Homeಚಳವಳಿಶ್ರಧ್ಧಾಂಜಲಿ: ಜನಪರ ಚಳವಳಿಯ ಮಾರ್ಗದರ್ಶಕ - ಧೀರ ಹೋರಾಟಗಾರ ಮಾರುತಿ ಮಾನ್ಪಡೆ

ಶ್ರಧ್ಧಾಂಜಲಿ: ಜನಪರ ಚಳವಳಿಯ ಮಾರ್ಗದರ್ಶಕ – ಧೀರ ಹೋರಾಟಗಾರ ಮಾರುತಿ ಮಾನ್ಪಡೆ

ಕೆಲಸ ಕಾರ್ಯಗಳಲ್ಲಿ ಸಮರಶೀಲತೆ ಮತ್ತು ಬದ್ದತೆಯ ಹೋರಾಟಕ್ಕೆ ಮತ್ತೊಂದು ಹೆಸರಾಗಿದ್ದ ಕಾಮ್ರೆಡ್ ಮಾರುತಿ ಮಾನ್ಪಡೆಯವರು 8 ಕ್ಕೂ ಹೆಚ್ಚು ಬಾರಿ ಜೈಲುವಾಸ ಕಂಡವರು.

- Advertisement -
- Advertisement -

ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸಮಿತಿ ಉಪಾಧ್ಯಕ್ಷರು, ಸಿಪಿಐಎಂ ಪಕ್ಷದ ರಾಜ್ಯ ನೇತಾರರು ಆಗಿದ್ದ ಹಿರಿಯ ರೈತ ನಾಯಕ ಕಾಮ್ರೆಡ್ ಮಾರುತಿರಾವ್ ಮಾನ್ಪಡೆ ರವರು ದಿನಾಂಕ 20.10.2020ರ ಬೆಳಗ್ಗೆ 9:30ಕ್ಕೆ ನಿಧನರಾದರು. ಇದು ರಾಜ್ಯದ ರೈತ ಚಳವಳಿ ಹಾಗೂ ಶೋಷಿತರ ಪರ ಹೋರಾಟದ ಹಿತೈಷಿಗಳಿಗೆ ಒಟ್ಟಾರೆಯಾಗಿ ಇಡೀ ಪ್ರಜಾಸತ್ತಾತ್ಮಕ ಹೋರಾಟದ ಒಡನಾಡಿಗಳಿಗೆ ಅಘಾತ ಉಂಟುಮಾಡಿದೆ. ಕೋವಿಡ್-19 ಸೋಂಕು ಅಪಾಯವನ್ನು ಲೆಕ್ಕಿಸದೇ ಅಂತಿಮ ದರ್ಶನದ ಅವಕಾಶ ಇಲ್ಲದಿದ್ದರೂ ಅಂತಿಮ ನಮನಕ್ಕೆ ಸೇರಿದ್ದ ಅಪಾರ ಜನಸ್ತೋಮ ಹಾಗೂ ರಾಜ್ಯದೆಲ್ಲೆಡೆ ವ್ಯಕ್ತವಾದ ಸಂತಾಪ ಮಾನ್ಪಡೆಯವರು ಹೊಂದಿದ್ದ ಜನಪರ ಕಾಳಜಿಯ ಅಭಿವ್ಯಕ್ತಿಯಾಗಿತ್ತು.

ಕಾಮ್ರೆಡ್ ಮಾರುತಿರಾವ್ ಮಾನ್ಪಡೆಯವರು ಇಡೀ ರಾಜ್ಯ ಕಂಡ ಅಪರೂಪದ ದಿಟ್ಟ ರೈತ ನಾಯಕ. ರಾಜ್ಯದ ನೀರಾವರಿ ಯೋಜನೆಗಳು ಮತ್ತು ನೀರಾವರಿ ಹೋರಾಟಗಳ ಕುರಿತು ಅಪಾರ ಜ್ಞಾನ ಹೊಂದಿದ್ದರು. ತೊಗರಿ ಬೆಲೆಗಾಗಿ, ಬಗರ್‌ಹುಕುಂ ಸಾಗುವಳಿ ಸಕ್ರಮಕ್ಕಾಗಿ, ಕೃಷ್ಣ ನದಿ ನೀರು ಬಳಕೆಯ ನೀರಾವರಿಗಾಗಿ, ವಿದ್ಯುತ್ ಖಾಸಗೀಕರಣ, ಕೃಷಿ ಉತ್ಪನ್ನಗಳ ಅಮದು ಮುಂತಾದ ಕೇಂದ್ರ, ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳು ಸೇರಿದಂತೆ ಹಲವಾರು ರೈತ ಹೋರಾಟ ಪ್ರಶ್ನೆಗಳನ್ನು ಕೈಗೆತ್ತಿಕೊಂಡು ರೈತ ಸಮುದಾಯಕ್ಕೆ ನ್ಯಾಯ-ಪರಿಹಾರ ಒದಗಿಸುವುದರಲ್ಲಿ ನಿರತರಾಗಿದ್ದ ರಾಜಿರಹಿತ ಹೋರಾಟಗಾರ ಅವರಾಗಿದ್ದರು. ತೊಗರಿ ಬೆಳೆಗೆ ಸಿಗಬೇಕಾದ ವೈಜ್ಞಾನಿಕ ಬೆಲೆ ವಿಷಯದ ಹೋರಾಟದ ಚಾಂಪಿಯನ್ ಆಗಿ ಮನೆ ಮಾತಾಗಿದ್ದ ಮಾನ್ಪಡೆಯವರು ಕೃಷ್ಣ ಜಲ ಭಾಗ್ಯ ನಿಗಮ ರಚನೆಗೆ ಒತ್ತಡ ಹೇರಿದ ಪ್ರಮುಖ ಶಕ್ತಿಯಾಗಿದ್ದರು. ವಿಶ್ವ ಬ್ಯಾಂಕ್‌ನ ಸಾಲದ ಷರುತ್ತಗಳಿಗೆ ಕೃಷ್ಣ ಜಲ ಭಾಗ್ಯ ನಿಗಮ ಈಡಾಗದಂತೆ ರೈತರ ಬೃಹತ್ ಸಮಾವೇಶವನ್ನು ಸಂಘಟಿಸಿದ್ದರು.

ರೈತ – ಕೃಷಿ ಕೂಲಿಕಾರರ ಪ್ರಶ್ನೆಗಳಿಗೆ ಮಾತ್ರವೇ ಅಲ್ಲದೇ ರಾಜ್ಯದ ಪಂಚಾಯತಿ, ಅಂಗನವಾಡಿ ಕಾರ್ಮಿಕರನ್ನು ಹಾಗೂ ಸಾಮಾಜಿಕವಾಗಿ ದಮನಕ್ಕೀಡಾಗಿದ್ದ ಶೋಷಿತ ದಲಿತ, ಮಹಿಳೆಯರನ್ನು ಕೂಡ ಸಂಘಟಿಸುವಲ್ಲಿ ಮುಂಚೂಣಿ ಪಾತ್ರವನ್ನು ಮಾರುತಿ ಮಾನ್ಪಡೆ ವಹಿಸಿದ್ದರು.

1995 ರಿಂದ 2017ರವರೆಗೆ ಸುಧೀರ್ಘ ಕಾಲಾವಧಿಗೆ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು ೧೯೮೯ರಿಂದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘಕ್ಕೆ ಕೂಡ ರಾಜ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಸುಮಾರು 40 ವರ್ಷಗಳ ಕಾಲದ ಅವರ ಹೋರಾಟದಿಂದ ರಾಜ್ಯದ ಮತ್ತು ವಿಶೇಷವಾಗಿ ಹೈದರಾಬಾದ್ ಕರ್ನಾಟಕ ಹಾಗೂ ಇಡೀ ಉತ್ತರ ಕರ್ನಾಟಕದ ಒಬ್ಬ ಪ್ರಮುಖ ಕಮ್ಯುನಿಸ್ಟ್ ಮುಖಂಡರಾಗಿ ಗುರುತಿಸಲ್ಪಟ್ಟಿದ್ದರು.

ಕರಿ ಲಿಂಗೇಶ್ವರ ಯುವ ರೈತ ಸಂಘದ ಮೂಲಕ ಸಾರ್ವಜನಿಕ ಜೀವನ ಪ್ರಾರಂಬಿಸಿದ ಮಾರುತಿ ಮಾನ್ಪಡೆಯವರು ಯಶವಂತ ಹಲಸೂರು, ವಿ.ಎನ್ ಹಳಕಟ್ಟಿ, ಗಂಗಾಧರ ನಮೋಶಿ, ಚಂದ್ರಶೇಖಕರ ಬಾಳೆ, ಪಿ ರಾಮಚಂದ್ರರಾವ್‌ರವರ ಒಡನಾಟವೂ ಸೇರಿದಂತೆ ರೈತ ಹಾಗೂ ಕಮ್ಯುನಿಸ್ಟ್ ಚಳುವಳಿಯ ಪ್ರಭಾವಕ್ಕೆ ಒಳಗಾಗಿ ತಮ್ಮ ನೌಕರಿಗೆ ರಾಜೀನಾಮೆ ನೀಡಿ ರೈತ ಚಳವಳಿಯ ಪೂರ್ಣ ಕಾಲದ ಕಾರ್ಯಕರ್ತರಾಗಿ ಗುಲ್ಬರ್ಗ ಜಿ¯ಯಿಂದ ಕೆಲಸ ಆರಂಭಿಸಿದರು. ಶೋಷಿತರ ಪರವಾದ ದಣಿವರಿಯದ ಕೆಲಸದ ಪರಿಣಾಮವಾಗಿ 1986 ರಲ್ಲಿ ಗುಲ್ಬರ್ಗ ಜಿ.ಪಂ ಸದಸ್ಯರಾಗಿ ಸಿಪಿಐಎಂನ್ನು ಪ್ರತಿನಿಧಿಸಿದ್ದರು. ಜಿ.ಪಂ ಸದಸ್ಯರಾಗಿ ಅವರು ಮಾಡಿದ ಕೆಲಸಗಳು ಇಡೀ ರಾಜ್ಯದಲ್ಲೇ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಹೇಗೆ ಕೆಲಸ ಮಾಡಬೇಕು ಎಂಬುದಕ್ಕೆ ಮಾದರಿಯಾಗಿತ್ತು.
ಕೆಲಸ ಕಾರ್ಯಗಳಲ್ಲಿ ಸಮರಶೀಲತೆ ಮತ್ತು ಬದ್ದತೆಯ ಹೋರಾಟಕ್ಕೆ ಮತ್ತೊಂದು ಹೆಸರಾಗಿದ್ದ ಕಾಮ್ರೆಡ್ ಮಾರುತಿ ಮಾನ್ಪಡೆಯವರು 8 ಕ್ಕೂ ಹೆಚ್ಚು ಬಾರಿ ಜೈಲುವಾಸ ಕಂಡವರು. ಪಂಪ್‌ಸೆಟ್ ಬಳಕೆದಾರರಿಗೆ ಮೀಟರ್ ಅಳವಡಿಸಿ ವಿದ್ಯುತ್ ಖಾಸಗೀಕರಣದ ಪ್ರಯತ್ನ ಮಾಡುವ ಸರ್ಕಾರದ ಧೋರಣೆ ವಿರುದ್ಧ ಹೋರಾಟ ಒಂದರಲ್ಲೇ ೩ ತಿಂಗಳು ಜೈಲಿನಲ್ಲಿದ್ದರು. ಒಟ್ಟಾರೆ ಅವರ ಹೋರಾಟದ ಜೀವನದಲ್ಲಿ ಸುಮಾರು 150 ದಿನಗಳಿಗೂ ಹೆಚ್ಚು ಜೈಲು ವಾಸ ಅನುಭವಿಸಿದ್ದರು. ರೈತ ವಿರೋಧಿ ಸುಗ್ರೀವಾಜ್ಞೆಗಳ ವಿರುದ್ಧ 2020.ಸೆಪ್ಟೆಂಬರ್ 25 ರಂದು ನಡೆದ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‌ನ ರಸ್ತೆ ತಡೆ ಪ್ರತಿಭಟನೆಯಲ್ಲೂ ಬಂಧನಕ್ಕೆ ಒಳಗಾಗಿದ್ದರು.

ಚುನಾವಣಾ ಹೋರಾಟದಲ್ಲೂ ಅಭ್ಯರ್ಥಿಯಾಗಿ ಭಾಗವಹಿಸಿದ್ದ ಮಾರುತಿ ಮಾನ್ಪಡೆ ರವರು ಬೀದರ್ ಲೋಕಸಭಾ ಹಾಗೂ ಗುಲ್ಬರ್ಗ ಗ್ರಾಮೀಣ ಮೀಸಲು ಕ್ಷೇತ್ರದಲ್ಲಿ ಸಿಪಿಐಎಂ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿದ್ದರು.

1955ರಲ್ಲಿ ಸಾಮಾಜಿಕವಾಗಿ ಅಸ್ಪೃಶ್ಯತೆ ಅನುಭವಿಸುತ್ತಿದ್ದ ಬಡತನದ ಕುಟುಂಬದಲ್ಲಿ ಜನಿಸಿದ ಮಾರುತಿ ಮಾನ್ಪಡೆಯವರು ಸ್ವತಃ ಬರಗಾಲದ ಬವಣೆಗಳನ್ನು ಅನುಭವಿಸಿ ರೈತರ ಕಷ್ಟ -ನಷ್ಟಗಳನ್ನು ನೇರವಾಗಿ ಕಂಡವರು. 65 ವಯಸ್ಸಿನ ಹಿರಿಯರಾಗಿದ್ದರೂ ದೈಹಿಕ ಆರೋಗ್ಯ ಸ್ಥಿತಿಯನ್ನು ಲೆಕ್ಕಿಸದೇ ಕೇಂದ್ರ, ರಾಜ್ಯ ಸರ್ಕಾರಗಳ ಕೃಷಿ ಸುಗ್ರಿವಾಜ್ಞೆಗಳನ್ನು ವಿರೋಧಿಸಿ ಸೆಪ್ಟೆಂಬರ್ 21 ರಿಂದ 26ರವರಿಗೆ ಬೆಂಗಳೂರಿನಲ್ಲಿ ನಡೆದ ಆಹೋರಾತ್ರಿ ಹೋರಾಟದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರಾಗಿ ತೊಡಗಿಸಿಕೊಂಡಿದ್ದರು. ಸೆಪ್ಟೆಂಬರ್ 28 ರ ಕರ್ನಾಟಕ ಬಂದ್ ಯಶಸ್ವಿಗೊಳಿಸಲು ಗುಲ್ಬರ್ಗಕ್ಕೆ ತೆರಳಿ ಹೈದರಾಬಾದ್ ಕರ್ನಾಟಕ ಬಂದ್ ಯಶಸ್ವಿ ಆಗಲು ಶ್ರಮಿಸಿದ್ದರು. ಈ ಕಾಲಾವಧಿಯಲ್ಲಿ ಆದ ಕೋವಿಡ್-19 ಸೋಂಕಿಗೆ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವೈದ್ಯರ ಉತ್ತಮ ಪ್ರಯತ್ನದ ಹೊರತಾಗಿಯೂ ಚಿಕಿತ್ಸೆ ಫಲಕಾರಿಯಾಗದೇ ಶೋಷಿತರ ಬಲವಾದ ಧ್ವನಿಯೊಂದು ನಿಂತು ಹೋಗಿದೆ.

ಸಂಗಾತಿ ಮಾನ್ಪಡೆರವರು ಜನರ ಸಮಸ್ಯೆಗಳನ್ನು ನಿಖರವಾಗಿ ಗುರುತಿಸಿ, ಹೋರಾಟದ ಸ್ಪರೂಪ ನೀಡುವುದರಲ್ಲಿ ಬಹಳ ಪರಿಣತಿ ಹೊಂದಿದ್ದ ಮತ್ತು ರಾಜ್ಯದ ಎಲ್ಲ ಜನಪರ ಚಳವಳಿಗಳಗೆ ಮಾರ್ಗದರ್ಶನ ನೀಡಬಲ್ಲ ಒಡನಾಡಿಯಾಗಿದ್ದರು. ಇವರ ನಿಧನ ರೈತ ಚಳುವಳಿಗೆ ಮಾತ್ರವೇ ಅಲ್ಲದೇ ಒಟ್ಟಾರೆ ಪ್ರಜಾಸತ್ತಾತ್ಮಕ ಹೋರಾಟಗಳಿಗೆ ಅಪಾರ ನಷ್ಟ.

  • ಟಿ.ಯಶವಂತ
    ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸಮಿತಿ ಸದಸ್ಯರು.

ಇದನ್ನೂ ಓದಿ: ಮಾರುತಿ ಮಾನ್ಪಡೆಯವರ ಸಾವಿಗೆ ಸರ್ಕಾರವೇ ನೇರ ಹೊಣೆ: ಐಕ್ಯ ಹೋರಾಟ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...