Homeಚಳವಳಿಶ್ರಧ್ಧಾಂಜಲಿ: ಜನಪರ ಚಳವಳಿಯ ಮಾರ್ಗದರ್ಶಕ - ಧೀರ ಹೋರಾಟಗಾರ ಮಾರುತಿ ಮಾನ್ಪಡೆ

ಶ್ರಧ್ಧಾಂಜಲಿ: ಜನಪರ ಚಳವಳಿಯ ಮಾರ್ಗದರ್ಶಕ – ಧೀರ ಹೋರಾಟಗಾರ ಮಾರುತಿ ಮಾನ್ಪಡೆ

ಕೆಲಸ ಕಾರ್ಯಗಳಲ್ಲಿ ಸಮರಶೀಲತೆ ಮತ್ತು ಬದ್ದತೆಯ ಹೋರಾಟಕ್ಕೆ ಮತ್ತೊಂದು ಹೆಸರಾಗಿದ್ದ ಕಾಮ್ರೆಡ್ ಮಾರುತಿ ಮಾನ್ಪಡೆಯವರು 8 ಕ್ಕೂ ಹೆಚ್ಚು ಬಾರಿ ಜೈಲುವಾಸ ಕಂಡವರು.

- Advertisement -
- Advertisement -

ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸಮಿತಿ ಉಪಾಧ್ಯಕ್ಷರು, ಸಿಪಿಐಎಂ ಪಕ್ಷದ ರಾಜ್ಯ ನೇತಾರರು ಆಗಿದ್ದ ಹಿರಿಯ ರೈತ ನಾಯಕ ಕಾಮ್ರೆಡ್ ಮಾರುತಿರಾವ್ ಮಾನ್ಪಡೆ ರವರು ದಿನಾಂಕ 20.10.2020ರ ಬೆಳಗ್ಗೆ 9:30ಕ್ಕೆ ನಿಧನರಾದರು. ಇದು ರಾಜ್ಯದ ರೈತ ಚಳವಳಿ ಹಾಗೂ ಶೋಷಿತರ ಪರ ಹೋರಾಟದ ಹಿತೈಷಿಗಳಿಗೆ ಒಟ್ಟಾರೆಯಾಗಿ ಇಡೀ ಪ್ರಜಾಸತ್ತಾತ್ಮಕ ಹೋರಾಟದ ಒಡನಾಡಿಗಳಿಗೆ ಅಘಾತ ಉಂಟುಮಾಡಿದೆ. ಕೋವಿಡ್-19 ಸೋಂಕು ಅಪಾಯವನ್ನು ಲೆಕ್ಕಿಸದೇ ಅಂತಿಮ ದರ್ಶನದ ಅವಕಾಶ ಇಲ್ಲದಿದ್ದರೂ ಅಂತಿಮ ನಮನಕ್ಕೆ ಸೇರಿದ್ದ ಅಪಾರ ಜನಸ್ತೋಮ ಹಾಗೂ ರಾಜ್ಯದೆಲ್ಲೆಡೆ ವ್ಯಕ್ತವಾದ ಸಂತಾಪ ಮಾನ್ಪಡೆಯವರು ಹೊಂದಿದ್ದ ಜನಪರ ಕಾಳಜಿಯ ಅಭಿವ್ಯಕ್ತಿಯಾಗಿತ್ತು.

ಕಾಮ್ರೆಡ್ ಮಾರುತಿರಾವ್ ಮಾನ್ಪಡೆಯವರು ಇಡೀ ರಾಜ್ಯ ಕಂಡ ಅಪರೂಪದ ದಿಟ್ಟ ರೈತ ನಾಯಕ. ರಾಜ್ಯದ ನೀರಾವರಿ ಯೋಜನೆಗಳು ಮತ್ತು ನೀರಾವರಿ ಹೋರಾಟಗಳ ಕುರಿತು ಅಪಾರ ಜ್ಞಾನ ಹೊಂದಿದ್ದರು. ತೊಗರಿ ಬೆಲೆಗಾಗಿ, ಬಗರ್‌ಹುಕುಂ ಸಾಗುವಳಿ ಸಕ್ರಮಕ್ಕಾಗಿ, ಕೃಷ್ಣ ನದಿ ನೀರು ಬಳಕೆಯ ನೀರಾವರಿಗಾಗಿ, ವಿದ್ಯುತ್ ಖಾಸಗೀಕರಣ, ಕೃಷಿ ಉತ್ಪನ್ನಗಳ ಅಮದು ಮುಂತಾದ ಕೇಂದ್ರ, ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳು ಸೇರಿದಂತೆ ಹಲವಾರು ರೈತ ಹೋರಾಟ ಪ್ರಶ್ನೆಗಳನ್ನು ಕೈಗೆತ್ತಿಕೊಂಡು ರೈತ ಸಮುದಾಯಕ್ಕೆ ನ್ಯಾಯ-ಪರಿಹಾರ ಒದಗಿಸುವುದರಲ್ಲಿ ನಿರತರಾಗಿದ್ದ ರಾಜಿರಹಿತ ಹೋರಾಟಗಾರ ಅವರಾಗಿದ್ದರು. ತೊಗರಿ ಬೆಳೆಗೆ ಸಿಗಬೇಕಾದ ವೈಜ್ಞಾನಿಕ ಬೆಲೆ ವಿಷಯದ ಹೋರಾಟದ ಚಾಂಪಿಯನ್ ಆಗಿ ಮನೆ ಮಾತಾಗಿದ್ದ ಮಾನ್ಪಡೆಯವರು ಕೃಷ್ಣ ಜಲ ಭಾಗ್ಯ ನಿಗಮ ರಚನೆಗೆ ಒತ್ತಡ ಹೇರಿದ ಪ್ರಮುಖ ಶಕ್ತಿಯಾಗಿದ್ದರು. ವಿಶ್ವ ಬ್ಯಾಂಕ್‌ನ ಸಾಲದ ಷರುತ್ತಗಳಿಗೆ ಕೃಷ್ಣ ಜಲ ಭಾಗ್ಯ ನಿಗಮ ಈಡಾಗದಂತೆ ರೈತರ ಬೃಹತ್ ಸಮಾವೇಶವನ್ನು ಸಂಘಟಿಸಿದ್ದರು.

ರೈತ – ಕೃಷಿ ಕೂಲಿಕಾರರ ಪ್ರಶ್ನೆಗಳಿಗೆ ಮಾತ್ರವೇ ಅಲ್ಲದೇ ರಾಜ್ಯದ ಪಂಚಾಯತಿ, ಅಂಗನವಾಡಿ ಕಾರ್ಮಿಕರನ್ನು ಹಾಗೂ ಸಾಮಾಜಿಕವಾಗಿ ದಮನಕ್ಕೀಡಾಗಿದ್ದ ಶೋಷಿತ ದಲಿತ, ಮಹಿಳೆಯರನ್ನು ಕೂಡ ಸಂಘಟಿಸುವಲ್ಲಿ ಮುಂಚೂಣಿ ಪಾತ್ರವನ್ನು ಮಾರುತಿ ಮಾನ್ಪಡೆ ವಹಿಸಿದ್ದರು.

1995 ರಿಂದ 2017ರವರೆಗೆ ಸುಧೀರ್ಘ ಕಾಲಾವಧಿಗೆ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು ೧೯೮೯ರಿಂದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘಕ್ಕೆ ಕೂಡ ರಾಜ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಸುಮಾರು 40 ವರ್ಷಗಳ ಕಾಲದ ಅವರ ಹೋರಾಟದಿಂದ ರಾಜ್ಯದ ಮತ್ತು ವಿಶೇಷವಾಗಿ ಹೈದರಾಬಾದ್ ಕರ್ನಾಟಕ ಹಾಗೂ ಇಡೀ ಉತ್ತರ ಕರ್ನಾಟಕದ ಒಬ್ಬ ಪ್ರಮುಖ ಕಮ್ಯುನಿಸ್ಟ್ ಮುಖಂಡರಾಗಿ ಗುರುತಿಸಲ್ಪಟ್ಟಿದ್ದರು.

ಕರಿ ಲಿಂಗೇಶ್ವರ ಯುವ ರೈತ ಸಂಘದ ಮೂಲಕ ಸಾರ್ವಜನಿಕ ಜೀವನ ಪ್ರಾರಂಬಿಸಿದ ಮಾರುತಿ ಮಾನ್ಪಡೆಯವರು ಯಶವಂತ ಹಲಸೂರು, ವಿ.ಎನ್ ಹಳಕಟ್ಟಿ, ಗಂಗಾಧರ ನಮೋಶಿ, ಚಂದ್ರಶೇಖಕರ ಬಾಳೆ, ಪಿ ರಾಮಚಂದ್ರರಾವ್‌ರವರ ಒಡನಾಟವೂ ಸೇರಿದಂತೆ ರೈತ ಹಾಗೂ ಕಮ್ಯುನಿಸ್ಟ್ ಚಳುವಳಿಯ ಪ್ರಭಾವಕ್ಕೆ ಒಳಗಾಗಿ ತಮ್ಮ ನೌಕರಿಗೆ ರಾಜೀನಾಮೆ ನೀಡಿ ರೈತ ಚಳವಳಿಯ ಪೂರ್ಣ ಕಾಲದ ಕಾರ್ಯಕರ್ತರಾಗಿ ಗುಲ್ಬರ್ಗ ಜಿ¯ಯಿಂದ ಕೆಲಸ ಆರಂಭಿಸಿದರು. ಶೋಷಿತರ ಪರವಾದ ದಣಿವರಿಯದ ಕೆಲಸದ ಪರಿಣಾಮವಾಗಿ 1986 ರಲ್ಲಿ ಗುಲ್ಬರ್ಗ ಜಿ.ಪಂ ಸದಸ್ಯರಾಗಿ ಸಿಪಿಐಎಂನ್ನು ಪ್ರತಿನಿಧಿಸಿದ್ದರು. ಜಿ.ಪಂ ಸದಸ್ಯರಾಗಿ ಅವರು ಮಾಡಿದ ಕೆಲಸಗಳು ಇಡೀ ರಾಜ್ಯದಲ್ಲೇ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಹೇಗೆ ಕೆಲಸ ಮಾಡಬೇಕು ಎಂಬುದಕ್ಕೆ ಮಾದರಿಯಾಗಿತ್ತು.
ಕೆಲಸ ಕಾರ್ಯಗಳಲ್ಲಿ ಸಮರಶೀಲತೆ ಮತ್ತು ಬದ್ದತೆಯ ಹೋರಾಟಕ್ಕೆ ಮತ್ತೊಂದು ಹೆಸರಾಗಿದ್ದ ಕಾಮ್ರೆಡ್ ಮಾರುತಿ ಮಾನ್ಪಡೆಯವರು 8 ಕ್ಕೂ ಹೆಚ್ಚು ಬಾರಿ ಜೈಲುವಾಸ ಕಂಡವರು. ಪಂಪ್‌ಸೆಟ್ ಬಳಕೆದಾರರಿಗೆ ಮೀಟರ್ ಅಳವಡಿಸಿ ವಿದ್ಯುತ್ ಖಾಸಗೀಕರಣದ ಪ್ರಯತ್ನ ಮಾಡುವ ಸರ್ಕಾರದ ಧೋರಣೆ ವಿರುದ್ಧ ಹೋರಾಟ ಒಂದರಲ್ಲೇ ೩ ತಿಂಗಳು ಜೈಲಿನಲ್ಲಿದ್ದರು. ಒಟ್ಟಾರೆ ಅವರ ಹೋರಾಟದ ಜೀವನದಲ್ಲಿ ಸುಮಾರು 150 ದಿನಗಳಿಗೂ ಹೆಚ್ಚು ಜೈಲು ವಾಸ ಅನುಭವಿಸಿದ್ದರು. ರೈತ ವಿರೋಧಿ ಸುಗ್ರೀವಾಜ್ಞೆಗಳ ವಿರುದ್ಧ 2020.ಸೆಪ್ಟೆಂಬರ್ 25 ರಂದು ನಡೆದ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‌ನ ರಸ್ತೆ ತಡೆ ಪ್ರತಿಭಟನೆಯಲ್ಲೂ ಬಂಧನಕ್ಕೆ ಒಳಗಾಗಿದ್ದರು.

ಚುನಾವಣಾ ಹೋರಾಟದಲ್ಲೂ ಅಭ್ಯರ್ಥಿಯಾಗಿ ಭಾಗವಹಿಸಿದ್ದ ಮಾರುತಿ ಮಾನ್ಪಡೆ ರವರು ಬೀದರ್ ಲೋಕಸಭಾ ಹಾಗೂ ಗುಲ್ಬರ್ಗ ಗ್ರಾಮೀಣ ಮೀಸಲು ಕ್ಷೇತ್ರದಲ್ಲಿ ಸಿಪಿಐಎಂ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿದ್ದರು.

1955ರಲ್ಲಿ ಸಾಮಾಜಿಕವಾಗಿ ಅಸ್ಪೃಶ್ಯತೆ ಅನುಭವಿಸುತ್ತಿದ್ದ ಬಡತನದ ಕುಟುಂಬದಲ್ಲಿ ಜನಿಸಿದ ಮಾರುತಿ ಮಾನ್ಪಡೆಯವರು ಸ್ವತಃ ಬರಗಾಲದ ಬವಣೆಗಳನ್ನು ಅನುಭವಿಸಿ ರೈತರ ಕಷ್ಟ -ನಷ್ಟಗಳನ್ನು ನೇರವಾಗಿ ಕಂಡವರು. 65 ವಯಸ್ಸಿನ ಹಿರಿಯರಾಗಿದ್ದರೂ ದೈಹಿಕ ಆರೋಗ್ಯ ಸ್ಥಿತಿಯನ್ನು ಲೆಕ್ಕಿಸದೇ ಕೇಂದ್ರ, ರಾಜ್ಯ ಸರ್ಕಾರಗಳ ಕೃಷಿ ಸುಗ್ರಿವಾಜ್ಞೆಗಳನ್ನು ವಿರೋಧಿಸಿ ಸೆಪ್ಟೆಂಬರ್ 21 ರಿಂದ 26ರವರಿಗೆ ಬೆಂಗಳೂರಿನಲ್ಲಿ ನಡೆದ ಆಹೋರಾತ್ರಿ ಹೋರಾಟದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರಾಗಿ ತೊಡಗಿಸಿಕೊಂಡಿದ್ದರು. ಸೆಪ್ಟೆಂಬರ್ 28 ರ ಕರ್ನಾಟಕ ಬಂದ್ ಯಶಸ್ವಿಗೊಳಿಸಲು ಗುಲ್ಬರ್ಗಕ್ಕೆ ತೆರಳಿ ಹೈದರಾಬಾದ್ ಕರ್ನಾಟಕ ಬಂದ್ ಯಶಸ್ವಿ ಆಗಲು ಶ್ರಮಿಸಿದ್ದರು. ಈ ಕಾಲಾವಧಿಯಲ್ಲಿ ಆದ ಕೋವಿಡ್-19 ಸೋಂಕಿಗೆ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವೈದ್ಯರ ಉತ್ತಮ ಪ್ರಯತ್ನದ ಹೊರತಾಗಿಯೂ ಚಿಕಿತ್ಸೆ ಫಲಕಾರಿಯಾಗದೇ ಶೋಷಿತರ ಬಲವಾದ ಧ್ವನಿಯೊಂದು ನಿಂತು ಹೋಗಿದೆ.

ಸಂಗಾತಿ ಮಾನ್ಪಡೆರವರು ಜನರ ಸಮಸ್ಯೆಗಳನ್ನು ನಿಖರವಾಗಿ ಗುರುತಿಸಿ, ಹೋರಾಟದ ಸ್ಪರೂಪ ನೀಡುವುದರಲ್ಲಿ ಬಹಳ ಪರಿಣತಿ ಹೊಂದಿದ್ದ ಮತ್ತು ರಾಜ್ಯದ ಎಲ್ಲ ಜನಪರ ಚಳವಳಿಗಳಗೆ ಮಾರ್ಗದರ್ಶನ ನೀಡಬಲ್ಲ ಒಡನಾಡಿಯಾಗಿದ್ದರು. ಇವರ ನಿಧನ ರೈತ ಚಳುವಳಿಗೆ ಮಾತ್ರವೇ ಅಲ್ಲದೇ ಒಟ್ಟಾರೆ ಪ್ರಜಾಸತ್ತಾತ್ಮಕ ಹೋರಾಟಗಳಿಗೆ ಅಪಾರ ನಷ್ಟ.

  • ಟಿ.ಯಶವಂತ
    ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸಮಿತಿ ಸದಸ್ಯರು.

ಇದನ್ನೂ ಓದಿ: ಮಾರುತಿ ಮಾನ್ಪಡೆಯವರ ಸಾವಿಗೆ ಸರ್ಕಾರವೇ ನೇರ ಹೊಣೆ: ಐಕ್ಯ ಹೋರಾಟ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...