Homeಕರ್ನಾಟಕಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ಕರ್ನಾಟಕ ಮಾದರಿಯ ರೈತ ಹೋರಾಟಕ್ಕೆ ಪೂರಕ ಚಳುವಳಿಯೊಂದು ಮಸ್ಕಿಯಲ್ಲಿ ರೂಪುತಳೆಯುತ್ತಿದೆ.

- Advertisement -
- Advertisement -

ಮಸ್ಕಿಯಲ್ಲಿ ಅಭ್ಯರ್ಥಿಗಳು ಅದಲು ಬದಲು, ಜೆಡಿಎಸ್ ಕ್ಯಾಂಡಿಡೆಟೇ ಇಲ್ಲ- ಈ ಪಾಲಿಟಿಕಲ್ ಕತೆಯ ಆಚೆ ಹೋಗೋಣ. ಮುಖ್ಯವಾಹಿನಿ ಮಾಧ್ಯಮಗಳೆಲ್ಲ ಕಾಟಾಚಾರಕ್ಕೆ ಎಂಬಂತೆ ಇಲ್ಲಿನ ಒಂದು ‘ಪುಟ್ಟ’ ನೀರಾವರಿ ಹೋರಾಟದ ಬಗ್ಗೆ ಬರೆದಿವೆ. ಅದು ಕೇವಲ ಕೊಪ್ಪಳ-ರಾಯಚೂರು ಸುದ್ದಿ ಎಂಬಂತೆ ಅವು ವರ್ತಿಸಿವೆ.

ದೆಹಲಿ ಗಡಿಗಳನ್ನು ಮೀರಿ ಕರ್ನಾಟಕಕ್ಕೂ ತಲುಪಿದ ರೈತ ಹೋರಾಟದ ಸಂದರ್ಭದಲ್ಲಿ ಇಲ್ಲಿ ನಮ್ಮದೇ ಮಾದರಿಯ ರೈತ ಚಳವಳಿ ಕಟ್ಟುವ ಮಾತು ಕೇಳಿ ಬಂದಿವೆ. ಇಂತಹ ಚಳುವಳಿ ನೀರಿಗಾಗಿ 100 ದಿನ ದಾಟಿ ನಡೆದಿರುವ ಈ ಪುಟ್ಟ ಹೋರಾಟವನ್ನು ಗಣನೆಗೆ ತೆಗೆದುಕೊಳ್ಳಬೇಕು. ಕೃಷಿ ಸಚಿವ ಬಿ.ಸಿ ಪಾಟೀಲರ ಕೇತ್ರದ ರಟ್ಟಿಹಳ್ಳಿಯಲ್ಲಿ ಒಂದು ರೈತ ಹೋರಾಟ ಇನ್ನೂ ಜೀವಂತವಾಗಿದೆ. ಅವರು ನೀರು ಕೇಳುತ್ತಿಲ್ಲ, ಬದಲಿಗೆ ಶಿವಮೊಗ್ಗದ ಭೂಮಿಗೆ ನೀರು ಒದಗಿಸಲು ತಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳುತ್ತಿರುವ ಪ್ರಕ್ರಿಯೆ ವಿರುದ್ಧ ಅವರ ಹೋರಾಟವಿದೆ.

ನೀರು ಬೇಕು, ಭೂಮಿ ಉಳಿಯಬೇಕು ಎಂಬ ಈ ಎರಡು ರೈತ ಹೋರಾಟಗಳಲ್ಲಿ ವೈಪರೀತ್ಯ ಕಾಣಿಸಬಹುದು. ಆದರೆ, ಎರಡೂ ಬದುಕಿಗಾಗಿ ನಡೆಯುತ್ತಿರುವ ಹೋರಾಟಗಳೇ ಅಲ್ಲವೇ? ಕರ್ನಾಟಕ ಮಾದರಿಯ ರೈತ ಚಳುವಳಿ ಕಟ್ಟುವಾಗ ಈ ಪುಟ್ಟ ಹೋರಾಟದ ತೊರೆಗಳನ್ನು, ಇಲ್ಲಿನ ‘ಮೇಲ್ನೋಟದ’ ವೈಪರೀತ್ಯಗಳನ್ನು ಗಮನಿಸಬೇಕು…

ಮತ್ತೆ ಮಸ್ಕಿಗೆ ಬರೋಣ, ಆದರೆ ಅದು ಸಿಂಧನೂರು ಮೂಲಕವೇ ಬರಬೇಕು! ಈ ಉಪ ಚುನಾವಣೆಯಲ್ಲಿ ಈ ನೀರಾವರಿ ಹೋರಾಟ ಒಂದು ಗುಪ್ತಗಾಮಿನಿಯ ರಭಸದಂತೆ ಹರಿಯುತ್ತಿದೆ. ಅದು ತಮ್ಮೂರ ಹೊಲಗಳಿಗೆ ನೀರನ್ನು ಬೇಡುತ್ತಿದೆ. ಚುನಾವಣೆ ಇರುವ ಮತಕ್ಷೇತ್ರದ 107 ಗ್ರಾಮಗಳು, ಅದರಲ್ಲೂ ಮುಖ್ಯವಾಗಿ 58 ಗ್ರಾಮಗಳು ಈಗ ಹೋರಾಟಕ್ಕೆ ನಿಂತಿವೆ. ಅವೇನೂ ಬೇರೆಯವರ ಪಾಲಿನ ನೀರು ಕೇಳುತ್ತಿಲ್ಲ. ಆಂಧ್ರಪ್ರದೇಶದ ಭೂಮಿಗೆ ಸೇರಬೇಕಾದ ನೀರನ್ನು ಕಬಳಿಸಲು ಯತ್ನಿಸುತ್ತಿಲ್ಲ. ಸುಖಾಸುಮ್ಮನೇ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ಅವರು ನಮ್ಮ ಹೊಲಕ್ಕ ಕೊಡ್ರಿ ಅನ್ನುತ್ತಿದ್ದಾರೆ.

ಏನಿದು NRBC_5A ಯೋಜನೆ?

ಮಸ್ಕಿ ತಾಲ್ಲೂಕಿನ ಬರಪೀಡಿತ 58 ಹಳ್ಳಿಗಳ ಗ್ರಾಮಸ್ಥರು, ರೈತರು ನಾರಾಯಣಪೂರ ಬಲದಂಡೆ ಕಾಲುವೆ 5(ಎ) ಪಾಮನ ಕಲ್ಲೂರು ಶಾಲಾ ಕಾಲುವೆ ಯೋಜನೆಯ ಮೂಲಕ ತಮ್ಮ ಗ್ರಾಮಗಳಿಗೆ ನೀರಾವರಿ ಯೋಜನೆ ಬೇಕೆಂದು ಆಗ್ರಹಿಸಿ ಕಳೆದ 12 ವರ್ಷಗಳಿಂದ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕ ನೀರಾವರಿ ಸಂಘ ಕಟ್ಟಿ ತಮ್ಮೂರಿಗೆ ಕಾಲುವೇ ನೀರು ಬಿಡಬೇಕೆಂದು ನೂರಾರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಈ 12 ವರ್ಷಗಳ ಅವಧಿಯಲ್ಲಿ ನಾಲ್ಕು ಸರ್ಕಾರಗಳು ಬದಲಾಗಿವೆ. ಎಲ್ಲಾ ಸರ್ಕಾರಗಳು ಭರವಸೆ ನೀಡಿವೆಯೇ ಹೊರತು ಒಬ್ಬರು ಕಾರ್ಯರೂಪಕ್ಕೆ ತಂದಿಲ್ಲ ಎಂದು ರೈತರು ಆರೋಪಿಸುತ್ತಾರೆ.

ಮಸ್ಕಿ ಮತ ಕ್ಷೇತ್ರ

ಮಸ್ಕಿ ಕೇತ್ರವೇ ಭೌಗೋಳಿಕವಾಗಿ ಒಂದು ವೈಪರೀತ್ಯಗಳ ಕ್ಷೇತ್ರ. ಮಸ್ಕಿ ಮತ್ತು ಸಿಂಧನೂರು ತಾಲೂಕುಗಳ ನೂರಾರು ಗ್ರಾಮಗಳು ಸೇರಿ ಮಸ್ಕಿ ಮತಕ್ಷೇತ್ರವಾಗಿದೆ. ಆದರೆ ಹರಿವ ನೀರಿಗೆ ಈ ಭೌಗೋಳಿಕ ಬಾರ್ಡರ್‌ಗಳು ಇಲ್ಲ.

1.72 ಲಕ್ಷ ಹೆಕ್ಟೇರ್ ಭೂಮಿಗೆ ಕೃಷ್ಣಾ ನೀರು ಕೊಡಿ ಎಂಬುದು 107 ಹಳ್ಳಿಗಳ, ಮುಖ್ಯವಾಗಿ 58 ಹಳ್ಳಿಗಳ ಹಕ್ಕೊತ್ತಾಯ. ನೆನಪಿಡಿ, ಇಲ್ಲಿ ತುಂಗಭದ್ರಾ ನೀರನ್ನು ಅವರು ಕೇಳುತ್ತಿಲ್ಲ. ಈ ಮಾತು ಏಕೆ ಹೇಳಬೇಕಿದೆ ಎಂದರೆ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಹೆಸರಲ್ಲಿ ಸರ್ಕಾರ ವಂಚನೆ ಮಾಡುತ್ತಿದೆ. ಮತ್ತೊಮ್ಮೆ ಪಕ್ಕಾ ಮಾಡಿಕೊಳ್ಳಿ, ತುಂಗಭದ್ರೆಯಲ್ಲ, ಇಲ್ಲಿಗೆ ಬೇಕಿರುವುದು ಕೃಷ್ಣೆ.

ಮಸ್ಕಿ-ಲಿಂಗಸುಗೂರು ಹೆದ್ದಾರಿಯಲ್ಲಿ ಬರುವ ಪಾಮನ ಕಲ್ಲೂರು ಎಂಬ ಗ್ರಾಮದಲ್ಲಿ ನೀರಿಗಾಗಿ ಈ ಹೋರಾಟ ನಡೆದಿದೆ, ಅದೀಗ 125 ದಿನ ದಾಟಿದೆ ಕೂಡ. ಈ ಹೋರಾಟಕ್ಕೆ ಬೆಂಬಲ ನೀಡುತ್ತಿರುವ ಚಂದ್ರಶೇಖರ್ ಗೋರಬಾಳ ನಾನುಗೌರಿ.ಕಾಂ ಜೊತೆ ಮಾತನಾಡಿ, ‘ಈ ಹೋರಾಟ ನೂರಾರು ಹಳ್ಳಿಗಳ ಜನರ ಜೀವನ್ಮರಣದ ಪ್ರಶ್ನೆ. ಹೋರಾಟವೇ ಬೇರೆ ರಾಜಕೀಯವೇ ಬೇರೆ ಎನ್ನಲೂ ಆಗದು. ಈ ಸಲದ ಚುನಾವಣಾ ಫಲಿತಾಂಶದಲ್ಲಿ ಈ ಹೋರಾಟವೇ ಡಿಸೈಡಿಂಗ್ ಫ್ಯಾಕ್ಟರ್ ಆಗಲಿದೆ, ಆಗಲೇಬೇಕು- ಡೆಮಾಕ್ರಸಿಯ ಹಿತಕ್ಕಾಗಿ’ ಎಂದಿದ್ದಾರೆ.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ


ಇದನ್ನೂ ಓದಿ: ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...