Homeಮುಖಪುಟಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಆಯ್ಕೆ

ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಆಯ್ಕೆ

- Advertisement -
- Advertisement -

ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಭಾನುವಾರ (ಸೆ.22) ಆಯ್ಕೆಯಾಗಿದ್ದಾರೆ.

ನ್ಯಾ‍‍ಷನಲ್‌ ಪೀಪಲ್ಸ್ ಪವರ್ (ಎನ್‌ಪಿಪಿ) ಒಕ್ಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದಿಸ್ಸನಾಯಕೆ ಅವರು, 57,40,179 ಅಥವಾ 42.3% ಮತಗಳನ್ನು ಪಡೆದ್ದಾರೆ. ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಅವರು 45,30,902 ಅಥವಾ 32.8% ಮತಗಳ ಮೂಲಕ ಎರಡನೇ ಸ್ಥಾನ ಪಡೆದಿದ್ದಾರೆ.

ದೇಶದ ಆರ್ಥಿಕತೆ ಕುಸಿದ ನಂತರ, ಎರಡು ವರ್ಷಗಳ ಹಿಂದೆ ಅಧಿಕಾರ ವಹಿಸಿಕೊಂಡ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಶೇ.20ಕ್ಕಿಂತ ಕಡಿಮೆ ಮತಗಳನ್ನು ಗಳಿಸಿ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

ನೂತನ ಅಧ್ಯಕ್ಷರ ಪ್ರಮಾಣವಚನಕ್ಕೂ ಮುನ್ನ, ಇಂದು (ಸೆ.23) ಪ್ರಧಾನಿ ದಿನೇಶ್ ಗುಣವರ್ಧನಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ಭಾನುವಾರ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಕೊನೆಗೊಂಡಾಗ ಇಬ್ಬರು ಪ್ರಮುಖ ಅಭ್ಯರ್ಥಿಗಳಲ್ಲಿ ಯಾರೂ ಅಗತ್ಯವಿರುವ ಶೇ.50ರಷ್ಟು ಮತಗಳನ್ನು ಪಡೆದಿರಲಿಲ್ಲ. ಹಾಗಾಗಿ, ಎರಡನೇ ಸುತ್ತಿನ ಮತ ಎಣಿಕೆ ನಡೆಸಿ, ದಿಸ್ಸನಾಯಕೆ ಅವರ ಗೆಲುವನ್ನು ಘೋಷಿಸಲಾಯಿತು ಎಂದು ವರದಿಗಳು ಹೇಳಿವೆ.

ಶ್ರೀಲಂಕಾದ ಚುನಾವಣಾ ವ್ಯವಸ್ಥೆಯ ಅಡಿಯಲ್ಲಿ, ಮತದಾರರು ಮೂರು ಪ್ರಾಶಸ್ತ್ಯದ ಮತಗಳನ್ನು ಹಾಕುತ್ತಾರೆ. ಮೊದಲ ಎಣಿಕೆಯಲ್ಲಿ ಯಾವುದೇ ಅಭ್ಯರ್ಥಿಯು 50% ಮತಗಳನ್ನು ಗಳಿಸದಿದ್ದಲ್ಲಿ, ಅಗ್ರ ಎರಡು ಅಭ್ಯರ್ಥಿಗಳ ನಡುವೆ ಎರಡನೇ ಸುತ್ತಿನ ಎಣಿಕೆಯನ್ನು ನಡೆಸಲಾಗುತ್ತದೆ.

ಶನಿವಾರ (ಸೆ.21) ನಡೆದ ಚುನಾವಣೆಯಲ್ಲಿ ಶೇ.75ರಷ್ಟು ಮತದಾನವಾಗಿತ್ತು.

ತನ್ನ ಅಭೂತಪೂರ್ವ ಗೆಲುವಿನ ಕುರಿತು ಪ್ರತಿಕ್ರಿಯಿಸಿರುವ ದಿಸ್ಸನಾಯಕೆ ಅವರು “ಈ ಸಾಧನೆಯು ಯಾವುದೇ ಒಬ್ಬ ವ್ಯಕ್ತಿಯ ಕೆಲಸದ ಫಲಿತಾಂಶವಲ್ಲ. ಇದು ಲಕ್ಷಾಂತರ ಜನರ ಸಾಮೂಹಿಕ ಪ್ರಯತ್ನ. ನಿಮ್ಮ ಬದ್ಧತೆ ನಮ್ಮನ್ನು ಇಲ್ಲಿಯವರೆಗೆ ತಂದಿದೆ. ಅದಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ. ಈ ಗೆಲುವು ನಮ್ಮೆಲ್ಲರದ್ದು” ಎಂದು ಹೇಳಿದ್ದಾರೆ.

ವಿಡಿಯೋ ಹೇಳಿಕೆಯಲ್ಲಿ ನಿರ್ಗಮಿತ ಅಧ್ಯಕ್ಷ ವಿಕ್ರಮಸಿಂಘೆ ಅವರು ದಿಸ್ಸನಾಯಕೆ ಅವರನ್ನು ಅಭಿನಂದಿಸಿದ್ದು, ದೇಶದ ಆರ್ಥಿಕತೆಯನ್ನು ಅಭಿವೃದ್ದಿಪಡಿಸುವ ಪ್ರಯತ್ನಗಳನ್ನು ಅವರು ಮುಂದುವರಿಸುವ ಭರವಸೆ ವ್ಯಕ್ತಪಡಿಸಿದ್ದಾರೆ.

ದಿಸ್ಸನಾಯಕೆ ಯಾರು? 

ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಅವರ ಪಕ್ಷವು ಶ್ರೀಲಂಕಾ ಸಂಸತ್‌ನಲ್ಲಿ ಮೂರು ಸ್ಥಾನಗಳನ್ನು ಹೊಂದಿದೆ. ದಿಸ್ಸನಾಯಕೆ ಅವರು ನ್ಯಾ‍‍ಷನಲ್‌ ಪೀಪಲ್ಸ್ ಪವರ್ (ಎನ್‌ಪಿಪಿ) ಒಕ್ಕೂಟದ ಅಭ್ಯರ್ಥಿಯಾಗಿ ಮಾರ್ಕ್ಸ್‌ವಾದಿ ಜನತಾ ವಿಮುಕ್ತಿ ಪೆರೆಮುನಾ (ಜೆವಿಪಿ) ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿದ್ದರು.

ದಿಸ್ಸನಾಯಕೆ ಅವರ ಪಕ್ಷ ಸರ್ಕಾರದ ಜನರ ವಿರೋಧಿ ತೆರಿಗೆ ಮತ್ತು ಆರ್ಥಿಕ ನೀತಿಗಳ ವಿರುದ್ಧ ಹೋರಾಟ ನಡೆಸಿ ಶ್ರೀಲಂಕಾ ಜನತೆಯ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ.

2022ರಲ್ಲಿ ಶ್ರೀಲಂಕಾದಲ್ಲಿ ತೀವ್ರ ಅರ್ಥಿಕ ಬಿಕ್ಕಟ್ಟು ಉಂಟಾಗಿ ಹಣದುಬ್ಬರ ಗಗನಕ್ಕೇರಿತ್ತು. ಜನರಿಗೆ ಅಗತ್ಯ ವಸ್ತುಗಳ ಕೊರತೆ ಉಂಟಾಗಿ ಪರದಾಡುವಂತಾಗಿತ್ತು. ಆಗ ಸರ್ಕಾರದ ವಿರುದ್ದ ಹೋರಾಟ ರೂಪಿಸಿದ್ದರ ಹಿಂದೆ ದಿಸ್ಸನಾಯಕೆ ಅವರ ಪಾತ್ರ ದೊಡ್ಡದಿತ್ತು. ಅವರು ನೇರವಾಗಿ ಹೋರಾಟದ ನೇತೃತ್ವದ ವಹಿಸದಿದ್ದರೂ, ಜನರು ಹೋರಾಟ ಕೈಗೊಂಡಿದ್ದರ ಹಿಂದೆ ಅವರ ಪ್ರೇರೇಪಣೆಯಿತ್ತು ಎಂದು ವರದಿಗಳು ಹೇಳಿವೆ.

ರಾಜಪಕ್ಸೆ ಅವರ ರಾಜೀನಾಮೆಯ ನಂತರ ಉಂಟಾದ ನಾಯಕತ್ವದ ಕೊರತೆಯು ದಿಸ್ಸನಾಯಕೆಗೆ ಮತ್ತು ಅವರ ಪಕ್ಷಕ್ಕೆ ದೊಡ್ಡ ಅವಕಾಶ ಮಾಡಿ ಕೊಟ್ಟಿತು. ಭ್ರಮನಿರಸನಗೊಂಡ ನಾಗರಿಕರ ಜೊತೆ ನಿಂತ ದಿಸ್ಸನಾಯಕೆ,  ಸಾಮಾಜಿಕ ನ್ಯಾಯ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಟ ಕೈಗೊಂಡಿದ್ದರು. ಅವೆಲ್ಲವೂ, ಈ ಚುನಾವಣೆಯಲ್ಲಿ ಮತಗಳಾಗಿ ಪರಿವರ್ತನೆಗೊಂಡಂತಿದೆ.

ಇದನ್ನೂ ಓದಿ : ಜಮ್ಮು ಕಾಶ್ಮೀರ | ಅತಂತ್ರ ವಿಧಾನಸಭೆ ತಪ್ಪಿಸಲು ಕಾಂಗ್ರೆಸ್ ಜೊತೆ ಮೈತ್ರಿ: ಒಮರ್ ಅಬ್ದುಲ್ಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...