Homeಕರ್ನಾಟಕಮಸ್ಕಿಯಲ್ಲಿ ಬಿಜೆಪಿಯಿಂದ 2 ಚೀಲ ಹಣ ಸಾಗಣೆ, ಪಿಎಸ್‌ಐ ಶಾಮೀಲು ಆರೋಪ: ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ...

ಮಸ್ಕಿಯಲ್ಲಿ ಬಿಜೆಪಿಯಿಂದ 2 ಚೀಲ ಹಣ ಸಾಗಣೆ, ಪಿಎಸ್‌ಐ ಶಾಮೀಲು ಆರೋಪ: ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಆಯೋಗಕ್ಕೆ ದೂರು

- Advertisement -
- Advertisement -

ಮಸ್ಕಿ ಉಪಚುನಾವಣೆಯಲ್ಲಿ ಅವ್ಯಾಹತವಾಗಿ ಬಿಜೆಪಿ ಹಣ ಹಂಚುತ್ತಿರುವ ಆರೋಪಗಳು ಮೇಲಿಂದ ಮೇಲೆ ಕೇಳಿ ಬರುತ್ತಿರುವ ಬೆನ್ನಿಗೇ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಮಸ್ಕಿಯಲ್ಲಿ ಚುನಾವಣಾಧಿಕಾರಿಗೆ ದೂರು ಸಲ್ಲಿಸಿತು.

ಚುನಾವಣೆ ಅಕ್ರಮ ಸಂಬಂಧ ಮುದಗಲ್ ಪಿಎಸ್‌ಐ ಡಾಕೇಶ್ ಹಾಗೂ ಬಿಜೆಪಿ ವಿರುದ್ಧ ದೂರು ಸಲ್ಲಿಸಲಾಗಿದ್ದು, ಮಟ್ಟೂರು ಗ್ರಾಮದಲ್ಲಿ ಎರಡು ಚೀಲಗಳಲ್ಲಿ ಬಿಜೆಪಿ ಅಭ್ಯರ್ಥಿ ಪರ ಹಣ ಸಾಗಣೆ ನಡೆದಿದ್ದು, ಕ್ರಮ ಕೈಗೊಳ್ಳಬೇಕಿದ್ದ ಮುದಗಲ್ ಪಿಎಸ್‌ಐ ಡಾಕೇಶ್ ಅದರಲ್ಲಿ ಒಂದು ಚೀಲವನ್ನು ಬೇರೆಡೆ ಸಾಗಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಮಸ್ಕಿಯ ತಾಲೂಕು ಪಂಚಾಯತಿ ಕಚೇರಿಯಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ಭೇಟಿ ನೀಡಿ ದೂರು ದಾಖಲಿಸಿ ಮಾತನಾಡಿದ ಡಿ.ಕೆ ಶಿವಕುಮಾರ್, ಮಸ್ಕಿಯಲ್ಲಿ ಉಪಚುನಾವಣೆ ಕಾನೂನುಬದ್ಧವಾಗಿ ನಡೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಸಂಸದ ಉಗ್ರಪ್ಪ, ಶಾಸಕ ಬಸನಗೌಡ ದದ್ದಲ್, ಮಾಜಿ ಶಾಸಕ ಭೋಸರಾಜ್, ಯುವ ಮುಖಂಡ ಬಸವನಗೌಡ ಬಾದರ್ಲಿ ನಿಯೋಗದಲ್ಲಿದ್ದರು.

ನಿನ್ನೆಯಷ್ಟೇ ತುರ್ವಿಹಾಳದಲ್ಲಿ ಹಾಸನದ ಮೂವರು ಯುವಕರು ಬಿಜೆಪಿ ಪರ ಹಣ ಹಂಚುವಾಗ ಸ್ಥಳೀಯರು ಅವರನ್ನು ಹಿಡಿದು ಪೊಲೀಸರಿಗೆ ಕೊಟ್ಟಿದ್ದರು. ಈ ಕುರಿತು ತುರ್ವಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರು ಯುವಕರಿಂದ 81 ಸಾವಿರ ರೂ. ವಶಪಡಿಸಿಕೊಳ್ಳಲಾಗಿತ್ತು.

ಯುವಕರಿಗೆ ಸ್ಥಳೀಯರು ಒಂದೆರಡು ಏಟು ನೀಡಿ, ಅಂಗಿ ಹರಿದ ವಿಡಿಯೋ ವೈರಲ್ ಆಗಿದೆ. ಈ ಹಿಂದೆಯೂ ಬೆನಕಲ್, ಹಂಚಿನಾಳ ಮುಂತಾದ ಕಡೆ ಬಿಜೆಪಿ ಪರ ಹಣ ಹಂಚುವ ನಾಲ್ಕೈದು ವಿಡಿಯೊಗಳು ವೈರಲ್ ಆಗಿದ್ದವು.

‘ಚುನಾವಣಾ ಆಯೋಗ ಮತ್ತು ಪೊಲೀಸರು ಸರಿಯಾದ ಕ್ರಮ ಜರುಗಿಸುತ್ತಿಲ್ಲ. ಬಿಜೆಪಿ ಹಣ ನೀಡಿ ಚುನಾವಣೆಯ ಎದುರಿಸುತ್ತಿದೆ’ ಎಂದು ರೈತ ಹೋರಾಟಗಾರರು ಮತ್ತು ಕಾಂಗ್ರೆಸ್‌ನ ಸ್ಥಳೀಯ ನಾಯಕರು ಅಪಾದಿಸುತ್ತಲೇ ಬಂದಿದ್ದಾರೆ.


ಇದನ್ನೂ ಓದಿ: ಮಸ್ಕಿ: ಬಿಜೆಪಿ ಪರ ಹಣ ಹಂಚಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಹಾಸನದ ಯುವಕರ ಬಂಧನ; 81 ಸಾವಿರ ರೂ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಿಯಪ್ಪ ಗುಡಿಮನಿ ಸೇರಿದಂತೆ ಮೂವರು ಹೋರಾಟಗಾರರಿಗೆ ಹಂಪಿ ವಿವಿ ಸನ್ಮಾನ

ಹಂಪಿ ಕನ್ನಡ ವಿಶ್ವವಿದ್ಯಾಲಯ ಆಗಸ್ಟ್‌ 15 ರಂದು ಹಿರಿಯ ದಲಿತ ಹೋರಾಟಗಾರರಾದ ಕರಿಯಪ್ಪ ಗುಡಿಮನೆ, ದೇಸಾಯಿ ಗುಂಡೂರಾವ್‌, ಹೆಚ್.‌ ಪಿ. ಶಿಕಾರಿ ಮತ್ತು ಶೇಖಪ್ಪರನ್ನು ಸಾಮಾಜಿಕ ಹೋರಾಟಕ್ಕೆ ತಮ್ಮ ಜೀವನವನ್ನು ಸವೆಸಿದ ಹಿನ್ನೆಲೆಯಲ್ಲಿ...

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಬೇಕು; ಮುಖ್ಯಮಂತ್ರಿಗಳಿಗೆ ನಾಗರಿಕ ಸಂಘಟನೆಗಳ ಮನವಿ

"ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು" ಎಂದು ನಾಗರಿಕ ಸಂಘಟನೆಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ...

SIR: ಕೊಪ್ಪಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ‘ಛತ್ರಪ್ಪ’ ಅವರ ಹೆಸರನ್ನೆ ಕೈಬಿಟ್ಟ ಚುನಾವಣಾ ಆಯೋಗ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳು ದಿಢೀರ್ ನಾಪತ್ತೆಯಾಗುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ಗಂಗಾವತಿಯಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಚಿರಪರಿಚಿತರಾಗಿರುವ, ಗಂಗಾವತಿ ಬಸವ ಕೇಂದ್ರದ...

ಮಹಾರಾಷ್ಟ್ರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ವಿಚಿತ್ರ ವರ್ತನೆ, ಗೆಜ್ಜೆ ಸದ್ದು: ದೆವ್ವದ ಕಾಟವೆಂದು ಹಾಸ್ಟೆಲ್ ತೊರೆದ 600 ಬುಡಕಟ್ಟು ವಿದ್ಯಾರ್ಥಿಗಳು

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ದೂರದ ಮೆಲ್ಘಾಟ್ ಬುಡಕಟ್ಟು ಪ್ರದೇಶದಲ್ಲಿ ಮೂಢನಂಬಿಕೆ ಮತ್ತು ಮಾನಸಿಕ ಭಯದ ವಾತಾವರಣವು ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಚಿಕಲ್ದಾರಾ ತಾಲ್ಲೂಕಿನ ಡೋಮಾ ಗ್ರಾಮದಲ್ಲಿರುವ ಸರ್ಕಾರಿ ಬುಡಕಟ್ಟು ವಸತಿ ಶಾಲೆಯ...

ಉತ್ತರ ಪ್ರದೇಶ| ಕನ್ವಾರಿ ಯಾತ್ರಿಕರ ಹಲ್ಲೆಯಿಂದ ಮುಸ್ಲಿಂ ಯುವಕ ಸಾವು; ಐವರ ಬಂಧನ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಕನ್ವಾರಿ ಯಾತ್ರಿಕರ ಗುಂಪಿನಿಂದ ಹಲ್ಲೆಗೊಳಗಾದ ಮುಸ್ಲಿಂ ಯುವಕ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಕನ್ವಾರಿಗಳನ್ನು ಬಂಧಿಸಲಾಗಿದೆ. ಬ್ರಿಜ್‌ಘಾಟ್ ಟೋಲ್ ಪ್ಲಾಜಾ ಬಳಿ ನಡೆದ ರಸ್ತೆ ಅಪಘಾತದ ನಂತರ ಮೊರಾದಾಬಾದ್...

ಜಾರ್ಖಂಡ್‌ ಸಿಎಂಗೆ ರಾಹುಲ್ ಗಾಂಧಿ ಪತ್ರ, ಉದ್ಯೋಗಾಕಾಂಕ್ಷಿಗಳ ಬೆಂಬಲಕ್ಕೆ ಆಗ್ರಹ

ಜಾರ್ಖಂಡ್‌ನಲ್ಲಿ ರಾಜ್ಯ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ವಿರುದ್ಧ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಹೇಮಂತ್ ಸೋರೆನ್...

“NTA ಮಾಡಿದ ತಪ್ಪಿಗೆ ವಿದ್ಯಾರ್ಥಿಗಳಿಗೆ ಶಿಕ್ಷೆ”: UGC-NET ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ ಪತ್ರಿಕೆಗಳ ಮರುಪರೀಕ್ಷೆ ನಿರ್ಧಾರಕ್ಕೆ ದೇಶಾದ್ಯಂತ ಆಕ್ರೋಶ

ನವದೆಹಲಿ: ಕಳೆದ ಜೂನ್ ತಿಂಗಳಿನಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ್ದ ಯುಜಿಸಿ-ನೆಟ್ (UGC-NET) ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಸಾಲು ಸಾಲು ಗಂಭೀರ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ, ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ...

ಬಿಹಾರದ ಅಶೋಕಧಾಮ ದೇಗುಲದಲ್ಲಿ ಕಾಲ್ತುಳಿತ: ಶ್ರಾವಣ ಸೋಮವಾರದ ಪೂಜೆ ವೇಳೆ 7 ಮಹಿಳೆಯರು ಸಾವು, 12 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಟ್ನಾ/ಲಖಿಸರಾಯ್: ಶ್ರಾವಣ ಮಾಸದ ಪವಿತ್ರ ಸೋಮವಾರದಂದು ಧಾರ್ಮಿಕ ಕೇಂದ್ರವೊಂದರಲ್ಲಿ ಸಂಭವಿಸಿದ ಭೀಕರ ಅಪಘಾತ ಇಡೀ ರಾಜ್ಯವನ್ನೇ ದಿಗ್ಭ್ರಮೆಗೊಳಿಸಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿರುವ ಐತಿಹಾಸಿಕ ಅಶೋಕಧಾಮ ದೇವಾಲಯದ ಆವರಣದ ಬಳಿ ಮುಂಜಾನೆ ನಡೆದ ಭೀಕರ...

ಎಲ್ಲಾ ಯೋಜನೆಗಳೂ ಗುಜರಾತ್‌ಗೇ ಏಕೆ?: ಬಿಜೆಪಿ ಕೇಂದ್ರ ನಾಯಕತ್ವ ವಿರುದ್ಧವೇ ಬಹಿರಂಗವಾಗಿ ತಿರುಗಿಬಿದ್ದ ಅಣ್ಣಾಮಲೈ!

BJP ನಾಯಕತ್ವದ ನಿರ್ಧಾರಗಳು ‘ದೆಹಲಿ ಕೇಂದ್ರಿತ’ ಹಾಗೂ ದೇಶದ ಅಭಿವೃದ್ಧಿ ಮಾದರಿಯು ‘ಗುಜರಾತ್‌ ಕೇಂದ್ರಿತ’ವಾಗುತ್ತಿದೆ ಎಂದು ತಮಿಳುನಾಡು ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ಹಾಗೂ ‘ವಿ ದಿ ಲೀಡರ್ಸ್’ ಸಂಘಟನೆಯ ಸಂಸ್ಥಾಪಕ ಕೆ. ಅಣ್ಣಾಮಲೈ...

ಜಾರ್ಖಂಡ್ ವಿದ್ಯಾರ್ಥಿಗಳ ಹೋರಾಟ; ಹೇಮಂತ್ ಸೊರೇನ್ – ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿದ ಪ್ರತಿಭಟನಾಕಾರರು

ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆಗಸ್ಟ್ 16 ರಂದು (ಭಾನುವಾರ) ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್, ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ...