Homeಕರ್ನಾಟಕಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

- Advertisement -
- Advertisement -

ಮಸ್ಕಿ ಎಂಬ ಪುಟ್ಟ ತಾಲೂಕಿನ ಮ್ಯಾಲ ಐದಾರು ನೀರಾವರಿ ಯೋಜನೆ ಹೇರಿಬಿಟ್ಟಿದೆ ನಮ್ಮ ಸರ್ಕಾರ! ತಮ್ಮನ್ನು ಅಧಿಕಾರಕ್ಕೆ ತಂದರು ಎಂಬ ಏಕೈಕ ಕಾರಣಕ್ಕೆ ಇಂತಹ ಕ್ಷೇತ್ರಗಳಿಗೆ ಸಿಕ್ಕಾಪಟ್ಟೆ ಯೋಜನೆ ಘೋಷಣೆ ಮಾಡಿಬಿಟ್ಟಿದೆ ಯಡಿಯೂರಪ್ಪ ಸರ್ಕಾರ!

ನಂಜುಂಡಪ್ಪ ವರದಿಯ ಅತಿ ಹಿಂದುಳಿದ ತಾಲೂಕುಗಳ ಪಟ್ಟಿಯಲ್ಲಿ ಈ ಮಸ್ಕಿಯೂ ಒಂದು. ಇಲ್ಲಿನ ತಳ ಸಮುದಾಯದ ಜನಕ್ಕೆ ಭೂಮಿ ಇಲ್ಲ. ಅವರೆಲ್ಲ ಬೆಂಗಳೂರಿಗೋ, ಮಂಗಳೂರಿಗೋ ಹೋಗಿ ಬೆವರು ಹರಿಸುತ್ತಾರೆ, ಹೊಟ್ಟೆ ತುಂಬಿಸಿಕೊಳ್ಳಲು.

ಮೀಸಲು ಕ್ಷೇತ್ರ ಮಸ್ಕಿ ಎರಡು ಜಿಲ್ಲೆಗಳಲ್ಲಿ ಹರಿದು ಹಂಚಿ ಹೋಗಿದೆ. ಕೊಪ್ಪಳ ಮತ್ತು ರಾಯಚೂರಿನ ನೂರಾರು ಗ್ರಾಮಗಳನ್ನು ಸೇರಿಸಿ ಈ ಮಸ್ಕಿ ಕ್ಷೇತ್ರ ಮಾಡಲಾಗಿದೆ. ಸಿಂಧನೂರಿನಲ್ಲಿ ತುಂಗಭದ್ರೆ ಹರಿಯುತ್ತಾಳೆ, ಆ ಭಾಗ್ಯ ಮಸ್ಕಿ ಜನರಿಗಿಲ್ಲ. ಅವರು ಈಗ ಪಕ್ಕದಲ್ಲೇ ಹಾದು ಹೋಗುವ ಕೃಷ್ಣೆಯ ನೀರು ಕೇಳುತ್ತಿದ್ದಾರೆ. ಮುಖ್ಯವಾಹಿನಿ ಮಾಧ್ಯಮಕ್ಕೆ ಇದು ಒಂದು ಇಶ್ಯೂ ಆಗಲೇ ಇಲ್ಲ!

ಮಸ್ಕಿ ಮ್ಯಾಲ ದೊಡ್ಡ ಭಾರ

107 ಹಳ್ಳಿಗಳು ಅದರಲ್ಲೂ ಮುಖ್ಯವಾಗಿ 58 ಹಳ್ಳಿಗಳು ತಮ್ಮ ಭೂಮಿಗೆ ನೀರು ಬೇಕು ಅನ್ನುತ್ತಿವೆ. ಆದರೆ ಕೃಷ್ಣಾದಿಂದ ನೀರು ಕೊಡಲು ಆಗದು ಎಂದು ಅಧಿಕಾರಿಗಳು ಸಲ್ಲಿಸಿದ ವರದಿಯನ್ನೇ ಪ್ರತಾಪಗೌಡ ಪಾಟೀಲರು ಸತ್ಯ ಎಂದು ನಂಬಿದ್ದಾರೆ.

ಈಗ ಏನಾಗಿದೆ ಅಂದರೆ, ಮಸ್ಕಿಯ ಮೇಲೆ ಹಲವು ನೀರಾವರಿ ಪ್ರಾಜೆಕ್ಟ್ ಹೇರಲಾಗಿದೆ. ಇವೆಲ್ಲ ಕಾಟಾಚಾರದ ಯೋಜನೆಗಳು. ಬಜೆಟ್ ಅಲೊಕೇಷನ್ ಇಲ್ಲವೇ ಇಲ್ಲ! ಕೃಷ್ಣಾ ನದಿಯಿಂದ 17 ಕೆರೆ ತುಂಬಿಸುವ ಯೊಜನೆಯಲ್ಲಿ ಈಗ 87 ಕೋಟಿ ರೂ ಬಿಡುಗಡೆ ಆಗಿದೆ. ಅದು ಕಂಟ್ರಾಕ್ಟರ್‌ಗಳ ಪಾಲಾಗಿದೆ ಎಂಬ ದೊಡ್ಡ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

’58 ಹಳ್ಳಿಯ ಜನ 100 ದಿನದಿಂದ ಪ್ರತಿಭಟನೆ ಮಾಡ್ತಾ ತಮ್ಮ ಭೂಮಿಗೆ ನೀರು ಬೇಕು ಅಂತಾರಲ್ಲರಿ?’ ಎಂದು ನಾವು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡರನ್ನು ಕೇಳಿದೆವು. ‘’ಹಂಗೆಲ್ಲ ನೀರ್ ಕೋಡೋಕ್ ಆಗಲ್ಲ. ಅದೊಂದು ಅವೈಜ್ಞಾನಿಕ ಯೋಜನಾ ಅದ.. ನಾವ್ ಜನ್ರಿಗೆ ತಿಳವಳಿಕೆ ಕೊಟ್ಟೀವಿ. ಅಲ್ಲಿ ಯಾರೋ ಸ್ವಲ್ಪ ಮಂದಿ ಸ್ಟ್ರೈಕ್ ಮಾಡಾಕ ಹತ್ಯಾರ’ ಎಂದರು.
ಅಲ್ಲ ನೀವು ಪರ್ಯಾಯದ ಬಗ್ಗೆ ವಿಚಾರನಾ ಮಾಡಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರತಾಪಗೌಡರು, ನಂದವಾಡಗಿ ನೀರಾವರಿ ಯೋಜನಾ ಅದ, ಕೋಟೆಕಲ್ ಬಸವಣ್ಣ ಏತ ನೀರಾವರಿ ಯೋಜನಾನೂ ಐತಿ, 500 ಕೋಟಿ ರೂ ಕೊಟ್ಟು ಕೆರೆ ತುಂಬಿಸ್ತಾ ಇದ್ದೀವಿ’ ಎಂದರು.

ಮಸ್ಕಿಯಲ್ಲಿ ಗುಳೆ ಸಮಸ್ಯೆ ವ್ಯಾಪಕವಾಗಿದೆ. ಇಲ್ಲಿನ ಎಸ್‌ಸಿ/ಎಸ್‌ಟಿ ಸಮುದಾಯದ ಜನರು ಕೂಲಿಗಾಗಿ ಬೆಂಗಳೂರು, ಮಂಗಳೂರು, ಗೋವಾ ಕಡೆ ವಲಸೆ ಹೋಗುವುದು ನಿತ್ಯದ ಕತೆಯೇ ಆಗಿದೆ.

ಆದರೆ ಗೆಜೆಟ್‌ನಲ್ಲಿ ಮಸ್ಕಿ ಭರಪೂರ ನೀರಾವರಿ ಆಗಿಬಿಟ್ಟಿದೆ.. ಅದನ್ನೆ ಪ್ರತಾಪಗೌಡ ಪಾಟೀಲರು ನಂಬಿದ್ದಾರೆ. ಜನ ಏನು ನಂಬುತ್ತಾರೆ ಎಂಬುವುದು ಚುನಾವಣಾ ಫಲಿತಾಂಶದಲ್ಲಿ ಗೋಚರವಾಗಲಿದೆ.

ಬಸವಕಲ್ಯಾಣ: ಆಟ ‘ಟಫ್’ ಇದೆ, ಬಟ್ ನಾರಾಯಣರಾವ್ ಸರಳತೆ ಚಾಲ್ತಿಗೆ ಬಂದಿದೆ!

ಆರಾಮಾಗಿ ಎತ್ತಿಕೊಳ್ಳಬಹುದಾದ ಈ ಕ್ಷೇತ್ರದಲ್ಲಿ ಬಿಜೆಪಿ ಸಿಕ್ಕಾಪಟ್ಟೆ ರೊಕ್ಕ ಹರಿಸಿಯೂ ನಿಟ್ಟುಸಿರು ಬಿಡ್ತಾ ಇದೆ, ಅದಕ್ಕೆ ಕಾರಣ ಮೃತ ಕಾಂಗ್ರಸ್ ಶಾಸಕ ನಾರಾಯಣರಾವ್ ಸರಳತೆ!
ಸದನದಲ್ಲಿ ಸಿಕ್ಕ ಒಂದೇ ಅವಕಾಶದಿಂದ ರೊಕ್ಕದ ರಾಜಕೀಯ, ಬಾಂಬೇ ಗಮ್ಮತ್ತು ಎಲ್ಲವನ್ನೂ ಬಟಾಬಯಲು ಮಾಡಿದ ನಾರಾಯಣರಾವ್ ಅವರ ಪತ್ನಿ ಈಗ ಕಾಂಗ್ರೆಸ್ ಅಭ್ಯರ್ಥಿ.

ಇದನ್ನೂ ಓದಿ: ಲಿಂಗಾಯಿತರು ನನಗೆ ಮತ ಕೊಡದಿದ್ದರೂ ಪರವಾಗಿಲ್ಲ, ಬಸವ ತತ್ವದ ಮೇಲೆ ನಡೆದರೆ ಸಾಕು: ಶಾಸಕ ಬಿ.ನಾರಾಯಣರಾವ್ 

ಬಿಜೆಪಿಯಿಂದ ನಿಂತಿರುವ ಶರಣು ಸದಲಗ ಕಲಬುರ್ಗಿ ಜಿಲ್ಲೆಯ ಮನುಷ್ಯ ಆಗಿರೋ ಕಾರಣ ಬೀದರ್‌ನ ಬಸವಕಲ್ಯಾಣದಲ್ಲಿ ಈಗ ಒಂದು ಅಪಸ್ವರ ಸಹಜವಾಗಿಯೇ ಎದ್ದಿದೆ.
ನಾರಾಯಣರಾವ್ ಸದನದಲ್ಲಿ ಮಾಡಿದ ಕೊನೆಯ ಭಾಷಣ ಈಗ ಫಲಿತಾಂಶವನ್ನು ನಿರ್ಧರಿಸುವ ಮಟ್ಟಕ್ಕೆ ಬಂದಿದೆ. ‘ಸಿದ್ರಾಮಯ್ಯ ಸಾಹೇಬ್ರು ಟಿಕೇಟ್ ಕೊಟ್ರು’ ಎಂಬ ನಾರಾಯಣರಾವ್ ಮಾತು ಈಗ ಜನಪ್ರಿಯವಾಗಿದ್ದು, ಅವರ ‘ಸಿದ್ರಾಮಯ್ಯ’ ——— ಕೂಡ ಈ ಕ್ಷೇತ್ರವನ್ನು ಸೀರಿಯಸ್ ಆಗಿ ಪರಿಗಣಿಸಿದ್ದಾರೆ ಎನ್ನಲಾಗಿದೆ.

ಹಾಗೆಯೇ ಬಿಜೆಪಿ ಸಂಸದ ಭಗವಂತ ಖೂಬಾರವರ ಪುತ್ರ ಮಲ್ಲಿಕಾರರ್ಜುನ ಖೂಬಾ ಟಿಕೆಟ್ ಸಿಗದೇ ಸಿಕ್ಕಾಪಟ್ಟೆ ಸಿಟ್ಟಾಗಿದ್ದಾರೆ. ನಾಳೆ ನಡೆಯುವ ಪ್ರೆಸ್‌ಮೀಟ್‌ನಲ್ಲಿ ಖೂಬಾ ತಮ್ಮ ಒಲವು ಯಾರ ಕಡೆ ಎಂದು ಘೋಷಣೆ ಮಾಡಲಿದ್ದಾರೆ.


ಇದನ್ನೂ ಓದಿ: ಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...