Homeಕರ್ನಾಟಕಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ಕರ್ನಾಟಕ ಮಾದರಿಯ ರೈತ ಹೋರಾಟಕ್ಕೆ ಪೂರಕ ಚಳುವಳಿಯೊಂದು ಮಸ್ಕಿಯಲ್ಲಿ ರೂಪುತಳೆಯುತ್ತಿದೆ.

- Advertisement -
- Advertisement -

ಮಸ್ಕಿಯಲ್ಲಿ ಅಭ್ಯರ್ಥಿಗಳು ಅದಲು ಬದಲು, ಜೆಡಿಎಸ್ ಕ್ಯಾಂಡಿಡೆಟೇ ಇಲ್ಲ- ಈ ಪಾಲಿಟಿಕಲ್ ಕತೆಯ ಆಚೆ ಹೋಗೋಣ. ಮುಖ್ಯವಾಹಿನಿ ಮಾಧ್ಯಮಗಳೆಲ್ಲ ಕಾಟಾಚಾರಕ್ಕೆ ಎಂಬಂತೆ ಇಲ್ಲಿನ ಒಂದು ‘ಪುಟ್ಟ’ ನೀರಾವರಿ ಹೋರಾಟದ ಬಗ್ಗೆ ಬರೆದಿವೆ. ಅದು ಕೇವಲ ಕೊಪ್ಪಳ-ರಾಯಚೂರು ಸುದ್ದಿ ಎಂಬಂತೆ ಅವು ವರ್ತಿಸಿವೆ.

ದೆಹಲಿ ಗಡಿಗಳನ್ನು ಮೀರಿ ಕರ್ನಾಟಕಕ್ಕೂ ತಲುಪಿದ ರೈತ ಹೋರಾಟದ ಸಂದರ್ಭದಲ್ಲಿ ಇಲ್ಲಿ ನಮ್ಮದೇ ಮಾದರಿಯ ರೈತ ಚಳವಳಿ ಕಟ್ಟುವ ಮಾತು ಕೇಳಿ ಬಂದಿವೆ. ಇಂತಹ ಚಳುವಳಿ ನೀರಿಗಾಗಿ 100 ದಿನ ದಾಟಿ ನಡೆದಿರುವ ಈ ಪುಟ್ಟ ಹೋರಾಟವನ್ನು ಗಣನೆಗೆ ತೆಗೆದುಕೊಳ್ಳಬೇಕು. ಕೃಷಿ ಸಚಿವ ಬಿ.ಸಿ ಪಾಟೀಲರ ಕೇತ್ರದ ರಟ್ಟಿಹಳ್ಳಿಯಲ್ಲಿ ಒಂದು ರೈತ ಹೋರಾಟ ಇನ್ನೂ ಜೀವಂತವಾಗಿದೆ. ಅವರು ನೀರು ಕೇಳುತ್ತಿಲ್ಲ, ಬದಲಿಗೆ ಶಿವಮೊಗ್ಗದ ಭೂಮಿಗೆ ನೀರು ಒದಗಿಸಲು ತಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳುತ್ತಿರುವ ಪ್ರಕ್ರಿಯೆ ವಿರುದ್ಧ ಅವರ ಹೋರಾಟವಿದೆ.

ನೀರು ಬೇಕು, ಭೂಮಿ ಉಳಿಯಬೇಕು ಎಂಬ ಈ ಎರಡು ರೈತ ಹೋರಾಟಗಳಲ್ಲಿ ವೈಪರೀತ್ಯ ಕಾಣಿಸಬಹುದು. ಆದರೆ, ಎರಡೂ ಬದುಕಿಗಾಗಿ ನಡೆಯುತ್ತಿರುವ ಹೋರಾಟಗಳೇ ಅಲ್ಲವೇ? ಕರ್ನಾಟಕ ಮಾದರಿಯ ರೈತ ಚಳುವಳಿ ಕಟ್ಟುವಾಗ ಈ ಪುಟ್ಟ ಹೋರಾಟದ ತೊರೆಗಳನ್ನು, ಇಲ್ಲಿನ ‘ಮೇಲ್ನೋಟದ’ ವೈಪರೀತ್ಯಗಳನ್ನು ಗಮನಿಸಬೇಕು…

ಮತ್ತೆ ಮಸ್ಕಿಗೆ ಬರೋಣ, ಆದರೆ ಅದು ಸಿಂಧನೂರು ಮೂಲಕವೇ ಬರಬೇಕು! ಈ ಉಪ ಚುನಾವಣೆಯಲ್ಲಿ ಈ ನೀರಾವರಿ ಹೋರಾಟ ಒಂದು ಗುಪ್ತಗಾಮಿನಿಯ ರಭಸದಂತೆ ಹರಿಯುತ್ತಿದೆ. ಅದು ತಮ್ಮೂರ ಹೊಲಗಳಿಗೆ ನೀರನ್ನು ಬೇಡುತ್ತಿದೆ. ಚುನಾವಣೆ ಇರುವ ಮತಕ್ಷೇತ್ರದ 107 ಗ್ರಾಮಗಳು, ಅದರಲ್ಲೂ ಮುಖ್ಯವಾಗಿ 58 ಗ್ರಾಮಗಳು ಈಗ ಹೋರಾಟಕ್ಕೆ ನಿಂತಿವೆ. ಅವೇನೂ ಬೇರೆಯವರ ಪಾಲಿನ ನೀರು ಕೇಳುತ್ತಿಲ್ಲ. ಆಂಧ್ರಪ್ರದೇಶದ ಭೂಮಿಗೆ ಸೇರಬೇಕಾದ ನೀರನ್ನು ಕಬಳಿಸಲು ಯತ್ನಿಸುತ್ತಿಲ್ಲ. ಸುಖಾಸುಮ್ಮನೇ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ಅವರು ನಮ್ಮ ಹೊಲಕ್ಕ ಕೊಡ್ರಿ ಅನ್ನುತ್ತಿದ್ದಾರೆ.

ಏನಿದು NRBC_5A ಯೋಜನೆ?

ಮಸ್ಕಿ ತಾಲ್ಲೂಕಿನ ಬರಪೀಡಿತ 58 ಹಳ್ಳಿಗಳ ಗ್ರಾಮಸ್ಥರು, ರೈತರು ನಾರಾಯಣಪೂರ ಬಲದಂಡೆ ಕಾಲುವೆ 5(ಎ) ಪಾಮನ ಕಲ್ಲೂರು ಶಾಲಾ ಕಾಲುವೆ ಯೋಜನೆಯ ಮೂಲಕ ತಮ್ಮ ಗ್ರಾಮಗಳಿಗೆ ನೀರಾವರಿ ಯೋಜನೆ ಬೇಕೆಂದು ಆಗ್ರಹಿಸಿ ಕಳೆದ 12 ವರ್ಷಗಳಿಂದ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕ ನೀರಾವರಿ ಸಂಘ ಕಟ್ಟಿ ತಮ್ಮೂರಿಗೆ ಕಾಲುವೇ ನೀರು ಬಿಡಬೇಕೆಂದು ನೂರಾರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಈ 12 ವರ್ಷಗಳ ಅವಧಿಯಲ್ಲಿ ನಾಲ್ಕು ಸರ್ಕಾರಗಳು ಬದಲಾಗಿವೆ. ಎಲ್ಲಾ ಸರ್ಕಾರಗಳು ಭರವಸೆ ನೀಡಿವೆಯೇ ಹೊರತು ಒಬ್ಬರು ಕಾರ್ಯರೂಪಕ್ಕೆ ತಂದಿಲ್ಲ ಎಂದು ರೈತರು ಆರೋಪಿಸುತ್ತಾರೆ.

ಮಸ್ಕಿ ಮತ ಕ್ಷೇತ್ರ

ಮಸ್ಕಿ ಕೇತ್ರವೇ ಭೌಗೋಳಿಕವಾಗಿ ಒಂದು ವೈಪರೀತ್ಯಗಳ ಕ್ಷೇತ್ರ. ಮಸ್ಕಿ ಮತ್ತು ಸಿಂಧನೂರು ತಾಲೂಕುಗಳ ನೂರಾರು ಗ್ರಾಮಗಳು ಸೇರಿ ಮಸ್ಕಿ ಮತಕ್ಷೇತ್ರವಾಗಿದೆ. ಆದರೆ ಹರಿವ ನೀರಿಗೆ ಈ ಭೌಗೋಳಿಕ ಬಾರ್ಡರ್‌ಗಳು ಇಲ್ಲ.

1.72 ಲಕ್ಷ ಹೆಕ್ಟೇರ್ ಭೂಮಿಗೆ ಕೃಷ್ಣಾ ನೀರು ಕೊಡಿ ಎಂಬುದು 107 ಹಳ್ಳಿಗಳ, ಮುಖ್ಯವಾಗಿ 58 ಹಳ್ಳಿಗಳ ಹಕ್ಕೊತ್ತಾಯ. ನೆನಪಿಡಿ, ಇಲ್ಲಿ ತುಂಗಭದ್ರಾ ನೀರನ್ನು ಅವರು ಕೇಳುತ್ತಿಲ್ಲ. ಈ ಮಾತು ಏಕೆ ಹೇಳಬೇಕಿದೆ ಎಂದರೆ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಹೆಸರಲ್ಲಿ ಸರ್ಕಾರ ವಂಚನೆ ಮಾಡುತ್ತಿದೆ. ಮತ್ತೊಮ್ಮೆ ಪಕ್ಕಾ ಮಾಡಿಕೊಳ್ಳಿ, ತುಂಗಭದ್ರೆಯಲ್ಲ, ಇಲ್ಲಿಗೆ ಬೇಕಿರುವುದು ಕೃಷ್ಣೆ.

ಮಸ್ಕಿ-ಲಿಂಗಸುಗೂರು ಹೆದ್ದಾರಿಯಲ್ಲಿ ಬರುವ ಪಾಮನ ಕಲ್ಲೂರು ಎಂಬ ಗ್ರಾಮದಲ್ಲಿ ನೀರಿಗಾಗಿ ಈ ಹೋರಾಟ ನಡೆದಿದೆ, ಅದೀಗ 125 ದಿನ ದಾಟಿದೆ ಕೂಡ. ಈ ಹೋರಾಟಕ್ಕೆ ಬೆಂಬಲ ನೀಡುತ್ತಿರುವ ಚಂದ್ರಶೇಖರ್ ಗೋರಬಾಳ ನಾನುಗೌರಿ.ಕಾಂ ಜೊತೆ ಮಾತನಾಡಿ, ‘ಈ ಹೋರಾಟ ನೂರಾರು ಹಳ್ಳಿಗಳ ಜನರ ಜೀವನ್ಮರಣದ ಪ್ರಶ್ನೆ. ಹೋರಾಟವೇ ಬೇರೆ ರಾಜಕೀಯವೇ ಬೇರೆ ಎನ್ನಲೂ ಆಗದು. ಈ ಸಲದ ಚುನಾವಣಾ ಫಲಿತಾಂಶದಲ್ಲಿ ಈ ಹೋರಾಟವೇ ಡಿಸೈಡಿಂಗ್ ಫ್ಯಾಕ್ಟರ್ ಆಗಲಿದೆ, ಆಗಲೇಬೇಕು- ಡೆಮಾಕ್ರಸಿಯ ಹಿತಕ್ಕಾಗಿ’ ಎಂದಿದ್ದಾರೆ.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ


ಇದನ್ನೂ ಓದಿ: ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....