Homeಕರ್ನಾಟಕಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ಕರ್ನಾಟಕ ಮಾದರಿಯ ರೈತ ಹೋರಾಟಕ್ಕೆ ಪೂರಕ ಚಳುವಳಿಯೊಂದು ಮಸ್ಕಿಯಲ್ಲಿ ರೂಪುತಳೆಯುತ್ತಿದೆ.

- Advertisement -
- Advertisement -

ಮಸ್ಕಿಯಲ್ಲಿ ಅಭ್ಯರ್ಥಿಗಳು ಅದಲು ಬದಲು, ಜೆಡಿಎಸ್ ಕ್ಯಾಂಡಿಡೆಟೇ ಇಲ್ಲ- ಈ ಪಾಲಿಟಿಕಲ್ ಕತೆಯ ಆಚೆ ಹೋಗೋಣ. ಮುಖ್ಯವಾಹಿನಿ ಮಾಧ್ಯಮಗಳೆಲ್ಲ ಕಾಟಾಚಾರಕ್ಕೆ ಎಂಬಂತೆ ಇಲ್ಲಿನ ಒಂದು ‘ಪುಟ್ಟ’ ನೀರಾವರಿ ಹೋರಾಟದ ಬಗ್ಗೆ ಬರೆದಿವೆ. ಅದು ಕೇವಲ ಕೊಪ್ಪಳ-ರಾಯಚೂರು ಸುದ್ದಿ ಎಂಬಂತೆ ಅವು ವರ್ತಿಸಿವೆ.

ದೆಹಲಿ ಗಡಿಗಳನ್ನು ಮೀರಿ ಕರ್ನಾಟಕಕ್ಕೂ ತಲುಪಿದ ರೈತ ಹೋರಾಟದ ಸಂದರ್ಭದಲ್ಲಿ ಇಲ್ಲಿ ನಮ್ಮದೇ ಮಾದರಿಯ ರೈತ ಚಳವಳಿ ಕಟ್ಟುವ ಮಾತು ಕೇಳಿ ಬಂದಿವೆ. ಇಂತಹ ಚಳುವಳಿ ನೀರಿಗಾಗಿ 100 ದಿನ ದಾಟಿ ನಡೆದಿರುವ ಈ ಪುಟ್ಟ ಹೋರಾಟವನ್ನು ಗಣನೆಗೆ ತೆಗೆದುಕೊಳ್ಳಬೇಕು. ಕೃಷಿ ಸಚಿವ ಬಿ.ಸಿ ಪಾಟೀಲರ ಕೇತ್ರದ ರಟ್ಟಿಹಳ್ಳಿಯಲ್ಲಿ ಒಂದು ರೈತ ಹೋರಾಟ ಇನ್ನೂ ಜೀವಂತವಾಗಿದೆ. ಅವರು ನೀರು ಕೇಳುತ್ತಿಲ್ಲ, ಬದಲಿಗೆ ಶಿವಮೊಗ್ಗದ ಭೂಮಿಗೆ ನೀರು ಒದಗಿಸಲು ತಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳುತ್ತಿರುವ ಪ್ರಕ್ರಿಯೆ ವಿರುದ್ಧ ಅವರ ಹೋರಾಟವಿದೆ.

ನೀರು ಬೇಕು, ಭೂಮಿ ಉಳಿಯಬೇಕು ಎಂಬ ಈ ಎರಡು ರೈತ ಹೋರಾಟಗಳಲ್ಲಿ ವೈಪರೀತ್ಯ ಕಾಣಿಸಬಹುದು. ಆದರೆ, ಎರಡೂ ಬದುಕಿಗಾಗಿ ನಡೆಯುತ್ತಿರುವ ಹೋರಾಟಗಳೇ ಅಲ್ಲವೇ? ಕರ್ನಾಟಕ ಮಾದರಿಯ ರೈತ ಚಳುವಳಿ ಕಟ್ಟುವಾಗ ಈ ಪುಟ್ಟ ಹೋರಾಟದ ತೊರೆಗಳನ್ನು, ಇಲ್ಲಿನ ‘ಮೇಲ್ನೋಟದ’ ವೈಪರೀತ್ಯಗಳನ್ನು ಗಮನಿಸಬೇಕು…

ಮತ್ತೆ ಮಸ್ಕಿಗೆ ಬರೋಣ, ಆದರೆ ಅದು ಸಿಂಧನೂರು ಮೂಲಕವೇ ಬರಬೇಕು! ಈ ಉಪ ಚುನಾವಣೆಯಲ್ಲಿ ಈ ನೀರಾವರಿ ಹೋರಾಟ ಒಂದು ಗುಪ್ತಗಾಮಿನಿಯ ರಭಸದಂತೆ ಹರಿಯುತ್ತಿದೆ. ಅದು ತಮ್ಮೂರ ಹೊಲಗಳಿಗೆ ನೀರನ್ನು ಬೇಡುತ್ತಿದೆ. ಚುನಾವಣೆ ಇರುವ ಮತಕ್ಷೇತ್ರದ 107 ಗ್ರಾಮಗಳು, ಅದರಲ್ಲೂ ಮುಖ್ಯವಾಗಿ 58 ಗ್ರಾಮಗಳು ಈಗ ಹೋರಾಟಕ್ಕೆ ನಿಂತಿವೆ. ಅವೇನೂ ಬೇರೆಯವರ ಪಾಲಿನ ನೀರು ಕೇಳುತ್ತಿಲ್ಲ. ಆಂಧ್ರಪ್ರದೇಶದ ಭೂಮಿಗೆ ಸೇರಬೇಕಾದ ನೀರನ್ನು ಕಬಳಿಸಲು ಯತ್ನಿಸುತ್ತಿಲ್ಲ. ಸುಖಾಸುಮ್ಮನೇ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ಅವರು ನಮ್ಮ ಹೊಲಕ್ಕ ಕೊಡ್ರಿ ಅನ್ನುತ್ತಿದ್ದಾರೆ.

ಏನಿದು NRBC_5A ಯೋಜನೆ?

ಮಸ್ಕಿ ತಾಲ್ಲೂಕಿನ ಬರಪೀಡಿತ 58 ಹಳ್ಳಿಗಳ ಗ್ರಾಮಸ್ಥರು, ರೈತರು ನಾರಾಯಣಪೂರ ಬಲದಂಡೆ ಕಾಲುವೆ 5(ಎ) ಪಾಮನ ಕಲ್ಲೂರು ಶಾಲಾ ಕಾಲುವೆ ಯೋಜನೆಯ ಮೂಲಕ ತಮ್ಮ ಗ್ರಾಮಗಳಿಗೆ ನೀರಾವರಿ ಯೋಜನೆ ಬೇಕೆಂದು ಆಗ್ರಹಿಸಿ ಕಳೆದ 12 ವರ್ಷಗಳಿಂದ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕ ನೀರಾವರಿ ಸಂಘ ಕಟ್ಟಿ ತಮ್ಮೂರಿಗೆ ಕಾಲುವೇ ನೀರು ಬಿಡಬೇಕೆಂದು ನೂರಾರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಈ 12 ವರ್ಷಗಳ ಅವಧಿಯಲ್ಲಿ ನಾಲ್ಕು ಸರ್ಕಾರಗಳು ಬದಲಾಗಿವೆ. ಎಲ್ಲಾ ಸರ್ಕಾರಗಳು ಭರವಸೆ ನೀಡಿವೆಯೇ ಹೊರತು ಒಬ್ಬರು ಕಾರ್ಯರೂಪಕ್ಕೆ ತಂದಿಲ್ಲ ಎಂದು ರೈತರು ಆರೋಪಿಸುತ್ತಾರೆ.

ಮಸ್ಕಿ ಮತ ಕ್ಷೇತ್ರ

ಮಸ್ಕಿ ಕೇತ್ರವೇ ಭೌಗೋಳಿಕವಾಗಿ ಒಂದು ವೈಪರೀತ್ಯಗಳ ಕ್ಷೇತ್ರ. ಮಸ್ಕಿ ಮತ್ತು ಸಿಂಧನೂರು ತಾಲೂಕುಗಳ ನೂರಾರು ಗ್ರಾಮಗಳು ಸೇರಿ ಮಸ್ಕಿ ಮತಕ್ಷೇತ್ರವಾಗಿದೆ. ಆದರೆ ಹರಿವ ನೀರಿಗೆ ಈ ಭೌಗೋಳಿಕ ಬಾರ್ಡರ್‌ಗಳು ಇಲ್ಲ.

1.72 ಲಕ್ಷ ಹೆಕ್ಟೇರ್ ಭೂಮಿಗೆ ಕೃಷ್ಣಾ ನೀರು ಕೊಡಿ ಎಂಬುದು 107 ಹಳ್ಳಿಗಳ, ಮುಖ್ಯವಾಗಿ 58 ಹಳ್ಳಿಗಳ ಹಕ್ಕೊತ್ತಾಯ. ನೆನಪಿಡಿ, ಇಲ್ಲಿ ತುಂಗಭದ್ರಾ ನೀರನ್ನು ಅವರು ಕೇಳುತ್ತಿಲ್ಲ. ಈ ಮಾತು ಏಕೆ ಹೇಳಬೇಕಿದೆ ಎಂದರೆ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಹೆಸರಲ್ಲಿ ಸರ್ಕಾರ ವಂಚನೆ ಮಾಡುತ್ತಿದೆ. ಮತ್ತೊಮ್ಮೆ ಪಕ್ಕಾ ಮಾಡಿಕೊಳ್ಳಿ, ತುಂಗಭದ್ರೆಯಲ್ಲ, ಇಲ್ಲಿಗೆ ಬೇಕಿರುವುದು ಕೃಷ್ಣೆ.

ಮಸ್ಕಿ-ಲಿಂಗಸುಗೂರು ಹೆದ್ದಾರಿಯಲ್ಲಿ ಬರುವ ಪಾಮನ ಕಲ್ಲೂರು ಎಂಬ ಗ್ರಾಮದಲ್ಲಿ ನೀರಿಗಾಗಿ ಈ ಹೋರಾಟ ನಡೆದಿದೆ, ಅದೀಗ 125 ದಿನ ದಾಟಿದೆ ಕೂಡ. ಈ ಹೋರಾಟಕ್ಕೆ ಬೆಂಬಲ ನೀಡುತ್ತಿರುವ ಚಂದ್ರಶೇಖರ್ ಗೋರಬಾಳ ನಾನುಗೌರಿ.ಕಾಂ ಜೊತೆ ಮಾತನಾಡಿ, ‘ಈ ಹೋರಾಟ ನೂರಾರು ಹಳ್ಳಿಗಳ ಜನರ ಜೀವನ್ಮರಣದ ಪ್ರಶ್ನೆ. ಹೋರಾಟವೇ ಬೇರೆ ರಾಜಕೀಯವೇ ಬೇರೆ ಎನ್ನಲೂ ಆಗದು. ಈ ಸಲದ ಚುನಾವಣಾ ಫಲಿತಾಂಶದಲ್ಲಿ ಈ ಹೋರಾಟವೇ ಡಿಸೈಡಿಂಗ್ ಫ್ಯಾಕ್ಟರ್ ಆಗಲಿದೆ, ಆಗಲೇಬೇಕು- ಡೆಮಾಕ್ರಸಿಯ ಹಿತಕ್ಕಾಗಿ’ ಎಂದಿದ್ದಾರೆ.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ


ಇದನ್ನೂ ಓದಿ: ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...