Homeಮುಖಪುಟಮಸ್ಕಿ: ನೀರಾವರಿ ಹೋರಾಟದ ಕಾಲುವೆಯಲ್ಲಿ ಕೊಚ್ಚಿ ಹೋದ ಬಿಜೆಪಿಯ ಹಣದ ಹೊಳೆ...

ಮಸ್ಕಿ: ನೀರಾವರಿ ಹೋರಾಟದ ಕಾಲುವೆಯಲ್ಲಿ ಕೊಚ್ಚಿ ಹೋದ ಬಿಜೆಪಿಯ ಹಣದ ಹೊಳೆ…

- Advertisement -
- Advertisement -

ಹಿಂದುಳಿದ ತಾಲೂಕಾದ ಮಸ್ಕಿಯ ಉಪ ಚುನಾವಣೆಯಲ್ಲಿ ಯಾರು ಗೆದ್ದರು ಎಂಬುದಕ್ಕಿಂತ, ಯಾರು ಸೋತರು, ಅದಕ್ಕೂ ಮುಖ್ಯವಾಗಿ ಯಾವ ಪಕ್ಷ ಸೋತಿತು ಎಂಬುದು ಮಹತ್ವದ ಸಂಗತಿಯಾಗಿದೆ.

ಇಲ್ಲೀಗ ಕಾಂಗ್ರೆಸ್ ಪಕ್ಷವು ಸುಮಾರು 30 ಸಾವಿರ ಲೀಡ್‌ನಿಂದ ಗೆದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ್ 86,222 ಮತಗಳನ್ನು ಪಡೆದರೆ ಬಿಜೆಪಿಯ ಪ್ರತಾಪಗೌಡ ಪಾಟೀಲ್ 55,581 ಮತಗಳನ್ನಷ್ಟೇ ಪಡೆಯಲು ಶಕ್ತರಾಗಿದ್ದಾರೆ. ಅಲ್ಲಿಗೆ 30,641 ಮತಗಳ ಅಂತರದಿಂದ ಸೋಲನ್ನಪಿದ್ದಾರೆ. 2019ರಲ್ಲಿ ಕಾಂಗ್ರೆಸ್‌ನಿಂದ ಗೆದ್ದು, ನಂತರ ಆಪರೇಷನ್ ಕಮಲದ ಬಲೆಗೆ ಬಿದ್ದು ಬಿಜೆಪಿ ಸರ್ಕಾರ ಸ್ಥಾಪನೆಗೆ ‘ಕೊಡುಗೆ’ ನೀಡಿದ್ದ ಪ್ರತಾಪಗೌಡ ಪಾಟೀಲರನ್ನು ಹೀನಾಯವಾಗಿ ಸೋತಿದ್ದಾರೆ.

ನಾನುಗೌರಿ.ಕಾಂ ಮಸ್ಕಿ ಉಪ ಚುನಾವಣೆ ಕುರಿತು ಏಳೆಂಟು ವರದಿಗಳನ್ನು ಪ್ರಕಟಿಸಿದೆ, ಮೊದಲ ವರದಿಯೇ, ‘ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?’ ಎಂಬ ಶೀರ್ಷಿಕೆ ಹೊಂದಿತ್ತು. ಇವತ್ತು ಅದು ನಿಜವಾಗಿದೆ.

ಎನ್‌ಆರ್‌ಸಿಬಿ 5-ಎ ( ಕೃಷ್ಣಾ ನೀರಿನ ನಾರಾಯಣಪೂರ ಬಲದಂಡೆ ನೀರಾವರಿ ಯೋಜನೆಗೆ ಒಳಪಡುತ್ತದೆ) ಕಾಲುವೆ ಹೋರಾಟ ಸುದೀರ್ಘವಾಗಿದೆ. 13 ವರ್ಷಗಳಿಂದ ಈ ಬೇಡಿಕೆ ಇದೆ. ಈ 13 ವರ್ಷ ಕಾಲ ಕಾಂಗ್ರೆಸ್ ಮತ್ತು ಬಿಜೆಪಿ ಎರಡರ ಲಾಭ ಪಡೆದು ಶಾಸಕರಾಗಿದ್ದ ಪ್ರತಾಪಗೌಡರು ಎಂದೂ 5-ಎ ಕಾಲುವೆ ಬಗ್ಗೆ ಸದನದಲ್ಲಿ ಧ್ವನಿ ಎತ್ತಲೇ ಇಲ್ಲ. ಅದಿರಲಿ, ‘ಏ ಅದು ಅವೈಜ್ಞಾನಿಕ ಯೋಜನಾ ಅದ… ಕೋಟೆಕಲ್ ಬಸವಣ್ಣ ನೀರಾವರಿ ಯೋಜನಾ ಮಾಡಿಸ್ತೀನಿ’ ಎಂದು ಉಡಾಫೆಯ ಮಾತು ಹೇಳುತ್ತ ಬಂದರು.

ಈ ಸಲ ಗೆಲ್ಲುವುದು ಕಷ್ಟ ಅನಿಸಿದ ಕೂಡಲೇ ಕೃಷ್ಣಾ ನದಿಯಿಂದ ಮಸ್ಕಿ ಕ್ಷೇತ್ರದ 18 ಕೆರೆಗಳಿಗೆ ನೀರು ಹರಿಸುವ 500 ಕೋಟಿ ರೂ, ಯೋಜನೆ ಬಜೆಟ್‌ನಲ್ಲಿ ಘೋಷಣೆ ಆಗುವಂತೆ ಮಾಡಿದರು. ಆದರೆ ಈ 18 ಕೆರೆಗಳೋ, ಅದರಲ್ಲಿ ಭಾಗಶಃ ಮುಚ್ಚಿವೆ, ಭಾಗಶಃ ಕಿರಿದಾಗಿವೆ. 480 ಕೋಟಿ ರೂ,ಗಳನ್ನು ಇದಕ್ಕೆ ವೆಚ್ಚ ಮಾಡಿ ಲೂಟಿ ಹೊಡೆಯಲಾಗಿದೆ ಎಂಬುದು ರೈತರ ಆರೋಪವಾಗಿದೆ.

ವಿಜಯೇಂದ್ರರ ಉಸ್ತುವಾರಿ

ಈ ಕ್ಷೇತ್ರದ ಬಗ್ಗೆ ತುಂಬ ತಲೆ ಕೆಡಿಸಿಕೊಂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ, ಚುನವಣಾ ಪ್ರಕ್ರಿಯೆ ಶುರುವಾದಾಗ ಇಲ್ಲೇ ಠಿಕಾಣಿ ಹಾಕಿದ್ದರು. ಜಾತಿವಾರು ಸಭೆಗಳನ್ನು ನಡೆಸಿ, ಚುನಾವಣಾ ‘ವಹಿವಾಟು’ ನಡೆಸಿದ ಅವರು ಇಲ್ಲಿ ಸಾಕಷ್ಟು ರೊಕ್ಕದ ಹೊಳೆ ಹರಿಸಿದರು ಎಂದು ರೈತ ಹೋರಾಟಗಾರರು ಮತ್ತು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಹಲವರು ಬಿಜೆಪಿ ಕಾರ್ಯಕರ್ತರು ಹಣ ಹಂಚುವಾಗ ಸಿಕ್ಕಬಿದ್ದ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಹಾಸನ, ದಾವಣಗೆರೆ ಮುಂತಾದ ಕಡೆಯಿಂದ ಸಂಘ ಪರಿವಾರದವರನ್ನು ಕರೆ ತಂದು ಹಣಹಂಚುವ ಕೆಲಸಕ್ಕೆ ನಿಯೋಜಿಸಿದ್ದರು ಎಂಬ ಆರೋಪಗಳಿಗೆ ಸಾಕ್ಷಿಯಾಗಿ ಹತ್ತಾರು ವಿಡಿಯೋ ಹೊರಬಂದವು, ಎರಡು-ಮೂರು ಕೇಸುಗಳು ದಾಖಲಾದವು, ತುರವಿಹಾಳದಲ್ಲಿ ಹಾಸನದ ಮುವರು ಯುವಕರು ಬಿಜೆಪಿ ಪರ ಹಣ ಹಂಚಿ ಜನರ ಕೈಗೆ ಸಿಕ್ಕಿ ಬಿದ್ದು ಬಂಧನಕ್ಕೆ ಒಳಗಾದರು.

‘ಮೂಟೆಗಳಲ್ಲಿ ಬಿಜೆಪಿ ಹಣ ಸಾಗಿಸಿದೆ, ಪಿಎಸ್‌ಐ ಒಬ್ಬರು ಇದಕ್ಕೆ ನೆರವಾಗಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಸ್ಕಿಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದರು.
ಬಂಜಾರಾ ಸಮುದಾಯದ ಪ್ರತಿಭಾನ್ವಿತ ಗಾಯಕಿ ಮಂಗ್ಲಿ (ಸಾವಿತ್ರಿ ರಾಠೋಡ್) ಅವರನ್ನು ಇಲ್ಲಿಗೆ ಕರೆ ತಂದು ಕ್ಷೇತ್ರದ ತಾಂಡಾಗಳಲ್ಲಿ ಬಿಜೆಪಿ ಪ್ರಚಾರ ಮಾಡಿಸಿತು!

ಹಣದ ಹೊಳೆ ವರ್ಸಸ್ ಹೋರಾಟದ ಕಾಲುವೆ!

ಹಿಂದಿನ ಉಪ ಚುನಾವಣೆಗಳಲ್ಲಿ ಆಡಳಿತ ಪಕ್ಷವಾದ ಬಿಜೆಪಿ ಹಣದ ಹೊಳೆ ಹರಿಸಿ, ಜಾತಿವಾರು ಧೂರ್ತ ನಾಯಕರನ್ನು ಖರೀದಿಸಿ ಮತ್ತು ಭಾವನಾತ್ಮಕ ವಿಷಯವನ್ನು ಅಲ್ಲಲ್ಲಿ ಮುಂದು ಮಾಡಿ ಗೆಲ್ಲುತ್ತಲೇ ಬಂದಿದೆ. ಆದರೆ, ಈ ಎಲ್ಲವನ್ನೂ ಪ್ರಯೋಗಿಸಿಯೂ ಅದು 30 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋತಿದೆ.

ಇದಕ್ಕೆ ಹಲವು ಕಾರಣಗಳಿವೆ:
• ಪ್ರತಾಪಗೌಡ ಸತತವಾಗಿ ಮುರು ಸಲ ಈ ಕ್ಷೇತ್ರ ಪ್ರತಿನಿಧಿಸಿದ್ದಾರೆ. 2018ರಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಜಿಗಿದು ಗೆದ್ದರು. ಆಪರೇಷನ್ ಕಮಲದಲ್ಲಿ ಆಸಕ್ತಿ ವಹಿಸಿದರೆ ಹೊರತು ನೀರಾವರಿ ಮನವಿಯ ಕುರಿತಲ್ಲ ಎಂದು ಅವರ ಬಗ್ಗೆ ಅಸಮಾಧಾನವಿತ್ತು.
• ಕಳೆದ ಸಲ ಬಿಜೆಪಿಯಿಂದ ಸ್ಪರ್ಧಿಸಿದ್ದ ಬಸನಗೌಡ ತುರವಿಹಾಳ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರತಾಪಗೌಡರ ಎದುರು ಕೇವಲ 231 ಮತಗಳಿಂದ ಸೋತಿದ್ದರು. ಈ ಸಲ ಕಾಂಗ್ರೆಸ್ ಅಭ್ಯರ್ಥಿ ಆದ ಅವರಿಗೆ ಒಂದು ಮಟ್ಟದ ಅನುಕಂಪ ಇತ್ತು.

ಟರ್ನಿಂಗ್ ಪಾಯಿಂಟ್!

ಮೇಲಿನ ಎರಡು ಕಾರಣಗಳಷ್ಟೇ ಇದ್ದರೆ ಹಣ ಮತ್ತು ಜಾತಿ ಲೆಕ್ಕದಲ್ಲಿ ಪ್ರತಾಪಗೌಡ ಹೇಗೋ ಗೆಲ್ಲುತ್ತಿದ್ದರು. ಇಡೀ ಚುನಾವಣಾ ಪ್ರಕ್ರಿಯೆಗೆ ಟ್ವಿಸ್ಟ್ ಕೊಟ್ಟಿದ್ದೇ 5-ಎ ಕಾಲುವೆ ನೀರಾವರಿ ಹೋರಾಟ. 58 ಹಳ್ಳಿಗಳ ಈ ಹೋರಾಟವು, ಭೂ ಮಾಲೀಕ ಲಿಂಗಾಯತ ರೆಡ್ಡಿಗಳು, ಸಣ್ಣ ಹಿಡುವಳಿಯ ಕುರುಬರು, ನಾಯಕರು, ದಲಿತರು ಮತ್ತು ಗುಳೆ ಹೋಗಿಯೇ ಬದುಕು ಸವೆಸುತ್ತ ಬಂದ ಎಲ್ಲ ಜಾತಿಗಳ ಭೂರಹಿತರನ್ನು ಒಟ್ಟು ಮಾಡಿತು.

ಹೋರಾಟ ಸಮಿತಿಯ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ, ಅಧ್ಯಕ್ಷ ಬಸವರಾಜಪ್ಪ ಹರ್ವಾಪುರ, ಪ್ರಧಾನ ಕಾರ್ಯದರ್ಶಿ ನಾಗರಡ್ಡೆಪ್ಪ ದೇವರಮನಿ, ಖಜಾಂಚಿ ಶಿವನಗೌಡ ವಟಗಲ್ ಮತ್ತು ಸಾವಿರಾರು ಯುವ ಹೋರಾಟಗಾರರು ಹಳ್ಳಿ ಹಳ್ಳಿಗಳಿಗೆ ತಲುಪಿ, ಬಿಜೆಪಿ ಸೋಲಿಸಿ ಎಂಬ ಭಾಷಣಗಳನ್ನು ಮಾಡಿದ್ದಲ್ಲದೇ, ಪ್ರಜಾಪ್ರಭುತ್ವದ ಆಶಯಗಳ ಅರಿವು ಮೂಡಿಸಿದರು. ಈಗ ಹೋರಾಟ 164ನೇ ದಿನಕ್ಕೆ ತಲುಪಿದೆ. ಈಗಿನ ಹೊಸ ಶಾಸಕ ಕನಿಷ್ಠ, ಕೊಡೆಕಲ್ ಬಸವಣ್ಣ ಯೋಜನೆ ಬದಲು ಎನ್‌ಆರ್‌ಬಿಸಿ 5-ಎ ಕಾಲುವೆ ಯೋಜನೆ ಬಗ್ಗೆ ಧ್ವನಿ ಎತ್ತಬೇಕು ಎಂದು ಹೋರಾಟ ಸಮಿತಿ ಹೇಳಿದೆ. ಹೋರಾಟ ಎಂದಿನಂತೆ ಮುಂದುವರೆಯಲಿದೆ ಎಂದೂ ಸ್ಪಷ್ಟಪಡಿಸಿದೆ. ಇಂದು ಫಲಿತಾಂಶದ ದಿನವೂ ಹೋರಾಟ ನಡೆಯುತ್ತಿದೆ.

ಹಣದ ಹೊಳೆಯನ್ನು ಒಂದು ಹೋರಾಟದ ಪುಟ್ಟ ಕಾಲುವೆ ಹಿಮ್ಮೆಟ್ಟಿಸಿದ ಕತೆಯಿದು. ಇಲ್ಲಿ ಜಿಲ್ಲಾ ಮತ್ತು ತಾಲೂಕಾ ಮಟ್ಟದಲ್ಲಿ ಹೋರಾಟ ಮಾಡುವವರಿಗೆ ಕೆಲವು ಪಾಠಗಳಂತೂ ಇವೆ…
* ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...