Homeಮುಖಪುಟಮಸ್ಕಿ: ನೀರಾವರಿ ಹೋರಾಟದ ಕಾಲುವೆಯಲ್ಲಿ ಕೊಚ್ಚಿ ಹೋದ ಬಿಜೆಪಿಯ ಹಣದ ಹೊಳೆ...

ಮಸ್ಕಿ: ನೀರಾವರಿ ಹೋರಾಟದ ಕಾಲುವೆಯಲ್ಲಿ ಕೊಚ್ಚಿ ಹೋದ ಬಿಜೆಪಿಯ ಹಣದ ಹೊಳೆ…

- Advertisement -
- Advertisement -

ಹಿಂದುಳಿದ ತಾಲೂಕಾದ ಮಸ್ಕಿಯ ಉಪ ಚುನಾವಣೆಯಲ್ಲಿ ಯಾರು ಗೆದ್ದರು ಎಂಬುದಕ್ಕಿಂತ, ಯಾರು ಸೋತರು, ಅದಕ್ಕೂ ಮುಖ್ಯವಾಗಿ ಯಾವ ಪಕ್ಷ ಸೋತಿತು ಎಂಬುದು ಮಹತ್ವದ ಸಂಗತಿಯಾಗಿದೆ.

ಇಲ್ಲೀಗ ಕಾಂಗ್ರೆಸ್ ಪಕ್ಷವು ಸುಮಾರು 30 ಸಾವಿರ ಲೀಡ್‌ನಿಂದ ಗೆದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ್ 86,222 ಮತಗಳನ್ನು ಪಡೆದರೆ ಬಿಜೆಪಿಯ ಪ್ರತಾಪಗೌಡ ಪಾಟೀಲ್ 55,581 ಮತಗಳನ್ನಷ್ಟೇ ಪಡೆಯಲು ಶಕ್ತರಾಗಿದ್ದಾರೆ. ಅಲ್ಲಿಗೆ 30,641 ಮತಗಳ ಅಂತರದಿಂದ ಸೋಲನ್ನಪಿದ್ದಾರೆ. 2019ರಲ್ಲಿ ಕಾಂಗ್ರೆಸ್‌ನಿಂದ ಗೆದ್ದು, ನಂತರ ಆಪರೇಷನ್ ಕಮಲದ ಬಲೆಗೆ ಬಿದ್ದು ಬಿಜೆಪಿ ಸರ್ಕಾರ ಸ್ಥಾಪನೆಗೆ ‘ಕೊಡುಗೆ’ ನೀಡಿದ್ದ ಪ್ರತಾಪಗೌಡ ಪಾಟೀಲರನ್ನು ಹೀನಾಯವಾಗಿ ಸೋತಿದ್ದಾರೆ.

ನಾನುಗೌರಿ.ಕಾಂ ಮಸ್ಕಿ ಉಪ ಚುನಾವಣೆ ಕುರಿತು ಏಳೆಂಟು ವರದಿಗಳನ್ನು ಪ್ರಕಟಿಸಿದೆ, ಮೊದಲ ವರದಿಯೇ, ‘ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?’ ಎಂಬ ಶೀರ್ಷಿಕೆ ಹೊಂದಿತ್ತು. ಇವತ್ತು ಅದು ನಿಜವಾಗಿದೆ.

ಎನ್‌ಆರ್‌ಸಿಬಿ 5-ಎ ( ಕೃಷ್ಣಾ ನೀರಿನ ನಾರಾಯಣಪೂರ ಬಲದಂಡೆ ನೀರಾವರಿ ಯೋಜನೆಗೆ ಒಳಪಡುತ್ತದೆ) ಕಾಲುವೆ ಹೋರಾಟ ಸುದೀರ್ಘವಾಗಿದೆ. 13 ವರ್ಷಗಳಿಂದ ಈ ಬೇಡಿಕೆ ಇದೆ. ಈ 13 ವರ್ಷ ಕಾಲ ಕಾಂಗ್ರೆಸ್ ಮತ್ತು ಬಿಜೆಪಿ ಎರಡರ ಲಾಭ ಪಡೆದು ಶಾಸಕರಾಗಿದ್ದ ಪ್ರತಾಪಗೌಡರು ಎಂದೂ 5-ಎ ಕಾಲುವೆ ಬಗ್ಗೆ ಸದನದಲ್ಲಿ ಧ್ವನಿ ಎತ್ತಲೇ ಇಲ್ಲ. ಅದಿರಲಿ, ‘ಏ ಅದು ಅವೈಜ್ಞಾನಿಕ ಯೋಜನಾ ಅದ… ಕೋಟೆಕಲ್ ಬಸವಣ್ಣ ನೀರಾವರಿ ಯೋಜನಾ ಮಾಡಿಸ್ತೀನಿ’ ಎಂದು ಉಡಾಫೆಯ ಮಾತು ಹೇಳುತ್ತ ಬಂದರು.

ಈ ಸಲ ಗೆಲ್ಲುವುದು ಕಷ್ಟ ಅನಿಸಿದ ಕೂಡಲೇ ಕೃಷ್ಣಾ ನದಿಯಿಂದ ಮಸ್ಕಿ ಕ್ಷೇತ್ರದ 18 ಕೆರೆಗಳಿಗೆ ನೀರು ಹರಿಸುವ 500 ಕೋಟಿ ರೂ, ಯೋಜನೆ ಬಜೆಟ್‌ನಲ್ಲಿ ಘೋಷಣೆ ಆಗುವಂತೆ ಮಾಡಿದರು. ಆದರೆ ಈ 18 ಕೆರೆಗಳೋ, ಅದರಲ್ಲಿ ಭಾಗಶಃ ಮುಚ್ಚಿವೆ, ಭಾಗಶಃ ಕಿರಿದಾಗಿವೆ. 480 ಕೋಟಿ ರೂ,ಗಳನ್ನು ಇದಕ್ಕೆ ವೆಚ್ಚ ಮಾಡಿ ಲೂಟಿ ಹೊಡೆಯಲಾಗಿದೆ ಎಂಬುದು ರೈತರ ಆರೋಪವಾಗಿದೆ.

ವಿಜಯೇಂದ್ರರ ಉಸ್ತುವಾರಿ

ಈ ಕ್ಷೇತ್ರದ ಬಗ್ಗೆ ತುಂಬ ತಲೆ ಕೆಡಿಸಿಕೊಂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ, ಚುನವಣಾ ಪ್ರಕ್ರಿಯೆ ಶುರುವಾದಾಗ ಇಲ್ಲೇ ಠಿಕಾಣಿ ಹಾಕಿದ್ದರು. ಜಾತಿವಾರು ಸಭೆಗಳನ್ನು ನಡೆಸಿ, ಚುನಾವಣಾ ‘ವಹಿವಾಟು’ ನಡೆಸಿದ ಅವರು ಇಲ್ಲಿ ಸಾಕಷ್ಟು ರೊಕ್ಕದ ಹೊಳೆ ಹರಿಸಿದರು ಎಂದು ರೈತ ಹೋರಾಟಗಾರರು ಮತ್ತು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಹಲವರು ಬಿಜೆಪಿ ಕಾರ್ಯಕರ್ತರು ಹಣ ಹಂಚುವಾಗ ಸಿಕ್ಕಬಿದ್ದ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಹಾಸನ, ದಾವಣಗೆರೆ ಮುಂತಾದ ಕಡೆಯಿಂದ ಸಂಘ ಪರಿವಾರದವರನ್ನು ಕರೆ ತಂದು ಹಣಹಂಚುವ ಕೆಲಸಕ್ಕೆ ನಿಯೋಜಿಸಿದ್ದರು ಎಂಬ ಆರೋಪಗಳಿಗೆ ಸಾಕ್ಷಿಯಾಗಿ ಹತ್ತಾರು ವಿಡಿಯೋ ಹೊರಬಂದವು, ಎರಡು-ಮೂರು ಕೇಸುಗಳು ದಾಖಲಾದವು, ತುರವಿಹಾಳದಲ್ಲಿ ಹಾಸನದ ಮುವರು ಯುವಕರು ಬಿಜೆಪಿ ಪರ ಹಣ ಹಂಚಿ ಜನರ ಕೈಗೆ ಸಿಕ್ಕಿ ಬಿದ್ದು ಬಂಧನಕ್ಕೆ ಒಳಗಾದರು.

‘ಮೂಟೆಗಳಲ್ಲಿ ಬಿಜೆಪಿ ಹಣ ಸಾಗಿಸಿದೆ, ಪಿಎಸ್‌ಐ ಒಬ್ಬರು ಇದಕ್ಕೆ ನೆರವಾಗಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಸ್ಕಿಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದರು.
ಬಂಜಾರಾ ಸಮುದಾಯದ ಪ್ರತಿಭಾನ್ವಿತ ಗಾಯಕಿ ಮಂಗ್ಲಿ (ಸಾವಿತ್ರಿ ರಾಠೋಡ್) ಅವರನ್ನು ಇಲ್ಲಿಗೆ ಕರೆ ತಂದು ಕ್ಷೇತ್ರದ ತಾಂಡಾಗಳಲ್ಲಿ ಬಿಜೆಪಿ ಪ್ರಚಾರ ಮಾಡಿಸಿತು!

ಹಣದ ಹೊಳೆ ವರ್ಸಸ್ ಹೋರಾಟದ ಕಾಲುವೆ!

ಹಿಂದಿನ ಉಪ ಚುನಾವಣೆಗಳಲ್ಲಿ ಆಡಳಿತ ಪಕ್ಷವಾದ ಬಿಜೆಪಿ ಹಣದ ಹೊಳೆ ಹರಿಸಿ, ಜಾತಿವಾರು ಧೂರ್ತ ನಾಯಕರನ್ನು ಖರೀದಿಸಿ ಮತ್ತು ಭಾವನಾತ್ಮಕ ವಿಷಯವನ್ನು ಅಲ್ಲಲ್ಲಿ ಮುಂದು ಮಾಡಿ ಗೆಲ್ಲುತ್ತಲೇ ಬಂದಿದೆ. ಆದರೆ, ಈ ಎಲ್ಲವನ್ನೂ ಪ್ರಯೋಗಿಸಿಯೂ ಅದು 30 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋತಿದೆ.

ಇದಕ್ಕೆ ಹಲವು ಕಾರಣಗಳಿವೆ:
• ಪ್ರತಾಪಗೌಡ ಸತತವಾಗಿ ಮುರು ಸಲ ಈ ಕ್ಷೇತ್ರ ಪ್ರತಿನಿಧಿಸಿದ್ದಾರೆ. 2018ರಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಜಿಗಿದು ಗೆದ್ದರು. ಆಪರೇಷನ್ ಕಮಲದಲ್ಲಿ ಆಸಕ್ತಿ ವಹಿಸಿದರೆ ಹೊರತು ನೀರಾವರಿ ಮನವಿಯ ಕುರಿತಲ್ಲ ಎಂದು ಅವರ ಬಗ್ಗೆ ಅಸಮಾಧಾನವಿತ್ತು.
• ಕಳೆದ ಸಲ ಬಿಜೆಪಿಯಿಂದ ಸ್ಪರ್ಧಿಸಿದ್ದ ಬಸನಗೌಡ ತುರವಿಹಾಳ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರತಾಪಗೌಡರ ಎದುರು ಕೇವಲ 231 ಮತಗಳಿಂದ ಸೋತಿದ್ದರು. ಈ ಸಲ ಕಾಂಗ್ರೆಸ್ ಅಭ್ಯರ್ಥಿ ಆದ ಅವರಿಗೆ ಒಂದು ಮಟ್ಟದ ಅನುಕಂಪ ಇತ್ತು.

ಟರ್ನಿಂಗ್ ಪಾಯಿಂಟ್!

ಮೇಲಿನ ಎರಡು ಕಾರಣಗಳಷ್ಟೇ ಇದ್ದರೆ ಹಣ ಮತ್ತು ಜಾತಿ ಲೆಕ್ಕದಲ್ಲಿ ಪ್ರತಾಪಗೌಡ ಹೇಗೋ ಗೆಲ್ಲುತ್ತಿದ್ದರು. ಇಡೀ ಚುನಾವಣಾ ಪ್ರಕ್ರಿಯೆಗೆ ಟ್ವಿಸ್ಟ್ ಕೊಟ್ಟಿದ್ದೇ 5-ಎ ಕಾಲುವೆ ನೀರಾವರಿ ಹೋರಾಟ. 58 ಹಳ್ಳಿಗಳ ಈ ಹೋರಾಟವು, ಭೂ ಮಾಲೀಕ ಲಿಂಗಾಯತ ರೆಡ್ಡಿಗಳು, ಸಣ್ಣ ಹಿಡುವಳಿಯ ಕುರುಬರು, ನಾಯಕರು, ದಲಿತರು ಮತ್ತು ಗುಳೆ ಹೋಗಿಯೇ ಬದುಕು ಸವೆಸುತ್ತ ಬಂದ ಎಲ್ಲ ಜಾತಿಗಳ ಭೂರಹಿತರನ್ನು ಒಟ್ಟು ಮಾಡಿತು.

ಹೋರಾಟ ಸಮಿತಿಯ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ, ಅಧ್ಯಕ್ಷ ಬಸವರಾಜಪ್ಪ ಹರ್ವಾಪುರ, ಪ್ರಧಾನ ಕಾರ್ಯದರ್ಶಿ ನಾಗರಡ್ಡೆಪ್ಪ ದೇವರಮನಿ, ಖಜಾಂಚಿ ಶಿವನಗೌಡ ವಟಗಲ್ ಮತ್ತು ಸಾವಿರಾರು ಯುವ ಹೋರಾಟಗಾರರು ಹಳ್ಳಿ ಹಳ್ಳಿಗಳಿಗೆ ತಲುಪಿ, ಬಿಜೆಪಿ ಸೋಲಿಸಿ ಎಂಬ ಭಾಷಣಗಳನ್ನು ಮಾಡಿದ್ದಲ್ಲದೇ, ಪ್ರಜಾಪ್ರಭುತ್ವದ ಆಶಯಗಳ ಅರಿವು ಮೂಡಿಸಿದರು. ಈಗ ಹೋರಾಟ 164ನೇ ದಿನಕ್ಕೆ ತಲುಪಿದೆ. ಈಗಿನ ಹೊಸ ಶಾಸಕ ಕನಿಷ್ಠ, ಕೊಡೆಕಲ್ ಬಸವಣ್ಣ ಯೋಜನೆ ಬದಲು ಎನ್‌ಆರ್‌ಬಿಸಿ 5-ಎ ಕಾಲುವೆ ಯೋಜನೆ ಬಗ್ಗೆ ಧ್ವನಿ ಎತ್ತಬೇಕು ಎಂದು ಹೋರಾಟ ಸಮಿತಿ ಹೇಳಿದೆ. ಹೋರಾಟ ಎಂದಿನಂತೆ ಮುಂದುವರೆಯಲಿದೆ ಎಂದೂ ಸ್ಪಷ್ಟಪಡಿಸಿದೆ. ಇಂದು ಫಲಿತಾಂಶದ ದಿನವೂ ಹೋರಾಟ ನಡೆಯುತ್ತಿದೆ.

ಹಣದ ಹೊಳೆಯನ್ನು ಒಂದು ಹೋರಾಟದ ಪುಟ್ಟ ಕಾಲುವೆ ಹಿಮ್ಮೆಟ್ಟಿಸಿದ ಕತೆಯಿದು. ಇಲ್ಲಿ ಜಿಲ್ಲಾ ಮತ್ತು ತಾಲೂಕಾ ಮಟ್ಟದಲ್ಲಿ ಹೋರಾಟ ಮಾಡುವವರಿಗೆ ಕೆಲವು ಪಾಠಗಳಂತೂ ಇವೆ…
* ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....