Homeಕರ್ನಾಟಕಅಂಬೇಡ್ಕರ್-ವಾಲ್ಮೀಕಿ ಭಾವಚಿತ್ರದ ಮುಂದೆ ಮದುವೆಯಾದ ಪ್ರೇಮಿಗಳು.

ಅಂಬೇಡ್ಕರ್-ವಾಲ್ಮೀಕಿ ಭಾವಚಿತ್ರದ ಮುಂದೆ ಮದುವೆಯಾದ ಪ್ರೇಮಿಗಳು.

ಸಂವಿಧಾನ ಪೀಠಿಕೆ ಓಧಿಸಿದ ಪಿಎಸ್ಐ.

- Advertisement -
- Advertisement -

ವಿವಾಹಗಳು ಅದ್ದೂರಿಯಾಗಿರಬಹುದು, ಸರಳವಾಗಿರಬಹುದು. ಅವರವರ ಶಕ್ತಿ ಸಾಮರ್ಥ್ಯಕ್ಕೆ ಅನುಗುಣವಾಗಿ ವಿವಾಹಗಳು ಜರುಗುತ್ತವೆ. ಆದರೆ ಕೊರೊನ ಕಾಲಘಟ್ಟದಲ್ಲಿ ಅದ್ದೂರಿ ವಿವಾಹಗಳು ಸರಳಗೊಂಡಿವೆ. ಕೆಲವೇ ಮಂದಿ ಸೇರಿ ಸದ್ದಗದ್ದಲವಿಲ್ಲದೆ ನೂರಾರು ವಿವಾಹಳಳು ನಡೆದು ಹೋಗಿವೆ. ವಿವಾಹಗಳು ಸರಳಗೊಳ್ಳಬೇಕು. ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕು. ಮಂತ್ರಮಾಂಗಲ್ಯ ವಿವಾಹಗಳು ನಡೆಯಬೇಕು ಎಂಬ ಆಶಯ ಎಲ್ಲೆಡೆ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ತುಮಕೂರಿನ ಮಧುಗಿರಿಯಲ್ಲಿ ಪ್ರೇಮಿಗಳ ಜೋಡಿ ಸರಳಾತಿಸರಳವಾಗಿ ಭೀಮನ ಅಮಾವಾಸ್ಯೆಯ ದಿನ ನವ ದಾಂಪತ್ಯಗೀತೆ ಹಾಡಿದೆ.

ಹೌದು, ಇದು ಹಲವು ವಿಶಿಷ್ಠದಮದುವೆ. ಆರು ತಿಂಗಳಿಂದ ಪ್ರೀತಿಸುತ್ತಿದ್ದ ಯುವಜೋಡಿ ಸ್ಪಶ್ಯ-ಅಸ್ಪೃತೆ ಬೇಲಿಗಳ ದಾಟಿ ನವದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಶ್ರೀಧರ್ ಮತ್ತು ಚಂದನ ಅವರದ್ದು ಅಂತರಜಾತಿ ವಿವಾಹ. ಮನೆಯೊಂದರಲ್ಲಿ ಪ್ರೇಮಿಗಳಿಬ್ಬರು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಮತ್ತು ವಾಲ್ಮೀಕಿ ಭಾವ ಚಿತ್ರಗಳನ್ನು ಮುಂದಿಟ್ಟುಕೊಂಡು ವಿವಾಹವಾಗಿದ್ದಾರೆ. ಸಂವಿಧಾನದ ಪೀಠಿಕೆ ಓದಿ ಹೊಸ ಸಂಪ್ರದಾಯಕ್ಕೆ ನಾಂದಿಯಾಡಿದ್ದಾರೆ. ಇದರ ನೇತೃತ್ವ ವಹಿಸಿದವರು ಮಾತ್ರ ಮಧುಗಿರಿಯ ಪಿಎಸ್ಐ ಕಾಂತರಾಜು.

ಡಾ. ಬಿ. ಆರ್. ಅಂಬೇಢ್ಕರ್ ಮತ್ತು ವಾಲ್ಕೀಕಿ ತಮಗೆ ದಾರಿದೀಪ ಎಂಬುದನ್ನು ಈ ಜೋಡಿ ಸಾರಿ ಹೇಳಿದೆ. ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುತ್ತೇವೆ ಎಂದು ಪ್ರತಿಜ್ಞೆ ಮಾಡಿದೆ. ವಾಲ್ಮೀಕಿ ಸಮುದಾಯದ ಶ್ರೀಧರ್ (ಆಟೋಚಾಲಕ) ಮತ್ತು ಮಾದಿಗ ಸಮುದಾಯದ ಚಂದನ ಪರಸ್ಪರ ಆರು ತಿಂಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಮದುವೆಯಾಗಲು ಶ್ರೀಧರ್ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಜಾತಿಯನ್ನು ಮೀರಿ ವಿವಾಹವಾಗಿಯೇ ತೀರುತ್ತೇವೆಂಬ ಪಣ ತೊಟ್ಟರು.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಬಿಟ್ಟರು. ಪ್ರೇಮ ವಿವಾಹಕ್ಕೆ ಅಡ್ಡಿ ಮಾಡುತ್ತಿದ್ದಾರೆ. ನಮಗೆ ರಕ್ಷಣೆ ಬೇಕು ಎಂದು ವಿಡಿಯೋದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದರು. ಹುಡುಗಿ ಮಾದಿಗ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಹುಡುಗನ ಕಡೆಯವರು ಸುತಾರಾಂ ಒಪ್ಪಿಕೊಳ್ಳಲಿಲ್ಲ. ಹೀಗಾಗಿ ಹುಡುಗಿಯನ್ನು ಮಧುಗಿರಿ ತಾಲೂಕು ಸೋಂಪುರದಲ್ಲಿಟ್ಟರು. ಪ್ರೇಮಿಗಳು ರಕ್ಷಣೆ ಕೋರಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ವಿಡಿಯೋ ಪಿಎಸ್ಐ ಕಾಂತರಾಜು ಅವರ ಗಮನಕ್ಕೆ ಬಂದಿತ್ತು.

ಕೂಡಲೇ ಪಿಎಸ್ಐ ಕಾಂತರಾಜು ಕಾರ್ಯಾಚರಣೆಗೆ ಇಳಿದು, ಪ್ರೇಮಿಗಳನ್ನು ಒಂದುಗೂಡಿಸುವ ಯತ್ನಕ್ಕೆ ಚಾಲನೆ ನೀಡಿದ್ದಾರೆ. ಶ್ರೀಧರ್ ಮತ್ತು ಚಂದನಾ ಅವರನ್ನು ಕರೆಸಿ ಮಾಹಿತಿ ಕಲೆಹಾಕಿದ ಅವರು, ಹುಡುಗಿಯ ವಯಸ್ಸು ಮೊದಲಾದ ದಾಖಲೆಗಳನ್ನು ಪರಿಶೀಲಿಸಿ, ಪ್ರೇಮಿಗಳಿಬ್ಬರು ಮದುವೆಯಾಗುವ ಕನಸ್ಸನ್ನು ಸಾಕಾರ ಮಾಡಿದ್ದಾರೆ.

ಹುಡುಗನ ಕಡೆಯವರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಶ್ರೀಧರ್ ತಂದೆ-ತಾಯಿಗಳಿಂದ ಮುಚ್ಚಳಿಕೆ ಬರೆಸಿ ಕೊಂಡಿರುವ ಪಿಎಸ್ಐ ನವ ದಂಪತಿಗೆ ಯಾವುದೇ ರೀತಿಯ ತೊಂದರೆ ಕೊಡದಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ವಿವಾಹಕ್ಕೆ ಪೊಲೀಸರ ರಕ್ಷಣೆ ಸಿಕ್ಕರೂ ಜಾತಿಯ ಗೋಡೆಗಳು ಮೇಲಕ್ಕೆದ್ದು ಕುಣಿಯುತ್ತಿವೆ. ಹಾಗಾಗಿ ಉಭಯ ಸಮುದಾಯದವರು ಕೂತ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂಬುದು ದಲಿತ ಮುಖಂಡರ ಆಶಯ.

ಕೊರಟಗೆರೆ ತಾಲೂಕು ಚಿಂಪುಗಾನಹಳ್ಳಿಯ ಶ್ರೀಧರ್ ಆಟೋ ಓಡಿಸುತ್ತಿದ್ದರು. ಚಂದನ ಪಿಯುಸಿ ಓದುತ್ತಿದ್ದರು. ಇಬ್ಬರಲ್ಲೂ ಪ್ರೇಮಾಂಕುರ ಮೂಡಿ ವಿವಾಹ ಮಾಡಿಕೊಳ್ಳಲು ಮುಂದಾದಾಗ ಜಾತಿ ಅಡ್ಡ ಬಂದಿದ್ದು, ಐದಾರು ತಿಂಗಳಿಂದ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು ಇದೀಗ ಮದುವೆಯಾಗಿದ್ದು ಹುಡುಗನ ಕಡೆಯವರ ಬೆದರಿಕೆಯಿಂದಾಗಿ ತಲೆಮರೆಸಿಕೊಳ್ಳಬೇಕಾಗಿ ಬಂದಿದೆ.

ದಲಿತ ಮುಖಂಡ ನಾಗರಾಜ ನಾನುಗೌರಿ.ಕಾಂ ಜೊತೆ ಮಾತನಾಡಿ, ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಅನ್ಯಾಯವಾದರೆ ಹೋರಾಟ ಮಾಡುತ್ತೇವೆ. ಇಲ್ಲಿ ಮೇಲ್ಜಾತಿ-ಕೆಳಜಾತಿ ಬರಲ್ಲ. ಇಬ್ಬರು ಪರಸ್ಪರ ಪ್ರೀತಿಸಿದ್ದಾರೆ. ಅನ್ಯಾಯವಾದವರಿಗೆ ರಕ್ಷಣೆ ಸಿಗಬೇಕು. ಇಲ್ಲಿ ಯಾರೂ ಕೂಡ ಅನಗತ್ಯ ಗೊಂದಲಕ್ಕೆ ಒಳಗಾಗಬಾರದು. ಉಭಯ ಕಡೆಯವರು ಮಾತುಕತೆ ನಡೆಸಿದರೆ ಎಲ್ಲವು ಸುಗಮವಾಗುತ್ತದೆ. ಒಂದಾಗಿ ಬಾಳೋಣ, ಯುವ ದಂಪತಿಗೆ ಶುಭ ಹಾರೈಸೋಣ ಎಂದರು.

ಇಂತಹ ವಿವಾಹಗಳು ಮತ್ತಷ್ಟು ಹೆಚ್ಚಬೇಕು. ಸಂವಿಧಾನ ಪೀಠಿಕೆ ಓದಿ ನವ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಈ ಜೋಡಿ ಇತರರಿಗೂ ಮಾದರಿಯಾಗಿದೆ. .ಪಿಎಸ್ಐ ಕಾಂತರಾಜ ಅವರಂಥ ಮನಸ್ಸುಗಳು ಮತ್ತಷ್ಟು ಹೆಚ್ಚಲಿ ಎಂದು ಪ್ರಜ್ಞಾವಂತರು ಹೇಳಿದ್ದಾರೆ.


ಓದಿ: ಕೊರೊನಾ ರೋಗಿಯನ್ನೇ ಪ್ರೇಮಿಸಿ, ನಿಶ್ಚಿತಾರ್ಥವಾದ ಡಾಕ್ಟರ್?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...