Homeಮುಖಪುಟಪಗಡಿ ಸಂಭಲ್ ದಿನ: ಸಿಂಘು ಗಡಿಗೆ ಹುತಾತ್ಮ ಭಗತ್ ಸಿಂಗ್ ಸಂಬಂಧಿಕರ ಭೇಟಿ, ರೈತ ಹೋರಾಟಕ್ಕೆ...

ಪಗಡಿ ಸಂಭಲ್ ದಿನ: ಸಿಂಘು ಗಡಿಗೆ ಹುತಾತ್ಮ ಭಗತ್ ಸಿಂಗ್ ಸಂಬಂಧಿಕರ ಭೇಟಿ, ರೈತ ಹೋರಾಟಕ್ಕೆ ಬೆಂಬಲ

ರೈತ ಹೋರಾಟದ ಸ್ಫೂರ್ತಿಗಳಾದ ಸಹಜಾನಂದ್‌ ಸರಸ್ವತಿ ಮತ್ತು ಸರ್ದಾರ್‌ ಅಜಿತ್‌ ಸಿಂಗ್‌ರ ನೆನಪಿನಲ್ಲಿ ದೆಹಲಿ ಗಡಿಗಳಲ್ಲಿ ಪಗಡಿ ಸಂಭಾಲ್‌ ದಿನ ಆಚರಣೆ ಇಂದು ನಡೆಯುತ್ತಿದೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ 91ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸಂಯುಕ್ತ ಕಿಸಾನ್ ಮೋರ್ಚಾ ‘ಪಗಡಿ ಸಂಭಲ್ ದಿವಸ್’ (ಚಳವಳಿಯ ಸಂಕೇತ ಮತ್ತು ಆತ್ಮ ಪೇಟದ ದಿನ) ಆಚರಣೆಗೆ ಕರೆ ನೀಡಿತ್ತು. ಅದರ ಭಾಗವಾಗಿ ಹುತಾತ್ಮ ಕ್ರಾಂತಿಕಾರಿ ಭಗತ್‌ಸಿಂಗ್‌ ಸಂಬಂಧಿಕರು ಸಿಂಘು ಗಡಿಗೆ ಭೇಟಿ ನೀಡಿ ಹೋರಾಟ ನಿರತ ರೈತರಿಗೆ ಬೆಂಬಲ ಘೋಷಿಸಿದ್ದಾರೆ.

ಅಭಯ್ ಸಂಧು, ತೇಜಿ ಸಂಧು, ಅನುಸ್ ಪ್ರಿಯಾ ಸಂಧು ಮತ್ತು ಗುರ್ಜೀತ್ ಕೌರ್ ಸೇರಿದಂತೆ ಹುತಾತ್ಮ ಭಗತ್ ಸಿಂಗ್ ಅವರ ಕುಟುಂಬ ಸದಸ್ಯರು ಸಿಂಘು ಗಡಿಯಲ್ಲಿ ನಡೆದ ಪಗ್ಡಿ ಸಂಭಲ್ ದಿನ ಆಚರಣೆಯಲ್ಲಿ ಭಾಗಿಯಾದರು. ರೈತ ಹೋರಾಟಗಾರ ದರ್ಶನ್ ಪಾಲ್ ಸೇರಿದಂತೆ ಇತರ ಮುಖಂಡರಿಗೆ ಭಗತ್‌ಸಿಂಗ್‌ರವರ ಭಾವಚಿತ್ರವನ್ನು ಉಡುಗೊರೆಯಾಗಿ ನೀಡಲಾಯಿತು.

‘ಪಗ್ಡಿ ಸಂಭಲ್ ದಿವಸ್’ ಎಂದರೇನು?

1907 ರ ಮಾರ್ಚ್ 3 ರಂದು ಲಿಯಾಲ್‌ಪುರದಲ್ಲಿ ನಡೆದ ಬೃಹತ್ ರ‍್ಯಾಲಿಯಲ್ಲಿ, ‘ಜಂಗ್ ಸ್ಯಾಲ್’ ಪತ್ರಿಕೆಯ ಸಂಪಾದಕ ಬಂಕೆ ದಯಾಲ್ ಅವರು, “ಪಗ್ಡಿ ಸಂಭಲ್ ಜಟ್ಟಾ, ಪಗ್ಡಿ ಸಂಭಾಲ್ ಓಯೆ” ಹಾಡನ್ನು ಪರಿಚಯಿಸಿದರು. ಅದು ಚಳವಳಿಯ ಸಂಕೇತ ಮತ್ತು ಆತ್ಮವಾಯಿತು.

ಬ್ರಿಟಿಷರಿಗೆ ಕೃಷಿ ತೆರಿಗೆ ಪಾವತಿಸುವುದನ್ನು ವಿರೋಧಿಸಿ ಆರಂಭವಾದ ಚಳವಳಿ `ಪಗಡಿ ಸಂಭಾಲ್‌ ಜಟ್ಟ’. ಬ್ರಿಟಿಷರು ಅಂಗೀಕರಿಸಿದ್ದ ಪಂಜಾಬ್‌ ಭೂ ವಸಹಾತು ಕಾಯ್ದೆ, ದೋವಾಬ್‌ ಬಾರಿ ಕಾಯ್ದೆ ಹಾಗೂ ಪಂಜಾಬ್‌ ಭೂ ಏಲಿಯನೇಷನ್ ಕಾಯ್ದೆ ವಿರುದ್ಧ ನಡೆದ ಹೋರಾಟ ಇದಾಗಿದೆ.

ಸುಮಾರು 9 ತಿಂಗಳ ಕಾಲ ನಡೆದ ಈ ದೀರ್ಘ ಹೋರಾಟವು ಬ್ರಿಟಿಷರು ಕಾನೂನುಗಳನ್ನು ರದ್ದು ಗೊಳಿಸುವುದರೊಂದಿಗೆ ಕೊನೆಗೊಂಡಿತು.

ಈ ರೈತ ಹೋರಾಟದ ಸ್ಫೂರ್ತಿಗಳಾದ ಸಹಜಾನಂದ್‌ ಸರಸ್ವತಿ ಮತ್ತು ಸರ್ದಾರ್‌ ಅಜಿತ್‌ ಸಿಂಗ್‌ರ ನೆನಪಿನಲ್ಲಿ ದೆಹಲಿ ಗಡಿಗಳಲ್ಲಿ ಪಗಡಿ ಸಂಭಾಲ್‌ ದಿನ ಆಚರಣೆ ಇಂದು ನಡೆಯುತ್ತಿದೆ.

ಅಜಯ್ ದೇವಗನ್ ನಾಯಕ ನಟನಾಗಿ ಅಭಿನಯಿಸಿರುವ ‘ದಿ ಲೆಜೆಂಡ್ ಆಫ್ ಭಗತ್‌ ಸಿಂಗ್’ ಚಿತ್ರದಲ್ಲಿ ಇದೇ ಹಾಡನ್ನು ಬಳಸಿದ್ದು ಅದು ಭಾರತದಾದ್ಯಂತ ಪ್ರಸಿದ್ದಿಯಾಗಿದೆ.

ಸಹಜಾನಂದ ಮತ್ತು ಅಜಿತ್ ಸಿಂಗ್: ಕ್ರಾಂತಿಕಾರಿ ರೈತ ಹೋರಾಟಕ್ಕೆ ಸ್ಪೂರ್ತಿಯ ಚಿಲುಮೆಗಳು

ಉತ್ತರಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ 22 ಫೆಬ್ರವರಿ 1889 ರಂದು ಜನಿಸಿ, ಜೂನ್ 26, 1950 ರಂದು ನಿಧನರಾದ ಸಹಜಾನಂದ್ ಸರಸ್ವತಿ ಅವರ ನಿಜವಾದ ಹೆಸರು ನವರಂಗ್ ರೈ. ಹೋರಾಟ ಮನೋಭಾವದ ಸಹಜಾನಂದರು ಬಹುಮುಖ ಪ್ರತಿಭೆ. ಕ್ರಾಂತಿಕಾರಿ ರೈತ ನಾಯಕ, ಇತಿಹಾಸಕಾರ, ದಾರ್ಶನಿಕ, ಬರಹಗಾರ… ಅವರ ಮುಖ್ಯ ಬರಹ-ಕೃತಿ ಬಿಹಾರವನ್ನು ಕೇಂದ್ರೀಕರಿಸಿದೆ. ಅವರು ಬಿಹ್ತಾದಲ್ಲಿ ಆಶ್ರಮವನ್ನು ಸ್ಥಾಪಿಸಿದ್ದರು ಮತ್ತು ಅಲ್ಲಿಂದ ತಮ್ಮ ವೃದ್ದಾಪ್ಯದ ದಿನಗಳಲ್ಲಿ ತಮ್ಮ ಹೆಚ್ಚಿನ ಕಾರ್ಯಗಳನ್ನು ನಿರ್ವಹಿಸಿದರು.

ಸಹಜಾನಂದ್ ಸರಸ್ವತಿ

ಸಹಜಾನಂದರು 1929 ರಲ್ಲಿ ಬಿಹಾರ ಪ್ರಾಂತೀಯ ಕಿಸಾನ್ ಸಭೆಯನ್ನು (ಬಿಪಿಕೆಎಸ್) ರಚಿಸಿದರು. ಜಮೀನ್ದಾರರಿಂದ ಭೂ ಹಿಡುವಳಿ ಕುರಿತಾಗಿ ರೈತರ ಮೇಲೆ ನಡೆಯುತ್ತಿದ್ದ ದಾಳಿಗಳ ವಿರುದ್ಧ ರೈತರ ಕುಂದುಕೊರತೆಗಳನ್ನು ಒಟ್ಟುಗೂಡಿಸುವ ಸಲುವಾಗಿ ಈ ಸಂಘಟನೆ-ಹೋರಾಟವನ್ನು ಅವರು ಆರಂಭಿಸಿದರು. ಆ ಮೂಲಕ ಭಾರತದಲ್ಲಿ ರೈತರ ಚಳುವಳಿಗಳಿಗೆ ನಾಂದಿ ಹಾಡಿದರು. ಕ್ರಮೇಣ ರೈತ ಚಳುವಳಿ ತೀವ್ರಗೊಂಡಿತು ಮತ್ತು ಭಾರತದ ಉಳಿದ ಭಾಗಗಳಿಗೆ ಹರಡಿತು. ಇದು 1936 ರಲ್ಲಿ ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ರಚನೆಗೆ ಕಾರಣವಾಯಿತು, ಅವರು ಅದರ ಮೊದಲ ಅಧ್ಯಕ್ಷರಾಗಿ ಆಯ್ಕೆಯಾದರು. ಕಿಸಾನ್ ಪ್ರಣಾಳಿಕೆ ಜಮೀನ್ದಾರಿ ವ್ಯವಸ್ಥೆಯನ್ನು ರದ್ದುಪಡಿಸಬೇಕು ಮತ್ತು ಗ್ರಾಮೀಣ ಸಾಲಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿತು. ಆ ಜಮೀನ್ದಾರರನ್ನು ಬ್ರಿಟಿಷ್ ಸರ್ಕಾರ ಆದಾಯ ಸಂಗ್ರಹಕ್ಕಾಗಿ ನೇಮಕ ಮಾಡಿಕೊಂಡಿತ್ತು.

ಭೂ ಮಾಲೀಕತ್ವವನ್ನು ಉಳಿಸಲು ಮತ್ತು ರೈತರ ಉಳುಮೆಯ ಹಕ್ಕುಗಳನ್ನು ಉಳಿಸಿಕೊಳ್ಳಲು ನಡೆದ ಈ ಚಳುವಳಿ, ಬಿಹಾರ ಮತ್ತು ಯುನೈಟೆಡ್ ಪ್ರಾಂತ್ಯದ ಕಾಂಗ್ರೆಸ್ ಸರ್ಕಾರಗಳೊಂದಿಗೆ ಸಂಘರ್ಷ ಎದುರಿಸಬೇಕಾಗಿತು.

ಸಹಜಾನಂದ ಸರಸ್ವತಿ 1937-1938 ರಲ್ಲಿ ಬಿಹಾರದಲ್ಲಿ ಬಕಾಶ್ತ್ ಚಳವಳಿಯನ್ನು ಸಂಘಟಿಸಿ ಮುನ್ನಡೆಸಿದರು. ಬಕಾಶ್ತ್ ಎಂದರೆ ಸ್ವಯಂ-ಕೃಷಿ, ಸ್ವಯಂ ಉಳುಮೆ…. ಈ ಆಂದೋಲನವು ಜಮೀನ್ದಾರರ ಬಕಾಶ್ತ್ ಜಮೀನುಗಳಿಂದ ಟೆನೆಂಟ್‌ಗಳನ್ನು ಹೊರಹಾಕುವುದರ ವಿರುದ್ಧವಾಗಿತ್ತು. ಇದು ಬಿಹಾರ ಹಿಡುವಳಿ ಕಾಯ್ದೆ ಮತ್ತು ಬಕಾಶ್ತ್ ಭೂ ತೆರಿಗೆಯನ್ನು ಅಂಗೀಕರಿಸಲು ಕಾರಣವಾಯಿತು.

ಕ್ವಿಟ್ ಇಂಡಿಯಾ ಚಳವಳಿಯ ಸಂದರ್ಭದಲ್ಲಿ ಸಹಜಾನಂದರನ್ನು ಬಂಧಿಸಲಾಗಿತ್ತು.

ಅಜಿತ್ ಸಿಂಗ್, (ಭಗತ್‌ ಸಿಂಗ್‌ರವರ ಚಿಕ್ಕಪ್ಪ)

ಆ ಸಮಯದಲ್ಲಿ ಪಂಜಾಬ್‌ನ ರೈತರು ಹೊಸ ವಸಾಹತುಶಾಹಿ ಕಾನೂನುಗಳಾದ ಹೊಸ ವಸಾಹತು ಕಾಯ್ದೆ ಮತ್ತು ‘ದೋಆಬ್ ಬಾರಿ’ ಕಾಯ್ದೆಯ ವಿರುದ್ಧ ಕುದಿಯುತ್ತಿದ್ದರು. ಈ ಕಾಯ್ದೆಗಳ ಹಿನ್ನೆಲೆ ಏನೆಂದರೆ, ಬ್ರಿಟಿಷ್ ಸರ್ಕಾರವು ಚೆನಾಬ್ ನದಿಯಿಂದ ನೀರನ್ನು ಸೆಳೆಯಲು ಕಾಲುವೆಗಳನ್ನು ನಿರ್ಮಿಸಿ, ಅದನ್ನು ಜನವಸತಿ ಇಲ್ಲದ ಪ್ರದೇಶಗಳಲ್ಲಿ ವಸಾಹತುಗಳನ್ನು ಸ್ಥಾಪಿಸಲು ಲಿಯಾಲ್‌ಪುರಕ್ಕೆ (ಈಗ ಪಾಕಿಸ್ತಾನದಲ್ಲಿದೆ) ಹರಿಸತೊಡಗಿತು. ಹಲವಾರು ಸೌಕರ್ಯಗಳೊಂದಿಗೆ ಉಚಿತ ಭೂಮಿಯನ್ನು ನೀಡುವುದಾಗಿ ಭರವಸೆ ನೀಡಿದ ಬ್ರಿಟಿಷ್ ಸರ್ಕಾರ, ಜಲಂಧರ್, ಅಮೃತಸರ, ಮತ್ತು ಹೋಶಿಯಾರ್‌ಪುರದ ರೈತರು ಮತ್ತು ಮಾಜಿ ಸೈನಿಕರನ್ನು ಅಲ್ಲಿ ನೆಲೆಸಲು ಮನವೊಲಿಸಿತ್ತು.

ಈ ಜಿಲ್ಲೆಗಳ ರೈತರು ತಮ್ಮ ಮೂಲ ಭೂಮಿ ಮತ್ತು ಆಸ್ತಿಯನ್ನು ಬಿಟ್ಟು, ಹೊಸ ಪ್ರದೇಶಗಳಲ್ಲಿ ನೆಲೆಸಿದರು ಮತ್ತು ಬಂಜರು ಭೂಮಿಯನ್ನು ಕೃಷಿಗೆ ಯೋಗ್ಯವಾಗಿಸಲು ಶ್ರಮಿಸಿದರು. ಆದರೆ ಅವರು ಹಾಗೆ ಮಾಡಿದ ಕೂಡಲೇ, ಸರ್ಕಾರವು ಈ ಫಲವತ್ತಾದ ಭೂಮಿಯ ಒಡೆಯ ತಾನೇ ಎಂದು ಘೋಷಿಸಲು, ರೈತರಿಗೆ ಮಾಲೀಕತ್ವದ ಹಕ್ಕನ್ನು ನಿರಾಕರಿಸಲು ಹೊಸ ಕಾನೂನುಗಳನ್ನು ಜಾರಿಗೆ ತಂದಿತು. ರೈತರು ಈ ಜಮೀನುಗಳಲ್ಲಿ ಮರಗಳನ್ನು ಕಡಿಯಲು ಸಾಧ್ಯವಿರಲಿಲ್ಲ, ಮನೆಗಳು ಅಥವಾ ಗುಡಿಸಲುಗಳನ್ನು ನಿರ್ಮಿಸಲು ಅಥವಾ ಅಂತಹ ಭೂಮಿಯನ್ನು ಮಾರಾಟ ಮಾಡಲು ಅಥವಾ ಖರೀದಿಸಲು ಅವಕಾಶವಿರಲಿಲ್ಲ್ಲ ಮತ್ತು ಹಿರಿಯ ಮಗನಿಗೆ ಮಾತ್ರ ತನ್ನ ತಂದೆಯಿಂದ ಬೇಸಾಯ ಮಾಡಿದ ಭೂಮಿಗೆ ಪ್ರವೇಶಿಸಲು ಅವಕಾಶವಿತ್ತು. ಇದರಲ್ಲಿ ಏನನ್ನಾದರೂ ಉಲ್ಲಂಘಿಸಿದರೆ, ಜಮೀನು ಸರ್ಕಾರದ ಆಸ್ತಿಯಾಗಿ ಬಿಡುತ್ತಿತ್ತು.

ಅಜಿತ್ ಸಿಂಗ್

20 ಲಕ್ಷ ಎಕರೆ ಭೂಮಿಗೆ ನೀರಾವರಿ ಮಾಡಲು ಕಾಲುವೆಗಳ ಮೇಲೆ ವಿಧಿಸಲಾಗಿದ್ದ ತೆರಿಗೆಗಳಲ್ಲಿ, ಸರ್ಕಾರವು ತನ್ನ ಆರಂಭಿಕ ಹೂಡಿಕೆಯನ್ನು ಮರಳಿ ಪಡೆಯಿತಲ್ಲದೇ, ಅಬ್ಬಾಶಿ ತೆರಿಗೆಯ ಆಧಾರದಲ್ಲಿ ವಾರ್ಷಿಕ 7 ಲಕ್ಷ ರೂಪಾಯಿಗಳನ್ನು ಅಕ್ರಮವಾಗಿ ಗಳಿಸತೊಡಗಿತು.

ಅಜಿತ್ ಸಿಂಗ್ ಮತ್ತು ಅವರ ಒಡನಾಡಿಗಳು ಈ ವಿಷಯಗಳ ಬಗ್ಗೆ ಜನಪ್ರಿಯ ಸಾಮೂಹಿಕ ಪ್ರತಿರೋಧವನ್ನು ಬೆಳೆಸಿದರು. ಈ ಆಂದೋಲನವನ್ನು ಮುನ್ನಡೆಸಲು ಕಾಂಗ್ರೆಸ್ ವಿಫಲವಾಗಿದೆ, ಮಸೂದೆಯನ್ನು ಈಗಾಗಲೇ ಕಾನೂನಾಗಿ ಅಂಗೀಕರಿಸಲಾಗಿದೆ ಎಂದು ವಾದಿಸಿದರು. ರೈತ ವಿರೋಧಿ ಕಾನೂನುಗಳಿಗೆ ನಿರ್ಭೀತ ಪ್ರತಿರೋಧವನ್ನು ವ್ಯಕ್ತಪಡಿಸುತ್ತಿದ್ದ ಅಜಿತ್ ಸಿಂಗ್ ಮತ್ತು ಅವರ ಭಾರತ್ ಮಾತಾ ಸಮಾಜದ ನಾಯಕತ್ವವನ್ನು ರೈತರು ಒಪ್ಪಿಕೊಂಡರು.

ಆಗ, ಲಾಹೋರ್ ಮತ್ತು ಅದರ ನೆರೆಹೊರೆಯ ಪ್ರದೇಶಗಳಲ್ಲಿ ಸಾವಿರಾರು ಜನರು ಭಾಗವಹಿಸಿದ ರ‍್ಯಾಲಿಗಳು, ಪ್ರದರ್ಶನಗಳು ಮತ್ತು ಸಾಮೂಹಿಕ ಸಮಾವೇಶಗಳ ನಿಜವಾದ ಅಲೆ ಕಾಣಿಸಿಕೊಂಡಿತು. ಈ ಸಭೆಗಳು ಈ ದಮನಕಾರಿ ಕಾನೂನುಗಳ ಬಗ್ಗೆ ಮತ್ತು ಬ್ರಿಟಿಷ್ ವಸಾಹತುಶಾಹಿಯಿಂದ ಧ್ವಂಸಗೊಂಡ ರಾಷ್ಟ್ರದ ನಿಜವಾದ ಚಿತ್ರಣದ ಬಗ್ಗೆ ಚರ್ಚಿಸಿದವು. ಅಂತಿಮವಾಗಿ ವಿದೇಶಿ ಆಡಳಿತದ ವಿರುದ್ಧ ಸಂಪೂರ್ಣ ದಂಗೆಗಾಗಿ ಪ್ರಚೋದಿಸುವ ಕರೆಯೊಂದಿಗೆ ಕೊನೆಗೊಂಡವು. ಅಜಿತ್ ಸಿಂಗ್ ಅವರ ಭಾಷಣಗಳನ್ನು ಕೇಳದಂತೆ ನಿಷೇಧ ಹೊರಡಿಸಲಾಗಿತ್ತು!

-ಎಐಕೆಎಂಎಸ್ ಪ್ರಕಟಣೆ


ಇದನ್ನೂ ಓದಿ: ದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೆ; ಆದರೆ ಈಗ ನಾನು ಭಯೋತ್ಪಾದಕ ಅಂತೆ! – 80 ವರ್ಷದ ಗುರುಮುಖ್ ಸಿಂಗ್ ವಿಷಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...