Homeಕರ್ನಾಟಕ‘ಮಸ್ಜಿದ್‌‌ ಝೀನತ್‌ ಭಕ್ಷ್‌’: ಕರ್ನಾಟಕದ ಅತ್ಯಂತ ಪುರಾತನ ಮಸೀದಿಯನ್ನು ದೇವಸ್ಥಾನ ಎಂದು ಪ್ರತಿಪಾದಿಸಿ ವಿಡಿಯೊ ವೈರಲ್‌‌...

‘ಮಸ್ಜಿದ್‌‌ ಝೀನತ್‌ ಭಕ್ಷ್‌’: ಕರ್ನಾಟಕದ ಅತ್ಯಂತ ಪುರಾತನ ಮಸೀದಿಯನ್ನು ದೇವಸ್ಥಾನ ಎಂದು ಪ್ರತಿಪಾದಿಸಿ ವಿಡಿಯೊ ವೈರಲ್‌‌ ಮಾಡಿರುವ ದುಷ್ಕರ್ಮಿಗಳು

- Advertisement -
- Advertisement -

ಕರಾವಳಿ ನಗರವಾದ ಮಂಗಳೂರಿನಲ್ಲಿ ಮಸೀದಿಯಾಗಿ ಪರಿವರ್ತನೆಯಾಗಿರುವ ಪುರಾತನ ದೇವಾಲಯದ ದೃಶ್ಯಗಳು ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹಲವಾರು ಬಿಜೆಪಿಯನ್ನು ಬೆಂಬಲಿಸುವ ಬಲಪಂಥೀಯ ವ್ಯಕ್ತಿಗಳು ಈ ವಿಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ.

ಝೀನತ್‌ ಭಕ್ಷ್‌ ಮಸೀದಿಯ ಬಗ್ಗೆಗಿನ ಸುಳ್ಳು ಪೋಸ್ಟ್‌‌

ವಿಡಿಯೊದಲ್ಲಿ, ಮಸೀದಿಯಲ್ಲಿರುವ ಕೆರೆ, ಮಸೀದಿಯ ಸುಂದರವಾದ ಕೆತ್ತನೆಗಳು, ಮಸೀದಿಯ ರಚನೆಗಳನ್ನು ಕಾಣಬಹುದಾಗಿದೆ.


ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಯಾಕ್ಟ್‌ಚೆಕ್:

ವಿಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದರೆ, ವೀಡಿಯೊದ ಮೇಲಿನ ಎಡ ಭಾಗದಲ್ಲಿ “Thousands  shades of India” ಎಂಬ ಸಾಲಿನ ವಾಟರ್‌ಮಾರ್ಕ್ ಅನ್ನು ನೋಡಬಹುದು. ಈ ಕೀವರ್ಡ್‌ಗಳನ್ನು ಬಳಸಿಕೊಂಡು ವೀಡಿಯೊವನ್ನು ಹುಡುಕಿದಾಗ, ಇದೇ ರೀತಿಯ ದೃಶ್ಯಗಳನ್ನು ಹೊಂದಿರುವ ವಿಡಿಯೊವನ್ನು 20 ಡಿಸೆಂಬರ್ 2021 ರಂದು ‘ದಿ ಥೌಸಂಡ್ ಶೇಡ್ಸ್ ಆಫ್ ಇಂಡಿಯಾ’ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿರುವುದು ಕಂಡುಬಂದಿದೆ.

ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ಅವರು ಅದನ್ನು ಮಂಗಳೂರು ಬಂದರು ಪ್ರದೇಶದಲ್ಲಿ ಇರುವ ಪುರಾತನ ಝೀನತ್ ಬಕ್ಷ್ ಮಸೀದಿಯ ವಿಡಿಯೊ ಎಂದು ಉಲ್ಲೇಖಿಸಿದ್ದಾರೆ. ಇದನ್ನು ಕರ್ನಾಟಕದದಲ್ಲಿ ನಿರ್ಮಿಸಲಾದ ಮೂರನೇ ಅತ್ಯಂತ ಹಳೆಯ ಮಸೀದಿ ಎಂದು ಇತಿಹಾಸ ಹೇಳುತ್ತದೆ.

ಜೀನತ್ ಬಕ್ಷ್ ಮಸೀದಿಯ ಇತಿಹಾಸವು ‘ಕರ್ನಾಟಕ ಪ್ರವಾಸೋದ್ಯಮ’ ವೆಬ್‌ಸೈಟ್ ಮತ್ತು ಝೀನತ್ ಬಕ್ಷ್ ಮಸೀದಿ ಫೇಸ್‌ಬುಕ್ ಪೇಜ್‍ನಲ್ಲಿ ಲಭ್ಯವಿದೆ. ‘ಬೆಲಿಯೊ ಪಲ್ಲಿ’ ಅಥವಾ ‘ಝೀನತ್‌‌ ಭಕ್ಷ್‌ ಜಮ್ಮಾ ಮಸೀದಿ’ ಎಂದೂ ಕರೆಯಲ್ಪಡುವ ಮಸೀದಿಯನ್ನು ಅರಬ್ ವ್ಯಾಪಾರಿಗಳು, ಕಿತ್ ಮತ್ತು ಸಹಬಾಸ್ (ಪ್ರವಾದಿ ಮೊಹಮ್ಮದ್ ಅವರ ಸಹಚರರು) ಸ್ಥಾಪಿಸಿದರು ಎಂದು ನಂಬಲಾಗಿದೆ.

ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

ಝೀನತ್ ಬಕ್ಷ್ ಮಸೀದಿಯು ಸಂಪೂರ್ಣ ಭಾರತೀಯ ವಾಸ್ತುಶಿಲ್ಪದ ಶೈಲಿಯಿಂದಾಗಿ ಎಲ್ಲಾ ಮಸೀದಿಗಳನ್ನು ಮೀರಿಸುತ್ತದೆ. ಕ್ರಿಸ್ತ ಶಕ 7 ನೇ ಶತಮಾನದ ಅವಧಿಯಲ್ಲಿ, ಅರಬ್ ಮುಸ್ಲಿಂ ವ್ಯಾಪಾರಿಗಳು ಸ್ಥಳೀಯ ಜನಸಂಖ್ಯೆ ಮತ್ತು ಪಶ್ಚಿಮ ಕರಾವಳಿಯ ಆಡಳಿತಗಾರರೊಂದಿಗೆ ಅತ್ಯಂತ ಸೌಹಾರ್ದಯುತ ಸಂಬಂಧವನ್ನು ಉಳಿಸಿಕೊಂಡಿದ್ದರು.

ವಿವರಗಳ ಪ್ರಕಾರ, ಮಲಬಾರ್‌ನ ರಾಜಾ ಚೆರುಮಾನ್ ಪೆರುಮಾಳ್ ಅರಬ್ ವ್ಯಾಪಾರಿಗಳಿಗೆ ಸೂಕ್ತವಾದ ವಸತಿ ಮತ್ತು ವ್ಯಾಪಾರ ಮಾಡುವ ಸ್ಥಳವನ್ನು ನೀಡಿದ್ದರು ಮತ್ತು ಅವರ ಮಸೀದಿಗಳನ್ನು ನಿರ್ಮಿಸಲು ಭೂಮಿಯನ್ನು ಸಹ ಒದಗಿಸಿದ್ದರು.

ನಂತರ, 17 ನೇ ಶತಮಾನದಲ್ಲಿ, ಟಿಪ್ಪು ಸುಲ್ತಾನ್ ಈ ಮಸೀದಿಯನ್ನು ಸುಂದರವಾದ ಮರದ ಕೆತ್ತನೆಗಳೊಂದಿಗೆ ನವೀಕರಿಸಿದ್ದರು. ನಂತರ ತನ್ನ ಮಗಳ ಹೆಸರನ್ನು ಮಸೀದಿಗೆ ಇಟ್ಟು ಝೀನತ್ ಬಕ್ಷ್ ಎಂದು ಹೆಸರಿಸಿದ್ದರು. ಮಸೀದಿ ಜೀನತ್ ಬಕ್ಷ್ ರೋಸ್‌ವುಡ್ ಮತ್ತು ತೇಗದ ಮರದಗಳಿಂದ ವಿನ್ಯಾಸಗೊಳಿಸಲಾಗಿದೆ. ಉತ್ಕೃಷ್ಟ ಬಗೆಯ ಗೋಡೆಗಳು, ಬಾಗಿಲುಗಳು ಮತ್ತು ಮಹಡಿಗಳನ್ನು ಒಳಗೊಂಡಿದೆ. ಬಂದರ್‌ನಲ್ಲಿರುವ ಜೀನತ್ ಬಕ್ಷ್ ಮಸೀದಿಯನ್ನು ಹಿಂದೂ ದೇವಾಲಯವನ್ನು ಕೆಡವಿ ನಿರ್ಮಿಸಲಾಗಿದೆ ಎಂದು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ಒಟ್ಟಾರೆಯಾಗಿ ಹೇಳುವುದಾದರೆ, ರಾಜ್ಯದ ಮಂಗಳೂರಿನ ಜೀನತ್ ಬಕ್ಷ್ ಮಸೀದಿಯು ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಲಾಗುತ್ತಿರುವ ಪೋಸ್ಟ್‌‌ನಲ್ಲಿ ಮಾಡಿರುವ ಪ್ರತಿಪಾದನೆ ಸುಳ್ಳಾಗಿದೆ. ಕೃಪೆ:ಫ್ಯಾಕ್ಟ್‌ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...