Homeಮುಖಪುಟಮಸ್ಕಿ: ನೀರಾವರಿ ಹೋರಾಟದ ಕಾಲುವೆಯಲ್ಲಿ ಕೊಚ್ಚಿ ಹೋದ ಬಿಜೆಪಿಯ ಹಣದ ಹೊಳೆ...

ಮಸ್ಕಿ: ನೀರಾವರಿ ಹೋರಾಟದ ಕಾಲುವೆಯಲ್ಲಿ ಕೊಚ್ಚಿ ಹೋದ ಬಿಜೆಪಿಯ ಹಣದ ಹೊಳೆ…

- Advertisement -
- Advertisement -

ಹಿಂದುಳಿದ ತಾಲೂಕಾದ ಮಸ್ಕಿಯ ಉಪ ಚುನಾವಣೆಯಲ್ಲಿ ಯಾರು ಗೆದ್ದರು ಎಂಬುದಕ್ಕಿಂತ, ಯಾರು ಸೋತರು, ಅದಕ್ಕೂ ಮುಖ್ಯವಾಗಿ ಯಾವ ಪಕ್ಷ ಸೋತಿತು ಎಂಬುದು ಮಹತ್ವದ ಸಂಗತಿಯಾಗಿದೆ.

ಇಲ್ಲೀಗ ಕಾಂಗ್ರೆಸ್ ಪಕ್ಷವು ಸುಮಾರು 30 ಸಾವಿರ ಲೀಡ್‌ನಿಂದ ಗೆದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ್ 86,222 ಮತಗಳನ್ನು ಪಡೆದರೆ ಬಿಜೆಪಿಯ ಪ್ರತಾಪಗೌಡ ಪಾಟೀಲ್ 55,581 ಮತಗಳನ್ನಷ್ಟೇ ಪಡೆಯಲು ಶಕ್ತರಾಗಿದ್ದಾರೆ. ಅಲ್ಲಿಗೆ 30,641 ಮತಗಳ ಅಂತರದಿಂದ ಸೋಲನ್ನಪಿದ್ದಾರೆ. 2019ರಲ್ಲಿ ಕಾಂಗ್ರೆಸ್‌ನಿಂದ ಗೆದ್ದು, ನಂತರ ಆಪರೇಷನ್ ಕಮಲದ ಬಲೆಗೆ ಬಿದ್ದು ಬಿಜೆಪಿ ಸರ್ಕಾರ ಸ್ಥಾಪನೆಗೆ ‘ಕೊಡುಗೆ’ ನೀಡಿದ್ದ ಪ್ರತಾಪಗೌಡ ಪಾಟೀಲರನ್ನು ಹೀನಾಯವಾಗಿ ಸೋತಿದ್ದಾರೆ.

ನಾನುಗೌರಿ.ಕಾಂ ಮಸ್ಕಿ ಉಪ ಚುನಾವಣೆ ಕುರಿತು ಏಳೆಂಟು ವರದಿಗಳನ್ನು ಪ್ರಕಟಿಸಿದೆ, ಮೊದಲ ವರದಿಯೇ, ‘ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?’ ಎಂಬ ಶೀರ್ಷಿಕೆ ಹೊಂದಿತ್ತು. ಇವತ್ತು ಅದು ನಿಜವಾಗಿದೆ.

ಎನ್‌ಆರ್‌ಸಿಬಿ 5-ಎ ( ಕೃಷ್ಣಾ ನೀರಿನ ನಾರಾಯಣಪೂರ ಬಲದಂಡೆ ನೀರಾವರಿ ಯೋಜನೆಗೆ ಒಳಪಡುತ್ತದೆ) ಕಾಲುವೆ ಹೋರಾಟ ಸುದೀರ್ಘವಾಗಿದೆ. 13 ವರ್ಷಗಳಿಂದ ಈ ಬೇಡಿಕೆ ಇದೆ. ಈ 13 ವರ್ಷ ಕಾಲ ಕಾಂಗ್ರೆಸ್ ಮತ್ತು ಬಿಜೆಪಿ ಎರಡರ ಲಾಭ ಪಡೆದು ಶಾಸಕರಾಗಿದ್ದ ಪ್ರತಾಪಗೌಡರು ಎಂದೂ 5-ಎ ಕಾಲುವೆ ಬಗ್ಗೆ ಸದನದಲ್ಲಿ ಧ್ವನಿ ಎತ್ತಲೇ ಇಲ್ಲ. ಅದಿರಲಿ, ‘ಏ ಅದು ಅವೈಜ್ಞಾನಿಕ ಯೋಜನಾ ಅದ… ಕೋಟೆಕಲ್ ಬಸವಣ್ಣ ನೀರಾವರಿ ಯೋಜನಾ ಮಾಡಿಸ್ತೀನಿ’ ಎಂದು ಉಡಾಫೆಯ ಮಾತು ಹೇಳುತ್ತ ಬಂದರು.

ಈ ಸಲ ಗೆಲ್ಲುವುದು ಕಷ್ಟ ಅನಿಸಿದ ಕೂಡಲೇ ಕೃಷ್ಣಾ ನದಿಯಿಂದ ಮಸ್ಕಿ ಕ್ಷೇತ್ರದ 18 ಕೆರೆಗಳಿಗೆ ನೀರು ಹರಿಸುವ 500 ಕೋಟಿ ರೂ, ಯೋಜನೆ ಬಜೆಟ್‌ನಲ್ಲಿ ಘೋಷಣೆ ಆಗುವಂತೆ ಮಾಡಿದರು. ಆದರೆ ಈ 18 ಕೆರೆಗಳೋ, ಅದರಲ್ಲಿ ಭಾಗಶಃ ಮುಚ್ಚಿವೆ, ಭಾಗಶಃ ಕಿರಿದಾಗಿವೆ. 480 ಕೋಟಿ ರೂ,ಗಳನ್ನು ಇದಕ್ಕೆ ವೆಚ್ಚ ಮಾಡಿ ಲೂಟಿ ಹೊಡೆಯಲಾಗಿದೆ ಎಂಬುದು ರೈತರ ಆರೋಪವಾಗಿದೆ.

ವಿಜಯೇಂದ್ರರ ಉಸ್ತುವಾರಿ

ಈ ಕ್ಷೇತ್ರದ ಬಗ್ಗೆ ತುಂಬ ತಲೆ ಕೆಡಿಸಿಕೊಂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ, ಚುನವಣಾ ಪ್ರಕ್ರಿಯೆ ಶುರುವಾದಾಗ ಇಲ್ಲೇ ಠಿಕಾಣಿ ಹಾಕಿದ್ದರು. ಜಾತಿವಾರು ಸಭೆಗಳನ್ನು ನಡೆಸಿ, ಚುನಾವಣಾ ‘ವಹಿವಾಟು’ ನಡೆಸಿದ ಅವರು ಇಲ್ಲಿ ಸಾಕಷ್ಟು ರೊಕ್ಕದ ಹೊಳೆ ಹರಿಸಿದರು ಎಂದು ರೈತ ಹೋರಾಟಗಾರರು ಮತ್ತು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಹಲವರು ಬಿಜೆಪಿ ಕಾರ್ಯಕರ್ತರು ಹಣ ಹಂಚುವಾಗ ಸಿಕ್ಕಬಿದ್ದ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಹಾಸನ, ದಾವಣಗೆರೆ ಮುಂತಾದ ಕಡೆಯಿಂದ ಸಂಘ ಪರಿವಾರದವರನ್ನು ಕರೆ ತಂದು ಹಣಹಂಚುವ ಕೆಲಸಕ್ಕೆ ನಿಯೋಜಿಸಿದ್ದರು ಎಂಬ ಆರೋಪಗಳಿಗೆ ಸಾಕ್ಷಿಯಾಗಿ ಹತ್ತಾರು ವಿಡಿಯೋ ಹೊರಬಂದವು, ಎರಡು-ಮೂರು ಕೇಸುಗಳು ದಾಖಲಾದವು, ತುರವಿಹಾಳದಲ್ಲಿ ಹಾಸನದ ಮುವರು ಯುವಕರು ಬಿಜೆಪಿ ಪರ ಹಣ ಹಂಚಿ ಜನರ ಕೈಗೆ ಸಿಕ್ಕಿ ಬಿದ್ದು ಬಂಧನಕ್ಕೆ ಒಳಗಾದರು.

‘ಮೂಟೆಗಳಲ್ಲಿ ಬಿಜೆಪಿ ಹಣ ಸಾಗಿಸಿದೆ, ಪಿಎಸ್‌ಐ ಒಬ್ಬರು ಇದಕ್ಕೆ ನೆರವಾಗಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಸ್ಕಿಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದರು.
ಬಂಜಾರಾ ಸಮುದಾಯದ ಪ್ರತಿಭಾನ್ವಿತ ಗಾಯಕಿ ಮಂಗ್ಲಿ (ಸಾವಿತ್ರಿ ರಾಠೋಡ್) ಅವರನ್ನು ಇಲ್ಲಿಗೆ ಕರೆ ತಂದು ಕ್ಷೇತ್ರದ ತಾಂಡಾಗಳಲ್ಲಿ ಬಿಜೆಪಿ ಪ್ರಚಾರ ಮಾಡಿಸಿತು!

ಹಣದ ಹೊಳೆ ವರ್ಸಸ್ ಹೋರಾಟದ ಕಾಲುವೆ!

ಹಿಂದಿನ ಉಪ ಚುನಾವಣೆಗಳಲ್ಲಿ ಆಡಳಿತ ಪಕ್ಷವಾದ ಬಿಜೆಪಿ ಹಣದ ಹೊಳೆ ಹರಿಸಿ, ಜಾತಿವಾರು ಧೂರ್ತ ನಾಯಕರನ್ನು ಖರೀದಿಸಿ ಮತ್ತು ಭಾವನಾತ್ಮಕ ವಿಷಯವನ್ನು ಅಲ್ಲಲ್ಲಿ ಮುಂದು ಮಾಡಿ ಗೆಲ್ಲುತ್ತಲೇ ಬಂದಿದೆ. ಆದರೆ, ಈ ಎಲ್ಲವನ್ನೂ ಪ್ರಯೋಗಿಸಿಯೂ ಅದು 30 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋತಿದೆ.

ಇದಕ್ಕೆ ಹಲವು ಕಾರಣಗಳಿವೆ:
• ಪ್ರತಾಪಗೌಡ ಸತತವಾಗಿ ಮುರು ಸಲ ಈ ಕ್ಷೇತ್ರ ಪ್ರತಿನಿಧಿಸಿದ್ದಾರೆ. 2018ರಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಜಿಗಿದು ಗೆದ್ದರು. ಆಪರೇಷನ್ ಕಮಲದಲ್ಲಿ ಆಸಕ್ತಿ ವಹಿಸಿದರೆ ಹೊರತು ನೀರಾವರಿ ಮನವಿಯ ಕುರಿತಲ್ಲ ಎಂದು ಅವರ ಬಗ್ಗೆ ಅಸಮಾಧಾನವಿತ್ತು.
• ಕಳೆದ ಸಲ ಬಿಜೆಪಿಯಿಂದ ಸ್ಪರ್ಧಿಸಿದ್ದ ಬಸನಗೌಡ ತುರವಿಹಾಳ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರತಾಪಗೌಡರ ಎದುರು ಕೇವಲ 231 ಮತಗಳಿಂದ ಸೋತಿದ್ದರು. ಈ ಸಲ ಕಾಂಗ್ರೆಸ್ ಅಭ್ಯರ್ಥಿ ಆದ ಅವರಿಗೆ ಒಂದು ಮಟ್ಟದ ಅನುಕಂಪ ಇತ್ತು.

ಟರ್ನಿಂಗ್ ಪಾಯಿಂಟ್!

ಮೇಲಿನ ಎರಡು ಕಾರಣಗಳಷ್ಟೇ ಇದ್ದರೆ ಹಣ ಮತ್ತು ಜಾತಿ ಲೆಕ್ಕದಲ್ಲಿ ಪ್ರತಾಪಗೌಡ ಹೇಗೋ ಗೆಲ್ಲುತ್ತಿದ್ದರು. ಇಡೀ ಚುನಾವಣಾ ಪ್ರಕ್ರಿಯೆಗೆ ಟ್ವಿಸ್ಟ್ ಕೊಟ್ಟಿದ್ದೇ 5-ಎ ಕಾಲುವೆ ನೀರಾವರಿ ಹೋರಾಟ. 58 ಹಳ್ಳಿಗಳ ಈ ಹೋರಾಟವು, ಭೂ ಮಾಲೀಕ ಲಿಂಗಾಯತ ರೆಡ್ಡಿಗಳು, ಸಣ್ಣ ಹಿಡುವಳಿಯ ಕುರುಬರು, ನಾಯಕರು, ದಲಿತರು ಮತ್ತು ಗುಳೆ ಹೋಗಿಯೇ ಬದುಕು ಸವೆಸುತ್ತ ಬಂದ ಎಲ್ಲ ಜಾತಿಗಳ ಭೂರಹಿತರನ್ನು ಒಟ್ಟು ಮಾಡಿತು.

ಹೋರಾಟ ಸಮಿತಿಯ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ, ಅಧ್ಯಕ್ಷ ಬಸವರಾಜಪ್ಪ ಹರ್ವಾಪುರ, ಪ್ರಧಾನ ಕಾರ್ಯದರ್ಶಿ ನಾಗರಡ್ಡೆಪ್ಪ ದೇವರಮನಿ, ಖಜಾಂಚಿ ಶಿವನಗೌಡ ವಟಗಲ್ ಮತ್ತು ಸಾವಿರಾರು ಯುವ ಹೋರಾಟಗಾರರು ಹಳ್ಳಿ ಹಳ್ಳಿಗಳಿಗೆ ತಲುಪಿ, ಬಿಜೆಪಿ ಸೋಲಿಸಿ ಎಂಬ ಭಾಷಣಗಳನ್ನು ಮಾಡಿದ್ದಲ್ಲದೇ, ಪ್ರಜಾಪ್ರಭುತ್ವದ ಆಶಯಗಳ ಅರಿವು ಮೂಡಿಸಿದರು. ಈಗ ಹೋರಾಟ 164ನೇ ದಿನಕ್ಕೆ ತಲುಪಿದೆ. ಈಗಿನ ಹೊಸ ಶಾಸಕ ಕನಿಷ್ಠ, ಕೊಡೆಕಲ್ ಬಸವಣ್ಣ ಯೋಜನೆ ಬದಲು ಎನ್‌ಆರ್‌ಬಿಸಿ 5-ಎ ಕಾಲುವೆ ಯೋಜನೆ ಬಗ್ಗೆ ಧ್ವನಿ ಎತ್ತಬೇಕು ಎಂದು ಹೋರಾಟ ಸಮಿತಿ ಹೇಳಿದೆ. ಹೋರಾಟ ಎಂದಿನಂತೆ ಮುಂದುವರೆಯಲಿದೆ ಎಂದೂ ಸ್ಪಷ್ಟಪಡಿಸಿದೆ. ಇಂದು ಫಲಿತಾಂಶದ ದಿನವೂ ಹೋರಾಟ ನಡೆಯುತ್ತಿದೆ.

ಹಣದ ಹೊಳೆಯನ್ನು ಒಂದು ಹೋರಾಟದ ಪುಟ್ಟ ಕಾಲುವೆ ಹಿಮ್ಮೆಟ್ಟಿಸಿದ ಕತೆಯಿದು. ಇಲ್ಲಿ ಜಿಲ್ಲಾ ಮತ್ತು ತಾಲೂಕಾ ಮಟ್ಟದಲ್ಲಿ ಹೋರಾಟ ಮಾಡುವವರಿಗೆ ಕೆಲವು ಪಾಠಗಳಂತೂ ಇವೆ…
* ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...