Homeಕರ್ನಾಟಕಅಂಬೇಡ್ಕರ್-ವಾಲ್ಮೀಕಿ ಭಾವಚಿತ್ರದ ಮುಂದೆ ಮದುವೆಯಾದ ಪ್ರೇಮಿಗಳು.

ಅಂಬೇಡ್ಕರ್-ವಾಲ್ಮೀಕಿ ಭಾವಚಿತ್ರದ ಮುಂದೆ ಮದುವೆಯಾದ ಪ್ರೇಮಿಗಳು.

ಸಂವಿಧಾನ ಪೀಠಿಕೆ ಓಧಿಸಿದ ಪಿಎಸ್ಐ.

- Advertisement -
- Advertisement -

ವಿವಾಹಗಳು ಅದ್ದೂರಿಯಾಗಿರಬಹುದು, ಸರಳವಾಗಿರಬಹುದು. ಅವರವರ ಶಕ್ತಿ ಸಾಮರ್ಥ್ಯಕ್ಕೆ ಅನುಗುಣವಾಗಿ ವಿವಾಹಗಳು ಜರುಗುತ್ತವೆ. ಆದರೆ ಕೊರೊನ ಕಾಲಘಟ್ಟದಲ್ಲಿ ಅದ್ದೂರಿ ವಿವಾಹಗಳು ಸರಳಗೊಂಡಿವೆ. ಕೆಲವೇ ಮಂದಿ ಸೇರಿ ಸದ್ದಗದ್ದಲವಿಲ್ಲದೆ ನೂರಾರು ವಿವಾಹಳಳು ನಡೆದು ಹೋಗಿವೆ. ವಿವಾಹಗಳು ಸರಳಗೊಳ್ಳಬೇಕು. ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕು. ಮಂತ್ರಮಾಂಗಲ್ಯ ವಿವಾಹಗಳು ನಡೆಯಬೇಕು ಎಂಬ ಆಶಯ ಎಲ್ಲೆಡೆ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ತುಮಕೂರಿನ ಮಧುಗಿರಿಯಲ್ಲಿ ಪ್ರೇಮಿಗಳ ಜೋಡಿ ಸರಳಾತಿಸರಳವಾಗಿ ಭೀಮನ ಅಮಾವಾಸ್ಯೆಯ ದಿನ ನವ ದಾಂಪತ್ಯಗೀತೆ ಹಾಡಿದೆ.

ಹೌದು, ಇದು ಹಲವು ವಿಶಿಷ್ಠದಮದುವೆ. ಆರು ತಿಂಗಳಿಂದ ಪ್ರೀತಿಸುತ್ತಿದ್ದ ಯುವಜೋಡಿ ಸ್ಪಶ್ಯ-ಅಸ್ಪೃತೆ ಬೇಲಿಗಳ ದಾಟಿ ನವದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಶ್ರೀಧರ್ ಮತ್ತು ಚಂದನ ಅವರದ್ದು ಅಂತರಜಾತಿ ವಿವಾಹ. ಮನೆಯೊಂದರಲ್ಲಿ ಪ್ರೇಮಿಗಳಿಬ್ಬರು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಮತ್ತು ವಾಲ್ಮೀಕಿ ಭಾವ ಚಿತ್ರಗಳನ್ನು ಮುಂದಿಟ್ಟುಕೊಂಡು ವಿವಾಹವಾಗಿದ್ದಾರೆ. ಸಂವಿಧಾನದ ಪೀಠಿಕೆ ಓದಿ ಹೊಸ ಸಂಪ್ರದಾಯಕ್ಕೆ ನಾಂದಿಯಾಡಿದ್ದಾರೆ. ಇದರ ನೇತೃತ್ವ ವಹಿಸಿದವರು ಮಾತ್ರ ಮಧುಗಿರಿಯ ಪಿಎಸ್ಐ ಕಾಂತರಾಜು.

ಡಾ. ಬಿ. ಆರ್. ಅಂಬೇಢ್ಕರ್ ಮತ್ತು ವಾಲ್ಕೀಕಿ ತಮಗೆ ದಾರಿದೀಪ ಎಂಬುದನ್ನು ಈ ಜೋಡಿ ಸಾರಿ ಹೇಳಿದೆ. ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುತ್ತೇವೆ ಎಂದು ಪ್ರತಿಜ್ಞೆ ಮಾಡಿದೆ. ವಾಲ್ಮೀಕಿ ಸಮುದಾಯದ ಶ್ರೀಧರ್ (ಆಟೋಚಾಲಕ) ಮತ್ತು ಮಾದಿಗ ಸಮುದಾಯದ ಚಂದನ ಪರಸ್ಪರ ಆರು ತಿಂಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಮದುವೆಯಾಗಲು ಶ್ರೀಧರ್ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಜಾತಿಯನ್ನು ಮೀರಿ ವಿವಾಹವಾಗಿಯೇ ತೀರುತ್ತೇವೆಂಬ ಪಣ ತೊಟ್ಟರು.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಬಿಟ್ಟರು. ಪ್ರೇಮ ವಿವಾಹಕ್ಕೆ ಅಡ್ಡಿ ಮಾಡುತ್ತಿದ್ದಾರೆ. ನಮಗೆ ರಕ್ಷಣೆ ಬೇಕು ಎಂದು ವಿಡಿಯೋದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದರು. ಹುಡುಗಿ ಮಾದಿಗ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಹುಡುಗನ ಕಡೆಯವರು ಸುತಾರಾಂ ಒಪ್ಪಿಕೊಳ್ಳಲಿಲ್ಲ. ಹೀಗಾಗಿ ಹುಡುಗಿಯನ್ನು ಮಧುಗಿರಿ ತಾಲೂಕು ಸೋಂಪುರದಲ್ಲಿಟ್ಟರು. ಪ್ರೇಮಿಗಳು ರಕ್ಷಣೆ ಕೋರಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ವಿಡಿಯೋ ಪಿಎಸ್ಐ ಕಾಂತರಾಜು ಅವರ ಗಮನಕ್ಕೆ ಬಂದಿತ್ತು.

ಕೂಡಲೇ ಪಿಎಸ್ಐ ಕಾಂತರಾಜು ಕಾರ್ಯಾಚರಣೆಗೆ ಇಳಿದು, ಪ್ರೇಮಿಗಳನ್ನು ಒಂದುಗೂಡಿಸುವ ಯತ್ನಕ್ಕೆ ಚಾಲನೆ ನೀಡಿದ್ದಾರೆ. ಶ್ರೀಧರ್ ಮತ್ತು ಚಂದನಾ ಅವರನ್ನು ಕರೆಸಿ ಮಾಹಿತಿ ಕಲೆಹಾಕಿದ ಅವರು, ಹುಡುಗಿಯ ವಯಸ್ಸು ಮೊದಲಾದ ದಾಖಲೆಗಳನ್ನು ಪರಿಶೀಲಿಸಿ, ಪ್ರೇಮಿಗಳಿಬ್ಬರು ಮದುವೆಯಾಗುವ ಕನಸ್ಸನ್ನು ಸಾಕಾರ ಮಾಡಿದ್ದಾರೆ.

ಹುಡುಗನ ಕಡೆಯವರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಶ್ರೀಧರ್ ತಂದೆ-ತಾಯಿಗಳಿಂದ ಮುಚ್ಚಳಿಕೆ ಬರೆಸಿ ಕೊಂಡಿರುವ ಪಿಎಸ್ಐ ನವ ದಂಪತಿಗೆ ಯಾವುದೇ ರೀತಿಯ ತೊಂದರೆ ಕೊಡದಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ವಿವಾಹಕ್ಕೆ ಪೊಲೀಸರ ರಕ್ಷಣೆ ಸಿಕ್ಕರೂ ಜಾತಿಯ ಗೋಡೆಗಳು ಮೇಲಕ್ಕೆದ್ದು ಕುಣಿಯುತ್ತಿವೆ. ಹಾಗಾಗಿ ಉಭಯ ಸಮುದಾಯದವರು ಕೂತ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂಬುದು ದಲಿತ ಮುಖಂಡರ ಆಶಯ.

ಕೊರಟಗೆರೆ ತಾಲೂಕು ಚಿಂಪುಗಾನಹಳ್ಳಿಯ ಶ್ರೀಧರ್ ಆಟೋ ಓಡಿಸುತ್ತಿದ್ದರು. ಚಂದನ ಪಿಯುಸಿ ಓದುತ್ತಿದ್ದರು. ಇಬ್ಬರಲ್ಲೂ ಪ್ರೇಮಾಂಕುರ ಮೂಡಿ ವಿವಾಹ ಮಾಡಿಕೊಳ್ಳಲು ಮುಂದಾದಾಗ ಜಾತಿ ಅಡ್ಡ ಬಂದಿದ್ದು, ಐದಾರು ತಿಂಗಳಿಂದ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು ಇದೀಗ ಮದುವೆಯಾಗಿದ್ದು ಹುಡುಗನ ಕಡೆಯವರ ಬೆದರಿಕೆಯಿಂದಾಗಿ ತಲೆಮರೆಸಿಕೊಳ್ಳಬೇಕಾಗಿ ಬಂದಿದೆ.

ದಲಿತ ಮುಖಂಡ ನಾಗರಾಜ ನಾನುಗೌರಿ.ಕಾಂ ಜೊತೆ ಮಾತನಾಡಿ, ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಅನ್ಯಾಯವಾದರೆ ಹೋರಾಟ ಮಾಡುತ್ತೇವೆ. ಇಲ್ಲಿ ಮೇಲ್ಜಾತಿ-ಕೆಳಜಾತಿ ಬರಲ್ಲ. ಇಬ್ಬರು ಪರಸ್ಪರ ಪ್ರೀತಿಸಿದ್ದಾರೆ. ಅನ್ಯಾಯವಾದವರಿಗೆ ರಕ್ಷಣೆ ಸಿಗಬೇಕು. ಇಲ್ಲಿ ಯಾರೂ ಕೂಡ ಅನಗತ್ಯ ಗೊಂದಲಕ್ಕೆ ಒಳಗಾಗಬಾರದು. ಉಭಯ ಕಡೆಯವರು ಮಾತುಕತೆ ನಡೆಸಿದರೆ ಎಲ್ಲವು ಸುಗಮವಾಗುತ್ತದೆ. ಒಂದಾಗಿ ಬಾಳೋಣ, ಯುವ ದಂಪತಿಗೆ ಶುಭ ಹಾರೈಸೋಣ ಎಂದರು.

ಇಂತಹ ವಿವಾಹಗಳು ಮತ್ತಷ್ಟು ಹೆಚ್ಚಬೇಕು. ಸಂವಿಧಾನ ಪೀಠಿಕೆ ಓದಿ ನವ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಈ ಜೋಡಿ ಇತರರಿಗೂ ಮಾದರಿಯಾಗಿದೆ. .ಪಿಎಸ್ಐ ಕಾಂತರಾಜ ಅವರಂಥ ಮನಸ್ಸುಗಳು ಮತ್ತಷ್ಟು ಹೆಚ್ಚಲಿ ಎಂದು ಪ್ರಜ್ಞಾವಂತರು ಹೇಳಿದ್ದಾರೆ.


ಓದಿ: ಕೊರೊನಾ ರೋಗಿಯನ್ನೇ ಪ್ರೇಮಿಸಿ, ನಿಶ್ಚಿತಾರ್ಥವಾದ ಡಾಕ್ಟರ್?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...