Homeಕರ್ನಾಟಕಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

- Advertisement -
- Advertisement -

ಮಸ್ಕಿ ಎಂಬ ಪುಟ್ಟ ತಾಲೂಕಿನ ಮ್ಯಾಲ ಐದಾರು ನೀರಾವರಿ ಯೋಜನೆ ಹೇರಿಬಿಟ್ಟಿದೆ ನಮ್ಮ ಸರ್ಕಾರ! ತಮ್ಮನ್ನು ಅಧಿಕಾರಕ್ಕೆ ತಂದರು ಎಂಬ ಏಕೈಕ ಕಾರಣಕ್ಕೆ ಇಂತಹ ಕ್ಷೇತ್ರಗಳಿಗೆ ಸಿಕ್ಕಾಪಟ್ಟೆ ಯೋಜನೆ ಘೋಷಣೆ ಮಾಡಿಬಿಟ್ಟಿದೆ ಯಡಿಯೂರಪ್ಪ ಸರ್ಕಾರ!

ನಂಜುಂಡಪ್ಪ ವರದಿಯ ಅತಿ ಹಿಂದುಳಿದ ತಾಲೂಕುಗಳ ಪಟ್ಟಿಯಲ್ಲಿ ಈ ಮಸ್ಕಿಯೂ ಒಂದು. ಇಲ್ಲಿನ ತಳ ಸಮುದಾಯದ ಜನಕ್ಕೆ ಭೂಮಿ ಇಲ್ಲ. ಅವರೆಲ್ಲ ಬೆಂಗಳೂರಿಗೋ, ಮಂಗಳೂರಿಗೋ ಹೋಗಿ ಬೆವರು ಹರಿಸುತ್ತಾರೆ, ಹೊಟ್ಟೆ ತುಂಬಿಸಿಕೊಳ್ಳಲು.

ಮೀಸಲು ಕ್ಷೇತ್ರ ಮಸ್ಕಿ ಎರಡು ಜಿಲ್ಲೆಗಳಲ್ಲಿ ಹರಿದು ಹಂಚಿ ಹೋಗಿದೆ. ಕೊಪ್ಪಳ ಮತ್ತು ರಾಯಚೂರಿನ ನೂರಾರು ಗ್ರಾಮಗಳನ್ನು ಸೇರಿಸಿ ಈ ಮಸ್ಕಿ ಕ್ಷೇತ್ರ ಮಾಡಲಾಗಿದೆ. ಸಿಂಧನೂರಿನಲ್ಲಿ ತುಂಗಭದ್ರೆ ಹರಿಯುತ್ತಾಳೆ, ಆ ಭಾಗ್ಯ ಮಸ್ಕಿ ಜನರಿಗಿಲ್ಲ. ಅವರು ಈಗ ಪಕ್ಕದಲ್ಲೇ ಹಾದು ಹೋಗುವ ಕೃಷ್ಣೆಯ ನೀರು ಕೇಳುತ್ತಿದ್ದಾರೆ. ಮುಖ್ಯವಾಹಿನಿ ಮಾಧ್ಯಮಕ್ಕೆ ಇದು ಒಂದು ಇಶ್ಯೂ ಆಗಲೇ ಇಲ್ಲ!

ಮಸ್ಕಿ ಮ್ಯಾಲ ದೊಡ್ಡ ಭಾರ

107 ಹಳ್ಳಿಗಳು ಅದರಲ್ಲೂ ಮುಖ್ಯವಾಗಿ 58 ಹಳ್ಳಿಗಳು ತಮ್ಮ ಭೂಮಿಗೆ ನೀರು ಬೇಕು ಅನ್ನುತ್ತಿವೆ. ಆದರೆ ಕೃಷ್ಣಾದಿಂದ ನೀರು ಕೊಡಲು ಆಗದು ಎಂದು ಅಧಿಕಾರಿಗಳು ಸಲ್ಲಿಸಿದ ವರದಿಯನ್ನೇ ಪ್ರತಾಪಗೌಡ ಪಾಟೀಲರು ಸತ್ಯ ಎಂದು ನಂಬಿದ್ದಾರೆ.

ಈಗ ಏನಾಗಿದೆ ಅಂದರೆ, ಮಸ್ಕಿಯ ಮೇಲೆ ಹಲವು ನೀರಾವರಿ ಪ್ರಾಜೆಕ್ಟ್ ಹೇರಲಾಗಿದೆ. ಇವೆಲ್ಲ ಕಾಟಾಚಾರದ ಯೋಜನೆಗಳು. ಬಜೆಟ್ ಅಲೊಕೇಷನ್ ಇಲ್ಲವೇ ಇಲ್ಲ! ಕೃಷ್ಣಾ ನದಿಯಿಂದ 17 ಕೆರೆ ತುಂಬಿಸುವ ಯೊಜನೆಯಲ್ಲಿ ಈಗ 87 ಕೋಟಿ ರೂ ಬಿಡುಗಡೆ ಆಗಿದೆ. ಅದು ಕಂಟ್ರಾಕ್ಟರ್‌ಗಳ ಪಾಲಾಗಿದೆ ಎಂಬ ದೊಡ್ಡ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

’58 ಹಳ್ಳಿಯ ಜನ 100 ದಿನದಿಂದ ಪ್ರತಿಭಟನೆ ಮಾಡ್ತಾ ತಮ್ಮ ಭೂಮಿಗೆ ನೀರು ಬೇಕು ಅಂತಾರಲ್ಲರಿ?’ ಎಂದು ನಾವು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡರನ್ನು ಕೇಳಿದೆವು. ‘’ಹಂಗೆಲ್ಲ ನೀರ್ ಕೋಡೋಕ್ ಆಗಲ್ಲ. ಅದೊಂದು ಅವೈಜ್ಞಾನಿಕ ಯೋಜನಾ ಅದ.. ನಾವ್ ಜನ್ರಿಗೆ ತಿಳವಳಿಕೆ ಕೊಟ್ಟೀವಿ. ಅಲ್ಲಿ ಯಾರೋ ಸ್ವಲ್ಪ ಮಂದಿ ಸ್ಟ್ರೈಕ್ ಮಾಡಾಕ ಹತ್ಯಾರ’ ಎಂದರು.
ಅಲ್ಲ ನೀವು ಪರ್ಯಾಯದ ಬಗ್ಗೆ ವಿಚಾರನಾ ಮಾಡಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರತಾಪಗೌಡರು, ನಂದವಾಡಗಿ ನೀರಾವರಿ ಯೋಜನಾ ಅದ, ಕೋಟೆಕಲ್ ಬಸವಣ್ಣ ಏತ ನೀರಾವರಿ ಯೋಜನಾನೂ ಐತಿ, 500 ಕೋಟಿ ರೂ ಕೊಟ್ಟು ಕೆರೆ ತುಂಬಿಸ್ತಾ ಇದ್ದೀವಿ’ ಎಂದರು.

ಮಸ್ಕಿಯಲ್ಲಿ ಗುಳೆ ಸಮಸ್ಯೆ ವ್ಯಾಪಕವಾಗಿದೆ. ಇಲ್ಲಿನ ಎಸ್‌ಸಿ/ಎಸ್‌ಟಿ ಸಮುದಾಯದ ಜನರು ಕೂಲಿಗಾಗಿ ಬೆಂಗಳೂರು, ಮಂಗಳೂರು, ಗೋವಾ ಕಡೆ ವಲಸೆ ಹೋಗುವುದು ನಿತ್ಯದ ಕತೆಯೇ ಆಗಿದೆ.

ಆದರೆ ಗೆಜೆಟ್‌ನಲ್ಲಿ ಮಸ್ಕಿ ಭರಪೂರ ನೀರಾವರಿ ಆಗಿಬಿಟ್ಟಿದೆ.. ಅದನ್ನೆ ಪ್ರತಾಪಗೌಡ ಪಾಟೀಲರು ನಂಬಿದ್ದಾರೆ. ಜನ ಏನು ನಂಬುತ್ತಾರೆ ಎಂಬುವುದು ಚುನಾವಣಾ ಫಲಿತಾಂಶದಲ್ಲಿ ಗೋಚರವಾಗಲಿದೆ.

ಬಸವಕಲ್ಯಾಣ: ಆಟ ‘ಟಫ್’ ಇದೆ, ಬಟ್ ನಾರಾಯಣರಾವ್ ಸರಳತೆ ಚಾಲ್ತಿಗೆ ಬಂದಿದೆ!

ಆರಾಮಾಗಿ ಎತ್ತಿಕೊಳ್ಳಬಹುದಾದ ಈ ಕ್ಷೇತ್ರದಲ್ಲಿ ಬಿಜೆಪಿ ಸಿಕ್ಕಾಪಟ್ಟೆ ರೊಕ್ಕ ಹರಿಸಿಯೂ ನಿಟ್ಟುಸಿರು ಬಿಡ್ತಾ ಇದೆ, ಅದಕ್ಕೆ ಕಾರಣ ಮೃತ ಕಾಂಗ್ರಸ್ ಶಾಸಕ ನಾರಾಯಣರಾವ್ ಸರಳತೆ!
ಸದನದಲ್ಲಿ ಸಿಕ್ಕ ಒಂದೇ ಅವಕಾಶದಿಂದ ರೊಕ್ಕದ ರಾಜಕೀಯ, ಬಾಂಬೇ ಗಮ್ಮತ್ತು ಎಲ್ಲವನ್ನೂ ಬಟಾಬಯಲು ಮಾಡಿದ ನಾರಾಯಣರಾವ್ ಅವರ ಪತ್ನಿ ಈಗ ಕಾಂಗ್ರೆಸ್ ಅಭ್ಯರ್ಥಿ.

ಇದನ್ನೂ ಓದಿ: ಲಿಂಗಾಯಿತರು ನನಗೆ ಮತ ಕೊಡದಿದ್ದರೂ ಪರವಾಗಿಲ್ಲ, ಬಸವ ತತ್ವದ ಮೇಲೆ ನಡೆದರೆ ಸಾಕು: ಶಾಸಕ ಬಿ.ನಾರಾಯಣರಾವ್ 

ಬಿಜೆಪಿಯಿಂದ ನಿಂತಿರುವ ಶರಣು ಸದಲಗ ಕಲಬುರ್ಗಿ ಜಿಲ್ಲೆಯ ಮನುಷ್ಯ ಆಗಿರೋ ಕಾರಣ ಬೀದರ್‌ನ ಬಸವಕಲ್ಯಾಣದಲ್ಲಿ ಈಗ ಒಂದು ಅಪಸ್ವರ ಸಹಜವಾಗಿಯೇ ಎದ್ದಿದೆ.
ನಾರಾಯಣರಾವ್ ಸದನದಲ್ಲಿ ಮಾಡಿದ ಕೊನೆಯ ಭಾಷಣ ಈಗ ಫಲಿತಾಂಶವನ್ನು ನಿರ್ಧರಿಸುವ ಮಟ್ಟಕ್ಕೆ ಬಂದಿದೆ. ‘ಸಿದ್ರಾಮಯ್ಯ ಸಾಹೇಬ್ರು ಟಿಕೇಟ್ ಕೊಟ್ರು’ ಎಂಬ ನಾರಾಯಣರಾವ್ ಮಾತು ಈಗ ಜನಪ್ರಿಯವಾಗಿದ್ದು, ಅವರ ‘ಸಿದ್ರಾಮಯ್ಯ’ ——— ಕೂಡ ಈ ಕ್ಷೇತ್ರವನ್ನು ಸೀರಿಯಸ್ ಆಗಿ ಪರಿಗಣಿಸಿದ್ದಾರೆ ಎನ್ನಲಾಗಿದೆ.

ಹಾಗೆಯೇ ಬಿಜೆಪಿ ಸಂಸದ ಭಗವಂತ ಖೂಬಾರವರ ಪುತ್ರ ಮಲ್ಲಿಕಾರರ್ಜುನ ಖೂಬಾ ಟಿಕೆಟ್ ಸಿಗದೇ ಸಿಕ್ಕಾಪಟ್ಟೆ ಸಿಟ್ಟಾಗಿದ್ದಾರೆ. ನಾಳೆ ನಡೆಯುವ ಪ್ರೆಸ್‌ಮೀಟ್‌ನಲ್ಲಿ ಖೂಬಾ ತಮ್ಮ ಒಲವು ಯಾರ ಕಡೆ ಎಂದು ಘೋಷಣೆ ಮಾಡಲಿದ್ದಾರೆ.


ಇದನ್ನೂ ಓದಿ: ಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....