಚಾಲನೆ ನೀಡಿದ್ದಾರೆ. ಶ್ರೀಧರ್ ಮತ್ತು ಚಂದನಾ ಅವರನ್ನು ಕರೆಸಿ ಮಾಹಿತಿ ಕಲೆಹಾಕಿದ ಅವರು, ಹುಡುಗಿಯ ವಯಸ್ಸು ಮೊದಲಾದ ದಾಖಲೆಗಳನ್ನು ಪರಿಶೀಲಿಸಿ, ಪ್ರೇಮಿಗಳಿಬ್ಬರು ಮದುವೆಯಾಗುವ ಕನಸ್ಸನ್ನು ಸಾಕಾರ ಮಾಡಿದ್ದಾರೆ.

ಹುಡುಗನ ಕಡೆಯವರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಶ್ರೀಧರ್ ತಂದೆ-ತಾಯಿಗಳಿಂದ ಮುಚ್ಚಳಿಕೆ ಬರೆಸಿ ಕೊಂಡಿರುವ ಪಿಎಸ್ಐ ನವ ದಂಪತಿಗೆ ಯಾವುದೇ ರೀತಿಯ ತೊಂದರೆ ಕೊಡದಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ವಿವಾಹಕ್ಕೆ ಪೊಲೀಸರ ರಕ್ಷಣೆ ಸಿಕ್ಕರೂ ಜಾತಿಯ ಗೋಡೆಗಳು ಮೇಲಕ್ಕೆದ್ದು ಕುಣಿಯುತ್ತಿವೆ. ಹಾಗಾಗಿ ಉಭಯ ಸಮುದಾಯದವರು ಕೂತ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂಬುದು ದಲಿತ ಮುಖಂಡರ ಆಶಯ.

ಕೊರಟಗೆರೆ ತಾಲೂಕು ಚಿಂಪುಗಾನಹಳ್ಳಿಯ ಶ್ರೀಧರ್ ಆಟೋ ಓಡಿಸುತ್ತಿದ್ದರು. ಚಂದನ ಪಿಯುಸಿ ಓದುತ್ತಿದ್ದರು. ಇಬ್ಬರಲ್ಲೂ ಪ್ರೇಮಾಂಕುರ ಮೂಡಿ ವಿವಾಹ ಮಾಡಿಕೊಳ್ಳಲು ಮುಂದಾದಾಗ ಜಾತಿ ಅಡ್ಡ ಬಂದಿದ್ದು, ಐದಾರು ತಿಂಗಳಿಂದ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು ಇದೀಗ ಮದುವೆಯಾಗಿದ್ದು ಹುಡುಗನ ಕಡೆಯವರ ಬೆದರಿಕೆಯಿಂದಾಗಿ ತಲೆಮರೆಸಿಕೊಳ್ಳಬೇಕಾಗಿ ಬಂದಿದೆ.

ದಲಿತ ಮುಖಂಡ ನಾಗರಾಜ ನಾನುಗೌರಿ.ಕಾಂ ಜೊತೆ ಮಾತನಾಡಿ, ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಅನ್ಯಾಯವಾದರೆ ಹೋರಾಟ ಮಾಡುತ್ತೇವೆ. ಇಲ್ಲಿ ಮೇಲ್ಜಾತಿ-ಕೆಳಜಾತಿ ಬರಲ್ಲ. ಇಬ್ಬರು ಪರಸ್ಪರ ಪ್ರೀತಿಸಿದ್ದಾರೆ. ಅನ್ಯಾಯವಾದವರಿಗೆ ರಕ್ಷಣೆ ಸಿಗಬೇಕು. ಇಲ್ಲಿ ಯಾರೂ ಕೂಡ ಅನಗತ್ಯ ಗೊಂದಲಕ್ಕೆ ಒಳಗಾಗಬಾರದು. ಉಭಯ ಕಡೆಯವರು ಮಾತುಕತೆ ನಡೆಸಿದರೆ ಎಲ್ಲವು ಸುಗಮವಾಗುತ್ತದೆ. ಒಂದಾಗಿ ಬಾಳೋಣ, ಯುವ ದಂಪತಿಗೆ ಶುಭ ಹಾರೈಸೋಣ ಎಂದರು.

ಇಂತಹ ವಿವಾಹಗಳು ಮತ್ತಷ್ಟು ಹೆಚ್ಚಬೇಕು. ಸಂವಿಧಾನ ಪೀಠಿಕೆ ಓದಿ ನವ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಈ ಜೋಡಿ ಇತರರಿಗೂ ಮಾದರಿಯಾಗಿದೆ. .ಪಿಎಸ್ಐ ಕಾಂತರಾಜ ಅವರಂಥ ಮನಸ್ಸುಗಳು ಮತ್ತಷ್ಟು ಹೆಚ್ಚಲಿ ಎಂದು ಪ್ರಜ್ಞಾವಂತರು ಹೇಳಿದ್ದಾರೆ.


ಓದಿ: ಕೊರೊನಾ ರೋಗಿಯನ್ನೇ ಪ್ರೇಮಿಸಿ, ನಿಶ್ಚಿತಾರ್ಥವಾದ ಡಾಕ್ಟರ್?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...