Homeಚಳವಳಿರೈತ ಹೋರಾಟದಲ್ಲಿ ಮೊಳಗಿದ ಭಗತ್ ಸಿಂಗ್, ರಾಜ್‌ಗುರು, ಸುಖದೇವ್ ವಿಚಾರಗಳು

ರೈತ ಹೋರಾಟದಲ್ಲಿ ಮೊಳಗಿದ ಭಗತ್ ಸಿಂಗ್, ರಾಜ್‌ಗುರು, ಸುಖದೇವ್ ವಿಚಾರಗಳು

- Advertisement -
- Advertisement -

ಭಗತ್ ಸಿಂಗ್, ರಾಜ್‌ಗುರು ಮತ್ತು ಸುಖದೇವ್ ಅವರ 90 ನೇ ಹುತಾತ್ಮ ದಿನವನ್ನು ದೇಶಾದ್ಯಂತ ಆಚರಿಸಲಾಗಿದೆ. ದೆಹಲಿಯ ಗಡಿಗಳಲ್ಲಿ ಪ್ರತಿಭಟನಾ ನಿರತ ರೈತರು ಶಹೀದ್ ದಿವಸ್ ಆಚರಿಸಿ ಹುತಾತ್ಮರ ವಿಚಾರಗಳನ್ನು ಪ್ರಸ್ತುತಪಡಿಸಿದ್ದಾರೆ.

ಯುವಜನತೆ ತಮ್ಮ ಸ್ಫೂರ್ತಿಯ ಸೆಲೆಗಳ ಬಗ್ಗೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು. ಭಗತ್ ಸಿಂಗ್, ಶಿವರಾಮ್ ರಾಜ್‌ಗುರು ಮತ್ತು ಸುಖದೇವ್ ಥಾಪರ್ ಅವರನ್ನು ಮಾರ್ಚ್ 23, 1931 ರಂದು ಗಲ್ಲಿಗೇರಿಸಲಾಯಿತು. ವಸಾಹತುಶಾಹಿ ದಬ್ಬಾಳಿಕೆಯ ವಿರುದ್ಧ ಈ ಮೂರು ಯುವ ಕ್ರಾಂತಿಕಾರಿ ದನಿಗಳನ್ನು ಬ್ರಿಟಿಷ್ ಸರ್ಕಾರವು ತಡೆಯೊಡ್ಡಿತ್ತು. ಆದರೆ ಇಂದಿಗೂ ಈ ಮೂರು ಕ್ರಾಂತಿ ಕಿಡಿಗಳು ದೇಶದ ಯುವ ಜನರಲ್ಲಿ ಬೆರೆತು ಹೋಗಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.

ದಬ್ಬಾಳಿಕೆಯ ವಿರುದ್ಧ ಈ ಮೂರು ಯುವ ದನಿಗಳ ತ್ಯಾಗವನ್ನು ನೆನಪಿಸಿಕೊಳ್ಳುತ್ತಾ, ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ಇಂದು (ಮಾರ್ಚ್ 23) ದೆಹಲಿ ಗಡಿಯಲ್ಲಿ ಹುತಾತ್ಮ ದಿನವನ್ನು ಆಚರಿಸಿದರು. ಭಗತ್ ಸಿಂಗ್, ರಾಜ್‌ಗುರು, ಸುಖದೇವ್ ವಿಚಾರಗಳನ್ನು ಮೊಳಗಿಸಿದ್ದಾರೆ.

ಇದನ್ನೂ ಓದಿ: ಭಗತ್ ಸಿಂಗ್ ಹುತಾತ್ಮ ದಿನ: ದೆಹಲಿಯ ಗಡಿಗಳಲ್ಲಿ ನೆರೆಯಲಿದ್ದಾರೆ ಯುವಜನರ ದಂಡು!

ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ‘ಇಂಕ್ವಿಲಾಬ್ ಜಿಂದಾಬಾದ್’ ಎಂಬ ಘೋಷಣೆಯನ್ನು ಕೂಗಿದ್ದಾರೆ. ಪಂಜಾಬ್, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಿಂದ ಬಂದಿದ್ದ ಯುವಜನತೆ ಈ ಹುತಾತ್ಮ ದಿನಕ್ಕೆ ಸಾಕ್ಷಿಯಾಗಿದ್ದಾರೆ. ಭಗತ್ ಸಿಂಗ್, ರಾಜ್‌ಗುರು, ಸುಖದೇವ್ ಚಿತ್ರಗಳು ಪ್ರತಿಭಟನಾ ತಾಣಗಳ ವೇದಿಕೆಗಳನ್ನು, ಜನರ ಮನಸ್ಸು ಮತ್ತು ಧ್ವಜಗಳಲ್ಲೂ ಸ್ಥಾನ ಪಡೆದುಕೊಂಡಿದ್ದವು.

ಹುತಾತ್ಮ ದಿನದ ಕೆಲವು ಕ್ಷಣಗಳು ಇಲ್ಲಿವೆ….

ಸಿಂಘು ಗಡಿ, ದೆಹಲಿ
ರಾಯಚೂರು, ಕರ್ನಾಟಕ
ಟಿಕ್ರಿ ಗಡಿ, ದೆಹಲಿ
ಶಹಜಾನ್‌ಪುರ ಗಡಿ, ರಾಜಸ್ಥಾನ
Image
ಸಿಂಘು ಗಡಿ, ದೆಹಲಿ

ಕರ್ನಾಟಕ ವಿದ್ಯಾರ್ಥಿ ಸಂಘಟನೆಯು ಮಂಡ್ಯದಲ್ಲಿ ಕ್ಯಾಂಡಲ್ ಮಾರ್ಚ್ ಮಾಡುತ್ತಾ, ಭಗತ್ ಸಿಂಗ್ ಅವರ ನೆನಪಿನಲ್ಲಿ ಕ್ರಾಂತಿಕಾರಿ ಗೀತೆಗಳನ್ನು ಹಾಡುತ್ತಾ ಜನರಲ್ಲಿ ಭಗತ್ ಸಿಂಗ್ ವಿಚಾರಗಳನ್ನು ತುಂಬುವ ಕೆಲಸ ಮಾಡಿದ್ದಾರೆ.

ದಾವಣಗೆರೆ

ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...