Homeಕರ್ನಾಟಕಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ಕರ್ನಾಟಕ ಮಾದರಿಯ ರೈತ ಹೋರಾಟಕ್ಕೆ ಪೂರಕ ಚಳುವಳಿಯೊಂದು ಮಸ್ಕಿಯಲ್ಲಿ ರೂಪುತಳೆಯುತ್ತಿದೆ.

- Advertisement -
- Advertisement -

ಮಸ್ಕಿಯಲ್ಲಿ ಅಭ್ಯರ್ಥಿಗಳು ಅದಲು ಬದಲು, ಜೆಡಿಎಸ್ ಕ್ಯಾಂಡಿಡೆಟೇ ಇಲ್ಲ- ಈ ಪಾಲಿಟಿಕಲ್ ಕತೆಯ ಆಚೆ ಹೋಗೋಣ. ಮುಖ್ಯವಾಹಿನಿ ಮಾಧ್ಯಮಗಳೆಲ್ಲ ಕಾಟಾಚಾರಕ್ಕೆ ಎಂಬಂತೆ ಇಲ್ಲಿನ ಒಂದು ‘ಪುಟ್ಟ’ ನೀರಾವರಿ ಹೋರಾಟದ ಬಗ್ಗೆ ಬರೆದಿವೆ. ಅದು ಕೇವಲ ಕೊಪ್ಪಳ-ರಾಯಚೂರು ಸುದ್ದಿ ಎಂಬಂತೆ ಅವು ವರ್ತಿಸಿವೆ.

ದೆಹಲಿ ಗಡಿಗಳನ್ನು ಮೀರಿ ಕರ್ನಾಟಕಕ್ಕೂ ತಲುಪಿದ ರೈತ ಹೋರಾಟದ ಸಂದರ್ಭದಲ್ಲಿ ಇಲ್ಲಿ ನಮ್ಮದೇ ಮಾದರಿಯ ರೈತ ಚಳವಳಿ ಕಟ್ಟುವ ಮಾತು ಕೇಳಿ ಬಂದಿವೆ. ಇಂತಹ ಚಳುವಳಿ ನೀರಿಗಾಗಿ 100 ದಿನ ದಾಟಿ ನಡೆದಿರುವ ಈ ಪುಟ್ಟ ಹೋರಾಟವನ್ನು ಗಣನೆಗೆ ತೆಗೆದುಕೊಳ್ಳಬೇಕು. ಕೃಷಿ ಸಚಿವ ಬಿ.ಸಿ ಪಾಟೀಲರ ಕೇತ್ರದ ರಟ್ಟಿಹಳ್ಳಿಯಲ್ಲಿ ಒಂದು ರೈತ ಹೋರಾಟ ಇನ್ನೂ ಜೀವಂತವಾಗಿದೆ. ಅವರು ನೀರು ಕೇಳುತ್ತಿಲ್ಲ, ಬದಲಿಗೆ ಶಿವಮೊಗ್ಗದ ಭೂಮಿಗೆ ನೀರು ಒದಗಿಸಲು ತಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳುತ್ತಿರುವ ಪ್ರಕ್ರಿಯೆ ವಿರುದ್ಧ ಅವರ ಹೋರಾಟವಿದೆ.

ನೀರು ಬೇಕು, ಭೂಮಿ ಉಳಿಯಬೇಕು ಎಂಬ ಈ ಎರಡು ರೈತ ಹೋರಾಟಗಳಲ್ಲಿ ವೈಪರೀತ್ಯ ಕಾಣಿಸಬಹುದು. ಆದರೆ, ಎರಡೂ ಬದುಕಿಗಾಗಿ ನಡೆಯುತ್ತಿರುವ ಹೋರಾಟಗಳೇ ಅಲ್ಲವೇ? ಕರ್ನಾಟಕ ಮಾದರಿಯ ರೈತ ಚಳುವಳಿ ಕಟ್ಟುವಾಗ ಈ ಪುಟ್ಟ ಹೋರಾಟದ ತೊರೆಗಳನ್ನು, ಇಲ್ಲಿನ ‘ಮೇಲ್ನೋಟದ’ ವೈಪರೀತ್ಯಗಳನ್ನು ಗಮನಿಸಬೇಕು…

ಮತ್ತೆ ಮಸ್ಕಿಗೆ ಬರೋಣ, ಆದರೆ ಅದು ಸಿಂಧನೂರು ಮೂಲಕವೇ ಬರಬೇಕು! ಈ ಉಪ ಚುನಾವಣೆಯಲ್ಲಿ ಈ ನೀರಾವರಿ ಹೋರಾಟ ಒಂದು ಗುಪ್ತಗಾಮಿನಿಯ ರಭಸದಂತೆ ಹರಿಯುತ್ತಿದೆ. ಅದು ತಮ್ಮೂರ ಹೊಲಗಳಿಗೆ ನೀರನ್ನು ಬೇಡುತ್ತಿದೆ. ಚುನಾವಣೆ ಇರುವ ಮತಕ್ಷೇತ್ರದ 107 ಗ್ರಾಮಗಳು, ಅದರಲ್ಲೂ ಮುಖ್ಯವಾಗಿ 58 ಗ್ರಾಮಗಳು ಈಗ ಹೋರಾಟಕ್ಕೆ ನಿಂತಿವೆ. ಅವೇನೂ ಬೇರೆಯವರ ಪಾಲಿನ ನೀರು ಕೇಳುತ್ತಿಲ್ಲ. ಆಂಧ್ರಪ್ರದೇಶದ ಭೂಮಿಗೆ ಸೇರಬೇಕಾದ ನೀರನ್ನು ಕಬಳಿಸಲು ಯತ್ನಿಸುತ್ತಿಲ್ಲ. ಸುಖಾಸುಮ್ಮನೇ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ಅವರು ನಮ್ಮ ಹೊಲಕ್ಕ ಕೊಡ್ರಿ ಅನ್ನುತ್ತಿದ್ದಾರೆ.

ಏನಿದು NRBC_5A ಯೋಜನೆ?

ಮಸ್ಕಿ ತಾಲ್ಲೂಕಿನ ಬರಪೀಡಿತ 58 ಹಳ್ಳಿಗಳ ಗ್ರಾಮಸ್ಥರು, ರೈತರು ನಾರಾಯಣಪೂರ ಬಲದಂಡೆ ಕಾಲುವೆ 5(ಎ) ಪಾಮನ ಕಲ್ಲೂರು ಶಾಲಾ ಕಾಲುವೆ ಯೋಜನೆಯ ಮೂಲಕ ತಮ್ಮ ಗ್ರಾಮಗಳಿಗೆ ನೀರಾವರಿ ಯೋಜನೆ ಬೇಕೆಂದು ಆಗ್ರಹಿಸಿ ಕಳೆದ 12 ವರ್ಷಗಳಿಂದ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕ ನೀರಾವರಿ ಸಂಘ ಕಟ್ಟಿ ತಮ್ಮೂರಿಗೆ ಕಾಲುವೇ ನೀರು ಬಿಡಬೇಕೆಂದು ನೂರಾರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಈ 12 ವರ್ಷಗಳ ಅವಧಿಯಲ್ಲಿ ನಾಲ್ಕು ಸರ್ಕಾರಗಳು ಬದಲಾಗಿವೆ. ಎಲ್ಲಾ ಸರ್ಕಾರಗಳು ಭರವಸೆ ನೀಡಿವೆಯೇ ಹೊರತು ಒಬ್ಬರು ಕಾರ್ಯರೂಪಕ್ಕೆ ತಂದಿಲ್ಲ ಎಂದು ರೈತರು ಆರೋಪಿಸುತ್ತಾರೆ.

ಮಸ್ಕಿ ಮತ ಕ್ಷೇತ್ರ

ಮಸ್ಕಿ ಕೇತ್ರವೇ ಭೌಗೋಳಿಕವಾಗಿ ಒಂದು ವೈಪರೀತ್ಯಗಳ ಕ್ಷೇತ್ರ. ಮಸ್ಕಿ ಮತ್ತು ಸಿಂಧನೂರು ತಾಲೂಕುಗಳ ನೂರಾರು ಗ್ರಾಮಗಳು ಸೇರಿ ಮಸ್ಕಿ ಮತಕ್ಷೇತ್ರವಾಗಿದೆ. ಆದರೆ ಹರಿವ ನೀರಿಗೆ ಈ ಭೌಗೋಳಿಕ ಬಾರ್ಡರ್‌ಗಳು ಇಲ್ಲ.

1.72 ಲಕ್ಷ ಹೆಕ್ಟೇರ್ ಭೂಮಿಗೆ ಕೃಷ್ಣಾ ನೀರು ಕೊಡಿ ಎಂಬುದು 107 ಹಳ್ಳಿಗಳ, ಮುಖ್ಯವಾಗಿ 58 ಹಳ್ಳಿಗಳ ಹಕ್ಕೊತ್ತಾಯ. ನೆನಪಿಡಿ, ಇಲ್ಲಿ ತುಂಗಭದ್ರಾ ನೀರನ್ನು ಅವರು ಕೇಳುತ್ತಿಲ್ಲ. ಈ ಮಾತು ಏಕೆ ಹೇಳಬೇಕಿದೆ ಎಂದರೆ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಹೆಸರಲ್ಲಿ ಸರ್ಕಾರ ವಂಚನೆ ಮಾಡುತ್ತಿದೆ. ಮತ್ತೊಮ್ಮೆ ಪಕ್ಕಾ ಮಾಡಿಕೊಳ್ಳಿ, ತುಂಗಭದ್ರೆಯಲ್ಲ, ಇಲ್ಲಿಗೆ ಬೇಕಿರುವುದು ಕೃಷ್ಣೆ.

ಮಸ್ಕಿ-ಲಿಂಗಸುಗೂರು ಹೆದ್ದಾರಿಯಲ್ಲಿ ಬರುವ ಪಾಮನ ಕಲ್ಲೂರು ಎಂಬ ಗ್ರಾಮದಲ್ಲಿ ನೀರಿಗಾಗಿ ಈ ಹೋರಾಟ ನಡೆದಿದೆ, ಅದೀಗ 125 ದಿನ ದಾಟಿದೆ ಕೂಡ. ಈ ಹೋರಾಟಕ್ಕೆ ಬೆಂಬಲ ನೀಡುತ್ತಿರುವ ಚಂದ್ರಶೇಖರ್ ಗೋರಬಾಳ ನಾನುಗೌರಿ.ಕಾಂ ಜೊತೆ ಮಾತನಾಡಿ, ‘ಈ ಹೋರಾಟ ನೂರಾರು ಹಳ್ಳಿಗಳ ಜನರ ಜೀವನ್ಮರಣದ ಪ್ರಶ್ನೆ. ಹೋರಾಟವೇ ಬೇರೆ ರಾಜಕೀಯವೇ ಬೇರೆ ಎನ್ನಲೂ ಆಗದು. ಈ ಸಲದ ಚುನಾವಣಾ ಫಲಿತಾಂಶದಲ್ಲಿ ಈ ಹೋರಾಟವೇ ಡಿಸೈಡಿಂಗ್ ಫ್ಯಾಕ್ಟರ್ ಆಗಲಿದೆ, ಆಗಲೇಬೇಕು- ಡೆಮಾಕ್ರಸಿಯ ಹಿತಕ್ಕಾಗಿ’ ಎಂದಿದ್ದಾರೆ.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ


ಇದನ್ನೂ ಓದಿ: ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...