Homeಕರ್ನಾಟಕಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

- Advertisement -
- Advertisement -

ಮಸ್ಕಿ ಎಂಬ ಪುಟ್ಟ ತಾಲೂಕಿನ ಮ್ಯಾಲ ಐದಾರು ನೀರಾವರಿ ಯೋಜನೆ ಹೇರಿಬಿಟ್ಟಿದೆ ನಮ್ಮ ಸರ್ಕಾರ! ತಮ್ಮನ್ನು ಅಧಿಕಾರಕ್ಕೆ ತಂದರು ಎಂಬ ಏಕೈಕ ಕಾರಣಕ್ಕೆ ಇಂತಹ ಕ್ಷೇತ್ರಗಳಿಗೆ ಸಿಕ್ಕಾಪಟ್ಟೆ ಯೋಜನೆ ಘೋಷಣೆ ಮಾಡಿಬಿಟ್ಟಿದೆ ಯಡಿಯೂರಪ್ಪ ಸರ್ಕಾರ!

ನಂಜುಂಡಪ್ಪ ವರದಿಯ ಅತಿ ಹಿಂದುಳಿದ ತಾಲೂಕುಗಳ ಪಟ್ಟಿಯಲ್ಲಿ ಈ ಮಸ್ಕಿಯೂ ಒಂದು. ಇಲ್ಲಿನ ತಳ ಸಮುದಾಯದ ಜನಕ್ಕೆ ಭೂಮಿ ಇಲ್ಲ. ಅವರೆಲ್ಲ ಬೆಂಗಳೂರಿಗೋ, ಮಂಗಳೂರಿಗೋ ಹೋಗಿ ಬೆವರು ಹರಿಸುತ್ತಾರೆ, ಹೊಟ್ಟೆ ತುಂಬಿಸಿಕೊಳ್ಳಲು.

ಮೀಸಲು ಕ್ಷೇತ್ರ ಮಸ್ಕಿ ಎರಡು ಜಿಲ್ಲೆಗಳಲ್ಲಿ ಹರಿದು ಹಂಚಿ ಹೋಗಿದೆ. ಕೊಪ್ಪಳ ಮತ್ತು ರಾಯಚೂರಿನ ನೂರಾರು ಗ್ರಾಮಗಳನ್ನು ಸೇರಿಸಿ ಈ ಮಸ್ಕಿ ಕ್ಷೇತ್ರ ಮಾಡಲಾಗಿದೆ. ಸಿಂಧನೂರಿನಲ್ಲಿ ತುಂಗಭದ್ರೆ ಹರಿಯುತ್ತಾಳೆ, ಆ ಭಾಗ್ಯ ಮಸ್ಕಿ ಜನರಿಗಿಲ್ಲ. ಅವರು ಈಗ ಪಕ್ಕದಲ್ಲೇ ಹಾದು ಹೋಗುವ ಕೃಷ್ಣೆಯ ನೀರು ಕೇಳುತ್ತಿದ್ದಾರೆ. ಮುಖ್ಯವಾಹಿನಿ ಮಾಧ್ಯಮಕ್ಕೆ ಇದು ಒಂದು ಇಶ್ಯೂ ಆಗಲೇ ಇಲ್ಲ!

ಮಸ್ಕಿ ಮ್ಯಾಲ ದೊಡ್ಡ ಭಾರ

107 ಹಳ್ಳಿಗಳು ಅದರಲ್ಲೂ ಮುಖ್ಯವಾಗಿ 58 ಹಳ್ಳಿಗಳು ತಮ್ಮ ಭೂಮಿಗೆ ನೀರು ಬೇಕು ಅನ್ನುತ್ತಿವೆ. ಆದರೆ ಕೃಷ್ಣಾದಿಂದ ನೀರು ಕೊಡಲು ಆಗದು ಎಂದು ಅಧಿಕಾರಿಗಳು ಸಲ್ಲಿಸಿದ ವರದಿಯನ್ನೇ ಪ್ರತಾಪಗೌಡ ಪಾಟೀಲರು ಸತ್ಯ ಎಂದು ನಂಬಿದ್ದಾರೆ.

ಈಗ ಏನಾಗಿದೆ ಅಂದರೆ, ಮಸ್ಕಿಯ ಮೇಲೆ ಹಲವು ನೀರಾವರಿ ಪ್ರಾಜೆಕ್ಟ್ ಹೇರಲಾಗಿದೆ. ಇವೆಲ್ಲ ಕಾಟಾಚಾರದ ಯೋಜನೆಗಳು. ಬಜೆಟ್ ಅಲೊಕೇಷನ್ ಇಲ್ಲವೇ ಇಲ್ಲ! ಕೃಷ್ಣಾ ನದಿಯಿಂದ 17 ಕೆರೆ ತುಂಬಿಸುವ ಯೊಜನೆಯಲ್ಲಿ ಈಗ 87 ಕೋಟಿ ರೂ ಬಿಡುಗಡೆ ಆಗಿದೆ. ಅದು ಕಂಟ್ರಾಕ್ಟರ್‌ಗಳ ಪಾಲಾಗಿದೆ ಎಂಬ ದೊಡ್ಡ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

’58 ಹಳ್ಳಿಯ ಜನ 100 ದಿನದಿಂದ ಪ್ರತಿಭಟನೆ ಮಾಡ್ತಾ ತಮ್ಮ ಭೂಮಿಗೆ ನೀರು ಬೇಕು ಅಂತಾರಲ್ಲರಿ?’ ಎಂದು ನಾವು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡರನ್ನು ಕೇಳಿದೆವು. ‘’ಹಂಗೆಲ್ಲ ನೀರ್ ಕೋಡೋಕ್ ಆಗಲ್ಲ. ಅದೊಂದು ಅವೈಜ್ಞಾನಿಕ ಯೋಜನಾ ಅದ.. ನಾವ್ ಜನ್ರಿಗೆ ತಿಳವಳಿಕೆ ಕೊಟ್ಟೀವಿ. ಅಲ್ಲಿ ಯಾರೋ ಸ್ವಲ್ಪ ಮಂದಿ ಸ್ಟ್ರೈಕ್ ಮಾಡಾಕ ಹತ್ಯಾರ’ ಎಂದರು.
ಅಲ್ಲ ನೀವು ಪರ್ಯಾಯದ ಬಗ್ಗೆ ವಿಚಾರನಾ ಮಾಡಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರತಾಪಗೌಡರು, ನಂದವಾಡಗಿ ನೀರಾವರಿ ಯೋಜನಾ ಅದ, ಕೋಟೆಕಲ್ ಬಸವಣ್ಣ ಏತ ನೀರಾವರಿ ಯೋಜನಾನೂ ಐತಿ, 500 ಕೋಟಿ ರೂ ಕೊಟ್ಟು ಕೆರೆ ತುಂಬಿಸ್ತಾ ಇದ್ದೀವಿ’ ಎಂದರು.

ಮಸ್ಕಿಯಲ್ಲಿ ಗುಳೆ ಸಮಸ್ಯೆ ವ್ಯಾಪಕವಾಗಿದೆ. ಇಲ್ಲಿನ ಎಸ್‌ಸಿ/ಎಸ್‌ಟಿ ಸಮುದಾಯದ ಜನರು ಕೂಲಿಗಾಗಿ ಬೆಂಗಳೂರು, ಮಂಗಳೂರು, ಗೋವಾ ಕಡೆ ವಲಸೆ ಹೋಗುವುದು ನಿತ್ಯದ ಕತೆಯೇ ಆಗಿದೆ.

ಆದರೆ ಗೆಜೆಟ್‌ನಲ್ಲಿ ಮಸ್ಕಿ ಭರಪೂರ ನೀರಾವರಿ ಆಗಿಬಿಟ್ಟಿದೆ.. ಅದನ್ನೆ ಪ್ರತಾಪಗೌಡ ಪಾಟೀಲರು ನಂಬಿದ್ದಾರೆ. ಜನ ಏನು ನಂಬುತ್ತಾರೆ ಎಂಬುವುದು ಚುನಾವಣಾ ಫಲಿತಾಂಶದಲ್ಲಿ ಗೋಚರವಾಗಲಿದೆ.

ಬಸವಕಲ್ಯಾಣ: ಆಟ ‘ಟಫ್’ ಇದೆ, ಬಟ್ ನಾರಾಯಣರಾವ್ ಸರಳತೆ ಚಾಲ್ತಿಗೆ ಬಂದಿದೆ!

ಆರಾಮಾಗಿ ಎತ್ತಿಕೊಳ್ಳಬಹುದಾದ ಈ ಕ್ಷೇತ್ರದಲ್ಲಿ ಬಿಜೆಪಿ ಸಿಕ್ಕಾಪಟ್ಟೆ ರೊಕ್ಕ ಹರಿಸಿಯೂ ನಿಟ್ಟುಸಿರು ಬಿಡ್ತಾ ಇದೆ, ಅದಕ್ಕೆ ಕಾರಣ ಮೃತ ಕಾಂಗ್ರಸ್ ಶಾಸಕ ನಾರಾಯಣರಾವ್ ಸರಳತೆ!
ಸದನದಲ್ಲಿ ಸಿಕ್ಕ ಒಂದೇ ಅವಕಾಶದಿಂದ ರೊಕ್ಕದ ರಾಜಕೀಯ, ಬಾಂಬೇ ಗಮ್ಮತ್ತು ಎಲ್ಲವನ್ನೂ ಬಟಾಬಯಲು ಮಾಡಿದ ನಾರಾಯಣರಾವ್ ಅವರ ಪತ್ನಿ ಈಗ ಕಾಂಗ್ರೆಸ್ ಅಭ್ಯರ್ಥಿ.

ಇದನ್ನೂ ಓದಿ: ಲಿಂಗಾಯಿತರು ನನಗೆ ಮತ ಕೊಡದಿದ್ದರೂ ಪರವಾಗಿಲ್ಲ, ಬಸವ ತತ್ವದ ಮೇಲೆ ನಡೆದರೆ ಸಾಕು: ಶಾಸಕ ಬಿ.ನಾರಾಯಣರಾವ್ 

ಬಿಜೆಪಿಯಿಂದ ನಿಂತಿರುವ ಶರಣು ಸದಲಗ ಕಲಬುರ್ಗಿ ಜಿಲ್ಲೆಯ ಮನುಷ್ಯ ಆಗಿರೋ ಕಾರಣ ಬೀದರ್‌ನ ಬಸವಕಲ್ಯಾಣದಲ್ಲಿ ಈಗ ಒಂದು ಅಪಸ್ವರ ಸಹಜವಾಗಿಯೇ ಎದ್ದಿದೆ.
ನಾರಾಯಣರಾವ್ ಸದನದಲ್ಲಿ ಮಾಡಿದ ಕೊನೆಯ ಭಾಷಣ ಈಗ ಫಲಿತಾಂಶವನ್ನು ನಿರ್ಧರಿಸುವ ಮಟ್ಟಕ್ಕೆ ಬಂದಿದೆ. ‘ಸಿದ್ರಾಮಯ್ಯ ಸಾಹೇಬ್ರು ಟಿಕೇಟ್ ಕೊಟ್ರು’ ಎಂಬ ನಾರಾಯಣರಾವ್ ಮಾತು ಈಗ ಜನಪ್ರಿಯವಾಗಿದ್ದು, ಅವರ ‘ಸಿದ್ರಾಮಯ್ಯ’ ——— ಕೂಡ ಈ ಕ್ಷೇತ್ರವನ್ನು ಸೀರಿಯಸ್ ಆಗಿ ಪರಿಗಣಿಸಿದ್ದಾರೆ ಎನ್ನಲಾಗಿದೆ.

ಹಾಗೆಯೇ ಬಿಜೆಪಿ ಸಂಸದ ಭಗವಂತ ಖೂಬಾರವರ ಪುತ್ರ ಮಲ್ಲಿಕಾರರ್ಜುನ ಖೂಬಾ ಟಿಕೆಟ್ ಸಿಗದೇ ಸಿಕ್ಕಾಪಟ್ಟೆ ಸಿಟ್ಟಾಗಿದ್ದಾರೆ. ನಾಳೆ ನಡೆಯುವ ಪ್ರೆಸ್‌ಮೀಟ್‌ನಲ್ಲಿ ಖೂಬಾ ತಮ್ಮ ಒಲವು ಯಾರ ಕಡೆ ಎಂದು ಘೋಷಣೆ ಮಾಡಲಿದ್ದಾರೆ.


ಇದನ್ನೂ ಓದಿ: ಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...