Homeಮುಖಪುಟಮಂಗಳ ಗ್ರಹದಲ್ಲಿ ಈ ಹಿಂದೆ ಯೋಚಿಸಿದ್ದಕ್ಕಿಂತಲೂ ಹೆಚ್ಚು ಕಾಲ ನೀರಿತ್ತು!: ವಿಜ್ಞಾನಿಗಳ ಊಹೆ

ಮಂಗಳ ಗ್ರಹದಲ್ಲಿ ಈ ಹಿಂದೆ ಯೋಚಿಸಿದ್ದಕ್ಕಿಂತಲೂ ಹೆಚ್ಚು ಕಾಲ ನೀರಿತ್ತು!: ವಿಜ್ಞಾನಿಗಳ ಊಹೆ

- Advertisement -
- Advertisement -

ಕೆಲವು ಶತಕೋಟಿ ವರ್ಷಗಳ ಹಿಂದೆ, ಮಂಗಳವು ಬಹುಶಃ ಕೊಳಗಳು ಮತ್ತು ನದಿಗಳನ್ನು ಹೊಂದಿತ್ತು. ಅದು ಸೂಕ್ಷ್ಮಜೀವಿಗಳ ಜೀವನಕ್ಕೆ ಸಂಭಾವ್ಯ ಆವಾಸಸ್ಥಾನವೂ ಆಗಿತ್ತು. ಆದರೆ, ಕಾಲಾನಂತರದಲ್ಲಿ ಆ ಗ್ರಹವು ಬದಲಾಯಿತು ಮತ್ತು ನೀರಿನ ಆವಿಯಾಗುವಿಕೆಯಿಂದಾಗಿ ಅದರ ವಾತಾವರಣವು ತೆಳುವಾಯಿತು ಎಂದು ಸಂಶೋಧಕರು ಊಹಿಸಿದ್ದಾರೆ.

ನ್ಯಾಶನಲ್ ಏರೋನಾಟಿಕ್ಸ್ ಅಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್ (ನಾಸಾ) ವಿನ್ಯಾಸಗೊಳಿಸಿ ಉಡಾವಣೆ ಮಾಡಿದ ಮಾರ್ಸ್ ರಿಕಾನೈಸೆನ್ಸ್ ಆರ್ಬಿಟರ್ (MRO) ಬಾಹ್ಯಾಕಾಶ ನೌಕೆಯು 2006 ರಿಂದ ಮಂಗಳ ಗ್ರಹದ ವಾತಾವರಣ ಮತ್ತು ಭೂವಿಜ್ಞಾನವನ್ನು ಸಮೀಕ್ಷೆ ಮಾಡುತ್ತಿದೆ.

ಇದನ್ನೂ ಓದಿ: ಮಂಗಳ ಗ್ರಹದಲ್ಲಿ ಮೊದಲ ಬಾರಿಗೆ ಹೆಲಿಕಾಪ್ಟರ್‌ ಹಾರಿಸಿದ ನಾಸಾ!

ಕ್ಯಾಲಿಫೋರ್ನಿಯಾದ ಎಜಿಯು ಅಡ್ವಾನ್ಸಸ್ ಜರ್ನಲ್‌ನಲ್ಲಿ ಪ್ರಕಟವಾದ ಇತ್ತೀಚಿನ ಸಂಶೋಧನೆಯಲ್ಲಿ ಅಮೆರಿಕದಲ್ಲಿರುವ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಂಶೋಧಕರು ಎಂಆರ್‌ಒ ದತ್ತಾಂಶವನ್ನು ಬಳಸಿದ್ದಾರೆ. ಇದರ ಪ್ರಕಾರ, ಈ ಹಿಂದೆ ಯೋಚಿಸಿದ್ದಕ್ಕಿಂತ ಹೆಚ್ಚು ಸಮಯ ಗ್ರಹದಲ್ಲಿ ನೀರು ಇದ್ದಿರಬಹುದು ಎಂದು ತೀರ್ಮಾನಿಸಿದ್ದಾರೆ.

ಇತ್ತೀಚಿನ ಸಂಶೋಧನೆಗಳ ಪ್ರಕಾರ, ಮಂಗಳ ಗ್ರಹದ ಮೇಲ್ಮೈಯಲ್ಲಿ ನೀರು ಸುಮಾರು ಮೂರು ಶತಕೋಟಿ ವರ್ಷಗಳ ಹಿಂದೆ ಆವಿಯಾಯಿತು. ಅಲ್ಲದೆ, ಎರಡು ಶತಕೋಟಿ ವರ್ಷಗಳ ಹಿಂದೆ ಮಂಗಳ ಗ್ರಹದ ಮೇಲ್ಮೈಯಲ್ಲಿ ನೀರಿನಲ್ಲಿದ್ದ ಉಪ್ಪು ಖನಿಜಗಳು ಉಳಿದಿವೆ ಎಂದು ನಂಬಲಾಗಿದೆ. ಅಲ್ಲದೆ, ಎಂಆರ್‌ಒ ಮೂಲಕ ಹೊಸ ಸಂಶೋಧನೆಗಳು ನಡೆದಿದ್ದು, ಕಳೆದ 15 ವರ್ಷಗಳಿಂದ ನಡೆದ ಸಂಶೋಧನೆಗಳು, ನೀರಿನ ಅಸ್ತಿತ್ವದ ಮೇಲೆ ಹೊಸ ಬೆಳಕನ್ನು ಚೆಲ್ಲಿದೆ ಮತ್ತು ಮಂಗಳ ಗ್ರಹದಲ್ಲಿ ಪ್ರಾಚೀನ ಜೀವಿಗಳು ಬದುಕಿದ್ದ ಸಾಧ್ಯತೆಗಳಿವೆ.

ನಾಸಾದ ಜೆಟ್ ಪ್ರೊಪಲ್ಷನ್ ಲ್ಯಾಬೋರೇಟರಿಯಲ್ಲಿ ಎಂಆರ್‌ಒನ ಉಪ ಯೋಜನಾ ವಿಜ್ಞಾನಿ ಲೆಸ್ಲಿ ಟಂಪರಿ ಅವರು ಹೊಸ ಸಂಶೋಧನೆಗಳ ಕುರಿತು ಪ್ರತಿಕ್ರಿಯಿಸಿದ್ದು, “ಎಂಆರ್‌ಒದಿಂದಾಗಿ ಗ್ರಹದ ಬಗ್ಗೆ ನಮ್ಮ ದೃಷ್ಟಿಕೋನವನ್ನು ಮತ್ತಷ್ಟು ವಿವರಗೊಳಿಸಿದೆ. ನಮ್ಮ ಉಪಕರಣಗಳೊಂದಿಗೆ ನಾವು ಗ್ರಹದ ಹೆಚ್ಚು ಹೆಚ್ಚು ನಕ್ಷೆಗಳನ್ನು ಪಡೆಯುತ್ತಿದ್ದೇವೆ. ಇದರಿಂದ, ಆ ಗ್ರಹದ ಇತಿಹಾಸವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಬಹುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಗಳ ಗ್ರಹದ ಮೊದಲ ಆಡಿಯೊ ಬಿಡುಗಡೆ ಮಾಡಿದ ನಾಸಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...