Homeಕರ್ನಾಟಕಮಸ್ಕಿಯಲ್ಲಿ ಬಿಜೆಪಿಯಿಂದ 2 ಚೀಲ ಹಣ ಸಾಗಣೆ, ಪಿಎಸ್‌ಐ ಶಾಮೀಲು ಆರೋಪ: ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ...

ಮಸ್ಕಿಯಲ್ಲಿ ಬಿಜೆಪಿಯಿಂದ 2 ಚೀಲ ಹಣ ಸಾಗಣೆ, ಪಿಎಸ್‌ಐ ಶಾಮೀಲು ಆರೋಪ: ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಆಯೋಗಕ್ಕೆ ದೂರು

- Advertisement -
- Advertisement -

ಮಸ್ಕಿ ಉಪಚುನಾವಣೆಯಲ್ಲಿ ಅವ್ಯಾಹತವಾಗಿ ಬಿಜೆಪಿ ಹಣ ಹಂಚುತ್ತಿರುವ ಆರೋಪಗಳು ಮೇಲಿಂದ ಮೇಲೆ ಕೇಳಿ ಬರುತ್ತಿರುವ ಬೆನ್ನಿಗೇ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಮಸ್ಕಿಯಲ್ಲಿ ಚುನಾವಣಾಧಿಕಾರಿಗೆ ದೂರು ಸಲ್ಲಿಸಿತು.

ಚುನಾವಣೆ ಅಕ್ರಮ ಸಂಬಂಧ ಮುದಗಲ್ ಪಿಎಸ್‌ಐ ಡಾಕೇಶ್ ಹಾಗೂ ಬಿಜೆಪಿ ವಿರುದ್ಧ ದೂರು ಸಲ್ಲಿಸಲಾಗಿದ್ದು, ಮಟ್ಟೂರು ಗ್ರಾಮದಲ್ಲಿ ಎರಡು ಚೀಲಗಳಲ್ಲಿ ಬಿಜೆಪಿ ಅಭ್ಯರ್ಥಿ ಪರ ಹಣ ಸಾಗಣೆ ನಡೆದಿದ್ದು, ಕ್ರಮ ಕೈಗೊಳ್ಳಬೇಕಿದ್ದ ಮುದಗಲ್ ಪಿಎಸ್‌ಐ ಡಾಕೇಶ್ ಅದರಲ್ಲಿ ಒಂದು ಚೀಲವನ್ನು ಬೇರೆಡೆ ಸಾಗಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಮಸ್ಕಿಯ ತಾಲೂಕು ಪಂಚಾಯತಿ ಕಚೇರಿಯಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ಭೇಟಿ ನೀಡಿ ದೂರು ದಾಖಲಿಸಿ ಮಾತನಾಡಿದ ಡಿ.ಕೆ ಶಿವಕುಮಾರ್, ಮಸ್ಕಿಯಲ್ಲಿ ಉಪಚುನಾವಣೆ ಕಾನೂನುಬದ್ಧವಾಗಿ ನಡೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಸಂಸದ ಉಗ್ರಪ್ಪ, ಶಾಸಕ ಬಸನಗೌಡ ದದ್ದಲ್, ಮಾಜಿ ಶಾಸಕ ಭೋಸರಾಜ್, ಯುವ ಮುಖಂಡ ಬಸವನಗೌಡ ಬಾದರ್ಲಿ ನಿಯೋಗದಲ್ಲಿದ್ದರು.

ನಿನ್ನೆಯಷ್ಟೇ ತುರ್ವಿಹಾಳದಲ್ಲಿ ಹಾಸನದ ಮೂವರು ಯುವಕರು ಬಿಜೆಪಿ ಪರ ಹಣ ಹಂಚುವಾಗ ಸ್ಥಳೀಯರು ಅವರನ್ನು ಹಿಡಿದು ಪೊಲೀಸರಿಗೆ ಕೊಟ್ಟಿದ್ದರು. ಈ ಕುರಿತು ತುರ್ವಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರು ಯುವಕರಿಂದ 81 ಸಾವಿರ ರೂ. ವಶಪಡಿಸಿಕೊಳ್ಳಲಾಗಿತ್ತು.

ಯುವಕರಿಗೆ ಸ್ಥಳೀಯರು ಒಂದೆರಡು ಏಟು ನೀಡಿ, ಅಂಗಿ ಹರಿದ ವಿಡಿಯೋ ವೈರಲ್ ಆಗಿದೆ. ಈ ಹಿಂದೆಯೂ ಬೆನಕಲ್, ಹಂಚಿನಾಳ ಮುಂತಾದ ಕಡೆ ಬಿಜೆಪಿ ಪರ ಹಣ ಹಂಚುವ ನಾಲ್ಕೈದು ವಿಡಿಯೊಗಳು ವೈರಲ್ ಆಗಿದ್ದವು.

‘ಚುನಾವಣಾ ಆಯೋಗ ಮತ್ತು ಪೊಲೀಸರು ಸರಿಯಾದ ಕ್ರಮ ಜರುಗಿಸುತ್ತಿಲ್ಲ. ಬಿಜೆಪಿ ಹಣ ನೀಡಿ ಚುನಾವಣೆಯ ಎದುರಿಸುತ್ತಿದೆ’ ಎಂದು ರೈತ ಹೋರಾಟಗಾರರು ಮತ್ತು ಕಾಂಗ್ರೆಸ್‌ನ ಸ್ಥಳೀಯ ನಾಯಕರು ಅಪಾದಿಸುತ್ತಲೇ ಬಂದಿದ್ದಾರೆ.


ಇದನ್ನೂ ಓದಿ: ಮಸ್ಕಿ: ಬಿಜೆಪಿ ಪರ ಹಣ ಹಂಚಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಹಾಸನದ ಯುವಕರ ಬಂಧನ; 81 ಸಾವಿರ ರೂ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....