Homeಕರ್ನಾಟಕಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ಕರ್ನಾಟಕ ಮಾದರಿಯ ರೈತ ಹೋರಾಟಕ್ಕೆ ಪೂರಕ ಚಳುವಳಿಯೊಂದು ಮಸ್ಕಿಯಲ್ಲಿ ರೂಪುತಳೆಯುತ್ತಿದೆ.

- Advertisement -
- Advertisement -

ಮಸ್ಕಿಯಲ್ಲಿ ಅಭ್ಯರ್ಥಿಗಳು ಅದಲು ಬದಲು, ಜೆಡಿಎಸ್ ಕ್ಯಾಂಡಿಡೆಟೇ ಇಲ್ಲ- ಈ ಪಾಲಿಟಿಕಲ್ ಕತೆಯ ಆಚೆ ಹೋಗೋಣ. ಮುಖ್ಯವಾಹಿನಿ ಮಾಧ್ಯಮಗಳೆಲ್ಲ ಕಾಟಾಚಾರಕ್ಕೆ ಎಂಬಂತೆ ಇಲ್ಲಿನ ಒಂದು ‘ಪುಟ್ಟ’ ನೀರಾವರಿ ಹೋರಾಟದ ಬಗ್ಗೆ ಬರೆದಿವೆ. ಅದು ಕೇವಲ ಕೊಪ್ಪಳ-ರಾಯಚೂರು ಸುದ್ದಿ ಎಂಬಂತೆ ಅವು ವರ್ತಿಸಿವೆ.

ದೆಹಲಿ ಗಡಿಗಳನ್ನು ಮೀರಿ ಕರ್ನಾಟಕಕ್ಕೂ ತಲುಪಿದ ರೈತ ಹೋರಾಟದ ಸಂದರ್ಭದಲ್ಲಿ ಇಲ್ಲಿ ನಮ್ಮದೇ ಮಾದರಿಯ ರೈತ ಚಳವಳಿ ಕಟ್ಟುವ ಮಾತು ಕೇಳಿ ಬಂದಿವೆ. ಇಂತಹ ಚಳುವಳಿ ನೀರಿಗಾಗಿ 100 ದಿನ ದಾಟಿ ನಡೆದಿರುವ ಈ ಪುಟ್ಟ ಹೋರಾಟವನ್ನು ಗಣನೆಗೆ ತೆಗೆದುಕೊಳ್ಳಬೇಕು. ಕೃಷಿ ಸಚಿವ ಬಿ.ಸಿ ಪಾಟೀಲರ ಕೇತ್ರದ ರಟ್ಟಿಹಳ್ಳಿಯಲ್ಲಿ ಒಂದು ರೈತ ಹೋರಾಟ ಇನ್ನೂ ಜೀವಂತವಾಗಿದೆ. ಅವರು ನೀರು ಕೇಳುತ್ತಿಲ್ಲ, ಬದಲಿಗೆ ಶಿವಮೊಗ್ಗದ ಭೂಮಿಗೆ ನೀರು ಒದಗಿಸಲು ತಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳುತ್ತಿರುವ ಪ್ರಕ್ರಿಯೆ ವಿರುದ್ಧ ಅವರ ಹೋರಾಟವಿದೆ.

ನೀರು ಬೇಕು, ಭೂಮಿ ಉಳಿಯಬೇಕು ಎಂಬ ಈ ಎರಡು ರೈತ ಹೋರಾಟಗಳಲ್ಲಿ ವೈಪರೀತ್ಯ ಕಾಣಿಸಬಹುದು. ಆದರೆ, ಎರಡೂ ಬದುಕಿಗಾಗಿ ನಡೆಯುತ್ತಿರುವ ಹೋರಾಟಗಳೇ ಅಲ್ಲವೇ? ಕರ್ನಾಟಕ ಮಾದರಿಯ ರೈತ ಚಳುವಳಿ ಕಟ್ಟುವಾಗ ಈ ಪುಟ್ಟ ಹೋರಾಟದ ತೊರೆಗಳನ್ನು, ಇಲ್ಲಿನ ‘ಮೇಲ್ನೋಟದ’ ವೈಪರೀತ್ಯಗಳನ್ನು ಗಮನಿಸಬೇಕು…

ಮತ್ತೆ ಮಸ್ಕಿಗೆ ಬರೋಣ, ಆದರೆ ಅದು ಸಿಂಧನೂರು ಮೂಲಕವೇ ಬರಬೇಕು! ಈ ಉಪ ಚುನಾವಣೆಯಲ್ಲಿ ಈ ನೀರಾವರಿ ಹೋರಾಟ ಒಂದು ಗುಪ್ತಗಾಮಿನಿಯ ರಭಸದಂತೆ ಹರಿಯುತ್ತಿದೆ. ಅದು ತಮ್ಮೂರ ಹೊಲಗಳಿಗೆ ನೀರನ್ನು ಬೇಡುತ್ತಿದೆ. ಚುನಾವಣೆ ಇರುವ ಮತಕ್ಷೇತ್ರದ 107 ಗ್ರಾಮಗಳು, ಅದರಲ್ಲೂ ಮುಖ್ಯವಾಗಿ 58 ಗ್ರಾಮಗಳು ಈಗ ಹೋರಾಟಕ್ಕೆ ನಿಂತಿವೆ. ಅವೇನೂ ಬೇರೆಯವರ ಪಾಲಿನ ನೀರು ಕೇಳುತ್ತಿಲ್ಲ. ಆಂಧ್ರಪ್ರದೇಶದ ಭೂಮಿಗೆ ಸೇರಬೇಕಾದ ನೀರನ್ನು ಕಬಳಿಸಲು ಯತ್ನಿಸುತ್ತಿಲ್ಲ. ಸುಖಾಸುಮ್ಮನೇ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ಅವರು ನಮ್ಮ ಹೊಲಕ್ಕ ಕೊಡ್ರಿ ಅನ್ನುತ್ತಿದ್ದಾರೆ.

ಏನಿದು NRBC_5A ಯೋಜನೆ?

ಮಸ್ಕಿ ತಾಲ್ಲೂಕಿನ ಬರಪೀಡಿತ 58 ಹಳ್ಳಿಗಳ ಗ್ರಾಮಸ್ಥರು, ರೈತರು ನಾರಾಯಣಪೂರ ಬಲದಂಡೆ ಕಾಲುವೆ 5(ಎ) ಪಾಮನ ಕಲ್ಲೂರು ಶಾಲಾ ಕಾಲುವೆ ಯೋಜನೆಯ ಮೂಲಕ ತಮ್ಮ ಗ್ರಾಮಗಳಿಗೆ ನೀರಾವರಿ ಯೋಜನೆ ಬೇಕೆಂದು ಆಗ್ರಹಿಸಿ ಕಳೆದ 12 ವರ್ಷಗಳಿಂದ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕ ನೀರಾವರಿ ಸಂಘ ಕಟ್ಟಿ ತಮ್ಮೂರಿಗೆ ಕಾಲುವೇ ನೀರು ಬಿಡಬೇಕೆಂದು ನೂರಾರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಈ 12 ವರ್ಷಗಳ ಅವಧಿಯಲ್ಲಿ ನಾಲ್ಕು ಸರ್ಕಾರಗಳು ಬದಲಾಗಿವೆ. ಎಲ್ಲಾ ಸರ್ಕಾರಗಳು ಭರವಸೆ ನೀಡಿವೆಯೇ ಹೊರತು ಒಬ್ಬರು ಕಾರ್ಯರೂಪಕ್ಕೆ ತಂದಿಲ್ಲ ಎಂದು ರೈತರು ಆರೋಪಿಸುತ್ತಾರೆ.

ಮಸ್ಕಿ ಮತ ಕ್ಷೇತ್ರ

ಮಸ್ಕಿ ಕೇತ್ರವೇ ಭೌಗೋಳಿಕವಾಗಿ ಒಂದು ವೈಪರೀತ್ಯಗಳ ಕ್ಷೇತ್ರ. ಮಸ್ಕಿ ಮತ್ತು ಸಿಂಧನೂರು ತಾಲೂಕುಗಳ ನೂರಾರು ಗ್ರಾಮಗಳು ಸೇರಿ ಮಸ್ಕಿ ಮತಕ್ಷೇತ್ರವಾಗಿದೆ. ಆದರೆ ಹರಿವ ನೀರಿಗೆ ಈ ಭೌಗೋಳಿಕ ಬಾರ್ಡರ್‌ಗಳು ಇಲ್ಲ.

1.72 ಲಕ್ಷ ಹೆಕ್ಟೇರ್ ಭೂಮಿಗೆ ಕೃಷ್ಣಾ ನೀರು ಕೊಡಿ ಎಂಬುದು 107 ಹಳ್ಳಿಗಳ, ಮುಖ್ಯವಾಗಿ 58 ಹಳ್ಳಿಗಳ ಹಕ್ಕೊತ್ತಾಯ. ನೆನಪಿಡಿ, ಇಲ್ಲಿ ತುಂಗಭದ್ರಾ ನೀರನ್ನು ಅವರು ಕೇಳುತ್ತಿಲ್ಲ. ಈ ಮಾತು ಏಕೆ ಹೇಳಬೇಕಿದೆ ಎಂದರೆ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಹೆಸರಲ್ಲಿ ಸರ್ಕಾರ ವಂಚನೆ ಮಾಡುತ್ತಿದೆ. ಮತ್ತೊಮ್ಮೆ ಪಕ್ಕಾ ಮಾಡಿಕೊಳ್ಳಿ, ತುಂಗಭದ್ರೆಯಲ್ಲ, ಇಲ್ಲಿಗೆ ಬೇಕಿರುವುದು ಕೃಷ್ಣೆ.

ಮಸ್ಕಿ-ಲಿಂಗಸುಗೂರು ಹೆದ್ದಾರಿಯಲ್ಲಿ ಬರುವ ಪಾಮನ ಕಲ್ಲೂರು ಎಂಬ ಗ್ರಾಮದಲ್ಲಿ ನೀರಿಗಾಗಿ ಈ ಹೋರಾಟ ನಡೆದಿದೆ, ಅದೀಗ 125 ದಿನ ದಾಟಿದೆ ಕೂಡ. ಈ ಹೋರಾಟಕ್ಕೆ ಬೆಂಬಲ ನೀಡುತ್ತಿರುವ ಚಂದ್ರಶೇಖರ್ ಗೋರಬಾಳ ನಾನುಗೌರಿ.ಕಾಂ ಜೊತೆ ಮಾತನಾಡಿ, ‘ಈ ಹೋರಾಟ ನೂರಾರು ಹಳ್ಳಿಗಳ ಜನರ ಜೀವನ್ಮರಣದ ಪ್ರಶ್ನೆ. ಹೋರಾಟವೇ ಬೇರೆ ರಾಜಕೀಯವೇ ಬೇರೆ ಎನ್ನಲೂ ಆಗದು. ಈ ಸಲದ ಚುನಾವಣಾ ಫಲಿತಾಂಶದಲ್ಲಿ ಈ ಹೋರಾಟವೇ ಡಿಸೈಡಿಂಗ್ ಫ್ಯಾಕ್ಟರ್ ಆಗಲಿದೆ, ಆಗಲೇಬೇಕು- ಡೆಮಾಕ್ರಸಿಯ ಹಿತಕ್ಕಾಗಿ’ ಎಂದಿದ್ದಾರೆ.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ


ಇದನ್ನೂ ಓದಿ: ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...