Homeಕರ್ನಾಟಕಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ಕರ್ನಾಟಕ ಮಾದರಿಯ ರೈತ ಹೋರಾಟಕ್ಕೆ ಪೂರಕ ಚಳುವಳಿಯೊಂದು ಮಸ್ಕಿಯಲ್ಲಿ ರೂಪುತಳೆಯುತ್ತಿದೆ.

- Advertisement -
- Advertisement -

ಮಸ್ಕಿಯಲ್ಲಿ ಅಭ್ಯರ್ಥಿಗಳು ಅದಲು ಬದಲು, ಜೆಡಿಎಸ್ ಕ್ಯಾಂಡಿಡೆಟೇ ಇಲ್ಲ- ಈ ಪಾಲಿಟಿಕಲ್ ಕತೆಯ ಆಚೆ ಹೋಗೋಣ. ಮುಖ್ಯವಾಹಿನಿ ಮಾಧ್ಯಮಗಳೆಲ್ಲ ಕಾಟಾಚಾರಕ್ಕೆ ಎಂಬಂತೆ ಇಲ್ಲಿನ ಒಂದು ‘ಪುಟ್ಟ’ ನೀರಾವರಿ ಹೋರಾಟದ ಬಗ್ಗೆ ಬರೆದಿವೆ. ಅದು ಕೇವಲ ಕೊಪ್ಪಳ-ರಾಯಚೂರು ಸುದ್ದಿ ಎಂಬಂತೆ ಅವು ವರ್ತಿಸಿವೆ.

ದೆಹಲಿ ಗಡಿಗಳನ್ನು ಮೀರಿ ಕರ್ನಾಟಕಕ್ಕೂ ತಲುಪಿದ ರೈತ ಹೋರಾಟದ ಸಂದರ್ಭದಲ್ಲಿ ಇಲ್ಲಿ ನಮ್ಮದೇ ಮಾದರಿಯ ರೈತ ಚಳವಳಿ ಕಟ್ಟುವ ಮಾತು ಕೇಳಿ ಬಂದಿವೆ. ಇಂತಹ ಚಳುವಳಿ ನೀರಿಗಾಗಿ 100 ದಿನ ದಾಟಿ ನಡೆದಿರುವ ಈ ಪುಟ್ಟ ಹೋರಾಟವನ್ನು ಗಣನೆಗೆ ತೆಗೆದುಕೊಳ್ಳಬೇಕು. ಕೃಷಿ ಸಚಿವ ಬಿ.ಸಿ ಪಾಟೀಲರ ಕೇತ್ರದ ರಟ್ಟಿಹಳ್ಳಿಯಲ್ಲಿ ಒಂದು ರೈತ ಹೋರಾಟ ಇನ್ನೂ ಜೀವಂತವಾಗಿದೆ. ಅವರು ನೀರು ಕೇಳುತ್ತಿಲ್ಲ, ಬದಲಿಗೆ ಶಿವಮೊಗ್ಗದ ಭೂಮಿಗೆ ನೀರು ಒದಗಿಸಲು ತಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳುತ್ತಿರುವ ಪ್ರಕ್ರಿಯೆ ವಿರುದ್ಧ ಅವರ ಹೋರಾಟವಿದೆ.

ನೀರು ಬೇಕು, ಭೂಮಿ ಉಳಿಯಬೇಕು ಎಂಬ ಈ ಎರಡು ರೈತ ಹೋರಾಟಗಳಲ್ಲಿ ವೈಪರೀತ್ಯ ಕಾಣಿಸಬಹುದು. ಆದರೆ, ಎರಡೂ ಬದುಕಿಗಾಗಿ ನಡೆಯುತ್ತಿರುವ ಹೋರಾಟಗಳೇ ಅಲ್ಲವೇ? ಕರ್ನಾಟಕ ಮಾದರಿಯ ರೈತ ಚಳುವಳಿ ಕಟ್ಟುವಾಗ ಈ ಪುಟ್ಟ ಹೋರಾಟದ ತೊರೆಗಳನ್ನು, ಇಲ್ಲಿನ ‘ಮೇಲ್ನೋಟದ’ ವೈಪರೀತ್ಯಗಳನ್ನು ಗಮನಿಸಬೇಕು…

ಮತ್ತೆ ಮಸ್ಕಿಗೆ ಬರೋಣ, ಆದರೆ ಅದು ಸಿಂಧನೂರು ಮೂಲಕವೇ ಬರಬೇಕು! ಈ ಉಪ ಚುನಾವಣೆಯಲ್ಲಿ ಈ ನೀರಾವರಿ ಹೋರಾಟ ಒಂದು ಗುಪ್ತಗಾಮಿನಿಯ ರಭಸದಂತೆ ಹರಿಯುತ್ತಿದೆ. ಅದು ತಮ್ಮೂರ ಹೊಲಗಳಿಗೆ ನೀರನ್ನು ಬೇಡುತ್ತಿದೆ. ಚುನಾವಣೆ ಇರುವ ಮತಕ್ಷೇತ್ರದ 107 ಗ್ರಾಮಗಳು, ಅದರಲ್ಲೂ ಮುಖ್ಯವಾಗಿ 58 ಗ್ರಾಮಗಳು ಈಗ ಹೋರಾಟಕ್ಕೆ ನಿಂತಿವೆ. ಅವೇನೂ ಬೇರೆಯವರ ಪಾಲಿನ ನೀರು ಕೇಳುತ್ತಿಲ್ಲ. ಆಂಧ್ರಪ್ರದೇಶದ ಭೂಮಿಗೆ ಸೇರಬೇಕಾದ ನೀರನ್ನು ಕಬಳಿಸಲು ಯತ್ನಿಸುತ್ತಿಲ್ಲ. ಸುಖಾಸುಮ್ಮನೇ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ಅವರು ನಮ್ಮ ಹೊಲಕ್ಕ ಕೊಡ್ರಿ ಅನ್ನುತ್ತಿದ್ದಾರೆ.

ಏನಿದು NRBC_5A ಯೋಜನೆ?

ಮಸ್ಕಿ ತಾಲ್ಲೂಕಿನ ಬರಪೀಡಿತ 58 ಹಳ್ಳಿಗಳ ಗ್ರಾಮಸ್ಥರು, ರೈತರು ನಾರಾಯಣಪೂರ ಬಲದಂಡೆ ಕಾಲುವೆ 5(ಎ) ಪಾಮನ ಕಲ್ಲೂರು ಶಾಲಾ ಕಾಲುವೆ ಯೋಜನೆಯ ಮೂಲಕ ತಮ್ಮ ಗ್ರಾಮಗಳಿಗೆ ನೀರಾವರಿ ಯೋಜನೆ ಬೇಕೆಂದು ಆಗ್ರಹಿಸಿ ಕಳೆದ 12 ವರ್ಷಗಳಿಂದ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕ ನೀರಾವರಿ ಸಂಘ ಕಟ್ಟಿ ತಮ್ಮೂರಿಗೆ ಕಾಲುವೇ ನೀರು ಬಿಡಬೇಕೆಂದು ನೂರಾರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಈ 12 ವರ್ಷಗಳ ಅವಧಿಯಲ್ಲಿ ನಾಲ್ಕು ಸರ್ಕಾರಗಳು ಬದಲಾಗಿವೆ. ಎಲ್ಲಾ ಸರ್ಕಾರಗಳು ಭರವಸೆ ನೀಡಿವೆಯೇ ಹೊರತು ಒಬ್ಬರು ಕಾರ್ಯರೂಪಕ್ಕೆ ತಂದಿಲ್ಲ ಎಂದು ರೈತರು ಆರೋಪಿಸುತ್ತಾರೆ.

ಮಸ್ಕಿ ಮತ ಕ್ಷೇತ್ರ

ಮಸ್ಕಿ ಕೇತ್ರವೇ ಭೌಗೋಳಿಕವಾಗಿ ಒಂದು ವೈಪರೀತ್ಯಗಳ ಕ್ಷೇತ್ರ. ಮಸ್ಕಿ ಮತ್ತು ಸಿಂಧನೂರು ತಾಲೂಕುಗಳ ನೂರಾರು ಗ್ರಾಮಗಳು ಸೇರಿ ಮಸ್ಕಿ ಮತಕ್ಷೇತ್ರವಾಗಿದೆ. ಆದರೆ ಹರಿವ ನೀರಿಗೆ ಈ ಭೌಗೋಳಿಕ ಬಾರ್ಡರ್‌ಗಳು ಇಲ್ಲ.

1.72 ಲಕ್ಷ ಹೆಕ್ಟೇರ್ ಭೂಮಿಗೆ ಕೃಷ್ಣಾ ನೀರು ಕೊಡಿ ಎಂಬುದು 107 ಹಳ್ಳಿಗಳ, ಮುಖ್ಯವಾಗಿ 58 ಹಳ್ಳಿಗಳ ಹಕ್ಕೊತ್ತಾಯ. ನೆನಪಿಡಿ, ಇಲ್ಲಿ ತುಂಗಭದ್ರಾ ನೀರನ್ನು ಅವರು ಕೇಳುತ್ತಿಲ್ಲ. ಈ ಮಾತು ಏಕೆ ಹೇಳಬೇಕಿದೆ ಎಂದರೆ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಹೆಸರಲ್ಲಿ ಸರ್ಕಾರ ವಂಚನೆ ಮಾಡುತ್ತಿದೆ. ಮತ್ತೊಮ್ಮೆ ಪಕ್ಕಾ ಮಾಡಿಕೊಳ್ಳಿ, ತುಂಗಭದ್ರೆಯಲ್ಲ, ಇಲ್ಲಿಗೆ ಬೇಕಿರುವುದು ಕೃಷ್ಣೆ.

ಮಸ್ಕಿ-ಲಿಂಗಸುಗೂರು ಹೆದ್ದಾರಿಯಲ್ಲಿ ಬರುವ ಪಾಮನ ಕಲ್ಲೂರು ಎಂಬ ಗ್ರಾಮದಲ್ಲಿ ನೀರಿಗಾಗಿ ಈ ಹೋರಾಟ ನಡೆದಿದೆ, ಅದೀಗ 125 ದಿನ ದಾಟಿದೆ ಕೂಡ. ಈ ಹೋರಾಟಕ್ಕೆ ಬೆಂಬಲ ನೀಡುತ್ತಿರುವ ಚಂದ್ರಶೇಖರ್ ಗೋರಬಾಳ ನಾನುಗೌರಿ.ಕಾಂ ಜೊತೆ ಮಾತನಾಡಿ, ‘ಈ ಹೋರಾಟ ನೂರಾರು ಹಳ್ಳಿಗಳ ಜನರ ಜೀವನ್ಮರಣದ ಪ್ರಶ್ನೆ. ಹೋರಾಟವೇ ಬೇರೆ ರಾಜಕೀಯವೇ ಬೇರೆ ಎನ್ನಲೂ ಆಗದು. ಈ ಸಲದ ಚುನಾವಣಾ ಫಲಿತಾಂಶದಲ್ಲಿ ಈ ಹೋರಾಟವೇ ಡಿಸೈಡಿಂಗ್ ಫ್ಯಾಕ್ಟರ್ ಆಗಲಿದೆ, ಆಗಲೇಬೇಕು- ಡೆಮಾಕ್ರಸಿಯ ಹಿತಕ್ಕಾಗಿ’ ಎಂದಿದ್ದಾರೆ.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ


ಇದನ್ನೂ ಓದಿ: ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...