Homeಮುಖಪುಟಮಂಗಳ ಗ್ರಹದಲ್ಲಿ ಈ ಹಿಂದೆ ಯೋಚಿಸಿದ್ದಕ್ಕಿಂತಲೂ ಹೆಚ್ಚು ಕಾಲ ನೀರಿತ್ತು!: ವಿಜ್ಞಾನಿಗಳ ಊಹೆ

ಮಂಗಳ ಗ್ರಹದಲ್ಲಿ ಈ ಹಿಂದೆ ಯೋಚಿಸಿದ್ದಕ್ಕಿಂತಲೂ ಹೆಚ್ಚು ಕಾಲ ನೀರಿತ್ತು!: ವಿಜ್ಞಾನಿಗಳ ಊಹೆ

- Advertisement -
- Advertisement -

ಕೆಲವು ಶತಕೋಟಿ ವರ್ಷಗಳ ಹಿಂದೆ, ಮಂಗಳವು ಬಹುಶಃ ಕೊಳಗಳು ಮತ್ತು ನದಿಗಳನ್ನು ಹೊಂದಿತ್ತು. ಅದು ಸೂಕ್ಷ್ಮಜೀವಿಗಳ ಜೀವನಕ್ಕೆ ಸಂಭಾವ್ಯ ಆವಾಸಸ್ಥಾನವೂ ಆಗಿತ್ತು. ಆದರೆ, ಕಾಲಾನಂತರದಲ್ಲಿ ಆ ಗ್ರಹವು ಬದಲಾಯಿತು ಮತ್ತು ನೀರಿನ ಆವಿಯಾಗುವಿಕೆಯಿಂದಾಗಿ ಅದರ ವಾತಾವರಣವು ತೆಳುವಾಯಿತು ಎಂದು ಸಂಶೋಧಕರು ಊಹಿಸಿದ್ದಾರೆ.

ನ್ಯಾಶನಲ್ ಏರೋನಾಟಿಕ್ಸ್ ಅಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್ (ನಾಸಾ) ವಿನ್ಯಾಸಗೊಳಿಸಿ ಉಡಾವಣೆ ಮಾಡಿದ ಮಾರ್ಸ್ ರಿಕಾನೈಸೆನ್ಸ್ ಆರ್ಬಿಟರ್ (MRO) ಬಾಹ್ಯಾಕಾಶ ನೌಕೆಯು 2006 ರಿಂದ ಮಂಗಳ ಗ್ರಹದ ವಾತಾವರಣ ಮತ್ತು ಭೂವಿಜ್ಞಾನವನ್ನು ಸಮೀಕ್ಷೆ ಮಾಡುತ್ತಿದೆ.

ಇದನ್ನೂ ಓದಿ: ಮಂಗಳ ಗ್ರಹದಲ್ಲಿ ಮೊದಲ ಬಾರಿಗೆ ಹೆಲಿಕಾಪ್ಟರ್‌ ಹಾರಿಸಿದ ನಾಸಾ!

ಕ್ಯಾಲಿಫೋರ್ನಿಯಾದ ಎಜಿಯು ಅಡ್ವಾನ್ಸಸ್ ಜರ್ನಲ್‌ನಲ್ಲಿ ಪ್ರಕಟವಾದ ಇತ್ತೀಚಿನ ಸಂಶೋಧನೆಯಲ್ಲಿ ಅಮೆರಿಕದಲ್ಲಿರುವ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಂಶೋಧಕರು ಎಂಆರ್‌ಒ ದತ್ತಾಂಶವನ್ನು ಬಳಸಿದ್ದಾರೆ. ಇದರ ಪ್ರಕಾರ, ಈ ಹಿಂದೆ ಯೋಚಿಸಿದ್ದಕ್ಕಿಂತ ಹೆಚ್ಚು ಸಮಯ ಗ್ರಹದಲ್ಲಿ ನೀರು ಇದ್ದಿರಬಹುದು ಎಂದು ತೀರ್ಮಾನಿಸಿದ್ದಾರೆ.

ಇತ್ತೀಚಿನ ಸಂಶೋಧನೆಗಳ ಪ್ರಕಾರ, ಮಂಗಳ ಗ್ರಹದ ಮೇಲ್ಮೈಯಲ್ಲಿ ನೀರು ಸುಮಾರು ಮೂರು ಶತಕೋಟಿ ವರ್ಷಗಳ ಹಿಂದೆ ಆವಿಯಾಯಿತು. ಅಲ್ಲದೆ, ಎರಡು ಶತಕೋಟಿ ವರ್ಷಗಳ ಹಿಂದೆ ಮಂಗಳ ಗ್ರಹದ ಮೇಲ್ಮೈಯಲ್ಲಿ ನೀರಿನಲ್ಲಿದ್ದ ಉಪ್ಪು ಖನಿಜಗಳು ಉಳಿದಿವೆ ಎಂದು ನಂಬಲಾಗಿದೆ. ಅಲ್ಲದೆ, ಎಂಆರ್‌ಒ ಮೂಲಕ ಹೊಸ ಸಂಶೋಧನೆಗಳು ನಡೆದಿದ್ದು, ಕಳೆದ 15 ವರ್ಷಗಳಿಂದ ನಡೆದ ಸಂಶೋಧನೆಗಳು, ನೀರಿನ ಅಸ್ತಿತ್ವದ ಮೇಲೆ ಹೊಸ ಬೆಳಕನ್ನು ಚೆಲ್ಲಿದೆ ಮತ್ತು ಮಂಗಳ ಗ್ರಹದಲ್ಲಿ ಪ್ರಾಚೀನ ಜೀವಿಗಳು ಬದುಕಿದ್ದ ಸಾಧ್ಯತೆಗಳಿವೆ.

ನಾಸಾದ ಜೆಟ್ ಪ್ರೊಪಲ್ಷನ್ ಲ್ಯಾಬೋರೇಟರಿಯಲ್ಲಿ ಎಂಆರ್‌ಒನ ಉಪ ಯೋಜನಾ ವಿಜ್ಞಾನಿ ಲೆಸ್ಲಿ ಟಂಪರಿ ಅವರು ಹೊಸ ಸಂಶೋಧನೆಗಳ ಕುರಿತು ಪ್ರತಿಕ್ರಿಯಿಸಿದ್ದು, “ಎಂಆರ್‌ಒದಿಂದಾಗಿ ಗ್ರಹದ ಬಗ್ಗೆ ನಮ್ಮ ದೃಷ್ಟಿಕೋನವನ್ನು ಮತ್ತಷ್ಟು ವಿವರಗೊಳಿಸಿದೆ. ನಮ್ಮ ಉಪಕರಣಗಳೊಂದಿಗೆ ನಾವು ಗ್ರಹದ ಹೆಚ್ಚು ಹೆಚ್ಚು ನಕ್ಷೆಗಳನ್ನು ಪಡೆಯುತ್ತಿದ್ದೇವೆ. ಇದರಿಂದ, ಆ ಗ್ರಹದ ಇತಿಹಾಸವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಬಹುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಗಳ ಗ್ರಹದ ಮೊದಲ ಆಡಿಯೊ ಬಿಡುಗಡೆ ಮಾಡಿದ ನಾಸಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...