Homeಕರ್ನಾಟಕಅಂಬೇಡ್ಕರ್-ವಾಲ್ಮೀಕಿ ಭಾವಚಿತ್ರದ ಮುಂದೆ ಮದುವೆಯಾದ ಪ್ರೇಮಿಗಳು.

ಅಂಬೇಡ್ಕರ್-ವಾಲ್ಮೀಕಿ ಭಾವಚಿತ್ರದ ಮುಂದೆ ಮದುವೆಯಾದ ಪ್ರೇಮಿಗಳು.

ಸಂವಿಧಾನ ಪೀಠಿಕೆ ಓಧಿಸಿದ ಪಿಎಸ್ಐ.

- Advertisement -
- Advertisement -

ವಿವಾಹಗಳು ಅದ್ದೂರಿಯಾಗಿರಬಹುದು, ಸರಳವಾಗಿರಬಹುದು. ಅವರವರ ಶಕ್ತಿ ಸಾಮರ್ಥ್ಯಕ್ಕೆ ಅನುಗುಣವಾಗಿ ವಿವಾಹಗಳು ಜರುಗುತ್ತವೆ. ಆದರೆ ಕೊರೊನ ಕಾಲಘಟ್ಟದಲ್ಲಿ ಅದ್ದೂರಿ ವಿವಾಹಗಳು ಸರಳಗೊಂಡಿವೆ. ಕೆಲವೇ ಮಂದಿ ಸೇರಿ ಸದ್ದಗದ್ದಲವಿಲ್ಲದೆ ನೂರಾರು ವಿವಾಹಳಳು ನಡೆದು ಹೋಗಿವೆ. ವಿವಾಹಗಳು ಸರಳಗೊಳ್ಳಬೇಕು. ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕು. ಮಂತ್ರಮಾಂಗಲ್ಯ ವಿವಾಹಗಳು ನಡೆಯಬೇಕು ಎಂಬ ಆಶಯ ಎಲ್ಲೆಡೆ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ತುಮಕೂರಿನ ಮಧುಗಿರಿಯಲ್ಲಿ ಪ್ರೇಮಿಗಳ ಜೋಡಿ ಸರಳಾತಿಸರಳವಾಗಿ ಭೀಮನ ಅಮಾವಾಸ್ಯೆಯ ದಿನ ನವ ದಾಂಪತ್ಯಗೀತೆ ಹಾಡಿದೆ.

ಹೌದು, ಇದು ಹಲವು ವಿಶಿಷ್ಠದಮದುವೆ. ಆರು ತಿಂಗಳಿಂದ ಪ್ರೀತಿಸುತ್ತಿದ್ದ ಯುವಜೋಡಿ ಸ್ಪಶ್ಯ-ಅಸ್ಪೃತೆ ಬೇಲಿಗಳ ದಾಟಿ ನವದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಶ್ರೀಧರ್ ಮತ್ತು ಚಂದನ ಅವರದ್ದು ಅಂತರಜಾತಿ ವಿವಾಹ. ಮನೆಯೊಂದರಲ್ಲಿ ಪ್ರೇಮಿಗಳಿಬ್ಬರು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಮತ್ತು ವಾಲ್ಮೀಕಿ ಭಾವ ಚಿತ್ರಗಳನ್ನು ಮುಂದಿಟ್ಟುಕೊಂಡು ವಿವಾಹವಾಗಿದ್ದಾರೆ. ಸಂವಿಧಾನದ ಪೀಠಿಕೆ ಓದಿ ಹೊಸ ಸಂಪ್ರದಾಯಕ್ಕೆ ನಾಂದಿಯಾಡಿದ್ದಾರೆ. ಇದರ ನೇತೃತ್ವ ವಹಿಸಿದವರು ಮಾತ್ರ ಮಧುಗಿರಿಯ ಪಿಎಸ್ಐ ಕಾಂತರಾಜು.

ಡಾ. ಬಿ. ಆರ್. ಅಂಬೇಢ್ಕರ್ ಮತ್ತು ವಾಲ್ಕೀಕಿ ತಮಗೆ ದಾರಿದೀಪ ಎಂಬುದನ್ನು ಈ ಜೋಡಿ ಸಾರಿ ಹೇಳಿದೆ. ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುತ್ತೇವೆ ಎಂದು ಪ್ರತಿಜ್ಞೆ ಮಾಡಿದೆ. ವಾಲ್ಮೀಕಿ ಸಮುದಾಯದ ಶ್ರೀಧರ್ (ಆಟೋಚಾಲಕ) ಮತ್ತು ಮಾದಿಗ ಸಮುದಾಯದ ಚಂದನ ಪರಸ್ಪರ ಆರು ತಿಂಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಮದುವೆಯಾಗಲು ಶ್ರೀಧರ್ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಜಾತಿಯನ್ನು ಮೀರಿ ವಿವಾಹವಾಗಿಯೇ ತೀರುತ್ತೇವೆಂಬ ಪಣ ತೊಟ್ಟರು.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಬಿಟ್ಟರು. ಪ್ರೇಮ ವಿವಾಹಕ್ಕೆ ಅಡ್ಡಿ ಮಾಡುತ್ತಿದ್ದಾರೆ. ನಮಗೆ ರಕ್ಷಣೆ ಬೇಕು ಎಂದು ವಿಡಿಯೋದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದರು. ಹುಡುಗಿ ಮಾದಿಗ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಹುಡುಗನ ಕಡೆಯವರು ಸುತಾರಾಂ ಒಪ್ಪಿಕೊಳ್ಳಲಿಲ್ಲ. ಹೀಗಾಗಿ ಹುಡುಗಿಯನ್ನು ಮಧುಗಿರಿ ತಾಲೂಕು ಸೋಂಪುರದಲ್ಲಿಟ್ಟರು. ಪ್ರೇಮಿಗಳು ರಕ್ಷಣೆ ಕೋರಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ವಿಡಿಯೋ ಪಿಎಸ್ಐ ಕಾಂತರಾಜು ಅವರ ಗಮನಕ್ಕೆ ಬಂದಿತ್ತು.

ಕೂಡಲೇ ಪಿಎಸ್ಐ ಕಾಂತರಾಜು ಕಾರ್ಯಾಚರಣೆಗೆ ಇಳಿದು, ಪ್ರೇಮಿಗಳನ್ನು ಒಂದುಗೂಡಿಸುವ ಯತ್ನಕ್ಕೆ ಚಾಲನೆ ನೀಡಿದ್ದಾರೆ. ಶ್ರೀಧರ್ ಮತ್ತು ಚಂದನಾ ಅವರನ್ನು ಕರೆಸಿ ಮಾಹಿತಿ ಕಲೆಹಾಕಿದ ಅವರು, ಹುಡುಗಿಯ ವಯಸ್ಸು ಮೊದಲಾದ ದಾಖಲೆಗಳನ್ನು ಪರಿಶೀಲಿಸಿ, ಪ್ರೇಮಿಗಳಿಬ್ಬರು ಮದುವೆಯಾಗುವ ಕನಸ್ಸನ್ನು ಸಾಕಾರ ಮಾಡಿದ್ದಾರೆ.

ಹುಡುಗನ ಕಡೆಯವರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಶ್ರೀಧರ್ ತಂದೆ-ತಾಯಿಗಳಿಂದ ಮುಚ್ಚಳಿಕೆ ಬರೆಸಿ ಕೊಂಡಿರುವ ಪಿಎಸ್ಐ ನವ ದಂಪತಿಗೆ ಯಾವುದೇ ರೀತಿಯ ತೊಂದರೆ ಕೊಡದಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ವಿವಾಹಕ್ಕೆ ಪೊಲೀಸರ ರಕ್ಷಣೆ ಸಿಕ್ಕರೂ ಜಾತಿಯ ಗೋಡೆಗಳು ಮೇಲಕ್ಕೆದ್ದು ಕುಣಿಯುತ್ತಿವೆ. ಹಾಗಾಗಿ ಉಭಯ ಸಮುದಾಯದವರು ಕೂತ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂಬುದು ದಲಿತ ಮುಖಂಡರ ಆಶಯ.

ಕೊರಟಗೆರೆ ತಾಲೂಕು ಚಿಂಪುಗಾನಹಳ್ಳಿಯ ಶ್ರೀಧರ್ ಆಟೋ ಓಡಿಸುತ್ತಿದ್ದರು. ಚಂದನ ಪಿಯುಸಿ ಓದುತ್ತಿದ್ದರು. ಇಬ್ಬರಲ್ಲೂ ಪ್ರೇಮಾಂಕುರ ಮೂಡಿ ವಿವಾಹ ಮಾಡಿಕೊಳ್ಳಲು ಮುಂದಾದಾಗ ಜಾತಿ ಅಡ್ಡ ಬಂದಿದ್ದು, ಐದಾರು ತಿಂಗಳಿಂದ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು ಇದೀಗ ಮದುವೆಯಾಗಿದ್ದು ಹುಡುಗನ ಕಡೆಯವರ ಬೆದರಿಕೆಯಿಂದಾಗಿ ತಲೆಮರೆಸಿಕೊಳ್ಳಬೇಕಾಗಿ ಬಂದಿದೆ.

ದಲಿತ ಮುಖಂಡ ನಾಗರಾಜ ನಾನುಗೌರಿ.ಕಾಂ ಜೊತೆ ಮಾತನಾಡಿ, ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಅನ್ಯಾಯವಾದರೆ ಹೋರಾಟ ಮಾಡುತ್ತೇವೆ. ಇಲ್ಲಿ ಮೇಲ್ಜಾತಿ-ಕೆಳಜಾತಿ ಬರಲ್ಲ. ಇಬ್ಬರು ಪರಸ್ಪರ ಪ್ರೀತಿಸಿದ್ದಾರೆ. ಅನ್ಯಾಯವಾದವರಿಗೆ ರಕ್ಷಣೆ ಸಿಗಬೇಕು. ಇಲ್ಲಿ ಯಾರೂ ಕೂಡ ಅನಗತ್ಯ ಗೊಂದಲಕ್ಕೆ ಒಳಗಾಗಬಾರದು. ಉಭಯ ಕಡೆಯವರು ಮಾತುಕತೆ ನಡೆಸಿದರೆ ಎಲ್ಲವು ಸುಗಮವಾಗುತ್ತದೆ. ಒಂದಾಗಿ ಬಾಳೋಣ, ಯುವ ದಂಪತಿಗೆ ಶುಭ ಹಾರೈಸೋಣ ಎಂದರು.

ಇಂತಹ ವಿವಾಹಗಳು ಮತ್ತಷ್ಟು ಹೆಚ್ಚಬೇಕು. ಸಂವಿಧಾನ ಪೀಠಿಕೆ ಓದಿ ನವ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಈ ಜೋಡಿ ಇತರರಿಗೂ ಮಾದರಿಯಾಗಿದೆ. .ಪಿಎಸ್ಐ ಕಾಂತರಾಜ ಅವರಂಥ ಮನಸ್ಸುಗಳು ಮತ್ತಷ್ಟು ಹೆಚ್ಚಲಿ ಎಂದು ಪ್ರಜ್ಞಾವಂತರು ಹೇಳಿದ್ದಾರೆ.


ಓದಿ: ಕೊರೊನಾ ರೋಗಿಯನ್ನೇ ಪ್ರೇಮಿಸಿ, ನಿಶ್ಚಿತಾರ್ಥವಾದ ಡಾಕ್ಟರ್?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....