Homeಕರ್ನಾಟಕಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

- Advertisement -
- Advertisement -

ಮಸ್ಕಿ ಎಂಬ ಪುಟ್ಟ ತಾಲೂಕಿನ ಮ್ಯಾಲ ಐದಾರು ನೀರಾವರಿ ಯೋಜನೆ ಹೇರಿಬಿಟ್ಟಿದೆ ನಮ್ಮ ಸರ್ಕಾರ! ತಮ್ಮನ್ನು ಅಧಿಕಾರಕ್ಕೆ ತಂದರು ಎಂಬ ಏಕೈಕ ಕಾರಣಕ್ಕೆ ಇಂತಹ ಕ್ಷೇತ್ರಗಳಿಗೆ ಸಿಕ್ಕಾಪಟ್ಟೆ ಯೋಜನೆ ಘೋಷಣೆ ಮಾಡಿಬಿಟ್ಟಿದೆ ಯಡಿಯೂರಪ್ಪ ಸರ್ಕಾರ!

ನಂಜುಂಡಪ್ಪ ವರದಿಯ ಅತಿ ಹಿಂದುಳಿದ ತಾಲೂಕುಗಳ ಪಟ್ಟಿಯಲ್ಲಿ ಈ ಮಸ್ಕಿಯೂ ಒಂದು. ಇಲ್ಲಿನ ತಳ ಸಮುದಾಯದ ಜನಕ್ಕೆ ಭೂಮಿ ಇಲ್ಲ. ಅವರೆಲ್ಲ ಬೆಂಗಳೂರಿಗೋ, ಮಂಗಳೂರಿಗೋ ಹೋಗಿ ಬೆವರು ಹರಿಸುತ್ತಾರೆ, ಹೊಟ್ಟೆ ತುಂಬಿಸಿಕೊಳ್ಳಲು.

ಮೀಸಲು ಕ್ಷೇತ್ರ ಮಸ್ಕಿ ಎರಡು ಜಿಲ್ಲೆಗಳಲ್ಲಿ ಹರಿದು ಹಂಚಿ ಹೋಗಿದೆ. ಕೊಪ್ಪಳ ಮತ್ತು ರಾಯಚೂರಿನ ನೂರಾರು ಗ್ರಾಮಗಳನ್ನು ಸೇರಿಸಿ ಈ ಮಸ್ಕಿ ಕ್ಷೇತ್ರ ಮಾಡಲಾಗಿದೆ. ಸಿಂಧನೂರಿನಲ್ಲಿ ತುಂಗಭದ್ರೆ ಹರಿಯುತ್ತಾಳೆ, ಆ ಭಾಗ್ಯ ಮಸ್ಕಿ ಜನರಿಗಿಲ್ಲ. ಅವರು ಈಗ ಪಕ್ಕದಲ್ಲೇ ಹಾದು ಹೋಗುವ ಕೃಷ್ಣೆಯ ನೀರು ಕೇಳುತ್ತಿದ್ದಾರೆ. ಮುಖ್ಯವಾಹಿನಿ ಮಾಧ್ಯಮಕ್ಕೆ ಇದು ಒಂದು ಇಶ್ಯೂ ಆಗಲೇ ಇಲ್ಲ!

ಮಸ್ಕಿ ಮ್ಯಾಲ ದೊಡ್ಡ ಭಾರ

107 ಹಳ್ಳಿಗಳು ಅದರಲ್ಲೂ ಮುಖ್ಯವಾಗಿ 58 ಹಳ್ಳಿಗಳು ತಮ್ಮ ಭೂಮಿಗೆ ನೀರು ಬೇಕು ಅನ್ನುತ್ತಿವೆ. ಆದರೆ ಕೃಷ್ಣಾದಿಂದ ನೀರು ಕೊಡಲು ಆಗದು ಎಂದು ಅಧಿಕಾರಿಗಳು ಸಲ್ಲಿಸಿದ ವರದಿಯನ್ನೇ ಪ್ರತಾಪಗೌಡ ಪಾಟೀಲರು ಸತ್ಯ ಎಂದು ನಂಬಿದ್ದಾರೆ.

ಈಗ ಏನಾಗಿದೆ ಅಂದರೆ, ಮಸ್ಕಿಯ ಮೇಲೆ ಹಲವು ನೀರಾವರಿ ಪ್ರಾಜೆಕ್ಟ್ ಹೇರಲಾಗಿದೆ. ಇವೆಲ್ಲ ಕಾಟಾಚಾರದ ಯೋಜನೆಗಳು. ಬಜೆಟ್ ಅಲೊಕೇಷನ್ ಇಲ್ಲವೇ ಇಲ್ಲ! ಕೃಷ್ಣಾ ನದಿಯಿಂದ 17 ಕೆರೆ ತುಂಬಿಸುವ ಯೊಜನೆಯಲ್ಲಿ ಈಗ 87 ಕೋಟಿ ರೂ ಬಿಡುಗಡೆ ಆಗಿದೆ. ಅದು ಕಂಟ್ರಾಕ್ಟರ್‌ಗಳ ಪಾಲಾಗಿದೆ ಎಂಬ ದೊಡ್ಡ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

’58 ಹಳ್ಳಿಯ ಜನ 100 ದಿನದಿಂದ ಪ್ರತಿಭಟನೆ ಮಾಡ್ತಾ ತಮ್ಮ ಭೂಮಿಗೆ ನೀರು ಬೇಕು ಅಂತಾರಲ್ಲರಿ?’ ಎಂದು ನಾವು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡರನ್ನು ಕೇಳಿದೆವು. ‘’ಹಂಗೆಲ್ಲ ನೀರ್ ಕೋಡೋಕ್ ಆಗಲ್ಲ. ಅದೊಂದು ಅವೈಜ್ಞಾನಿಕ ಯೋಜನಾ ಅದ.. ನಾವ್ ಜನ್ರಿಗೆ ತಿಳವಳಿಕೆ ಕೊಟ್ಟೀವಿ. ಅಲ್ಲಿ ಯಾರೋ ಸ್ವಲ್ಪ ಮಂದಿ ಸ್ಟ್ರೈಕ್ ಮಾಡಾಕ ಹತ್ಯಾರ’ ಎಂದರು.
ಅಲ್ಲ ನೀವು ಪರ್ಯಾಯದ ಬಗ್ಗೆ ವಿಚಾರನಾ ಮಾಡಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರತಾಪಗೌಡರು, ನಂದವಾಡಗಿ ನೀರಾವರಿ ಯೋಜನಾ ಅದ, ಕೋಟೆಕಲ್ ಬಸವಣ್ಣ ಏತ ನೀರಾವರಿ ಯೋಜನಾನೂ ಐತಿ, 500 ಕೋಟಿ ರೂ ಕೊಟ್ಟು ಕೆರೆ ತುಂಬಿಸ್ತಾ ಇದ್ದೀವಿ’ ಎಂದರು.

ಮಸ್ಕಿಯಲ್ಲಿ ಗುಳೆ ಸಮಸ್ಯೆ ವ್ಯಾಪಕವಾಗಿದೆ. ಇಲ್ಲಿನ ಎಸ್‌ಸಿ/ಎಸ್‌ಟಿ ಸಮುದಾಯದ ಜನರು ಕೂಲಿಗಾಗಿ ಬೆಂಗಳೂರು, ಮಂಗಳೂರು, ಗೋವಾ ಕಡೆ ವಲಸೆ ಹೋಗುವುದು ನಿತ್ಯದ ಕತೆಯೇ ಆಗಿದೆ.

ಆದರೆ ಗೆಜೆಟ್‌ನಲ್ಲಿ ಮಸ್ಕಿ ಭರಪೂರ ನೀರಾವರಿ ಆಗಿಬಿಟ್ಟಿದೆ.. ಅದನ್ನೆ ಪ್ರತಾಪಗೌಡ ಪಾಟೀಲರು ನಂಬಿದ್ದಾರೆ. ಜನ ಏನು ನಂಬುತ್ತಾರೆ ಎಂಬುವುದು ಚುನಾವಣಾ ಫಲಿತಾಂಶದಲ್ಲಿ ಗೋಚರವಾಗಲಿದೆ.

ಬಸವಕಲ್ಯಾಣ: ಆಟ ‘ಟಫ್’ ಇದೆ, ಬಟ್ ನಾರಾಯಣರಾವ್ ಸರಳತೆ ಚಾಲ್ತಿಗೆ ಬಂದಿದೆ!

ಆರಾಮಾಗಿ ಎತ್ತಿಕೊಳ್ಳಬಹುದಾದ ಈ ಕ್ಷೇತ್ರದಲ್ಲಿ ಬಿಜೆಪಿ ಸಿಕ್ಕಾಪಟ್ಟೆ ರೊಕ್ಕ ಹರಿಸಿಯೂ ನಿಟ್ಟುಸಿರು ಬಿಡ್ತಾ ಇದೆ, ಅದಕ್ಕೆ ಕಾರಣ ಮೃತ ಕಾಂಗ್ರಸ್ ಶಾಸಕ ನಾರಾಯಣರಾವ್ ಸರಳತೆ!
ಸದನದಲ್ಲಿ ಸಿಕ್ಕ ಒಂದೇ ಅವಕಾಶದಿಂದ ರೊಕ್ಕದ ರಾಜಕೀಯ, ಬಾಂಬೇ ಗಮ್ಮತ್ತು ಎಲ್ಲವನ್ನೂ ಬಟಾಬಯಲು ಮಾಡಿದ ನಾರಾಯಣರಾವ್ ಅವರ ಪತ್ನಿ ಈಗ ಕಾಂಗ್ರೆಸ್ ಅಭ್ಯರ್ಥಿ.

ಇದನ್ನೂ ಓದಿ: ಲಿಂಗಾಯಿತರು ನನಗೆ ಮತ ಕೊಡದಿದ್ದರೂ ಪರವಾಗಿಲ್ಲ, ಬಸವ ತತ್ವದ ಮೇಲೆ ನಡೆದರೆ ಸಾಕು: ಶಾಸಕ ಬಿ.ನಾರಾಯಣರಾವ್ 

ಬಿಜೆಪಿಯಿಂದ ನಿಂತಿರುವ ಶರಣು ಸದಲಗ ಕಲಬುರ್ಗಿ ಜಿಲ್ಲೆಯ ಮನುಷ್ಯ ಆಗಿರೋ ಕಾರಣ ಬೀದರ್‌ನ ಬಸವಕಲ್ಯಾಣದಲ್ಲಿ ಈಗ ಒಂದು ಅಪಸ್ವರ ಸಹಜವಾಗಿಯೇ ಎದ್ದಿದೆ.
ನಾರಾಯಣರಾವ್ ಸದನದಲ್ಲಿ ಮಾಡಿದ ಕೊನೆಯ ಭಾಷಣ ಈಗ ಫಲಿತಾಂಶವನ್ನು ನಿರ್ಧರಿಸುವ ಮಟ್ಟಕ್ಕೆ ಬಂದಿದೆ. ‘ಸಿದ್ರಾಮಯ್ಯ ಸಾಹೇಬ್ರು ಟಿಕೇಟ್ ಕೊಟ್ರು’ ಎಂಬ ನಾರಾಯಣರಾವ್ ಮಾತು ಈಗ ಜನಪ್ರಿಯವಾಗಿದ್ದು, ಅವರ ‘ಸಿದ್ರಾಮಯ್ಯ’ ——— ಕೂಡ ಈ ಕ್ಷೇತ್ರವನ್ನು ಸೀರಿಯಸ್ ಆಗಿ ಪರಿಗಣಿಸಿದ್ದಾರೆ ಎನ್ನಲಾಗಿದೆ.

ಹಾಗೆಯೇ ಬಿಜೆಪಿ ಸಂಸದ ಭಗವಂತ ಖೂಬಾರವರ ಪುತ್ರ ಮಲ್ಲಿಕಾರರ್ಜುನ ಖೂಬಾ ಟಿಕೆಟ್ ಸಿಗದೇ ಸಿಕ್ಕಾಪಟ್ಟೆ ಸಿಟ್ಟಾಗಿದ್ದಾರೆ. ನಾಳೆ ನಡೆಯುವ ಪ್ರೆಸ್‌ಮೀಟ್‌ನಲ್ಲಿ ಖೂಬಾ ತಮ್ಮ ಒಲವು ಯಾರ ಕಡೆ ಎಂದು ಘೋಷಣೆ ಮಾಡಲಿದ್ದಾರೆ.


ಇದನ್ನೂ ಓದಿ: ಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...