Homeಮುಖಪುಟಮಸ್ಕಿ: ನೀರಾವರಿ ಹೋರಾಟದ ಕಾಲುವೆಯಲ್ಲಿ ಕೊಚ್ಚಿ ಹೋದ ಬಿಜೆಪಿಯ ಹಣದ ಹೊಳೆ...

ಮಸ್ಕಿ: ನೀರಾವರಿ ಹೋರಾಟದ ಕಾಲುವೆಯಲ್ಲಿ ಕೊಚ್ಚಿ ಹೋದ ಬಿಜೆಪಿಯ ಹಣದ ಹೊಳೆ…

- Advertisement -
- Advertisement -

ಹಿಂದುಳಿದ ತಾಲೂಕಾದ ಮಸ್ಕಿಯ ಉಪ ಚುನಾವಣೆಯಲ್ಲಿ ಯಾರು ಗೆದ್ದರು ಎಂಬುದಕ್ಕಿಂತ, ಯಾರು ಸೋತರು, ಅದಕ್ಕೂ ಮುಖ್ಯವಾಗಿ ಯಾವ ಪಕ್ಷ ಸೋತಿತು ಎಂಬುದು ಮಹತ್ವದ ಸಂಗತಿಯಾಗಿದೆ.

ಇಲ್ಲೀಗ ಕಾಂಗ್ರೆಸ್ ಪಕ್ಷವು ಸುಮಾರು 30 ಸಾವಿರ ಲೀಡ್‌ನಿಂದ ಗೆದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ್ 86,222 ಮತಗಳನ್ನು ಪಡೆದರೆ ಬಿಜೆಪಿಯ ಪ್ರತಾಪಗೌಡ ಪಾಟೀಲ್ 55,581 ಮತಗಳನ್ನಷ್ಟೇ ಪಡೆಯಲು ಶಕ್ತರಾಗಿದ್ದಾರೆ. ಅಲ್ಲಿಗೆ 30,641 ಮತಗಳ ಅಂತರದಿಂದ ಸೋಲನ್ನಪಿದ್ದಾರೆ. 2019ರಲ್ಲಿ ಕಾಂಗ್ರೆಸ್‌ನಿಂದ ಗೆದ್ದು, ನಂತರ ಆಪರೇಷನ್ ಕಮಲದ ಬಲೆಗೆ ಬಿದ್ದು ಬಿಜೆಪಿ ಸರ್ಕಾರ ಸ್ಥಾಪನೆಗೆ ‘ಕೊಡುಗೆ’ ನೀಡಿದ್ದ ಪ್ರತಾಪಗೌಡ ಪಾಟೀಲರನ್ನು ಹೀನಾಯವಾಗಿ ಸೋತಿದ್ದಾರೆ.

ನಾನುಗೌರಿ.ಕಾಂ ಮಸ್ಕಿ ಉಪ ಚುನಾವಣೆ ಕುರಿತು ಏಳೆಂಟು ವರದಿಗಳನ್ನು ಪ್ರಕಟಿಸಿದೆ, ಮೊದಲ ವರದಿಯೇ, ‘ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?’ ಎಂಬ ಶೀರ್ಷಿಕೆ ಹೊಂದಿತ್ತು. ಇವತ್ತು ಅದು ನಿಜವಾಗಿದೆ.

ಎನ್‌ಆರ್‌ಸಿಬಿ 5-ಎ ( ಕೃಷ್ಣಾ ನೀರಿನ ನಾರಾಯಣಪೂರ ಬಲದಂಡೆ ನೀರಾವರಿ ಯೋಜನೆಗೆ ಒಳಪಡುತ್ತದೆ) ಕಾಲುವೆ ಹೋರಾಟ ಸುದೀರ್ಘವಾಗಿದೆ. 13 ವರ್ಷಗಳಿಂದ ಈ ಬೇಡಿಕೆ ಇದೆ. ಈ 13 ವರ್ಷ ಕಾಲ ಕಾಂಗ್ರೆಸ್ ಮತ್ತು ಬಿಜೆಪಿ ಎರಡರ ಲಾಭ ಪಡೆದು ಶಾಸಕರಾಗಿದ್ದ ಪ್ರತಾಪಗೌಡರು ಎಂದೂ 5-ಎ ಕಾಲುವೆ ಬಗ್ಗೆ ಸದನದಲ್ಲಿ ಧ್ವನಿ ಎತ್ತಲೇ ಇಲ್ಲ. ಅದಿರಲಿ, ‘ಏ ಅದು ಅವೈಜ್ಞಾನಿಕ ಯೋಜನಾ ಅದ… ಕೋಟೆಕಲ್ ಬಸವಣ್ಣ ನೀರಾವರಿ ಯೋಜನಾ ಮಾಡಿಸ್ತೀನಿ’ ಎಂದು ಉಡಾಫೆಯ ಮಾತು ಹೇಳುತ್ತ ಬಂದರು.

ಈ ಸಲ ಗೆಲ್ಲುವುದು ಕಷ್ಟ ಅನಿಸಿದ ಕೂಡಲೇ ಕೃಷ್ಣಾ ನದಿಯಿಂದ ಮಸ್ಕಿ ಕ್ಷೇತ್ರದ 18 ಕೆರೆಗಳಿಗೆ ನೀರು ಹರಿಸುವ 500 ಕೋಟಿ ರೂ, ಯೋಜನೆ ಬಜೆಟ್‌ನಲ್ಲಿ ಘೋಷಣೆ ಆಗುವಂತೆ ಮಾಡಿದರು. ಆದರೆ ಈ 18 ಕೆರೆಗಳೋ, ಅದರಲ್ಲಿ ಭಾಗಶಃ ಮುಚ್ಚಿವೆ, ಭಾಗಶಃ ಕಿರಿದಾಗಿವೆ. 480 ಕೋಟಿ ರೂ,ಗಳನ್ನು ಇದಕ್ಕೆ ವೆಚ್ಚ ಮಾಡಿ ಲೂಟಿ ಹೊಡೆಯಲಾಗಿದೆ ಎಂಬುದು ರೈತರ ಆರೋಪವಾಗಿದೆ.

ವಿಜಯೇಂದ್ರರ ಉಸ್ತುವಾರಿ

ಈ ಕ್ಷೇತ್ರದ ಬಗ್ಗೆ ತುಂಬ ತಲೆ ಕೆಡಿಸಿಕೊಂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ, ಚುನವಣಾ ಪ್ರಕ್ರಿಯೆ ಶುರುವಾದಾಗ ಇಲ್ಲೇ ಠಿಕಾಣಿ ಹಾಕಿದ್ದರು. ಜಾತಿವಾರು ಸಭೆಗಳನ್ನು ನಡೆಸಿ, ಚುನಾವಣಾ ‘ವಹಿವಾಟು’ ನಡೆಸಿದ ಅವರು ಇಲ್ಲಿ ಸಾಕಷ್ಟು ರೊಕ್ಕದ ಹೊಳೆ ಹರಿಸಿದರು ಎಂದು ರೈತ ಹೋರಾಟಗಾರರು ಮತ್ತು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಹಲವರು ಬಿಜೆಪಿ ಕಾರ್ಯಕರ್ತರು ಹಣ ಹಂಚುವಾಗ ಸಿಕ್ಕಬಿದ್ದ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಹಾಸನ, ದಾವಣಗೆರೆ ಮುಂತಾದ ಕಡೆಯಿಂದ ಸಂಘ ಪರಿವಾರದವರನ್ನು ಕರೆ ತಂದು ಹಣಹಂಚುವ ಕೆಲಸಕ್ಕೆ ನಿಯೋಜಿಸಿದ್ದರು ಎಂಬ ಆರೋಪಗಳಿಗೆ ಸಾಕ್ಷಿಯಾಗಿ ಹತ್ತಾರು ವಿಡಿಯೋ ಹೊರಬಂದವು, ಎರಡು-ಮೂರು ಕೇಸುಗಳು ದಾಖಲಾದವು, ತುರವಿಹಾಳದಲ್ಲಿ ಹಾಸನದ ಮುವರು ಯುವಕರು ಬಿಜೆಪಿ ಪರ ಹಣ ಹಂಚಿ ಜನರ ಕೈಗೆ ಸಿಕ್ಕಿ ಬಿದ್ದು ಬಂಧನಕ್ಕೆ ಒಳಗಾದರು.

‘ಮೂಟೆಗಳಲ್ಲಿ ಬಿಜೆಪಿ ಹಣ ಸಾಗಿಸಿದೆ, ಪಿಎಸ್‌ಐ ಒಬ್ಬರು ಇದಕ್ಕೆ ನೆರವಾಗಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಸ್ಕಿಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದರು.
ಬಂಜಾರಾ ಸಮುದಾಯದ ಪ್ರತಿಭಾನ್ವಿತ ಗಾಯಕಿ ಮಂಗ್ಲಿ (ಸಾವಿತ್ರಿ ರಾಠೋಡ್) ಅವರನ್ನು ಇಲ್ಲಿಗೆ ಕರೆ ತಂದು ಕ್ಷೇತ್ರದ ತಾಂಡಾಗಳಲ್ಲಿ ಬಿಜೆಪಿ ಪ್ರಚಾರ ಮಾಡಿಸಿತು!

ಹಣದ ಹೊಳೆ ವರ್ಸಸ್ ಹೋರಾಟದ ಕಾಲುವೆ!

ಹಿಂದಿನ ಉಪ ಚುನಾವಣೆಗಳಲ್ಲಿ ಆಡಳಿತ ಪಕ್ಷವಾದ ಬಿಜೆಪಿ ಹಣದ ಹೊಳೆ ಹರಿಸಿ, ಜಾತಿವಾರು ಧೂರ್ತ ನಾಯಕರನ್ನು ಖರೀದಿಸಿ ಮತ್ತು ಭಾವನಾತ್ಮಕ ವಿಷಯವನ್ನು ಅಲ್ಲಲ್ಲಿ ಮುಂದು ಮಾಡಿ ಗೆಲ್ಲುತ್ತಲೇ ಬಂದಿದೆ. ಆದರೆ, ಈ ಎಲ್ಲವನ್ನೂ ಪ್ರಯೋಗಿಸಿಯೂ ಅದು 30 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋತಿದೆ.

ಇದಕ್ಕೆ ಹಲವು ಕಾರಣಗಳಿವೆ:
• ಪ್ರತಾಪಗೌಡ ಸತತವಾಗಿ ಮುರು ಸಲ ಈ ಕ್ಷೇತ್ರ ಪ್ರತಿನಿಧಿಸಿದ್ದಾರೆ. 2018ರಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಜಿಗಿದು ಗೆದ್ದರು. ಆಪರೇಷನ್ ಕಮಲದಲ್ಲಿ ಆಸಕ್ತಿ ವಹಿಸಿದರೆ ಹೊರತು ನೀರಾವರಿ ಮನವಿಯ ಕುರಿತಲ್ಲ ಎಂದು ಅವರ ಬಗ್ಗೆ ಅಸಮಾಧಾನವಿತ್ತು.
• ಕಳೆದ ಸಲ ಬಿಜೆಪಿಯಿಂದ ಸ್ಪರ್ಧಿಸಿದ್ದ ಬಸನಗೌಡ ತುರವಿಹಾಳ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರತಾಪಗೌಡರ ಎದುರು ಕೇವಲ 231 ಮತಗಳಿಂದ ಸೋತಿದ್ದರು. ಈ ಸಲ ಕಾಂಗ್ರೆಸ್ ಅಭ್ಯರ್ಥಿ ಆದ ಅವರಿಗೆ ಒಂದು ಮಟ್ಟದ ಅನುಕಂಪ ಇತ್ತು.

ಟರ್ನಿಂಗ್ ಪಾಯಿಂಟ್!

ಮೇಲಿನ ಎರಡು ಕಾರಣಗಳಷ್ಟೇ ಇದ್ದರೆ ಹಣ ಮತ್ತು ಜಾತಿ ಲೆಕ್ಕದಲ್ಲಿ ಪ್ರತಾಪಗೌಡ ಹೇಗೋ ಗೆಲ್ಲುತ್ತಿದ್ದರು. ಇಡೀ ಚುನಾವಣಾ ಪ್ರಕ್ರಿಯೆಗೆ ಟ್ವಿಸ್ಟ್ ಕೊಟ್ಟಿದ್ದೇ 5-ಎ ಕಾಲುವೆ ನೀರಾವರಿ ಹೋರಾಟ. 58 ಹಳ್ಳಿಗಳ ಈ ಹೋರಾಟವು, ಭೂ ಮಾಲೀಕ ಲಿಂಗಾಯತ ರೆಡ್ಡಿಗಳು, ಸಣ್ಣ ಹಿಡುವಳಿಯ ಕುರುಬರು, ನಾಯಕರು, ದಲಿತರು ಮತ್ತು ಗುಳೆ ಹೋಗಿಯೇ ಬದುಕು ಸವೆಸುತ್ತ ಬಂದ ಎಲ್ಲ ಜಾತಿಗಳ ಭೂರಹಿತರನ್ನು ಒಟ್ಟು ಮಾಡಿತು.

ಹೋರಾಟ ಸಮಿತಿಯ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ, ಅಧ್ಯಕ್ಷ ಬಸವರಾಜಪ್ಪ ಹರ್ವಾಪುರ, ಪ್ರಧಾನ ಕಾರ್ಯದರ್ಶಿ ನಾಗರಡ್ಡೆಪ್ಪ ದೇವರಮನಿ, ಖಜಾಂಚಿ ಶಿವನಗೌಡ ವಟಗಲ್ ಮತ್ತು ಸಾವಿರಾರು ಯುವ ಹೋರಾಟಗಾರರು ಹಳ್ಳಿ ಹಳ್ಳಿಗಳಿಗೆ ತಲುಪಿ, ಬಿಜೆಪಿ ಸೋಲಿಸಿ ಎಂಬ ಭಾಷಣಗಳನ್ನು ಮಾಡಿದ್ದಲ್ಲದೇ, ಪ್ರಜಾಪ್ರಭುತ್ವದ ಆಶಯಗಳ ಅರಿವು ಮೂಡಿಸಿದರು. ಈಗ ಹೋರಾಟ 164ನೇ ದಿನಕ್ಕೆ ತಲುಪಿದೆ. ಈಗಿನ ಹೊಸ ಶಾಸಕ ಕನಿಷ್ಠ, ಕೊಡೆಕಲ್ ಬಸವಣ್ಣ ಯೋಜನೆ ಬದಲು ಎನ್‌ಆರ್‌ಬಿಸಿ 5-ಎ ಕಾಲುವೆ ಯೋಜನೆ ಬಗ್ಗೆ ಧ್ವನಿ ಎತ್ತಬೇಕು ಎಂದು ಹೋರಾಟ ಸಮಿತಿ ಹೇಳಿದೆ. ಹೋರಾಟ ಎಂದಿನಂತೆ ಮುಂದುವರೆಯಲಿದೆ ಎಂದೂ ಸ್ಪಷ್ಟಪಡಿಸಿದೆ. ಇಂದು ಫಲಿತಾಂಶದ ದಿನವೂ ಹೋರಾಟ ನಡೆಯುತ್ತಿದೆ.

ಹಣದ ಹೊಳೆಯನ್ನು ಒಂದು ಹೋರಾಟದ ಪುಟ್ಟ ಕಾಲುವೆ ಹಿಮ್ಮೆಟ್ಟಿಸಿದ ಕತೆಯಿದು. ಇಲ್ಲಿ ಜಿಲ್ಲಾ ಮತ್ತು ತಾಲೂಕಾ ಮಟ್ಟದಲ್ಲಿ ಹೋರಾಟ ಮಾಡುವವರಿಗೆ ಕೆಲವು ಪಾಠಗಳಂತೂ ಇವೆ…
* ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...