Homeರಂಜನೆಕ್ರೀಡೆಪದ್ಮವಿಭೂಷಣಕ್ಕೆ ಶಿಫಾರಸು ಮಾಡಿದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಮೇರಿ ಕೋಮ್..

ಪದ್ಮವಿಭೂಷಣಕ್ಕೆ ಶಿಫಾರಸು ಮಾಡಿದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಮೇರಿ ಕೋಮ್..

ಪಿ.ವಿ ಸಿಂಧು ಪದ್ಮಭೂಷಣಕ್ಕೆ ನಾಮನಿರ್ದೇಶನಗೊಂಡಿದ್ದಾರೆ. ಪದ್ಮಶ್ರೀ ಪ್ರಶಸ್ತಿಗಳಿಗಾಗಿ ಮಹಿಳೆಯರನ್ನೇ ಕ್ರೀಡಾ ಸಚಿವಾಲಯವು ಶಿಫಾರಸು ಮಾಡಿದೆ.

- Advertisement -
- Advertisement -

ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣ ಪ್ರಶಸ್ತಿಗೆ ಭಾರತೀಯ ಮಹಿಳಾ ಕ್ರೀಡಾಪಟುವನ್ನು ಮೊದಲ ಬಾರಿಗೆ ಶಿಫಾರಸು ಮಾಡಲಾಗಿದೆ. ಕ್ರೀಡಾ ಸಚಿವಾಲಯವು ಆರು ಬಾರಿ ವಿಶ್ವ ಚಾಂಪಿಯನ್ ಆದ ಎಂ.ಸಿ ಮೇರಿ ಕೋಮ್ ಅವರನ್ನು ಈ ಗೌರವಕ್ಕಾಗಿ ಹೆಸರಿಸಿದೆ.

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಪಿ.ವಿ ಸಿಂಧು ಅವರು ಭಾರತದ ಮೂರನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಭೂಷಣಕ್ಕೆ ನಾಮನಿರ್ದೇಶನಗೊಂಡಿದ್ದಾರೆ.

ಪದ್ಮಶ್ರೀ ಪ್ರಶಸ್ತಿಗಳಿಗಾಗಿ ಕ್ರೀಡಾ ಸಚಿವಾಲಯದ ಮಾಡಿರುವ ಶಿಫಾರಸುಗಳಲ್ಲಿ ಎಲ್ಲರೂ ಮಹಿಳೆಯರೇ ಆಗಿದ್ದಾರೆ. ಅವರಲ್ಲಿ ಕುಸ್ತಿಪಟು ವಿನೇಶ್ ಫೋಗಾಟ್, ಟೇಬಲ್ ಟೆನಿಸ್ ಆಟಗಾರ್ತಿ ಮಾನಿಕಾ ಬಾತ್ರಾ, ಟ್ವೆಂಟಿ -20 ಅಂತಾರಾಷ್ಟ್ರೀಯ ಕ್ರಿಕೆಟ್ ನಾಯಕಿ ಹರ್ಮನ್‌ಪ್ರೀತ್ ಕೌರ್, ಹಾಕಿ ನಾಯಕಿ ರಾಣಿ ರಾಂಪಾಲ್, ಮಾಜಿ ಶೂಟರ್ ಸುಮಾ ಶಿರೂರ್ ಮತ್ತು ಪರ್ವತಾರೋಹಿಗಳಾದ ತಾಶಿ ಮತ್ತು ನುಂಗ್ಶಿ ಮಲಿಕ್ ಸೇರಿದ್ದಾರೆ ಎಂದು ವರದಿ ಹೇಳಿದೆ.

ರಾಜ್ಯಸಭಾ ಸದಸ್ಯೆ ಮೇರಿ ಕೋಮ್‌ಗೆ ಈಗಾಗಲೇ 2013 ರಲ್ಲಿ ಪದ್ಮಭೂಷಣ್ ಮತ್ತು 2006 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಜೊತೆಗೆ ಪದ್ಮವಿಭೂಷಣ ಪಡೆದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚೆಸ್ ಶ್ರೇಷ್ಠ ವಿಶ್ವನಾಥನ್ ಆನಂದ್ (2007), ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ (2008) ಮತ್ತು ಪರ್ವತಾರೋಹಿ ಸರ್ ಎಡ್ಮಂಡ್ ಹಿಲರಿ (2008 ರಲ್ಲಿ ಮರಣೋತ್ತರವಾಗಿ) ಈ ಪ್ರಶಸ್ತಿ ಪಡೆದ ಇತರ ಕ್ರೀಡಾಪಟುಗಳಾಗಿದ್ದಾರೆ.

ಮತ್ತೊಂದೆಡೆ, ಸಿಂಧು 2015 ರಲ್ಲಿ ಪದ್ಮಶ್ರೀ ಪಡೆದ ನಂತರ ಈ ಹಿಂದೆ ಪದ್ಮಭೂಷಣಕ್ಕೆ ಶಿಫಾರಸು ಮಾಡಲಾಗಿತ್ತು, ಆದರೆ ಆಯ್ಕೆಯಾಗಿರಲಿಲ್ಲ. ಆದಾಗ್ಯೂ, ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ನಂತರ, ಅವರನ್ನು ಮತ್ತೆ ಶಿಫಾರಸು ಮಾಡಲಾಗಿದೆ.

ಶಿಫಾರಸುಗಳನ್ನು ಪದ್ಮಾ ಪ್ರಶಸ್ತಿ ಸಮಿತಿಗೆ ಕಳುಹಿಸಲಾಗಿದ್ದು, ಮುಂದಿನ ವರ್ಷದ ಆರಂಭದಲ್ಲಿ ಗಣರಾಜ್ಯೋತ್ಸವದ ಮುನ್ನಾದಿನದಂದು ಆಯ್ದ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಪ್ರಕಟಿಸಲಾಗುವುದು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...