Homeಚಳವಳಿರೈತ ಹೋರಾಟದಲ್ಲಿ ಮೊಳಗಿದ ಭಗತ್ ಸಿಂಗ್, ರಾಜ್‌ಗುರು, ಸುಖದೇವ್ ವಿಚಾರಗಳು

ರೈತ ಹೋರಾಟದಲ್ಲಿ ಮೊಳಗಿದ ಭಗತ್ ಸಿಂಗ್, ರಾಜ್‌ಗುರು, ಸುಖದೇವ್ ವಿಚಾರಗಳು

- Advertisement -
- Advertisement -

ಭಗತ್ ಸಿಂಗ್, ರಾಜ್‌ಗುರು ಮತ್ತು ಸುಖದೇವ್ ಅವರ 90 ನೇ ಹುತಾತ್ಮ ದಿನವನ್ನು ದೇಶಾದ್ಯಂತ ಆಚರಿಸಲಾಗಿದೆ. ದೆಹಲಿಯ ಗಡಿಗಳಲ್ಲಿ ಪ್ರತಿಭಟನಾ ನಿರತ ರೈತರು ಶಹೀದ್ ದಿವಸ್ ಆಚರಿಸಿ ಹುತಾತ್ಮರ ವಿಚಾರಗಳನ್ನು ಪ್ರಸ್ತುತಪಡಿಸಿದ್ದಾರೆ.

ಯುವಜನತೆ ತಮ್ಮ ಸ್ಫೂರ್ತಿಯ ಸೆಲೆಗಳ ಬಗ್ಗೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು. ಭಗತ್ ಸಿಂಗ್, ಶಿವರಾಮ್ ರಾಜ್‌ಗುರು ಮತ್ತು ಸುಖದೇವ್ ಥಾಪರ್ ಅವರನ್ನು ಮಾರ್ಚ್ 23, 1931 ರಂದು ಗಲ್ಲಿಗೇರಿಸಲಾಯಿತು. ವಸಾಹತುಶಾಹಿ ದಬ್ಬಾಳಿಕೆಯ ವಿರುದ್ಧ ಈ ಮೂರು ಯುವ ಕ್ರಾಂತಿಕಾರಿ ದನಿಗಳನ್ನು ಬ್ರಿಟಿಷ್ ಸರ್ಕಾರವು ತಡೆಯೊಡ್ಡಿತ್ತು. ಆದರೆ ಇಂದಿಗೂ ಈ ಮೂರು ಕ್ರಾಂತಿ ಕಿಡಿಗಳು ದೇಶದ ಯುವ ಜನರಲ್ಲಿ ಬೆರೆತು ಹೋಗಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.

ದಬ್ಬಾಳಿಕೆಯ ವಿರುದ್ಧ ಈ ಮೂರು ಯುವ ದನಿಗಳ ತ್ಯಾಗವನ್ನು ನೆನಪಿಸಿಕೊಳ್ಳುತ್ತಾ, ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ಇಂದು (ಮಾರ್ಚ್ 23) ದೆಹಲಿ ಗಡಿಯಲ್ಲಿ ಹುತಾತ್ಮ ದಿನವನ್ನು ಆಚರಿಸಿದರು. ಭಗತ್ ಸಿಂಗ್, ರಾಜ್‌ಗುರು, ಸುಖದೇವ್ ವಿಚಾರಗಳನ್ನು ಮೊಳಗಿಸಿದ್ದಾರೆ.

ಇದನ್ನೂ ಓದಿ: ಭಗತ್ ಸಿಂಗ್ ಹುತಾತ್ಮ ದಿನ: ದೆಹಲಿಯ ಗಡಿಗಳಲ್ಲಿ ನೆರೆಯಲಿದ್ದಾರೆ ಯುವಜನರ ದಂಡು!

ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ‘ಇಂಕ್ವಿಲಾಬ್ ಜಿಂದಾಬಾದ್’ ಎಂಬ ಘೋಷಣೆಯನ್ನು ಕೂಗಿದ್ದಾರೆ. ಪಂಜಾಬ್, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಿಂದ ಬಂದಿದ್ದ ಯುವಜನತೆ ಈ ಹುತಾತ್ಮ ದಿನಕ್ಕೆ ಸಾಕ್ಷಿಯಾಗಿದ್ದಾರೆ. ಭಗತ್ ಸಿಂಗ್, ರಾಜ್‌ಗುರು, ಸುಖದೇವ್ ಚಿತ್ರಗಳು ಪ್ರತಿಭಟನಾ ತಾಣಗಳ ವೇದಿಕೆಗಳನ್ನು, ಜನರ ಮನಸ್ಸು ಮತ್ತು ಧ್ವಜಗಳಲ್ಲೂ ಸ್ಥಾನ ಪಡೆದುಕೊಂಡಿದ್ದವು.

ಹುತಾತ್ಮ ದಿನದ ಕೆಲವು ಕ್ಷಣಗಳು ಇಲ್ಲಿವೆ….

ಸಿಂಘು ಗಡಿ, ದೆಹಲಿ
ರಾಯಚೂರು, ಕರ್ನಾಟಕ
ಟಿಕ್ರಿ ಗಡಿ, ದೆಹಲಿ
ಶಹಜಾನ್‌ಪುರ ಗಡಿ, ರಾಜಸ್ಥಾನ
Image
ಸಿಂಘು ಗಡಿ, ದೆಹಲಿ

ಕರ್ನಾಟಕ ವಿದ್ಯಾರ್ಥಿ ಸಂಘಟನೆಯು ಮಂಡ್ಯದಲ್ಲಿ ಕ್ಯಾಂಡಲ್ ಮಾರ್ಚ್ ಮಾಡುತ್ತಾ, ಭಗತ್ ಸಿಂಗ್ ಅವರ ನೆನಪಿನಲ್ಲಿ ಕ್ರಾಂತಿಕಾರಿ ಗೀತೆಗಳನ್ನು ಹಾಡುತ್ತಾ ಜನರಲ್ಲಿ ಭಗತ್ ಸಿಂಗ್ ವಿಚಾರಗಳನ್ನು ತುಂಬುವ ಕೆಲಸ ಮಾಡಿದ್ದಾರೆ.

ದಾವಣಗೆರೆ

ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...