Homeಮುಖಪುಟಮಸ್ಕಿ: ನೀರಾವರಿ ಹೋರಾಟದ ಕಾಲುವೆಯಲ್ಲಿ ಕೊಚ್ಚಿ ಹೋದ ಬಿಜೆಪಿಯ ಹಣದ ಹೊಳೆ...

ಮಸ್ಕಿ: ನೀರಾವರಿ ಹೋರಾಟದ ಕಾಲುವೆಯಲ್ಲಿ ಕೊಚ್ಚಿ ಹೋದ ಬಿಜೆಪಿಯ ಹಣದ ಹೊಳೆ…

- Advertisement -
- Advertisement -

ಹಿಂದುಳಿದ ತಾಲೂಕಾದ ಮಸ್ಕಿಯ ಉಪ ಚುನಾವಣೆಯಲ್ಲಿ ಯಾರು ಗೆದ್ದರು ಎಂಬುದಕ್ಕಿಂತ, ಯಾರು ಸೋತರು, ಅದಕ್ಕೂ ಮುಖ್ಯವಾಗಿ ಯಾವ ಪಕ್ಷ ಸೋತಿತು ಎಂಬುದು ಮಹತ್ವದ ಸಂಗತಿಯಾಗಿದೆ.

ಇಲ್ಲೀಗ ಕಾಂಗ್ರೆಸ್ ಪಕ್ಷವು ಸುಮಾರು 30 ಸಾವಿರ ಲೀಡ್‌ನಿಂದ ಗೆದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ್ 86,222 ಮತಗಳನ್ನು ಪಡೆದರೆ ಬಿಜೆಪಿಯ ಪ್ರತಾಪಗೌಡ ಪಾಟೀಲ್ 55,581 ಮತಗಳನ್ನಷ್ಟೇ ಪಡೆಯಲು ಶಕ್ತರಾಗಿದ್ದಾರೆ. ಅಲ್ಲಿಗೆ 30,641 ಮತಗಳ ಅಂತರದಿಂದ ಸೋಲನ್ನಪಿದ್ದಾರೆ. 2019ರಲ್ಲಿ ಕಾಂಗ್ರೆಸ್‌ನಿಂದ ಗೆದ್ದು, ನಂತರ ಆಪರೇಷನ್ ಕಮಲದ ಬಲೆಗೆ ಬಿದ್ದು ಬಿಜೆಪಿ ಸರ್ಕಾರ ಸ್ಥಾಪನೆಗೆ ‘ಕೊಡುಗೆ’ ನೀಡಿದ್ದ ಪ್ರತಾಪಗೌಡ ಪಾಟೀಲರನ್ನು ಹೀನಾಯವಾಗಿ ಸೋತಿದ್ದಾರೆ.

ನಾನುಗೌರಿ.ಕಾಂ ಮಸ್ಕಿ ಉಪ ಚುನಾವಣೆ ಕುರಿತು ಏಳೆಂಟು ವರದಿಗಳನ್ನು ಪ್ರಕಟಿಸಿದೆ, ಮೊದಲ ವರದಿಯೇ, ‘ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?’ ಎಂಬ ಶೀರ್ಷಿಕೆ ಹೊಂದಿತ್ತು. ಇವತ್ತು ಅದು ನಿಜವಾಗಿದೆ.

ಎನ್‌ಆರ್‌ಸಿಬಿ 5-ಎ ( ಕೃಷ್ಣಾ ನೀರಿನ ನಾರಾಯಣಪೂರ ಬಲದಂಡೆ ನೀರಾವರಿ ಯೋಜನೆಗೆ ಒಳಪಡುತ್ತದೆ) ಕಾಲುವೆ ಹೋರಾಟ ಸುದೀರ್ಘವಾಗಿದೆ. 13 ವರ್ಷಗಳಿಂದ ಈ ಬೇಡಿಕೆ ಇದೆ. ಈ 13 ವರ್ಷ ಕಾಲ ಕಾಂಗ್ರೆಸ್ ಮತ್ತು ಬಿಜೆಪಿ ಎರಡರ ಲಾಭ ಪಡೆದು ಶಾಸಕರಾಗಿದ್ದ ಪ್ರತಾಪಗೌಡರು ಎಂದೂ 5-ಎ ಕಾಲುವೆ ಬಗ್ಗೆ ಸದನದಲ್ಲಿ ಧ್ವನಿ ಎತ್ತಲೇ ಇಲ್ಲ. ಅದಿರಲಿ, ‘ಏ ಅದು ಅವೈಜ್ಞಾನಿಕ ಯೋಜನಾ ಅದ… ಕೋಟೆಕಲ್ ಬಸವಣ್ಣ ನೀರಾವರಿ ಯೋಜನಾ ಮಾಡಿಸ್ತೀನಿ’ ಎಂದು ಉಡಾಫೆಯ ಮಾತು ಹೇಳುತ್ತ ಬಂದರು.

ಈ ಸಲ ಗೆಲ್ಲುವುದು ಕಷ್ಟ ಅನಿಸಿದ ಕೂಡಲೇ ಕೃಷ್ಣಾ ನದಿಯಿಂದ ಮಸ್ಕಿ ಕ್ಷೇತ್ರದ 18 ಕೆರೆಗಳಿಗೆ ನೀರು ಹರಿಸುವ 500 ಕೋಟಿ ರೂ, ಯೋಜನೆ ಬಜೆಟ್‌ನಲ್ಲಿ ಘೋಷಣೆ ಆಗುವಂತೆ ಮಾಡಿದರು. ಆದರೆ ಈ 18 ಕೆರೆಗಳೋ, ಅದರಲ್ಲಿ ಭಾಗಶಃ ಮುಚ್ಚಿವೆ, ಭಾಗಶಃ ಕಿರಿದಾಗಿವೆ. 480 ಕೋಟಿ ರೂ,ಗಳನ್ನು ಇದಕ್ಕೆ ವೆಚ್ಚ ಮಾಡಿ ಲೂಟಿ ಹೊಡೆಯಲಾಗಿದೆ ಎಂಬುದು ರೈತರ ಆರೋಪವಾಗಿದೆ.

ವಿಜಯೇಂದ್ರರ ಉಸ್ತುವಾರಿ

ಈ ಕ್ಷೇತ್ರದ ಬಗ್ಗೆ ತುಂಬ ತಲೆ ಕೆಡಿಸಿಕೊಂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ, ಚುನವಣಾ ಪ್ರಕ್ರಿಯೆ ಶುರುವಾದಾಗ ಇಲ್ಲೇ ಠಿಕಾಣಿ ಹಾಕಿದ್ದರು. ಜಾತಿವಾರು ಸಭೆಗಳನ್ನು ನಡೆಸಿ, ಚುನಾವಣಾ ‘ವಹಿವಾಟು’ ನಡೆಸಿದ ಅವರು ಇಲ್ಲಿ ಸಾಕಷ್ಟು ರೊಕ್ಕದ ಹೊಳೆ ಹರಿಸಿದರು ಎಂದು ರೈತ ಹೋರಾಟಗಾರರು ಮತ್ತು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಹಲವರು ಬಿಜೆಪಿ ಕಾರ್ಯಕರ್ತರು ಹಣ ಹಂಚುವಾಗ ಸಿಕ್ಕಬಿದ್ದ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಹಾಸನ, ದಾವಣಗೆರೆ ಮುಂತಾದ ಕಡೆಯಿಂದ ಸಂಘ ಪರಿವಾರದವರನ್ನು ಕರೆ ತಂದು ಹಣಹಂಚುವ ಕೆಲಸಕ್ಕೆ ನಿಯೋಜಿಸಿದ್ದರು ಎಂಬ ಆರೋಪಗಳಿಗೆ ಸಾಕ್ಷಿಯಾಗಿ ಹತ್ತಾರು ವಿಡಿಯೋ ಹೊರಬಂದವು, ಎರಡು-ಮೂರು ಕೇಸುಗಳು ದಾಖಲಾದವು, ತುರವಿಹಾಳದಲ್ಲಿ ಹಾಸನದ ಮುವರು ಯುವಕರು ಬಿಜೆಪಿ ಪರ ಹಣ ಹಂಚಿ ಜನರ ಕೈಗೆ ಸಿಕ್ಕಿ ಬಿದ್ದು ಬಂಧನಕ್ಕೆ ಒಳಗಾದರು.

‘ಮೂಟೆಗಳಲ್ಲಿ ಬಿಜೆಪಿ ಹಣ ಸಾಗಿಸಿದೆ, ಪಿಎಸ್‌ಐ ಒಬ್ಬರು ಇದಕ್ಕೆ ನೆರವಾಗಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಸ್ಕಿಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದರು.
ಬಂಜಾರಾ ಸಮುದಾಯದ ಪ್ರತಿಭಾನ್ವಿತ ಗಾಯಕಿ ಮಂಗ್ಲಿ (ಸಾವಿತ್ರಿ ರಾಠೋಡ್) ಅವರನ್ನು ಇಲ್ಲಿಗೆ ಕರೆ ತಂದು ಕ್ಷೇತ್ರದ ತಾಂಡಾಗಳಲ್ಲಿ ಬಿಜೆಪಿ ಪ್ರಚಾರ ಮಾಡಿಸಿತು!

ಹಣದ ಹೊಳೆ ವರ್ಸಸ್ ಹೋರಾಟದ ಕಾಲುವೆ!

ಹಿಂದಿನ ಉಪ ಚುನಾವಣೆಗಳಲ್ಲಿ ಆಡಳಿತ ಪಕ್ಷವಾದ ಬಿಜೆಪಿ ಹಣದ ಹೊಳೆ ಹರಿಸಿ, ಜಾತಿವಾರು ಧೂರ್ತ ನಾಯಕರನ್ನು ಖರೀದಿಸಿ ಮತ್ತು ಭಾವನಾತ್ಮಕ ವಿಷಯವನ್ನು ಅಲ್ಲಲ್ಲಿ ಮುಂದು ಮಾಡಿ ಗೆಲ್ಲುತ್ತಲೇ ಬಂದಿದೆ. ಆದರೆ, ಈ ಎಲ್ಲವನ್ನೂ ಪ್ರಯೋಗಿಸಿಯೂ ಅದು 30 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋತಿದೆ.

ಇದಕ್ಕೆ ಹಲವು ಕಾರಣಗಳಿವೆ:
• ಪ್ರತಾಪಗೌಡ ಸತತವಾಗಿ ಮುರು ಸಲ ಈ ಕ್ಷೇತ್ರ ಪ್ರತಿನಿಧಿಸಿದ್ದಾರೆ. 2018ರಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಜಿಗಿದು ಗೆದ್ದರು. ಆಪರೇಷನ್ ಕಮಲದಲ್ಲಿ ಆಸಕ್ತಿ ವಹಿಸಿದರೆ ಹೊರತು ನೀರಾವರಿ ಮನವಿಯ ಕುರಿತಲ್ಲ ಎಂದು ಅವರ ಬಗ್ಗೆ ಅಸಮಾಧಾನವಿತ್ತು.
• ಕಳೆದ ಸಲ ಬಿಜೆಪಿಯಿಂದ ಸ್ಪರ್ಧಿಸಿದ್ದ ಬಸನಗೌಡ ತುರವಿಹಾಳ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರತಾಪಗೌಡರ ಎದುರು ಕೇವಲ 231 ಮತಗಳಿಂದ ಸೋತಿದ್ದರು. ಈ ಸಲ ಕಾಂಗ್ರೆಸ್ ಅಭ್ಯರ್ಥಿ ಆದ ಅವರಿಗೆ ಒಂದು ಮಟ್ಟದ ಅನುಕಂಪ ಇತ್ತು.

ಟರ್ನಿಂಗ್ ಪಾಯಿಂಟ್!

ಮೇಲಿನ ಎರಡು ಕಾರಣಗಳಷ್ಟೇ ಇದ್ದರೆ ಹಣ ಮತ್ತು ಜಾತಿ ಲೆಕ್ಕದಲ್ಲಿ ಪ್ರತಾಪಗೌಡ ಹೇಗೋ ಗೆಲ್ಲುತ್ತಿದ್ದರು. ಇಡೀ ಚುನಾವಣಾ ಪ್ರಕ್ರಿಯೆಗೆ ಟ್ವಿಸ್ಟ್ ಕೊಟ್ಟಿದ್ದೇ 5-ಎ ಕಾಲುವೆ ನೀರಾವರಿ ಹೋರಾಟ. 58 ಹಳ್ಳಿಗಳ ಈ ಹೋರಾಟವು, ಭೂ ಮಾಲೀಕ ಲಿಂಗಾಯತ ರೆಡ್ಡಿಗಳು, ಸಣ್ಣ ಹಿಡುವಳಿಯ ಕುರುಬರು, ನಾಯಕರು, ದಲಿತರು ಮತ್ತು ಗುಳೆ ಹೋಗಿಯೇ ಬದುಕು ಸವೆಸುತ್ತ ಬಂದ ಎಲ್ಲ ಜಾತಿಗಳ ಭೂರಹಿತರನ್ನು ಒಟ್ಟು ಮಾಡಿತು.

ಹೋರಾಟ ಸಮಿತಿಯ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ, ಅಧ್ಯಕ್ಷ ಬಸವರಾಜಪ್ಪ ಹರ್ವಾಪುರ, ಪ್ರಧಾನ ಕಾರ್ಯದರ್ಶಿ ನಾಗರಡ್ಡೆಪ್ಪ ದೇವರಮನಿ, ಖಜಾಂಚಿ ಶಿವನಗೌಡ ವಟಗಲ್ ಮತ್ತು ಸಾವಿರಾರು ಯುವ ಹೋರಾಟಗಾರರು ಹಳ್ಳಿ ಹಳ್ಳಿಗಳಿಗೆ ತಲುಪಿ, ಬಿಜೆಪಿ ಸೋಲಿಸಿ ಎಂಬ ಭಾಷಣಗಳನ್ನು ಮಾಡಿದ್ದಲ್ಲದೇ, ಪ್ರಜಾಪ್ರಭುತ್ವದ ಆಶಯಗಳ ಅರಿವು ಮೂಡಿಸಿದರು. ಈಗ ಹೋರಾಟ 164ನೇ ದಿನಕ್ಕೆ ತಲುಪಿದೆ. ಈಗಿನ ಹೊಸ ಶಾಸಕ ಕನಿಷ್ಠ, ಕೊಡೆಕಲ್ ಬಸವಣ್ಣ ಯೋಜನೆ ಬದಲು ಎನ್‌ಆರ್‌ಬಿಸಿ 5-ಎ ಕಾಲುವೆ ಯೋಜನೆ ಬಗ್ಗೆ ಧ್ವನಿ ಎತ್ತಬೇಕು ಎಂದು ಹೋರಾಟ ಸಮಿತಿ ಹೇಳಿದೆ. ಹೋರಾಟ ಎಂದಿನಂತೆ ಮುಂದುವರೆಯಲಿದೆ ಎಂದೂ ಸ್ಪಷ್ಟಪಡಿಸಿದೆ. ಇಂದು ಫಲಿತಾಂಶದ ದಿನವೂ ಹೋರಾಟ ನಡೆಯುತ್ತಿದೆ.

ಹಣದ ಹೊಳೆಯನ್ನು ಒಂದು ಹೋರಾಟದ ಪುಟ್ಟ ಕಾಲುವೆ ಹಿಮ್ಮೆಟ್ಟಿಸಿದ ಕತೆಯಿದು. ಇಲ್ಲಿ ಜಿಲ್ಲಾ ಮತ್ತು ತಾಲೂಕಾ ಮಟ್ಟದಲ್ಲಿ ಹೋರಾಟ ಮಾಡುವವರಿಗೆ ಕೆಲವು ಪಾಠಗಳಂತೂ ಇವೆ…
* ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...