Homeಕರ್ನಾಟಕಮಸ್ಕಿಯಲ್ಲಿ ಬಿಜೆಪಿಯಿಂದ 2 ಚೀಲ ಹಣ ಸಾಗಣೆ, ಪಿಎಸ್‌ಐ ಶಾಮೀಲು ಆರೋಪ: ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ...

ಮಸ್ಕಿಯಲ್ಲಿ ಬಿಜೆಪಿಯಿಂದ 2 ಚೀಲ ಹಣ ಸಾಗಣೆ, ಪಿಎಸ್‌ಐ ಶಾಮೀಲು ಆರೋಪ: ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಆಯೋಗಕ್ಕೆ ದೂರು

- Advertisement -
- Advertisement -

ಮಸ್ಕಿ ಉಪಚುನಾವಣೆಯಲ್ಲಿ ಅವ್ಯಾಹತವಾಗಿ ಬಿಜೆಪಿ ಹಣ ಹಂಚುತ್ತಿರುವ ಆರೋಪಗಳು ಮೇಲಿಂದ ಮೇಲೆ ಕೇಳಿ ಬರುತ್ತಿರುವ ಬೆನ್ನಿಗೇ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಮಸ್ಕಿಯಲ್ಲಿ ಚುನಾವಣಾಧಿಕಾರಿಗೆ ದೂರು ಸಲ್ಲಿಸಿತು.

ಚುನಾವಣೆ ಅಕ್ರಮ ಸಂಬಂಧ ಮುದಗಲ್ ಪಿಎಸ್‌ಐ ಡಾಕೇಶ್ ಹಾಗೂ ಬಿಜೆಪಿ ವಿರುದ್ಧ ದೂರು ಸಲ್ಲಿಸಲಾಗಿದ್ದು, ಮಟ್ಟೂರು ಗ್ರಾಮದಲ್ಲಿ ಎರಡು ಚೀಲಗಳಲ್ಲಿ ಬಿಜೆಪಿ ಅಭ್ಯರ್ಥಿ ಪರ ಹಣ ಸಾಗಣೆ ನಡೆದಿದ್ದು, ಕ್ರಮ ಕೈಗೊಳ್ಳಬೇಕಿದ್ದ ಮುದಗಲ್ ಪಿಎಸ್‌ಐ ಡಾಕೇಶ್ ಅದರಲ್ಲಿ ಒಂದು ಚೀಲವನ್ನು ಬೇರೆಡೆ ಸಾಗಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಮಸ್ಕಿಯ ತಾಲೂಕು ಪಂಚಾಯತಿ ಕಚೇರಿಯಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ಭೇಟಿ ನೀಡಿ ದೂರು ದಾಖಲಿಸಿ ಮಾತನಾಡಿದ ಡಿ.ಕೆ ಶಿವಕುಮಾರ್, ಮಸ್ಕಿಯಲ್ಲಿ ಉಪಚುನಾವಣೆ ಕಾನೂನುಬದ್ಧವಾಗಿ ನಡೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಸಂಸದ ಉಗ್ರಪ್ಪ, ಶಾಸಕ ಬಸನಗೌಡ ದದ್ದಲ್, ಮಾಜಿ ಶಾಸಕ ಭೋಸರಾಜ್, ಯುವ ಮುಖಂಡ ಬಸವನಗೌಡ ಬಾದರ್ಲಿ ನಿಯೋಗದಲ್ಲಿದ್ದರು.

ನಿನ್ನೆಯಷ್ಟೇ ತುರ್ವಿಹಾಳದಲ್ಲಿ ಹಾಸನದ ಮೂವರು ಯುವಕರು ಬಿಜೆಪಿ ಪರ ಹಣ ಹಂಚುವಾಗ ಸ್ಥಳೀಯರು ಅವರನ್ನು ಹಿಡಿದು ಪೊಲೀಸರಿಗೆ ಕೊಟ್ಟಿದ್ದರು. ಈ ಕುರಿತು ತುರ್ವಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರು ಯುವಕರಿಂದ 81 ಸಾವಿರ ರೂ. ವಶಪಡಿಸಿಕೊಳ್ಳಲಾಗಿತ್ತು.

ಯುವಕರಿಗೆ ಸ್ಥಳೀಯರು ಒಂದೆರಡು ಏಟು ನೀಡಿ, ಅಂಗಿ ಹರಿದ ವಿಡಿಯೋ ವೈರಲ್ ಆಗಿದೆ. ಈ ಹಿಂದೆಯೂ ಬೆನಕಲ್, ಹಂಚಿನಾಳ ಮುಂತಾದ ಕಡೆ ಬಿಜೆಪಿ ಪರ ಹಣ ಹಂಚುವ ನಾಲ್ಕೈದು ವಿಡಿಯೊಗಳು ವೈರಲ್ ಆಗಿದ್ದವು.

‘ಚುನಾವಣಾ ಆಯೋಗ ಮತ್ತು ಪೊಲೀಸರು ಸರಿಯಾದ ಕ್ರಮ ಜರುಗಿಸುತ್ತಿಲ್ಲ. ಬಿಜೆಪಿ ಹಣ ನೀಡಿ ಚುನಾವಣೆಯ ಎದುರಿಸುತ್ತಿದೆ’ ಎಂದು ರೈತ ಹೋರಾಟಗಾರರು ಮತ್ತು ಕಾಂಗ್ರೆಸ್‌ನ ಸ್ಥಳೀಯ ನಾಯಕರು ಅಪಾದಿಸುತ್ತಲೇ ಬಂದಿದ್ದಾರೆ.


ಇದನ್ನೂ ಓದಿ: ಮಸ್ಕಿ: ಬಿಜೆಪಿ ಪರ ಹಣ ಹಂಚಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಹಾಸನದ ಯುವಕರ ಬಂಧನ; 81 ಸಾವಿರ ರೂ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...