Homeಕರ್ನಾಟಕಅಂಬೇಡ್ಕರ್-ವಾಲ್ಮೀಕಿ ಭಾವಚಿತ್ರದ ಮುಂದೆ ಮದುವೆಯಾದ ಪ್ರೇಮಿಗಳು.

ಅಂಬೇಡ್ಕರ್-ವಾಲ್ಮೀಕಿ ಭಾವಚಿತ್ರದ ಮುಂದೆ ಮದುವೆಯಾದ ಪ್ರೇಮಿಗಳು.

ಸಂವಿಧಾನ ಪೀಠಿಕೆ ಓಧಿಸಿದ ಪಿಎಸ್ಐ.

- Advertisement -
- Advertisement -

ವಿವಾಹಗಳು ಅದ್ದೂರಿಯಾಗಿರಬಹುದು, ಸರಳವಾಗಿರಬಹುದು. ಅವರವರ ಶಕ್ತಿ ಸಾಮರ್ಥ್ಯಕ್ಕೆ ಅನುಗುಣವಾಗಿ ವಿವಾಹಗಳು ಜರುಗುತ್ತವೆ. ಆದರೆ ಕೊರೊನ ಕಾಲಘಟ್ಟದಲ್ಲಿ ಅದ್ದೂರಿ ವಿವಾಹಗಳು ಸರಳಗೊಂಡಿವೆ. ಕೆಲವೇ ಮಂದಿ ಸೇರಿ ಸದ್ದಗದ್ದಲವಿಲ್ಲದೆ ನೂರಾರು ವಿವಾಹಳಳು ನಡೆದು ಹೋಗಿವೆ. ವಿವಾಹಗಳು ಸರಳಗೊಳ್ಳಬೇಕು. ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕು. ಮಂತ್ರಮಾಂಗಲ್ಯ ವಿವಾಹಗಳು ನಡೆಯಬೇಕು ಎಂಬ ಆಶಯ ಎಲ್ಲೆಡೆ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ತುಮಕೂರಿನ ಮಧುಗಿರಿಯಲ್ಲಿ ಪ್ರೇಮಿಗಳ ಜೋಡಿ ಸರಳಾತಿಸರಳವಾಗಿ ಭೀಮನ ಅಮಾವಾಸ್ಯೆಯ ದಿನ ನವ ದಾಂಪತ್ಯಗೀತೆ ಹಾಡಿದೆ.

ಹೌದು, ಇದು ಹಲವು ವಿಶಿಷ್ಠದಮದುವೆ. ಆರು ತಿಂಗಳಿಂದ ಪ್ರೀತಿಸುತ್ತಿದ್ದ ಯುವಜೋಡಿ ಸ್ಪಶ್ಯ-ಅಸ್ಪೃತೆ ಬೇಲಿಗಳ ದಾಟಿ ನವದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಶ್ರೀಧರ್ ಮತ್ತು ಚಂದನ ಅವರದ್ದು ಅಂತರಜಾತಿ ವಿವಾಹ. ಮನೆಯೊಂದರಲ್ಲಿ ಪ್ರೇಮಿಗಳಿಬ್ಬರು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಮತ್ತು ವಾಲ್ಮೀಕಿ ಭಾವ ಚಿತ್ರಗಳನ್ನು ಮುಂದಿಟ್ಟುಕೊಂಡು ವಿವಾಹವಾಗಿದ್ದಾರೆ. ಸಂವಿಧಾನದ ಪೀಠಿಕೆ ಓದಿ ಹೊಸ ಸಂಪ್ರದಾಯಕ್ಕೆ ನಾಂದಿಯಾಡಿದ್ದಾರೆ. ಇದರ ನೇತೃತ್ವ ವಹಿಸಿದವರು ಮಾತ್ರ ಮಧುಗಿರಿಯ ಪಿಎಸ್ಐ ಕಾಂತರಾಜು.

ಡಾ. ಬಿ. ಆರ್. ಅಂಬೇಢ್ಕರ್ ಮತ್ತು ವಾಲ್ಕೀಕಿ ತಮಗೆ ದಾರಿದೀಪ ಎಂಬುದನ್ನು ಈ ಜೋಡಿ ಸಾರಿ ಹೇಳಿದೆ. ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುತ್ತೇವೆ ಎಂದು ಪ್ರತಿಜ್ಞೆ ಮಾಡಿದೆ. ವಾಲ್ಮೀಕಿ ಸಮುದಾಯದ ಶ್ರೀಧರ್ (ಆಟೋಚಾಲಕ) ಮತ್ತು ಮಾದಿಗ ಸಮುದಾಯದ ಚಂದನ ಪರಸ್ಪರ ಆರು ತಿಂಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಮದುವೆಯಾಗಲು ಶ್ರೀಧರ್ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಜಾತಿಯನ್ನು ಮೀರಿ ವಿವಾಹವಾಗಿಯೇ ತೀರುತ್ತೇವೆಂಬ ಪಣ ತೊಟ್ಟರು.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಬಿಟ್ಟರು. ಪ್ರೇಮ ವಿವಾಹಕ್ಕೆ ಅಡ್ಡಿ ಮಾಡುತ್ತಿದ್ದಾರೆ. ನಮಗೆ ರಕ್ಷಣೆ ಬೇಕು ಎಂದು ವಿಡಿಯೋದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದರು. ಹುಡುಗಿ ಮಾದಿಗ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಹುಡುಗನ ಕಡೆಯವರು ಸುತಾರಾಂ ಒಪ್ಪಿಕೊಳ್ಳಲಿಲ್ಲ. ಹೀಗಾಗಿ ಹುಡುಗಿಯನ್ನು ಮಧುಗಿರಿ ತಾಲೂಕು ಸೋಂಪುರದಲ್ಲಿಟ್ಟರು. ಪ್ರೇಮಿಗಳು ರಕ್ಷಣೆ ಕೋರಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ವಿಡಿಯೋ ಪಿಎಸ್ಐ ಕಾಂತರಾಜು ಅವರ ಗಮನಕ್ಕೆ ಬಂದಿತ್ತು.

ಕೂಡಲೇ ಪಿಎಸ್ಐ ಕಾಂತರಾಜು ಕಾರ್ಯಾಚರಣೆಗೆ ಇಳಿದು, ಪ್ರೇಮಿಗಳನ್ನು ಒಂದುಗೂಡಿಸುವ ಯತ್ನಕ್ಕೆ ಚಾಲನೆ ನೀಡಿದ್ದಾರೆ. ಶ್ರೀಧರ್ ಮತ್ತು ಚಂದನಾ ಅವರನ್ನು ಕರೆಸಿ ಮಾಹಿತಿ ಕಲೆಹಾಕಿದ ಅವರು, ಹುಡುಗಿಯ ವಯಸ್ಸು ಮೊದಲಾದ ದಾಖಲೆಗಳನ್ನು ಪರಿಶೀಲಿಸಿ, ಪ್ರೇಮಿಗಳಿಬ್ಬರು ಮದುವೆಯಾಗುವ ಕನಸ್ಸನ್ನು ಸಾಕಾರ ಮಾಡಿದ್ದಾರೆ.

ಹುಡುಗನ ಕಡೆಯವರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಶ್ರೀಧರ್ ತಂದೆ-ತಾಯಿಗಳಿಂದ ಮುಚ್ಚಳಿಕೆ ಬರೆಸಿ ಕೊಂಡಿರುವ ಪಿಎಸ್ಐ ನವ ದಂಪತಿಗೆ ಯಾವುದೇ ರೀತಿಯ ತೊಂದರೆ ಕೊಡದಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ವಿವಾಹಕ್ಕೆ ಪೊಲೀಸರ ರಕ್ಷಣೆ ಸಿಕ್ಕರೂ ಜಾತಿಯ ಗೋಡೆಗಳು ಮೇಲಕ್ಕೆದ್ದು ಕುಣಿಯುತ್ತಿವೆ. ಹಾಗಾಗಿ ಉಭಯ ಸಮುದಾಯದವರು ಕೂತ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂಬುದು ದಲಿತ ಮುಖಂಡರ ಆಶಯ.

ಕೊರಟಗೆರೆ ತಾಲೂಕು ಚಿಂಪುಗಾನಹಳ್ಳಿಯ ಶ್ರೀಧರ್ ಆಟೋ ಓಡಿಸುತ್ತಿದ್ದರು. ಚಂದನ ಪಿಯುಸಿ ಓದುತ್ತಿದ್ದರು. ಇಬ್ಬರಲ್ಲೂ ಪ್ರೇಮಾಂಕುರ ಮೂಡಿ ವಿವಾಹ ಮಾಡಿಕೊಳ್ಳಲು ಮುಂದಾದಾಗ ಜಾತಿ ಅಡ್ಡ ಬಂದಿದ್ದು, ಐದಾರು ತಿಂಗಳಿಂದ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು ಇದೀಗ ಮದುವೆಯಾಗಿದ್ದು ಹುಡುಗನ ಕಡೆಯವರ ಬೆದರಿಕೆಯಿಂದಾಗಿ ತಲೆಮರೆಸಿಕೊಳ್ಳಬೇಕಾಗಿ ಬಂದಿದೆ.

ದಲಿತ ಮುಖಂಡ ನಾಗರಾಜ ನಾನುಗೌರಿ.ಕಾಂ ಜೊತೆ ಮಾತನಾಡಿ, ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಅನ್ಯಾಯವಾದರೆ ಹೋರಾಟ ಮಾಡುತ್ತೇವೆ. ಇಲ್ಲಿ ಮೇಲ್ಜಾತಿ-ಕೆಳಜಾತಿ ಬರಲ್ಲ. ಇಬ್ಬರು ಪರಸ್ಪರ ಪ್ರೀತಿಸಿದ್ದಾರೆ. ಅನ್ಯಾಯವಾದವರಿಗೆ ರಕ್ಷಣೆ ಸಿಗಬೇಕು. ಇಲ್ಲಿ ಯಾರೂ ಕೂಡ ಅನಗತ್ಯ ಗೊಂದಲಕ್ಕೆ ಒಳಗಾಗಬಾರದು. ಉಭಯ ಕಡೆಯವರು ಮಾತುಕತೆ ನಡೆಸಿದರೆ ಎಲ್ಲವು ಸುಗಮವಾಗುತ್ತದೆ. ಒಂದಾಗಿ ಬಾಳೋಣ, ಯುವ ದಂಪತಿಗೆ ಶುಭ ಹಾರೈಸೋಣ ಎಂದರು.

ಇಂತಹ ವಿವಾಹಗಳು ಮತ್ತಷ್ಟು ಹೆಚ್ಚಬೇಕು. ಸಂವಿಧಾನ ಪೀಠಿಕೆ ಓದಿ ನವ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಈ ಜೋಡಿ ಇತರರಿಗೂ ಮಾದರಿಯಾಗಿದೆ. .ಪಿಎಸ್ಐ ಕಾಂತರಾಜ ಅವರಂಥ ಮನಸ್ಸುಗಳು ಮತ್ತಷ್ಟು ಹೆಚ್ಚಲಿ ಎಂದು ಪ್ರಜ್ಞಾವಂತರು ಹೇಳಿದ್ದಾರೆ.


ಓದಿ: ಕೊರೊನಾ ರೋಗಿಯನ್ನೇ ಪ್ರೇಮಿಸಿ, ನಿಶ್ಚಿತಾರ್ಥವಾದ ಡಾಕ್ಟರ್?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...