Homeಕರ್ನಾಟಕಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

- Advertisement -
- Advertisement -

ಮಸ್ಕಿ ಎಂಬ ಪುಟ್ಟ ತಾಲೂಕಿನ ಮ್ಯಾಲ ಐದಾರು ನೀರಾವರಿ ಯೋಜನೆ ಹೇರಿಬಿಟ್ಟಿದೆ ನಮ್ಮ ಸರ್ಕಾರ! ತಮ್ಮನ್ನು ಅಧಿಕಾರಕ್ಕೆ ತಂದರು ಎಂಬ ಏಕೈಕ ಕಾರಣಕ್ಕೆ ಇಂತಹ ಕ್ಷೇತ್ರಗಳಿಗೆ ಸಿಕ್ಕಾಪಟ್ಟೆ ಯೋಜನೆ ಘೋಷಣೆ ಮಾಡಿಬಿಟ್ಟಿದೆ ಯಡಿಯೂರಪ್ಪ ಸರ್ಕಾರ!

ನಂಜುಂಡಪ್ಪ ವರದಿಯ ಅತಿ ಹಿಂದುಳಿದ ತಾಲೂಕುಗಳ ಪಟ್ಟಿಯಲ್ಲಿ ಈ ಮಸ್ಕಿಯೂ ಒಂದು. ಇಲ್ಲಿನ ತಳ ಸಮುದಾಯದ ಜನಕ್ಕೆ ಭೂಮಿ ಇಲ್ಲ. ಅವರೆಲ್ಲ ಬೆಂಗಳೂರಿಗೋ, ಮಂಗಳೂರಿಗೋ ಹೋಗಿ ಬೆವರು ಹರಿಸುತ್ತಾರೆ, ಹೊಟ್ಟೆ ತುಂಬಿಸಿಕೊಳ್ಳಲು.

ಮೀಸಲು ಕ್ಷೇತ್ರ ಮಸ್ಕಿ ಎರಡು ಜಿಲ್ಲೆಗಳಲ್ಲಿ ಹರಿದು ಹಂಚಿ ಹೋಗಿದೆ. ಕೊಪ್ಪಳ ಮತ್ತು ರಾಯಚೂರಿನ ನೂರಾರು ಗ್ರಾಮಗಳನ್ನು ಸೇರಿಸಿ ಈ ಮಸ್ಕಿ ಕ್ಷೇತ್ರ ಮಾಡಲಾಗಿದೆ. ಸಿಂಧನೂರಿನಲ್ಲಿ ತುಂಗಭದ್ರೆ ಹರಿಯುತ್ತಾಳೆ, ಆ ಭಾಗ್ಯ ಮಸ್ಕಿ ಜನರಿಗಿಲ್ಲ. ಅವರು ಈಗ ಪಕ್ಕದಲ್ಲೇ ಹಾದು ಹೋಗುವ ಕೃಷ್ಣೆಯ ನೀರು ಕೇಳುತ್ತಿದ್ದಾರೆ. ಮುಖ್ಯವಾಹಿನಿ ಮಾಧ್ಯಮಕ್ಕೆ ಇದು ಒಂದು ಇಶ್ಯೂ ಆಗಲೇ ಇಲ್ಲ!

ಮಸ್ಕಿ ಮ್ಯಾಲ ದೊಡ್ಡ ಭಾರ

107 ಹಳ್ಳಿಗಳು ಅದರಲ್ಲೂ ಮುಖ್ಯವಾಗಿ 58 ಹಳ್ಳಿಗಳು ತಮ್ಮ ಭೂಮಿಗೆ ನೀರು ಬೇಕು ಅನ್ನುತ್ತಿವೆ. ಆದರೆ ಕೃಷ್ಣಾದಿಂದ ನೀರು ಕೊಡಲು ಆಗದು ಎಂದು ಅಧಿಕಾರಿಗಳು ಸಲ್ಲಿಸಿದ ವರದಿಯನ್ನೇ ಪ್ರತಾಪಗೌಡ ಪಾಟೀಲರು ಸತ್ಯ ಎಂದು ನಂಬಿದ್ದಾರೆ.

ಈಗ ಏನಾಗಿದೆ ಅಂದರೆ, ಮಸ್ಕಿಯ ಮೇಲೆ ಹಲವು ನೀರಾವರಿ ಪ್ರಾಜೆಕ್ಟ್ ಹೇರಲಾಗಿದೆ. ಇವೆಲ್ಲ ಕಾಟಾಚಾರದ ಯೋಜನೆಗಳು. ಬಜೆಟ್ ಅಲೊಕೇಷನ್ ಇಲ್ಲವೇ ಇಲ್ಲ! ಕೃಷ್ಣಾ ನದಿಯಿಂದ 17 ಕೆರೆ ತುಂಬಿಸುವ ಯೊಜನೆಯಲ್ಲಿ ಈಗ 87 ಕೋಟಿ ರೂ ಬಿಡುಗಡೆ ಆಗಿದೆ. ಅದು ಕಂಟ್ರಾಕ್ಟರ್‌ಗಳ ಪಾಲಾಗಿದೆ ಎಂಬ ದೊಡ್ಡ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

’58 ಹಳ್ಳಿಯ ಜನ 100 ದಿನದಿಂದ ಪ್ರತಿಭಟನೆ ಮಾಡ್ತಾ ತಮ್ಮ ಭೂಮಿಗೆ ನೀರು ಬೇಕು ಅಂತಾರಲ್ಲರಿ?’ ಎಂದು ನಾವು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡರನ್ನು ಕೇಳಿದೆವು. ‘’ಹಂಗೆಲ್ಲ ನೀರ್ ಕೋಡೋಕ್ ಆಗಲ್ಲ. ಅದೊಂದು ಅವೈಜ್ಞಾನಿಕ ಯೋಜನಾ ಅದ.. ನಾವ್ ಜನ್ರಿಗೆ ತಿಳವಳಿಕೆ ಕೊಟ್ಟೀವಿ. ಅಲ್ಲಿ ಯಾರೋ ಸ್ವಲ್ಪ ಮಂದಿ ಸ್ಟ್ರೈಕ್ ಮಾಡಾಕ ಹತ್ಯಾರ’ ಎಂದರು.
ಅಲ್ಲ ನೀವು ಪರ್ಯಾಯದ ಬಗ್ಗೆ ವಿಚಾರನಾ ಮಾಡಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರತಾಪಗೌಡರು, ನಂದವಾಡಗಿ ನೀರಾವರಿ ಯೋಜನಾ ಅದ, ಕೋಟೆಕಲ್ ಬಸವಣ್ಣ ಏತ ನೀರಾವರಿ ಯೋಜನಾನೂ ಐತಿ, 500 ಕೋಟಿ ರೂ ಕೊಟ್ಟು ಕೆರೆ ತುಂಬಿಸ್ತಾ ಇದ್ದೀವಿ’ ಎಂದರು.

ಮಸ್ಕಿಯಲ್ಲಿ ಗುಳೆ ಸಮಸ್ಯೆ ವ್ಯಾಪಕವಾಗಿದೆ. ಇಲ್ಲಿನ ಎಸ್‌ಸಿ/ಎಸ್‌ಟಿ ಸಮುದಾಯದ ಜನರು ಕೂಲಿಗಾಗಿ ಬೆಂಗಳೂರು, ಮಂಗಳೂರು, ಗೋವಾ ಕಡೆ ವಲಸೆ ಹೋಗುವುದು ನಿತ್ಯದ ಕತೆಯೇ ಆಗಿದೆ.

ಆದರೆ ಗೆಜೆಟ್‌ನಲ್ಲಿ ಮಸ್ಕಿ ಭರಪೂರ ನೀರಾವರಿ ಆಗಿಬಿಟ್ಟಿದೆ.. ಅದನ್ನೆ ಪ್ರತಾಪಗೌಡ ಪಾಟೀಲರು ನಂಬಿದ್ದಾರೆ. ಜನ ಏನು ನಂಬುತ್ತಾರೆ ಎಂಬುವುದು ಚುನಾವಣಾ ಫಲಿತಾಂಶದಲ್ಲಿ ಗೋಚರವಾಗಲಿದೆ.

ಬಸವಕಲ್ಯಾಣ: ಆಟ ‘ಟಫ್’ ಇದೆ, ಬಟ್ ನಾರಾಯಣರಾವ್ ಸರಳತೆ ಚಾಲ್ತಿಗೆ ಬಂದಿದೆ!

ಆರಾಮಾಗಿ ಎತ್ತಿಕೊಳ್ಳಬಹುದಾದ ಈ ಕ್ಷೇತ್ರದಲ್ಲಿ ಬಿಜೆಪಿ ಸಿಕ್ಕಾಪಟ್ಟೆ ರೊಕ್ಕ ಹರಿಸಿಯೂ ನಿಟ್ಟುಸಿರು ಬಿಡ್ತಾ ಇದೆ, ಅದಕ್ಕೆ ಕಾರಣ ಮೃತ ಕಾಂಗ್ರಸ್ ಶಾಸಕ ನಾರಾಯಣರಾವ್ ಸರಳತೆ!
ಸದನದಲ್ಲಿ ಸಿಕ್ಕ ಒಂದೇ ಅವಕಾಶದಿಂದ ರೊಕ್ಕದ ರಾಜಕೀಯ, ಬಾಂಬೇ ಗಮ್ಮತ್ತು ಎಲ್ಲವನ್ನೂ ಬಟಾಬಯಲು ಮಾಡಿದ ನಾರಾಯಣರಾವ್ ಅವರ ಪತ್ನಿ ಈಗ ಕಾಂಗ್ರೆಸ್ ಅಭ್ಯರ್ಥಿ.

ಇದನ್ನೂ ಓದಿ: ಲಿಂಗಾಯಿತರು ನನಗೆ ಮತ ಕೊಡದಿದ್ದರೂ ಪರವಾಗಿಲ್ಲ, ಬಸವ ತತ್ವದ ಮೇಲೆ ನಡೆದರೆ ಸಾಕು: ಶಾಸಕ ಬಿ.ನಾರಾಯಣರಾವ್ 

ಬಿಜೆಪಿಯಿಂದ ನಿಂತಿರುವ ಶರಣು ಸದಲಗ ಕಲಬುರ್ಗಿ ಜಿಲ್ಲೆಯ ಮನುಷ್ಯ ಆಗಿರೋ ಕಾರಣ ಬೀದರ್‌ನ ಬಸವಕಲ್ಯಾಣದಲ್ಲಿ ಈಗ ಒಂದು ಅಪಸ್ವರ ಸಹಜವಾಗಿಯೇ ಎದ್ದಿದೆ.
ನಾರಾಯಣರಾವ್ ಸದನದಲ್ಲಿ ಮಾಡಿದ ಕೊನೆಯ ಭಾಷಣ ಈಗ ಫಲಿತಾಂಶವನ್ನು ನಿರ್ಧರಿಸುವ ಮಟ್ಟಕ್ಕೆ ಬಂದಿದೆ. ‘ಸಿದ್ರಾಮಯ್ಯ ಸಾಹೇಬ್ರು ಟಿಕೇಟ್ ಕೊಟ್ರು’ ಎಂಬ ನಾರಾಯಣರಾವ್ ಮಾತು ಈಗ ಜನಪ್ರಿಯವಾಗಿದ್ದು, ಅವರ ‘ಸಿದ್ರಾಮಯ್ಯ’ ——— ಕೂಡ ಈ ಕ್ಷೇತ್ರವನ್ನು ಸೀರಿಯಸ್ ಆಗಿ ಪರಿಗಣಿಸಿದ್ದಾರೆ ಎನ್ನಲಾಗಿದೆ.

ಹಾಗೆಯೇ ಬಿಜೆಪಿ ಸಂಸದ ಭಗವಂತ ಖೂಬಾರವರ ಪುತ್ರ ಮಲ್ಲಿಕಾರರ್ಜುನ ಖೂಬಾ ಟಿಕೆಟ್ ಸಿಗದೇ ಸಿಕ್ಕಾಪಟ್ಟೆ ಸಿಟ್ಟಾಗಿದ್ದಾರೆ. ನಾಳೆ ನಡೆಯುವ ಪ್ರೆಸ್‌ಮೀಟ್‌ನಲ್ಲಿ ಖೂಬಾ ತಮ್ಮ ಒಲವು ಯಾರ ಕಡೆ ಎಂದು ಘೋಷಣೆ ಮಾಡಲಿದ್ದಾರೆ.


ಇದನ್ನೂ ಓದಿ: ಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...