Homeಕರ್ನಾಟಕಅಂಬೇಡ್ಕರ್-ವಾಲ್ಮೀಕಿ ಭಾವಚಿತ್ರದ ಮುಂದೆ ಮದುವೆಯಾದ ಪ್ರೇಮಿಗಳು.

ಅಂಬೇಡ್ಕರ್-ವಾಲ್ಮೀಕಿ ಭಾವಚಿತ್ರದ ಮುಂದೆ ಮದುವೆಯಾದ ಪ್ರೇಮಿಗಳು.

ಸಂವಿಧಾನ ಪೀಠಿಕೆ ಓಧಿಸಿದ ಪಿಎಸ್ಐ.

- Advertisement -
- Advertisement -

ವಿವಾಹಗಳು ಅದ್ದೂರಿಯಾಗಿರಬಹುದು, ಸರಳವಾಗಿರಬಹುದು. ಅವರವರ ಶಕ್ತಿ ಸಾಮರ್ಥ್ಯಕ್ಕೆ ಅನುಗುಣವಾಗಿ ವಿವಾಹಗಳು ಜರುಗುತ್ತವೆ. ಆದರೆ ಕೊರೊನ ಕಾಲಘಟ್ಟದಲ್ಲಿ ಅದ್ದೂರಿ ವಿವಾಹಗಳು ಸರಳಗೊಂಡಿವೆ. ಕೆಲವೇ ಮಂದಿ ಸೇರಿ ಸದ್ದಗದ್ದಲವಿಲ್ಲದೆ ನೂರಾರು ವಿವಾಹಳಳು ನಡೆದು ಹೋಗಿವೆ. ವಿವಾಹಗಳು ಸರಳಗೊಳ್ಳಬೇಕು. ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕು. ಮಂತ್ರಮಾಂಗಲ್ಯ ವಿವಾಹಗಳು ನಡೆಯಬೇಕು ಎಂಬ ಆಶಯ ಎಲ್ಲೆಡೆ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ತುಮಕೂರಿನ ಮಧುಗಿರಿಯಲ್ಲಿ ಪ್ರೇಮಿಗಳ ಜೋಡಿ ಸರಳಾತಿಸರಳವಾಗಿ ಭೀಮನ ಅಮಾವಾಸ್ಯೆಯ ದಿನ ನವ ದಾಂಪತ್ಯಗೀತೆ ಹಾಡಿದೆ.

ಹೌದು, ಇದು ಹಲವು ವಿಶಿಷ್ಠದಮದುವೆ. ಆರು ತಿಂಗಳಿಂದ ಪ್ರೀತಿಸುತ್ತಿದ್ದ ಯುವಜೋಡಿ ಸ್ಪಶ್ಯ-ಅಸ್ಪೃತೆ ಬೇಲಿಗಳ ದಾಟಿ ನವದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಶ್ರೀಧರ್ ಮತ್ತು ಚಂದನ ಅವರದ್ದು ಅಂತರಜಾತಿ ವಿವಾಹ. ಮನೆಯೊಂದರಲ್ಲಿ ಪ್ರೇಮಿಗಳಿಬ್ಬರು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಮತ್ತು ವಾಲ್ಮೀಕಿ ಭಾವ ಚಿತ್ರಗಳನ್ನು ಮುಂದಿಟ್ಟುಕೊಂಡು ವಿವಾಹವಾಗಿದ್ದಾರೆ. ಸಂವಿಧಾನದ ಪೀಠಿಕೆ ಓದಿ ಹೊಸ ಸಂಪ್ರದಾಯಕ್ಕೆ ನಾಂದಿಯಾಡಿದ್ದಾರೆ. ಇದರ ನೇತೃತ್ವ ವಹಿಸಿದವರು ಮಾತ್ರ ಮಧುಗಿರಿಯ ಪಿಎಸ್ಐ ಕಾಂತರಾಜು.

ಡಾ. ಬಿ. ಆರ್. ಅಂಬೇಢ್ಕರ್ ಮತ್ತು ವಾಲ್ಕೀಕಿ ತಮಗೆ ದಾರಿದೀಪ ಎಂಬುದನ್ನು ಈ ಜೋಡಿ ಸಾರಿ ಹೇಳಿದೆ. ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುತ್ತೇವೆ ಎಂದು ಪ್ರತಿಜ್ಞೆ ಮಾಡಿದೆ. ವಾಲ್ಮೀಕಿ ಸಮುದಾಯದ ಶ್ರೀಧರ್ (ಆಟೋಚಾಲಕ) ಮತ್ತು ಮಾದಿಗ ಸಮುದಾಯದ ಚಂದನ ಪರಸ್ಪರ ಆರು ತಿಂಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಮದುವೆಯಾಗಲು ಶ್ರೀಧರ್ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಜಾತಿಯನ್ನು ಮೀರಿ ವಿವಾಹವಾಗಿಯೇ ತೀರುತ್ತೇವೆಂಬ ಪಣ ತೊಟ್ಟರು.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಬಿಟ್ಟರು. ಪ್ರೇಮ ವಿವಾಹಕ್ಕೆ ಅಡ್ಡಿ ಮಾಡುತ್ತಿದ್ದಾರೆ. ನಮಗೆ ರಕ್ಷಣೆ ಬೇಕು ಎಂದು ವಿಡಿಯೋದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದರು. ಹುಡುಗಿ ಮಾದಿಗ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಹುಡುಗನ ಕಡೆಯವರು ಸುತಾರಾಂ ಒಪ್ಪಿಕೊಳ್ಳಲಿಲ್ಲ. ಹೀಗಾಗಿ ಹುಡುಗಿಯನ್ನು ಮಧುಗಿರಿ ತಾಲೂಕು ಸೋಂಪುರದಲ್ಲಿಟ್ಟರು. ಪ್ರೇಮಿಗಳು ರಕ್ಷಣೆ ಕೋರಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ವಿಡಿಯೋ ಪಿಎಸ್ಐ ಕಾಂತರಾಜು ಅವರ ಗಮನಕ್ಕೆ ಬಂದಿತ್ತು.

ಕೂಡಲೇ ಪಿಎಸ್ಐ ಕಾಂತರಾಜು ಕಾರ್ಯಾಚರಣೆಗೆ ಇಳಿದು, ಪ್ರೇಮಿಗಳನ್ನು ಒಂದುಗೂಡಿಸುವ ಯತ್ನಕ್ಕೆ ಚಾಲನೆ ನೀಡಿದ್ದಾರೆ. ಶ್ರೀಧರ್ ಮತ್ತು ಚಂದನಾ ಅವರನ್ನು ಕರೆಸಿ ಮಾಹಿತಿ ಕಲೆಹಾಕಿದ ಅವರು, ಹುಡುಗಿಯ ವಯಸ್ಸು ಮೊದಲಾದ ದಾಖಲೆಗಳನ್ನು ಪರಿಶೀಲಿಸಿ, ಪ್ರೇಮಿಗಳಿಬ್ಬರು ಮದುವೆಯಾಗುವ ಕನಸ್ಸನ್ನು ಸಾಕಾರ ಮಾಡಿದ್ದಾರೆ.

ಹುಡುಗನ ಕಡೆಯವರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಶ್ರೀಧರ್ ತಂದೆ-ತಾಯಿಗಳಿಂದ ಮುಚ್ಚಳಿಕೆ ಬರೆಸಿ ಕೊಂಡಿರುವ ಪಿಎಸ್ಐ ನವ ದಂಪತಿಗೆ ಯಾವುದೇ ರೀತಿಯ ತೊಂದರೆ ಕೊಡದಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ವಿವಾಹಕ್ಕೆ ಪೊಲೀಸರ ರಕ್ಷಣೆ ಸಿಕ್ಕರೂ ಜಾತಿಯ ಗೋಡೆಗಳು ಮೇಲಕ್ಕೆದ್ದು ಕುಣಿಯುತ್ತಿವೆ. ಹಾಗಾಗಿ ಉಭಯ ಸಮುದಾಯದವರು ಕೂತ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂಬುದು ದಲಿತ ಮುಖಂಡರ ಆಶಯ.

ಕೊರಟಗೆರೆ ತಾಲೂಕು ಚಿಂಪುಗಾನಹಳ್ಳಿಯ ಶ್ರೀಧರ್ ಆಟೋ ಓಡಿಸುತ್ತಿದ್ದರು. ಚಂದನ ಪಿಯುಸಿ ಓದುತ್ತಿದ್ದರು. ಇಬ್ಬರಲ್ಲೂ ಪ್ರೇಮಾಂಕುರ ಮೂಡಿ ವಿವಾಹ ಮಾಡಿಕೊಳ್ಳಲು ಮುಂದಾದಾಗ ಜಾತಿ ಅಡ್ಡ ಬಂದಿದ್ದು, ಐದಾರು ತಿಂಗಳಿಂದ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು ಇದೀಗ ಮದುವೆಯಾಗಿದ್ದು ಹುಡುಗನ ಕಡೆಯವರ ಬೆದರಿಕೆಯಿಂದಾಗಿ ತಲೆಮರೆಸಿಕೊಳ್ಳಬೇಕಾಗಿ ಬಂದಿದೆ.

ದಲಿತ ಮುಖಂಡ ನಾಗರಾಜ ನಾನುಗೌರಿ.ಕಾಂ ಜೊತೆ ಮಾತನಾಡಿ, ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಅನ್ಯಾಯವಾದರೆ ಹೋರಾಟ ಮಾಡುತ್ತೇವೆ. ಇಲ್ಲಿ ಮೇಲ್ಜಾತಿ-ಕೆಳಜಾತಿ ಬರಲ್ಲ. ಇಬ್ಬರು ಪರಸ್ಪರ ಪ್ರೀತಿಸಿದ್ದಾರೆ. ಅನ್ಯಾಯವಾದವರಿಗೆ ರಕ್ಷಣೆ ಸಿಗಬೇಕು. ಇಲ್ಲಿ ಯಾರೂ ಕೂಡ ಅನಗತ್ಯ ಗೊಂದಲಕ್ಕೆ ಒಳಗಾಗಬಾರದು. ಉಭಯ ಕಡೆಯವರು ಮಾತುಕತೆ ನಡೆಸಿದರೆ ಎಲ್ಲವು ಸುಗಮವಾಗುತ್ತದೆ. ಒಂದಾಗಿ ಬಾಳೋಣ, ಯುವ ದಂಪತಿಗೆ ಶುಭ ಹಾರೈಸೋಣ ಎಂದರು.

ಇಂತಹ ವಿವಾಹಗಳು ಮತ್ತಷ್ಟು ಹೆಚ್ಚಬೇಕು. ಸಂವಿಧಾನ ಪೀಠಿಕೆ ಓದಿ ನವ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಈ ಜೋಡಿ ಇತರರಿಗೂ ಮಾದರಿಯಾಗಿದೆ. .ಪಿಎಸ್ಐ ಕಾಂತರಾಜ ಅವರಂಥ ಮನಸ್ಸುಗಳು ಮತ್ತಷ್ಟು ಹೆಚ್ಚಲಿ ಎಂದು ಪ್ರಜ್ಞಾವಂತರು ಹೇಳಿದ್ದಾರೆ.


ಓದಿ: ಕೊರೊನಾ ರೋಗಿಯನ್ನೇ ಪ್ರೇಮಿಸಿ, ನಿಶ್ಚಿತಾರ್ಥವಾದ ಡಾಕ್ಟರ್?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...