Homeಕರ್ನಾಟಕಮಸ್ಕಿಯಲ್ಲಿ ಬಿಜೆಪಿಯಿಂದ 2 ಚೀಲ ಹಣ ಸಾಗಣೆ, ಪಿಎಸ್‌ಐ ಶಾಮೀಲು ಆರೋಪ: ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ...

ಮಸ್ಕಿಯಲ್ಲಿ ಬಿಜೆಪಿಯಿಂದ 2 ಚೀಲ ಹಣ ಸಾಗಣೆ, ಪಿಎಸ್‌ಐ ಶಾಮೀಲು ಆರೋಪ: ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಆಯೋಗಕ್ಕೆ ದೂರು

- Advertisement -
- Advertisement -

ಮಸ್ಕಿ ಉಪಚುನಾವಣೆಯಲ್ಲಿ ಅವ್ಯಾಹತವಾಗಿ ಬಿಜೆಪಿ ಹಣ ಹಂಚುತ್ತಿರುವ ಆರೋಪಗಳು ಮೇಲಿಂದ ಮೇಲೆ ಕೇಳಿ ಬರುತ್ತಿರುವ ಬೆನ್ನಿಗೇ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಮಸ್ಕಿಯಲ್ಲಿ ಚುನಾವಣಾಧಿಕಾರಿಗೆ ದೂರು ಸಲ್ಲಿಸಿತು.

ಚುನಾವಣೆ ಅಕ್ರಮ ಸಂಬಂಧ ಮುದಗಲ್ ಪಿಎಸ್‌ಐ ಡಾಕೇಶ್ ಹಾಗೂ ಬಿಜೆಪಿ ವಿರುದ್ಧ ದೂರು ಸಲ್ಲಿಸಲಾಗಿದ್ದು, ಮಟ್ಟೂರು ಗ್ರಾಮದಲ್ಲಿ ಎರಡು ಚೀಲಗಳಲ್ಲಿ ಬಿಜೆಪಿ ಅಭ್ಯರ್ಥಿ ಪರ ಹಣ ಸಾಗಣೆ ನಡೆದಿದ್ದು, ಕ್ರಮ ಕೈಗೊಳ್ಳಬೇಕಿದ್ದ ಮುದಗಲ್ ಪಿಎಸ್‌ಐ ಡಾಕೇಶ್ ಅದರಲ್ಲಿ ಒಂದು ಚೀಲವನ್ನು ಬೇರೆಡೆ ಸಾಗಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಮಸ್ಕಿಯ ತಾಲೂಕು ಪಂಚಾಯತಿ ಕಚೇರಿಯಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ಭೇಟಿ ನೀಡಿ ದೂರು ದಾಖಲಿಸಿ ಮಾತನಾಡಿದ ಡಿ.ಕೆ ಶಿವಕುಮಾರ್, ಮಸ್ಕಿಯಲ್ಲಿ ಉಪಚುನಾವಣೆ ಕಾನೂನುಬದ್ಧವಾಗಿ ನಡೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಸಂಸದ ಉಗ್ರಪ್ಪ, ಶಾಸಕ ಬಸನಗೌಡ ದದ್ದಲ್, ಮಾಜಿ ಶಾಸಕ ಭೋಸರಾಜ್, ಯುವ ಮುಖಂಡ ಬಸವನಗೌಡ ಬಾದರ್ಲಿ ನಿಯೋಗದಲ್ಲಿದ್ದರು.

ನಿನ್ನೆಯಷ್ಟೇ ತುರ್ವಿಹಾಳದಲ್ಲಿ ಹಾಸನದ ಮೂವರು ಯುವಕರು ಬಿಜೆಪಿ ಪರ ಹಣ ಹಂಚುವಾಗ ಸ್ಥಳೀಯರು ಅವರನ್ನು ಹಿಡಿದು ಪೊಲೀಸರಿಗೆ ಕೊಟ್ಟಿದ್ದರು. ಈ ಕುರಿತು ತುರ್ವಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರು ಯುವಕರಿಂದ 81 ಸಾವಿರ ರೂ. ವಶಪಡಿಸಿಕೊಳ್ಳಲಾಗಿತ್ತು.

ಯುವಕರಿಗೆ ಸ್ಥಳೀಯರು ಒಂದೆರಡು ಏಟು ನೀಡಿ, ಅಂಗಿ ಹರಿದ ವಿಡಿಯೋ ವೈರಲ್ ಆಗಿದೆ. ಈ ಹಿಂದೆಯೂ ಬೆನಕಲ್, ಹಂಚಿನಾಳ ಮುಂತಾದ ಕಡೆ ಬಿಜೆಪಿ ಪರ ಹಣ ಹಂಚುವ ನಾಲ್ಕೈದು ವಿಡಿಯೊಗಳು ವೈರಲ್ ಆಗಿದ್ದವು.

‘ಚುನಾವಣಾ ಆಯೋಗ ಮತ್ತು ಪೊಲೀಸರು ಸರಿಯಾದ ಕ್ರಮ ಜರುಗಿಸುತ್ತಿಲ್ಲ. ಬಿಜೆಪಿ ಹಣ ನೀಡಿ ಚುನಾವಣೆಯ ಎದುರಿಸುತ್ತಿದೆ’ ಎಂದು ರೈತ ಹೋರಾಟಗಾರರು ಮತ್ತು ಕಾಂಗ್ರೆಸ್‌ನ ಸ್ಥಳೀಯ ನಾಯಕರು ಅಪಾದಿಸುತ್ತಲೇ ಬಂದಿದ್ದಾರೆ.


ಇದನ್ನೂ ಓದಿ: ಮಸ್ಕಿ: ಬಿಜೆಪಿ ಪರ ಹಣ ಹಂಚಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಹಾಸನದ ಯುವಕರ ಬಂಧನ; 81 ಸಾವಿರ ರೂ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...