Homeಚಳವಳಿಶ್ರಧ್ಧಾಂಜಲಿ: ಜನಪರ ಚಳವಳಿಯ ಮಾರ್ಗದರ್ಶಕ - ಧೀರ ಹೋರಾಟಗಾರ ಮಾರುತಿ ಮಾನ್ಪಡೆ

ಶ್ರಧ್ಧಾಂಜಲಿ: ಜನಪರ ಚಳವಳಿಯ ಮಾರ್ಗದರ್ಶಕ – ಧೀರ ಹೋರಾಟಗಾರ ಮಾರುತಿ ಮಾನ್ಪಡೆ

ಕೆಲಸ ಕಾರ್ಯಗಳಲ್ಲಿ ಸಮರಶೀಲತೆ ಮತ್ತು ಬದ್ದತೆಯ ಹೋರಾಟಕ್ಕೆ ಮತ್ತೊಂದು ಹೆಸರಾಗಿದ್ದ ಕಾಮ್ರೆಡ್ ಮಾರುತಿ ಮಾನ್ಪಡೆಯವರು 8 ಕ್ಕೂ ಹೆಚ್ಚು ಬಾರಿ ಜೈಲುವಾಸ ಕಂಡವರು.

- Advertisement -
- Advertisement -

ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸಮಿತಿ ಉಪಾಧ್ಯಕ್ಷರು, ಸಿಪಿಐಎಂ ಪಕ್ಷದ ರಾಜ್ಯ ನೇತಾರರು ಆಗಿದ್ದ ಹಿರಿಯ ರೈತ ನಾಯಕ ಕಾಮ್ರೆಡ್ ಮಾರುತಿರಾವ್ ಮಾನ್ಪಡೆ ರವರು ದಿನಾಂಕ 20.10.2020ರ ಬೆಳಗ್ಗೆ 9:30ಕ್ಕೆ ನಿಧನರಾದರು. ಇದು ರಾಜ್ಯದ ರೈತ ಚಳವಳಿ ಹಾಗೂ ಶೋಷಿತರ ಪರ ಹೋರಾಟದ ಹಿತೈಷಿಗಳಿಗೆ ಒಟ್ಟಾರೆಯಾಗಿ ಇಡೀ ಪ್ರಜಾಸತ್ತಾತ್ಮಕ ಹೋರಾಟದ ಒಡನಾಡಿಗಳಿಗೆ ಅಘಾತ ಉಂಟುಮಾಡಿದೆ. ಕೋವಿಡ್-19 ಸೋಂಕು ಅಪಾಯವನ್ನು ಲೆಕ್ಕಿಸದೇ ಅಂತಿಮ ದರ್ಶನದ ಅವಕಾಶ ಇಲ್ಲದಿದ್ದರೂ ಅಂತಿಮ ನಮನಕ್ಕೆ ಸೇರಿದ್ದ ಅಪಾರ ಜನಸ್ತೋಮ ಹಾಗೂ ರಾಜ್ಯದೆಲ್ಲೆಡೆ ವ್ಯಕ್ತವಾದ ಸಂತಾಪ ಮಾನ್ಪಡೆಯವರು ಹೊಂದಿದ್ದ ಜನಪರ ಕಾಳಜಿಯ ಅಭಿವ್ಯಕ್ತಿಯಾಗಿತ್ತು.

ಕಾಮ್ರೆಡ್ ಮಾರುತಿರಾವ್ ಮಾನ್ಪಡೆಯವರು ಇಡೀ ರಾಜ್ಯ ಕಂಡ ಅಪರೂಪದ ದಿಟ್ಟ ರೈತ ನಾಯಕ. ರಾಜ್ಯದ ನೀರಾವರಿ ಯೋಜನೆಗಳು ಮತ್ತು ನೀರಾವರಿ ಹೋರಾಟಗಳ ಕುರಿತು ಅಪಾರ ಜ್ಞಾನ ಹೊಂದಿದ್ದರು. ತೊಗರಿ ಬೆಲೆಗಾಗಿ, ಬಗರ್‌ಹುಕುಂ ಸಾಗುವಳಿ ಸಕ್ರಮಕ್ಕಾಗಿ, ಕೃಷ್ಣ ನದಿ ನೀರು ಬಳಕೆಯ ನೀರಾವರಿಗಾಗಿ, ವಿದ್ಯುತ್ ಖಾಸಗೀಕರಣ, ಕೃಷಿ ಉತ್ಪನ್ನಗಳ ಅಮದು ಮುಂತಾದ ಕೇಂದ್ರ, ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳು ಸೇರಿದಂತೆ ಹಲವಾರು ರೈತ ಹೋರಾಟ ಪ್ರಶ್ನೆಗಳನ್ನು ಕೈಗೆತ್ತಿಕೊಂಡು ರೈತ ಸಮುದಾಯಕ್ಕೆ ನ್ಯಾಯ-ಪರಿಹಾರ ಒದಗಿಸುವುದರಲ್ಲಿ ನಿರತರಾಗಿದ್ದ ರಾಜಿರಹಿತ ಹೋರಾಟಗಾರ ಅವರಾಗಿದ್ದರು. ತೊಗರಿ ಬೆಳೆಗೆ ಸಿಗಬೇಕಾದ ವೈಜ್ಞಾನಿಕ ಬೆಲೆ ವಿಷಯದ ಹೋರಾಟದ ಚಾಂಪಿಯನ್ ಆಗಿ ಮನೆ ಮಾತಾಗಿದ್ದ ಮಾನ್ಪಡೆಯವರು ಕೃಷ್ಣ ಜಲ ಭಾಗ್ಯ ನಿಗಮ ರಚನೆಗೆ ಒತ್ತಡ ಹೇರಿದ ಪ್ರಮುಖ ಶಕ್ತಿಯಾಗಿದ್ದರು. ವಿಶ್ವ ಬ್ಯಾಂಕ್‌ನ ಸಾಲದ ಷರುತ್ತಗಳಿಗೆ ಕೃಷ್ಣ ಜಲ ಭಾಗ್ಯ ನಿಗಮ ಈಡಾಗದಂತೆ ರೈತರ ಬೃಹತ್ ಸಮಾವೇಶವನ್ನು ಸಂಘಟಿಸಿದ್ದರು.

ರೈತ – ಕೃಷಿ ಕೂಲಿಕಾರರ ಪ್ರಶ್ನೆಗಳಿಗೆ ಮಾತ್ರವೇ ಅಲ್ಲದೇ ರಾಜ್ಯದ ಪಂಚಾಯತಿ, ಅಂಗನವಾಡಿ ಕಾರ್ಮಿಕರನ್ನು ಹಾಗೂ ಸಾಮಾಜಿಕವಾಗಿ ದಮನಕ್ಕೀಡಾಗಿದ್ದ ಶೋಷಿತ ದಲಿತ, ಮಹಿಳೆಯರನ್ನು ಕೂಡ ಸಂಘಟಿಸುವಲ್ಲಿ ಮುಂಚೂಣಿ ಪಾತ್ರವನ್ನು ಮಾರುತಿ ಮಾನ್ಪಡೆ ವಹಿಸಿದ್ದರು.

1995 ರಿಂದ 2017ರವರೆಗೆ ಸುಧೀರ್ಘ ಕಾಲಾವಧಿಗೆ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು ೧೯೮೯ರಿಂದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘಕ್ಕೆ ಕೂಡ ರಾಜ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಸುಮಾರು 40 ವರ್ಷಗಳ ಕಾಲದ ಅವರ ಹೋರಾಟದಿಂದ ರಾಜ್ಯದ ಮತ್ತು ವಿಶೇಷವಾಗಿ ಹೈದರಾಬಾದ್ ಕರ್ನಾಟಕ ಹಾಗೂ ಇಡೀ ಉತ್ತರ ಕರ್ನಾಟಕದ ಒಬ್ಬ ಪ್ರಮುಖ ಕಮ್ಯುನಿಸ್ಟ್ ಮುಖಂಡರಾಗಿ ಗುರುತಿಸಲ್ಪಟ್ಟಿದ್ದರು.

ಕರಿ ಲಿಂಗೇಶ್ವರ ಯುವ ರೈತ ಸಂಘದ ಮೂಲಕ ಸಾರ್ವಜನಿಕ ಜೀವನ ಪ್ರಾರಂಬಿಸಿದ ಮಾರುತಿ ಮಾನ್ಪಡೆಯವರು ಯಶವಂತ ಹಲಸೂರು, ವಿ.ಎನ್ ಹಳಕಟ್ಟಿ, ಗಂಗಾಧರ ನಮೋಶಿ, ಚಂದ್ರಶೇಖಕರ ಬಾಳೆ, ಪಿ ರಾಮಚಂದ್ರರಾವ್‌ರವರ ಒಡನಾಟವೂ ಸೇರಿದಂತೆ ರೈತ ಹಾಗೂ ಕಮ್ಯುನಿಸ್ಟ್ ಚಳುವಳಿಯ ಪ್ರಭಾವಕ್ಕೆ ಒಳಗಾಗಿ ತಮ್ಮ ನೌಕರಿಗೆ ರಾಜೀನಾಮೆ ನೀಡಿ ರೈತ ಚಳವಳಿಯ ಪೂರ್ಣ ಕಾಲದ ಕಾರ್ಯಕರ್ತರಾಗಿ ಗುಲ್ಬರ್ಗ ಜಿ¯ಯಿಂದ ಕೆಲಸ ಆರಂಭಿಸಿದರು. ಶೋಷಿತರ ಪರವಾದ ದಣಿವರಿಯದ ಕೆಲಸದ ಪರಿಣಾಮವಾಗಿ 1986 ರಲ್ಲಿ ಗುಲ್ಬರ್ಗ ಜಿ.ಪಂ ಸದಸ್ಯರಾಗಿ ಸಿಪಿಐಎಂನ್ನು ಪ್ರತಿನಿಧಿಸಿದ್ದರು. ಜಿ.ಪಂ ಸದಸ್ಯರಾಗಿ ಅವರು ಮಾಡಿದ ಕೆಲಸಗಳು ಇಡೀ ರಾಜ್ಯದಲ್ಲೇ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಹೇಗೆ ಕೆಲಸ ಮಾಡಬೇಕು ಎಂಬುದಕ್ಕೆ ಮಾದರಿಯಾಗಿತ್ತು.
ಕೆಲಸ ಕಾರ್ಯಗಳಲ್ಲಿ ಸಮರಶೀಲತೆ ಮತ್ತು ಬದ್ದತೆಯ ಹೋರಾಟಕ್ಕೆ ಮತ್ತೊಂದು ಹೆಸರಾಗಿದ್ದ ಕಾಮ್ರೆಡ್ ಮಾರುತಿ ಮಾನ್ಪಡೆಯವರು 8 ಕ್ಕೂ ಹೆಚ್ಚು ಬಾರಿ ಜೈಲುವಾಸ ಕಂಡವರು. ಪಂಪ್‌ಸೆಟ್ ಬಳಕೆದಾರರಿಗೆ ಮೀಟರ್ ಅಳವಡಿಸಿ ವಿದ್ಯುತ್ ಖಾಸಗೀಕರಣದ ಪ್ರಯತ್ನ ಮಾಡುವ ಸರ್ಕಾರದ ಧೋರಣೆ ವಿರುದ್ಧ ಹೋರಾಟ ಒಂದರಲ್ಲೇ ೩ ತಿಂಗಳು ಜೈಲಿನಲ್ಲಿದ್ದರು. ಒಟ್ಟಾರೆ ಅವರ ಹೋರಾಟದ ಜೀವನದಲ್ಲಿ ಸುಮಾರು 150 ದಿನಗಳಿಗೂ ಹೆಚ್ಚು ಜೈಲು ವಾಸ ಅನುಭವಿಸಿದ್ದರು. ರೈತ ವಿರೋಧಿ ಸುಗ್ರೀವಾಜ್ಞೆಗಳ ವಿರುದ್ಧ 2020.ಸೆಪ್ಟೆಂಬರ್ 25 ರಂದು ನಡೆದ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‌ನ ರಸ್ತೆ ತಡೆ ಪ್ರತಿಭಟನೆಯಲ್ಲೂ ಬಂಧನಕ್ಕೆ ಒಳಗಾಗಿದ್ದರು.

ಚುನಾವಣಾ ಹೋರಾಟದಲ್ಲೂ ಅಭ್ಯರ್ಥಿಯಾಗಿ ಭಾಗವಹಿಸಿದ್ದ ಮಾರುತಿ ಮಾನ್ಪಡೆ ರವರು ಬೀದರ್ ಲೋಕಸಭಾ ಹಾಗೂ ಗುಲ್ಬರ್ಗ ಗ್ರಾಮೀಣ ಮೀಸಲು ಕ್ಷೇತ್ರದಲ್ಲಿ ಸಿಪಿಐಎಂ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿದ್ದರು.

1955ರಲ್ಲಿ ಸಾಮಾಜಿಕವಾಗಿ ಅಸ್ಪೃಶ್ಯತೆ ಅನುಭವಿಸುತ್ತಿದ್ದ ಬಡತನದ ಕುಟುಂಬದಲ್ಲಿ ಜನಿಸಿದ ಮಾರುತಿ ಮಾನ್ಪಡೆಯವರು ಸ್ವತಃ ಬರಗಾಲದ ಬವಣೆಗಳನ್ನು ಅನುಭವಿಸಿ ರೈತರ ಕಷ್ಟ -ನಷ್ಟಗಳನ್ನು ನೇರವಾಗಿ ಕಂಡವರು. 65 ವಯಸ್ಸಿನ ಹಿರಿಯರಾಗಿದ್ದರೂ ದೈಹಿಕ ಆರೋಗ್ಯ ಸ್ಥಿತಿಯನ್ನು ಲೆಕ್ಕಿಸದೇ ಕೇಂದ್ರ, ರಾಜ್ಯ ಸರ್ಕಾರಗಳ ಕೃಷಿ ಸುಗ್ರಿವಾಜ್ಞೆಗಳನ್ನು ವಿರೋಧಿಸಿ ಸೆಪ್ಟೆಂಬರ್ 21 ರಿಂದ 26ರವರಿಗೆ ಬೆಂಗಳೂರಿನಲ್ಲಿ ನಡೆದ ಆಹೋರಾತ್ರಿ ಹೋರಾಟದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರಾಗಿ ತೊಡಗಿಸಿಕೊಂಡಿದ್ದರು. ಸೆಪ್ಟೆಂಬರ್ 28 ರ ಕರ್ನಾಟಕ ಬಂದ್ ಯಶಸ್ವಿಗೊಳಿಸಲು ಗುಲ್ಬರ್ಗಕ್ಕೆ ತೆರಳಿ ಹೈದರಾಬಾದ್ ಕರ್ನಾಟಕ ಬಂದ್ ಯಶಸ್ವಿ ಆಗಲು ಶ್ರಮಿಸಿದ್ದರು. ಈ ಕಾಲಾವಧಿಯಲ್ಲಿ ಆದ ಕೋವಿಡ್-19 ಸೋಂಕಿಗೆ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವೈದ್ಯರ ಉತ್ತಮ ಪ್ರಯತ್ನದ ಹೊರತಾಗಿಯೂ ಚಿಕಿತ್ಸೆ ಫಲಕಾರಿಯಾಗದೇ ಶೋಷಿತರ ಬಲವಾದ ಧ್ವನಿಯೊಂದು ನಿಂತು ಹೋಗಿದೆ.

ಸಂಗಾತಿ ಮಾನ್ಪಡೆರವರು ಜನರ ಸಮಸ್ಯೆಗಳನ್ನು ನಿಖರವಾಗಿ ಗುರುತಿಸಿ, ಹೋರಾಟದ ಸ್ಪರೂಪ ನೀಡುವುದರಲ್ಲಿ ಬಹಳ ಪರಿಣತಿ ಹೊಂದಿದ್ದ ಮತ್ತು ರಾಜ್ಯದ ಎಲ್ಲ ಜನಪರ ಚಳವಳಿಗಳಗೆ ಮಾರ್ಗದರ್ಶನ ನೀಡಬಲ್ಲ ಒಡನಾಡಿಯಾಗಿದ್ದರು. ಇವರ ನಿಧನ ರೈತ ಚಳುವಳಿಗೆ ಮಾತ್ರವೇ ಅಲ್ಲದೇ ಒಟ್ಟಾರೆ ಪ್ರಜಾಸತ್ತಾತ್ಮಕ ಹೋರಾಟಗಳಿಗೆ ಅಪಾರ ನಷ್ಟ.

  • ಟಿ.ಯಶವಂತ
    ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸಮಿತಿ ಸದಸ್ಯರು.

ಇದನ್ನೂ ಓದಿ: ಮಾರುತಿ ಮಾನ್ಪಡೆಯವರ ಸಾವಿಗೆ ಸರ್ಕಾರವೇ ನೇರ ಹೊಣೆ: ಐಕ್ಯ ಹೋರಾಟ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ...

ದ್ವೇಷ ಭಾಷಣ ಆರೋಪ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್ಐಆರ್ 

ಯಾದಗಿರಿ ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆಯ ಸಂದರ್ಭದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಜಿಲ್ಲೆಯ ಗುರ್ಮಿತ್ಕಲ್ ಪಟ್ಟಣದಲ್ಲಿ ಈ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ಬಂಧನ, ವಿವಿ ವಿದ್ಯಾರ್ಥಿಗಳಿಂದ ಕೌಂಟರ್ ಪ್ರೊಟೆಸ್ಟ್

ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಸದಸ್ಯರು ಮಂಗಳವಾರ (ಫೆ.24) ಸಂಜೆ ದಾಂಧಲೆ ನಡೆಸಿರುವ ಕುರಿತು ವರದಿಯಾಗಿದೆ. ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಷನ್ (ಎಐಎಸ್‌ಎ) ಜೊತೆ ಸಂಯೋಜಿತವಾಗಿರುವ ವಿವಿಯ ವಿದ್ಯಾರ್ಥಿ ಸಂಘಟನೆ...

ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದ ‘ಕೇರಳ ಸ್ಟೋರಿ-2’ ತಂಡ

'ದಿ ಕೇರಳ ಸ್ಟೋರಿ-2 ಗೋಸ್ ಬಿಯಾಂಡ್' ತಂಡ ಕೇರಳ ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದೆ. ಮಂಗಳವಾರ (ಫೆ.24) ಬೆಳಗ್ಗಿನ ಅವಧಿಯ ವಿಚಾರಣೆಯ ವೇಳೆ ನ್ಯಾಯಮೂರ್ತಿ ಬಿಚು ಕುರಿಯನ್ ಥಾಮಸ್ ಅವರು, "ಸಿನಿಮಾದ...

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...