Homeಮುಖಪುಟಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಆಯ್ಕೆ

ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಆಯ್ಕೆ

- Advertisement -
- Advertisement -

ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಭಾನುವಾರ (ಸೆ.22) ಆಯ್ಕೆಯಾಗಿದ್ದಾರೆ.

ನ್ಯಾ‍‍ಷನಲ್‌ ಪೀಪಲ್ಸ್ ಪವರ್ (ಎನ್‌ಪಿಪಿ) ಒಕ್ಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದಿಸ್ಸನಾಯಕೆ ಅವರು, 57,40,179 ಅಥವಾ 42.3% ಮತಗಳನ್ನು ಪಡೆದ್ದಾರೆ. ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಅವರು 45,30,902 ಅಥವಾ 32.8% ಮತಗಳ ಮೂಲಕ ಎರಡನೇ ಸ್ಥಾನ ಪಡೆದಿದ್ದಾರೆ.

ದೇಶದ ಆರ್ಥಿಕತೆ ಕುಸಿದ ನಂತರ, ಎರಡು ವರ್ಷಗಳ ಹಿಂದೆ ಅಧಿಕಾರ ವಹಿಸಿಕೊಂಡ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಶೇ.20ಕ್ಕಿಂತ ಕಡಿಮೆ ಮತಗಳನ್ನು ಗಳಿಸಿ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

ನೂತನ ಅಧ್ಯಕ್ಷರ ಪ್ರಮಾಣವಚನಕ್ಕೂ ಮುನ್ನ, ಇಂದು (ಸೆ.23) ಪ್ರಧಾನಿ ದಿನೇಶ್ ಗುಣವರ್ಧನಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ಭಾನುವಾರ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಕೊನೆಗೊಂಡಾಗ ಇಬ್ಬರು ಪ್ರಮುಖ ಅಭ್ಯರ್ಥಿಗಳಲ್ಲಿ ಯಾರೂ ಅಗತ್ಯವಿರುವ ಶೇ.50ರಷ್ಟು ಮತಗಳನ್ನು ಪಡೆದಿರಲಿಲ್ಲ. ಹಾಗಾಗಿ, ಎರಡನೇ ಸುತ್ತಿನ ಮತ ಎಣಿಕೆ ನಡೆಸಿ, ದಿಸ್ಸನಾಯಕೆ ಅವರ ಗೆಲುವನ್ನು ಘೋಷಿಸಲಾಯಿತು ಎಂದು ವರದಿಗಳು ಹೇಳಿವೆ.

ಶ್ರೀಲಂಕಾದ ಚುನಾವಣಾ ವ್ಯವಸ್ಥೆಯ ಅಡಿಯಲ್ಲಿ, ಮತದಾರರು ಮೂರು ಪ್ರಾಶಸ್ತ್ಯದ ಮತಗಳನ್ನು ಹಾಕುತ್ತಾರೆ. ಮೊದಲ ಎಣಿಕೆಯಲ್ಲಿ ಯಾವುದೇ ಅಭ್ಯರ್ಥಿಯು 50% ಮತಗಳನ್ನು ಗಳಿಸದಿದ್ದಲ್ಲಿ, ಅಗ್ರ ಎರಡು ಅಭ್ಯರ್ಥಿಗಳ ನಡುವೆ ಎರಡನೇ ಸುತ್ತಿನ ಎಣಿಕೆಯನ್ನು ನಡೆಸಲಾಗುತ್ತದೆ.

ಶನಿವಾರ (ಸೆ.21) ನಡೆದ ಚುನಾವಣೆಯಲ್ಲಿ ಶೇ.75ರಷ್ಟು ಮತದಾನವಾಗಿತ್ತು.

ತನ್ನ ಅಭೂತಪೂರ್ವ ಗೆಲುವಿನ ಕುರಿತು ಪ್ರತಿಕ್ರಿಯಿಸಿರುವ ದಿಸ್ಸನಾಯಕೆ ಅವರು “ಈ ಸಾಧನೆಯು ಯಾವುದೇ ಒಬ್ಬ ವ್ಯಕ್ತಿಯ ಕೆಲಸದ ಫಲಿತಾಂಶವಲ್ಲ. ಇದು ಲಕ್ಷಾಂತರ ಜನರ ಸಾಮೂಹಿಕ ಪ್ರಯತ್ನ. ನಿಮ್ಮ ಬದ್ಧತೆ ನಮ್ಮನ್ನು ಇಲ್ಲಿಯವರೆಗೆ ತಂದಿದೆ. ಅದಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ. ಈ ಗೆಲುವು ನಮ್ಮೆಲ್ಲರದ್ದು” ಎಂದು ಹೇಳಿದ್ದಾರೆ.

ವಿಡಿಯೋ ಹೇಳಿಕೆಯಲ್ಲಿ ನಿರ್ಗಮಿತ ಅಧ್ಯಕ್ಷ ವಿಕ್ರಮಸಿಂಘೆ ಅವರು ದಿಸ್ಸನಾಯಕೆ ಅವರನ್ನು ಅಭಿನಂದಿಸಿದ್ದು, ದೇಶದ ಆರ್ಥಿಕತೆಯನ್ನು ಅಭಿವೃದ್ದಿಪಡಿಸುವ ಪ್ರಯತ್ನಗಳನ್ನು ಅವರು ಮುಂದುವರಿಸುವ ಭರವಸೆ ವ್ಯಕ್ತಪಡಿಸಿದ್ದಾರೆ.

ದಿಸ್ಸನಾಯಕೆ ಯಾರು? 

ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಅವರ ಪಕ್ಷವು ಶ್ರೀಲಂಕಾ ಸಂಸತ್‌ನಲ್ಲಿ ಮೂರು ಸ್ಥಾನಗಳನ್ನು ಹೊಂದಿದೆ. ದಿಸ್ಸನಾಯಕೆ ಅವರು ನ್ಯಾ‍‍ಷನಲ್‌ ಪೀಪಲ್ಸ್ ಪವರ್ (ಎನ್‌ಪಿಪಿ) ಒಕ್ಕೂಟದ ಅಭ್ಯರ್ಥಿಯಾಗಿ ಮಾರ್ಕ್ಸ್‌ವಾದಿ ಜನತಾ ವಿಮುಕ್ತಿ ಪೆರೆಮುನಾ (ಜೆವಿಪಿ) ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿದ್ದರು.

ದಿಸ್ಸನಾಯಕೆ ಅವರ ಪಕ್ಷ ಸರ್ಕಾರದ ಜನರ ವಿರೋಧಿ ತೆರಿಗೆ ಮತ್ತು ಆರ್ಥಿಕ ನೀತಿಗಳ ವಿರುದ್ಧ ಹೋರಾಟ ನಡೆಸಿ ಶ್ರೀಲಂಕಾ ಜನತೆಯ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ.

2022ರಲ್ಲಿ ಶ್ರೀಲಂಕಾದಲ್ಲಿ ತೀವ್ರ ಅರ್ಥಿಕ ಬಿಕ್ಕಟ್ಟು ಉಂಟಾಗಿ ಹಣದುಬ್ಬರ ಗಗನಕ್ಕೇರಿತ್ತು. ಜನರಿಗೆ ಅಗತ್ಯ ವಸ್ತುಗಳ ಕೊರತೆ ಉಂಟಾಗಿ ಪರದಾಡುವಂತಾಗಿತ್ತು. ಆಗ ಸರ್ಕಾರದ ವಿರುದ್ದ ಹೋರಾಟ ರೂಪಿಸಿದ್ದರ ಹಿಂದೆ ದಿಸ್ಸನಾಯಕೆ ಅವರ ಪಾತ್ರ ದೊಡ್ಡದಿತ್ತು. ಅವರು ನೇರವಾಗಿ ಹೋರಾಟದ ನೇತೃತ್ವದ ವಹಿಸದಿದ್ದರೂ, ಜನರು ಹೋರಾಟ ಕೈಗೊಂಡಿದ್ದರ ಹಿಂದೆ ಅವರ ಪ್ರೇರೇಪಣೆಯಿತ್ತು ಎಂದು ವರದಿಗಳು ಹೇಳಿವೆ.

ರಾಜಪಕ್ಸೆ ಅವರ ರಾಜೀನಾಮೆಯ ನಂತರ ಉಂಟಾದ ನಾಯಕತ್ವದ ಕೊರತೆಯು ದಿಸ್ಸನಾಯಕೆಗೆ ಮತ್ತು ಅವರ ಪಕ್ಷಕ್ಕೆ ದೊಡ್ಡ ಅವಕಾಶ ಮಾಡಿ ಕೊಟ್ಟಿತು. ಭ್ರಮನಿರಸನಗೊಂಡ ನಾಗರಿಕರ ಜೊತೆ ನಿಂತ ದಿಸ್ಸನಾಯಕೆ,  ಸಾಮಾಜಿಕ ನ್ಯಾಯ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಟ ಕೈಗೊಂಡಿದ್ದರು. ಅವೆಲ್ಲವೂ, ಈ ಚುನಾವಣೆಯಲ್ಲಿ ಮತಗಳಾಗಿ ಪರಿವರ್ತನೆಗೊಂಡಂತಿದೆ.

ಇದನ್ನೂ ಓದಿ : ಜಮ್ಮು ಕಾಶ್ಮೀರ | ಅತಂತ್ರ ವಿಧಾನಸಭೆ ತಪ್ಪಿಸಲು ಕಾಂಗ್ರೆಸ್ ಜೊತೆ ಮೈತ್ರಿ: ಒಮರ್ ಅಬ್ದುಲ್ಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...