Homeಮುಖಪುಟನೆಲ್ಸನ್ ಮಂಡೇಲಾ, ಐನ್‌ಸ್ಟೈನ್ ಮಹತ್ಮಾ ಗಾಂಧಿಯಿಂದ ಸ್ಪೂರ್ತಿ ಪಡೆದಿದ್ದರು: ರಾಹುಲ್‌ ಗಾಂಧಿ

ನೆಲ್ಸನ್ ಮಂಡೇಲಾ, ಐನ್‌ಸ್ಟೈನ್ ಮಹತ್ಮಾ ಗಾಂಧಿಯಿಂದ ಸ್ಪೂರ್ತಿ ಪಡೆದಿದ್ದರು: ರಾಹುಲ್‌ ಗಾಂಧಿ

- Advertisement -
- Advertisement -

ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್, ನೆಲ್ಸನ್ ಮಂಡೇಲಾ ಮತ್ತು ಆಲ್ಬರ್ಟ್ ಐನ್‌ಸ್ಟೈನ್ ಅವರಂತಹ ಹೆಸರಾಂತ ವ್ಯಕ್ತಿಗಳು ಮಹಾತ್ಮ ಗಾಂಧಿಯವರಿಂದ ಸ್ಫೂರ್ತಿ ಪಡೆದವರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

‘ಗಾಂಧಿ’ ಚಿತ್ರದ ಮೂಲಕ ಜಗತ್ತು ಮಹಾತ್ಮಾ ಗಾಂಧಿಯವರ ಬಗ್ಗೆ ಕಲಿತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಬಗ್ಗೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಪ್ರಧಾನಿಯ ಆರೆಸ್ಸೆಸ್‌ ನಂಟಿನ ಬಗ್ಗೆ ಟೀಕಿಸಿದ್ದಾರೆ, ಗಾಂಧಿಯವರ ಪರಂಪರೆಯ ಬಗ್ಗೆ ಅವರಿಗೆ ತಿಳುವಳಿಕೆಯ ಕೊರತೆ ಇದೆ ಎಂದು ಹೇಳಿದ್ದಾರೆ.

ಯಾರಿಗೆ ಆರ್‌ಎಸ್‌ಎಸ್‌ನ ಶಾಖೆಯಲ್ಲಿ ತರಬೇತಿ ನೀಡಲಾಗಿದೆ, ಅವರು ಗೋಡ್ಸೆಯ ಅನುಯಾಯಿಗಳು, ಅವರಿಗೆ ಗಾಂಧೀಜಿ ಬಗ್ಗೆ ಏನೂ ತಿಳಿದಿಲ್ಲ, ಅವರಿಗೆ ಹಿಂದೂಸ್ತಾನದ ಇತಿಹಾಸ, ಸತ್ಯ ಮತ್ತು ಹಿಂಸೆಯ ಬಗ್ಗೆ ತಿಳಿದಿಲ್ಲ.  ಗಾಂಧೀಜಿಯ ಬಗ್ಗೆ ಜಗತ್ತಿಗೆ ಏನೂ ತಿಳಿದಿಲ್ಲ ಎಂದು ಪ್ರಧಾನಿ ಹೇಳುವುದು ನಿರೀಕ್ಷಿತವೇ ಎಂದು ಹೇಳಿದ್ದಾರೆ.

ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್, ನೆಲ್ಸನ್ ಮಂಡೇಲಾ ಮತ್ತು ಐನ್‌ಸ್ಟೈನ್ ಅವರಂತಹ ಜಾಗತಿಕ ದಿಗ್ಗಜರು ವಿವಿಧ ಸ್ವಾತಂತ್ರ್ಯ ಚಳುವಳಿಗಳ ಜೊತೆಗೆ ಗಾಂಧಿಯವರ ತತ್ವಗಳಲ್ಲಿ ಸ್ಫೂರ್ತಿಯನ್ನು ಪಡೆದವರು, ವಿವಿಧ ಚಳುವಳಿಗಳು, ಸ್ವಾತಂತ್ರ್ಯ ಚಳುವಳಿಗಳು ಸಹ ಗಾಂಧೀಜಿಯಿಂದ ಸ್ಫೂರ್ತಿ ಪಡೆದವು. ಭಾರತದ ಮಕ್ಕಳು ಕೂಡ ಗಾಂಧೀಜಿಯಿಂದ ಸ್ಫೂರ್ತಿ ಪಡೆಯುತ್ತಾರೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಪ್ರಧಾನಿಯ ಜಗತ್ತು ಅವರ ಶಾಖೆಯಾಗಿದೆ, ಈ ವಿಷಯದ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಎಬಿಪಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರಿಚರ್ಡ್ ಅಟೆನ್‌ಬರೋ ಅವರು 1982ರಲ್ಲಿ ‘ಗಾಂಧಿ’ ಸಿನಿಮಾವನ್ನು ನಿರ್ಮಿಸುವವರೆಗೂ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಬಗ್ಗೆ ಜಗತ್ತಿಗೆ ತಿಳಿದಿರಲಿಲ್ಲ. ಕಳೆದ 75 ವರ್ಷಗಳಲ್ಲಿ ಗಾಂಧಿಯವರ ಜಾಗತಿಕ ಖ್ಯಾತಿಯನ್ನು ಹೆಚ್ಚು ಮಾಡುವುದು ದೇಶದ ಕೆಲಸವಾಗಿರಲಿಲ್ಲವೇ ಎಂದು  ಪ್ರಶ್ನಿಸಿದ್ದರು. ಮಹಾತ್ಮಾ ಗಾಂಧೀಜಿ ಒಬ್ಬ ಮಹಾನ್ ಚೇತನ. ಕಳೆದ 75 ವರ್ಷಗಳಲ್ಲಿ ಅವರಿಗೆ ಜಾಗತಿಕ ಮನ್ನಣೆಯನ್ನು ತಂದುಕೊಡುವುದು ನಮ್ಮ ಜವಾಬ್ದಾರಿಯಲ್ಲವೇ? ಇದು ಯಾರಿಗೂ ತಿಳಿದಿರಲಿಲ್ಲ, ದಯವಿಟ್ಟು ನನ್ನನ್ನು ಕ್ಷಮಿಸಿ. ಮೊದಲ ಬಾರಿಗೆ, 1982ರಲ್ಲಿ ಗಾಂಧಿ ಚಲನಚಿತ್ರವನ್ನು ನಿರ್ಮಿಸಿದಾಗ, ಅವರು ಯಾರು ಎಂದು ಜಗತ್ತು ಕುತೂಹಲದಿಂದ ನೋಡಿತ್ತು. ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಅವರ ಬಗ್ಗೆ ಜಗತ್ತಿಗೆ ತಿಳಿದಿದ್ದರೆ, ಜಗತ್ತು ಗಾಂಧಿ ಬಗ್ಗೆ ಕೂಡ ಅಷ್ಟೇ ತಿಳಿದಿರಬೇಕಿತ್ತು.  ಗಾಂಧಿ ಮತ್ತು ಅವರ ಮೂಲಕ ಭಾರತವನ್ನು ಗುರುತಿಸಬೇಕಾಗಿತ್ತು ಎಂದು ನಾನು ಜಗತ್ತನ್ನು ಸುತ್ತಿದ ನಂತರ ಹೇಳುತ್ತಿದ್ದೇನೆ ಎಂದು ಮೋದಿ ಹೇಳಿದ್ದರು. ಮೋದಿಯ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ವಿರೋಧ ವ್ಯಕ್ತವಾಗಿತ್ತು.

ಇದನ್ನು ಓದಿ: ಮತದಾರರನ್ನು ಇವಿಎಂ ಬಳಿ ತೆರಳಲೇ ಬಿಡುತ್ತಿರಲಿಲ್ಲ! ಬೀಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮದ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...