Homeಕರ್ನಾಟಕಅಂಬೇಡ್ಕರ್-ವಾಲ್ಮೀಕಿ ಭಾವಚಿತ್ರದ ಮುಂದೆ ಮದುವೆಯಾದ ಪ್ರೇಮಿಗಳು.

ಅಂಬೇಡ್ಕರ್-ವಾಲ್ಮೀಕಿ ಭಾವಚಿತ್ರದ ಮುಂದೆ ಮದುವೆಯಾದ ಪ್ರೇಮಿಗಳು.

ಸಂವಿಧಾನ ಪೀಠಿಕೆ ಓಧಿಸಿದ ಪಿಎಸ್ಐ.

- Advertisement -
- Advertisement -

ವಿವಾಹಗಳು ಅದ್ದೂರಿಯಾಗಿರಬಹುದು, ಸರಳವಾಗಿರಬಹುದು. ಅವರವರ ಶಕ್ತಿ ಸಾಮರ್ಥ್ಯಕ್ಕೆ ಅನುಗುಣವಾಗಿ ವಿವಾಹಗಳು ಜರುಗುತ್ತವೆ. ಆದರೆ ಕೊರೊನ ಕಾಲಘಟ್ಟದಲ್ಲಿ ಅದ್ದೂರಿ ವಿವಾಹಗಳು ಸರಳಗೊಂಡಿವೆ. ಕೆಲವೇ ಮಂದಿ ಸೇರಿ ಸದ್ದಗದ್ದಲವಿಲ್ಲದೆ ನೂರಾರು ವಿವಾಹಳಳು ನಡೆದು ಹೋಗಿವೆ. ವಿವಾಹಗಳು ಸರಳಗೊಳ್ಳಬೇಕು. ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕು. ಮಂತ್ರಮಾಂಗಲ್ಯ ವಿವಾಹಗಳು ನಡೆಯಬೇಕು ಎಂಬ ಆಶಯ ಎಲ್ಲೆಡೆ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ತುಮಕೂರಿನ ಮಧುಗಿರಿಯಲ್ಲಿ ಪ್ರೇಮಿಗಳ ಜೋಡಿ ಸರಳಾತಿಸರಳವಾಗಿ ಭೀಮನ ಅಮಾವಾಸ್ಯೆಯ ದಿನ ನವ ದಾಂಪತ್ಯಗೀತೆ ಹಾಡಿದೆ.

ಹೌದು, ಇದು ಹಲವು ವಿಶಿಷ್ಠದಮದುವೆ. ಆರು ತಿಂಗಳಿಂದ ಪ್ರೀತಿಸುತ್ತಿದ್ದ ಯುವಜೋಡಿ ಸ್ಪಶ್ಯ-ಅಸ್ಪೃತೆ ಬೇಲಿಗಳ ದಾಟಿ ನವದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಶ್ರೀಧರ್ ಮತ್ತು ಚಂದನ ಅವರದ್ದು ಅಂತರಜಾತಿ ವಿವಾಹ. ಮನೆಯೊಂದರಲ್ಲಿ ಪ್ರೇಮಿಗಳಿಬ್ಬರು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಮತ್ತು ವಾಲ್ಮೀಕಿ ಭಾವ ಚಿತ್ರಗಳನ್ನು ಮುಂದಿಟ್ಟುಕೊಂಡು ವಿವಾಹವಾಗಿದ್ದಾರೆ. ಸಂವಿಧಾನದ ಪೀಠಿಕೆ ಓದಿ ಹೊಸ ಸಂಪ್ರದಾಯಕ್ಕೆ ನಾಂದಿಯಾಡಿದ್ದಾರೆ. ಇದರ ನೇತೃತ್ವ ವಹಿಸಿದವರು ಮಾತ್ರ ಮಧುಗಿರಿಯ ಪಿಎಸ್ಐ ಕಾಂತರಾಜು.

ಡಾ. ಬಿ. ಆರ್. ಅಂಬೇಢ್ಕರ್ ಮತ್ತು ವಾಲ್ಕೀಕಿ ತಮಗೆ ದಾರಿದೀಪ ಎಂಬುದನ್ನು ಈ ಜೋಡಿ ಸಾರಿ ಹೇಳಿದೆ. ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುತ್ತೇವೆ ಎಂದು ಪ್ರತಿಜ್ಞೆ ಮಾಡಿದೆ. ವಾಲ್ಮೀಕಿ ಸಮುದಾಯದ ಶ್ರೀಧರ್ (ಆಟೋಚಾಲಕ) ಮತ್ತು ಮಾದಿಗ ಸಮುದಾಯದ ಚಂದನ ಪರಸ್ಪರ ಆರು ತಿಂಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಮದುವೆಯಾಗಲು ಶ್ರೀಧರ್ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಜಾತಿಯನ್ನು ಮೀರಿ ವಿವಾಹವಾಗಿಯೇ ತೀರುತ್ತೇವೆಂಬ ಪಣ ತೊಟ್ಟರು.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಬಿಟ್ಟರು. ಪ್ರೇಮ ವಿವಾಹಕ್ಕೆ ಅಡ್ಡಿ ಮಾಡುತ್ತಿದ್ದಾರೆ. ನಮಗೆ ರಕ್ಷಣೆ ಬೇಕು ಎಂದು ವಿಡಿಯೋದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದರು. ಹುಡುಗಿ ಮಾದಿಗ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಹುಡುಗನ ಕಡೆಯವರು ಸುತಾರಾಂ ಒಪ್ಪಿಕೊಳ್ಳಲಿಲ್ಲ. ಹೀಗಾಗಿ ಹುಡುಗಿಯನ್ನು ಮಧುಗಿರಿ ತಾಲೂಕು ಸೋಂಪುರದಲ್ಲಿಟ್ಟರು. ಪ್ರೇಮಿಗಳು ರಕ್ಷಣೆ ಕೋರಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ವಿಡಿಯೋ ಪಿಎಸ್ಐ ಕಾಂತರಾಜು ಅವರ ಗಮನಕ್ಕೆ ಬಂದಿತ್ತು.

ಕೂಡಲೇ ಪಿಎಸ್ಐ ಕಾಂತರಾಜು ಕಾರ್ಯಾಚರಣೆಗೆ ಇಳಿದು, ಪ್ರೇಮಿಗಳನ್ನು ಒಂದುಗೂಡಿಸುವ ಯತ್ನಕ್ಕೆ ಚಾಲನೆ ನೀಡಿದ್ದಾರೆ. ಶ್ರೀಧರ್ ಮತ್ತು ಚಂದನಾ ಅವರನ್ನು ಕರೆಸಿ ಮಾಹಿತಿ ಕಲೆಹಾಕಿದ ಅವರು, ಹುಡುಗಿಯ ವಯಸ್ಸು ಮೊದಲಾದ ದಾಖಲೆಗಳನ್ನು ಪರಿಶೀಲಿಸಿ, ಪ್ರೇಮಿಗಳಿಬ್ಬರು ಮದುವೆಯಾಗುವ ಕನಸ್ಸನ್ನು ಸಾಕಾರ ಮಾಡಿದ್ದಾರೆ.

ಹುಡುಗನ ಕಡೆಯವರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಶ್ರೀಧರ್ ತಂದೆ-ತಾಯಿಗಳಿಂದ ಮುಚ್ಚಳಿಕೆ ಬರೆಸಿ ಕೊಂಡಿರುವ ಪಿಎಸ್ಐ ನವ ದಂಪತಿಗೆ ಯಾವುದೇ ರೀತಿಯ ತೊಂದರೆ ಕೊಡದಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ವಿವಾಹಕ್ಕೆ ಪೊಲೀಸರ ರಕ್ಷಣೆ ಸಿಕ್ಕರೂ ಜಾತಿಯ ಗೋಡೆಗಳು ಮೇಲಕ್ಕೆದ್ದು ಕುಣಿಯುತ್ತಿವೆ. ಹಾಗಾಗಿ ಉಭಯ ಸಮುದಾಯದವರು ಕೂತ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂಬುದು ದಲಿತ ಮುಖಂಡರ ಆಶಯ.

ಕೊರಟಗೆರೆ ತಾಲೂಕು ಚಿಂಪುಗಾನಹಳ್ಳಿಯ ಶ್ರೀಧರ್ ಆಟೋ ಓಡಿಸುತ್ತಿದ್ದರು. ಚಂದನ ಪಿಯುಸಿ ಓದುತ್ತಿದ್ದರು. ಇಬ್ಬರಲ್ಲೂ ಪ್ರೇಮಾಂಕುರ ಮೂಡಿ ವಿವಾಹ ಮಾಡಿಕೊಳ್ಳಲು ಮುಂದಾದಾಗ ಜಾತಿ ಅಡ್ಡ ಬಂದಿದ್ದು, ಐದಾರು ತಿಂಗಳಿಂದ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು ಇದೀಗ ಮದುವೆಯಾಗಿದ್ದು ಹುಡುಗನ ಕಡೆಯವರ ಬೆದರಿಕೆಯಿಂದಾಗಿ ತಲೆಮರೆಸಿಕೊಳ್ಳಬೇಕಾಗಿ ಬಂದಿದೆ.

ದಲಿತ ಮುಖಂಡ ನಾಗರಾಜ ನಾನುಗೌರಿ.ಕಾಂ ಜೊತೆ ಮಾತನಾಡಿ, ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಅನ್ಯಾಯವಾದರೆ ಹೋರಾಟ ಮಾಡುತ್ತೇವೆ. ಇಲ್ಲಿ ಮೇಲ್ಜಾತಿ-ಕೆಳಜಾತಿ ಬರಲ್ಲ. ಇಬ್ಬರು ಪರಸ್ಪರ ಪ್ರೀತಿಸಿದ್ದಾರೆ. ಅನ್ಯಾಯವಾದವರಿಗೆ ರಕ್ಷಣೆ ಸಿಗಬೇಕು. ಇಲ್ಲಿ ಯಾರೂ ಕೂಡ ಅನಗತ್ಯ ಗೊಂದಲಕ್ಕೆ ಒಳಗಾಗಬಾರದು. ಉಭಯ ಕಡೆಯವರು ಮಾತುಕತೆ ನಡೆಸಿದರೆ ಎಲ್ಲವು ಸುಗಮವಾಗುತ್ತದೆ. ಒಂದಾಗಿ ಬಾಳೋಣ, ಯುವ ದಂಪತಿಗೆ ಶುಭ ಹಾರೈಸೋಣ ಎಂದರು.

ಇಂತಹ ವಿವಾಹಗಳು ಮತ್ತಷ್ಟು ಹೆಚ್ಚಬೇಕು. ಸಂವಿಧಾನ ಪೀಠಿಕೆ ಓದಿ ನವ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಈ ಜೋಡಿ ಇತರರಿಗೂ ಮಾದರಿಯಾಗಿದೆ. .ಪಿಎಸ್ಐ ಕಾಂತರಾಜ ಅವರಂಥ ಮನಸ್ಸುಗಳು ಮತ್ತಷ್ಟು ಹೆಚ್ಚಲಿ ಎಂದು ಪ್ರಜ್ಞಾವಂತರು ಹೇಳಿದ್ದಾರೆ.


ಓದಿ: ಕೊರೊನಾ ರೋಗಿಯನ್ನೇ ಪ್ರೇಮಿಸಿ, ನಿಶ್ಚಿತಾರ್ಥವಾದ ಡಾಕ್ಟರ್?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...