Homeಕರ್ನಾಟಕಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ಕರ್ನಾಟಕ ಮಾದರಿಯ ರೈತ ಹೋರಾಟಕ್ಕೆ ಪೂರಕ ಚಳುವಳಿಯೊಂದು ಮಸ್ಕಿಯಲ್ಲಿ ರೂಪುತಳೆಯುತ್ತಿದೆ.

- Advertisement -
- Advertisement -

ಮಸ್ಕಿಯಲ್ಲಿ ಅಭ್ಯರ್ಥಿಗಳು ಅದಲು ಬದಲು, ಜೆಡಿಎಸ್ ಕ್ಯಾಂಡಿಡೆಟೇ ಇಲ್ಲ- ಈ ಪಾಲಿಟಿಕಲ್ ಕತೆಯ ಆಚೆ ಹೋಗೋಣ. ಮುಖ್ಯವಾಹಿನಿ ಮಾಧ್ಯಮಗಳೆಲ್ಲ ಕಾಟಾಚಾರಕ್ಕೆ ಎಂಬಂತೆ ಇಲ್ಲಿನ ಒಂದು ‘ಪುಟ್ಟ’ ನೀರಾವರಿ ಹೋರಾಟದ ಬಗ್ಗೆ ಬರೆದಿವೆ. ಅದು ಕೇವಲ ಕೊಪ್ಪಳ-ರಾಯಚೂರು ಸುದ್ದಿ ಎಂಬಂತೆ ಅವು ವರ್ತಿಸಿವೆ.

ದೆಹಲಿ ಗಡಿಗಳನ್ನು ಮೀರಿ ಕರ್ನಾಟಕಕ್ಕೂ ತಲುಪಿದ ರೈತ ಹೋರಾಟದ ಸಂದರ್ಭದಲ್ಲಿ ಇಲ್ಲಿ ನಮ್ಮದೇ ಮಾದರಿಯ ರೈತ ಚಳವಳಿ ಕಟ್ಟುವ ಮಾತು ಕೇಳಿ ಬಂದಿವೆ. ಇಂತಹ ಚಳುವಳಿ ನೀರಿಗಾಗಿ 100 ದಿನ ದಾಟಿ ನಡೆದಿರುವ ಈ ಪುಟ್ಟ ಹೋರಾಟವನ್ನು ಗಣನೆಗೆ ತೆಗೆದುಕೊಳ್ಳಬೇಕು. ಕೃಷಿ ಸಚಿವ ಬಿ.ಸಿ ಪಾಟೀಲರ ಕೇತ್ರದ ರಟ್ಟಿಹಳ್ಳಿಯಲ್ಲಿ ಒಂದು ರೈತ ಹೋರಾಟ ಇನ್ನೂ ಜೀವಂತವಾಗಿದೆ. ಅವರು ನೀರು ಕೇಳುತ್ತಿಲ್ಲ, ಬದಲಿಗೆ ಶಿವಮೊಗ್ಗದ ಭೂಮಿಗೆ ನೀರು ಒದಗಿಸಲು ತಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳುತ್ತಿರುವ ಪ್ರಕ್ರಿಯೆ ವಿರುದ್ಧ ಅವರ ಹೋರಾಟವಿದೆ.

ನೀರು ಬೇಕು, ಭೂಮಿ ಉಳಿಯಬೇಕು ಎಂಬ ಈ ಎರಡು ರೈತ ಹೋರಾಟಗಳಲ್ಲಿ ವೈಪರೀತ್ಯ ಕಾಣಿಸಬಹುದು. ಆದರೆ, ಎರಡೂ ಬದುಕಿಗಾಗಿ ನಡೆಯುತ್ತಿರುವ ಹೋರಾಟಗಳೇ ಅಲ್ಲವೇ? ಕರ್ನಾಟಕ ಮಾದರಿಯ ರೈತ ಚಳುವಳಿ ಕಟ್ಟುವಾಗ ಈ ಪುಟ್ಟ ಹೋರಾಟದ ತೊರೆಗಳನ್ನು, ಇಲ್ಲಿನ ‘ಮೇಲ್ನೋಟದ’ ವೈಪರೀತ್ಯಗಳನ್ನು ಗಮನಿಸಬೇಕು…

ಮತ್ತೆ ಮಸ್ಕಿಗೆ ಬರೋಣ, ಆದರೆ ಅದು ಸಿಂಧನೂರು ಮೂಲಕವೇ ಬರಬೇಕು! ಈ ಉಪ ಚುನಾವಣೆಯಲ್ಲಿ ಈ ನೀರಾವರಿ ಹೋರಾಟ ಒಂದು ಗುಪ್ತಗಾಮಿನಿಯ ರಭಸದಂತೆ ಹರಿಯುತ್ತಿದೆ. ಅದು ತಮ್ಮೂರ ಹೊಲಗಳಿಗೆ ನೀರನ್ನು ಬೇಡುತ್ತಿದೆ. ಚುನಾವಣೆ ಇರುವ ಮತಕ್ಷೇತ್ರದ 107 ಗ್ರಾಮಗಳು, ಅದರಲ್ಲೂ ಮುಖ್ಯವಾಗಿ 58 ಗ್ರಾಮಗಳು ಈಗ ಹೋರಾಟಕ್ಕೆ ನಿಂತಿವೆ. ಅವೇನೂ ಬೇರೆಯವರ ಪಾಲಿನ ನೀರು ಕೇಳುತ್ತಿಲ್ಲ. ಆಂಧ್ರಪ್ರದೇಶದ ಭೂಮಿಗೆ ಸೇರಬೇಕಾದ ನೀರನ್ನು ಕಬಳಿಸಲು ಯತ್ನಿಸುತ್ತಿಲ್ಲ. ಸುಖಾಸುಮ್ಮನೇ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ಅವರು ನಮ್ಮ ಹೊಲಕ್ಕ ಕೊಡ್ರಿ ಅನ್ನುತ್ತಿದ್ದಾರೆ.

ಏನಿದು NRBC_5A ಯೋಜನೆ?

ಮಸ್ಕಿ ತಾಲ್ಲೂಕಿನ ಬರಪೀಡಿತ 58 ಹಳ್ಳಿಗಳ ಗ್ರಾಮಸ್ಥರು, ರೈತರು ನಾರಾಯಣಪೂರ ಬಲದಂಡೆ ಕಾಲುವೆ 5(ಎ) ಪಾಮನ ಕಲ್ಲೂರು ಶಾಲಾ ಕಾಲುವೆ ಯೋಜನೆಯ ಮೂಲಕ ತಮ್ಮ ಗ್ರಾಮಗಳಿಗೆ ನೀರಾವರಿ ಯೋಜನೆ ಬೇಕೆಂದು ಆಗ್ರಹಿಸಿ ಕಳೆದ 12 ವರ್ಷಗಳಿಂದ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕ ನೀರಾವರಿ ಸಂಘ ಕಟ್ಟಿ ತಮ್ಮೂರಿಗೆ ಕಾಲುವೇ ನೀರು ಬಿಡಬೇಕೆಂದು ನೂರಾರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಈ 12 ವರ್ಷಗಳ ಅವಧಿಯಲ್ಲಿ ನಾಲ್ಕು ಸರ್ಕಾರಗಳು ಬದಲಾಗಿವೆ. ಎಲ್ಲಾ ಸರ್ಕಾರಗಳು ಭರವಸೆ ನೀಡಿವೆಯೇ ಹೊರತು ಒಬ್ಬರು ಕಾರ್ಯರೂಪಕ್ಕೆ ತಂದಿಲ್ಲ ಎಂದು ರೈತರು ಆರೋಪಿಸುತ್ತಾರೆ.

ಮಸ್ಕಿ ಮತ ಕ್ಷೇತ್ರ

ಮಸ್ಕಿ ಕೇತ್ರವೇ ಭೌಗೋಳಿಕವಾಗಿ ಒಂದು ವೈಪರೀತ್ಯಗಳ ಕ್ಷೇತ್ರ. ಮಸ್ಕಿ ಮತ್ತು ಸಿಂಧನೂರು ತಾಲೂಕುಗಳ ನೂರಾರು ಗ್ರಾಮಗಳು ಸೇರಿ ಮಸ್ಕಿ ಮತಕ್ಷೇತ್ರವಾಗಿದೆ. ಆದರೆ ಹರಿವ ನೀರಿಗೆ ಈ ಭೌಗೋಳಿಕ ಬಾರ್ಡರ್‌ಗಳು ಇಲ್ಲ.

1.72 ಲಕ್ಷ ಹೆಕ್ಟೇರ್ ಭೂಮಿಗೆ ಕೃಷ್ಣಾ ನೀರು ಕೊಡಿ ಎಂಬುದು 107 ಹಳ್ಳಿಗಳ, ಮುಖ್ಯವಾಗಿ 58 ಹಳ್ಳಿಗಳ ಹಕ್ಕೊತ್ತಾಯ. ನೆನಪಿಡಿ, ಇಲ್ಲಿ ತುಂಗಭದ್ರಾ ನೀರನ್ನು ಅವರು ಕೇಳುತ್ತಿಲ್ಲ. ಈ ಮಾತು ಏಕೆ ಹೇಳಬೇಕಿದೆ ಎಂದರೆ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಹೆಸರಲ್ಲಿ ಸರ್ಕಾರ ವಂಚನೆ ಮಾಡುತ್ತಿದೆ. ಮತ್ತೊಮ್ಮೆ ಪಕ್ಕಾ ಮಾಡಿಕೊಳ್ಳಿ, ತುಂಗಭದ್ರೆಯಲ್ಲ, ಇಲ್ಲಿಗೆ ಬೇಕಿರುವುದು ಕೃಷ್ಣೆ.

ಮಸ್ಕಿ-ಲಿಂಗಸುಗೂರು ಹೆದ್ದಾರಿಯಲ್ಲಿ ಬರುವ ಪಾಮನ ಕಲ್ಲೂರು ಎಂಬ ಗ್ರಾಮದಲ್ಲಿ ನೀರಿಗಾಗಿ ಈ ಹೋರಾಟ ನಡೆದಿದೆ, ಅದೀಗ 125 ದಿನ ದಾಟಿದೆ ಕೂಡ. ಈ ಹೋರಾಟಕ್ಕೆ ಬೆಂಬಲ ನೀಡುತ್ತಿರುವ ಚಂದ್ರಶೇಖರ್ ಗೋರಬಾಳ ನಾನುಗೌರಿ.ಕಾಂ ಜೊತೆ ಮಾತನಾಡಿ, ‘ಈ ಹೋರಾಟ ನೂರಾರು ಹಳ್ಳಿಗಳ ಜನರ ಜೀವನ್ಮರಣದ ಪ್ರಶ್ನೆ. ಹೋರಾಟವೇ ಬೇರೆ ರಾಜಕೀಯವೇ ಬೇರೆ ಎನ್ನಲೂ ಆಗದು. ಈ ಸಲದ ಚುನಾವಣಾ ಫಲಿತಾಂಶದಲ್ಲಿ ಈ ಹೋರಾಟವೇ ಡಿಸೈಡಿಂಗ್ ಫ್ಯಾಕ್ಟರ್ ಆಗಲಿದೆ, ಆಗಲೇಬೇಕು- ಡೆಮಾಕ್ರಸಿಯ ಹಿತಕ್ಕಾಗಿ’ ಎಂದಿದ್ದಾರೆ.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ


ಇದನ್ನೂ ಓದಿ: ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...