Homeಮುಖಪುಟಮಸ್ಕಿ: ನೀರಾವರಿ ಹೋರಾಟದ ಕಾಲುವೆಯಲ್ಲಿ ಕೊಚ್ಚಿ ಹೋದ ಬಿಜೆಪಿಯ ಹಣದ ಹೊಳೆ...

ಮಸ್ಕಿ: ನೀರಾವರಿ ಹೋರಾಟದ ಕಾಲುವೆಯಲ್ಲಿ ಕೊಚ್ಚಿ ಹೋದ ಬಿಜೆಪಿಯ ಹಣದ ಹೊಳೆ…

- Advertisement -
- Advertisement -

ಹಿಂದುಳಿದ ತಾಲೂಕಾದ ಮಸ್ಕಿಯ ಉಪ ಚುನಾವಣೆಯಲ್ಲಿ ಯಾರು ಗೆದ್ದರು ಎಂಬುದಕ್ಕಿಂತ, ಯಾರು ಸೋತರು, ಅದಕ್ಕೂ ಮುಖ್ಯವಾಗಿ ಯಾವ ಪಕ್ಷ ಸೋತಿತು ಎಂಬುದು ಮಹತ್ವದ ಸಂಗತಿಯಾಗಿದೆ.

ಇಲ್ಲೀಗ ಕಾಂಗ್ರೆಸ್ ಪಕ್ಷವು ಸುಮಾರು 30 ಸಾವಿರ ಲೀಡ್‌ನಿಂದ ಗೆದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ್ 86,222 ಮತಗಳನ್ನು ಪಡೆದರೆ ಬಿಜೆಪಿಯ ಪ್ರತಾಪಗೌಡ ಪಾಟೀಲ್ 55,581 ಮತಗಳನ್ನಷ್ಟೇ ಪಡೆಯಲು ಶಕ್ತರಾಗಿದ್ದಾರೆ. ಅಲ್ಲಿಗೆ 30,641 ಮತಗಳ ಅಂತರದಿಂದ ಸೋಲನ್ನಪಿದ್ದಾರೆ. 2019ರಲ್ಲಿ ಕಾಂಗ್ರೆಸ್‌ನಿಂದ ಗೆದ್ದು, ನಂತರ ಆಪರೇಷನ್ ಕಮಲದ ಬಲೆಗೆ ಬಿದ್ದು ಬಿಜೆಪಿ ಸರ್ಕಾರ ಸ್ಥಾಪನೆಗೆ ‘ಕೊಡುಗೆ’ ನೀಡಿದ್ದ ಪ್ರತಾಪಗೌಡ ಪಾಟೀಲರನ್ನು ಹೀನಾಯವಾಗಿ ಸೋತಿದ್ದಾರೆ.

ನಾನುಗೌರಿ.ಕಾಂ ಮಸ್ಕಿ ಉಪ ಚುನಾವಣೆ ಕುರಿತು ಏಳೆಂಟು ವರದಿಗಳನ್ನು ಪ್ರಕಟಿಸಿದೆ, ಮೊದಲ ವರದಿಯೇ, ‘ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?’ ಎಂಬ ಶೀರ್ಷಿಕೆ ಹೊಂದಿತ್ತು. ಇವತ್ತು ಅದು ನಿಜವಾಗಿದೆ.

ಎನ್‌ಆರ್‌ಸಿಬಿ 5-ಎ ( ಕೃಷ್ಣಾ ನೀರಿನ ನಾರಾಯಣಪೂರ ಬಲದಂಡೆ ನೀರಾವರಿ ಯೋಜನೆಗೆ ಒಳಪಡುತ್ತದೆ) ಕಾಲುವೆ ಹೋರಾಟ ಸುದೀರ್ಘವಾಗಿದೆ. 13 ವರ್ಷಗಳಿಂದ ಈ ಬೇಡಿಕೆ ಇದೆ. ಈ 13 ವರ್ಷ ಕಾಲ ಕಾಂಗ್ರೆಸ್ ಮತ್ತು ಬಿಜೆಪಿ ಎರಡರ ಲಾಭ ಪಡೆದು ಶಾಸಕರಾಗಿದ್ದ ಪ್ರತಾಪಗೌಡರು ಎಂದೂ 5-ಎ ಕಾಲುವೆ ಬಗ್ಗೆ ಸದನದಲ್ಲಿ ಧ್ವನಿ ಎತ್ತಲೇ ಇಲ್ಲ. ಅದಿರಲಿ, ‘ಏ ಅದು ಅವೈಜ್ಞಾನಿಕ ಯೋಜನಾ ಅದ… ಕೋಟೆಕಲ್ ಬಸವಣ್ಣ ನೀರಾವರಿ ಯೋಜನಾ ಮಾಡಿಸ್ತೀನಿ’ ಎಂದು ಉಡಾಫೆಯ ಮಾತು ಹೇಳುತ್ತ ಬಂದರು.

ಈ ಸಲ ಗೆಲ್ಲುವುದು ಕಷ್ಟ ಅನಿಸಿದ ಕೂಡಲೇ ಕೃಷ್ಣಾ ನದಿಯಿಂದ ಮಸ್ಕಿ ಕ್ಷೇತ್ರದ 18 ಕೆರೆಗಳಿಗೆ ನೀರು ಹರಿಸುವ 500 ಕೋಟಿ ರೂ, ಯೋಜನೆ ಬಜೆಟ್‌ನಲ್ಲಿ ಘೋಷಣೆ ಆಗುವಂತೆ ಮಾಡಿದರು. ಆದರೆ ಈ 18 ಕೆರೆಗಳೋ, ಅದರಲ್ಲಿ ಭಾಗಶಃ ಮುಚ್ಚಿವೆ, ಭಾಗಶಃ ಕಿರಿದಾಗಿವೆ. 480 ಕೋಟಿ ರೂ,ಗಳನ್ನು ಇದಕ್ಕೆ ವೆಚ್ಚ ಮಾಡಿ ಲೂಟಿ ಹೊಡೆಯಲಾಗಿದೆ ಎಂಬುದು ರೈತರ ಆರೋಪವಾಗಿದೆ.

ವಿಜಯೇಂದ್ರರ ಉಸ್ತುವಾರಿ

ಈ ಕ್ಷೇತ್ರದ ಬಗ್ಗೆ ತುಂಬ ತಲೆ ಕೆಡಿಸಿಕೊಂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ, ಚುನವಣಾ ಪ್ರಕ್ರಿಯೆ ಶುರುವಾದಾಗ ಇಲ್ಲೇ ಠಿಕಾಣಿ ಹಾಕಿದ್ದರು. ಜಾತಿವಾರು ಸಭೆಗಳನ್ನು ನಡೆಸಿ, ಚುನಾವಣಾ ‘ವಹಿವಾಟು’ ನಡೆಸಿದ ಅವರು ಇಲ್ಲಿ ಸಾಕಷ್ಟು ರೊಕ್ಕದ ಹೊಳೆ ಹರಿಸಿದರು ಎಂದು ರೈತ ಹೋರಾಟಗಾರರು ಮತ್ತು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಹಲವರು ಬಿಜೆಪಿ ಕಾರ್ಯಕರ್ತರು ಹಣ ಹಂಚುವಾಗ ಸಿಕ್ಕಬಿದ್ದ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಹಾಸನ, ದಾವಣಗೆರೆ ಮುಂತಾದ ಕಡೆಯಿಂದ ಸಂಘ ಪರಿವಾರದವರನ್ನು ಕರೆ ತಂದು ಹಣಹಂಚುವ ಕೆಲಸಕ್ಕೆ ನಿಯೋಜಿಸಿದ್ದರು ಎಂಬ ಆರೋಪಗಳಿಗೆ ಸಾಕ್ಷಿಯಾಗಿ ಹತ್ತಾರು ವಿಡಿಯೋ ಹೊರಬಂದವು, ಎರಡು-ಮೂರು ಕೇಸುಗಳು ದಾಖಲಾದವು, ತುರವಿಹಾಳದಲ್ಲಿ ಹಾಸನದ ಮುವರು ಯುವಕರು ಬಿಜೆಪಿ ಪರ ಹಣ ಹಂಚಿ ಜನರ ಕೈಗೆ ಸಿಕ್ಕಿ ಬಿದ್ದು ಬಂಧನಕ್ಕೆ ಒಳಗಾದರು.

‘ಮೂಟೆಗಳಲ್ಲಿ ಬಿಜೆಪಿ ಹಣ ಸಾಗಿಸಿದೆ, ಪಿಎಸ್‌ಐ ಒಬ್ಬರು ಇದಕ್ಕೆ ನೆರವಾಗಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಸ್ಕಿಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದರು.
ಬಂಜಾರಾ ಸಮುದಾಯದ ಪ್ರತಿಭಾನ್ವಿತ ಗಾಯಕಿ ಮಂಗ್ಲಿ (ಸಾವಿತ್ರಿ ರಾಠೋಡ್) ಅವರನ್ನು ಇಲ್ಲಿಗೆ ಕರೆ ತಂದು ಕ್ಷೇತ್ರದ ತಾಂಡಾಗಳಲ್ಲಿ ಬಿಜೆಪಿ ಪ್ರಚಾರ ಮಾಡಿಸಿತು!

ಹಣದ ಹೊಳೆ ವರ್ಸಸ್ ಹೋರಾಟದ ಕಾಲುವೆ!

ಹಿಂದಿನ ಉಪ ಚುನಾವಣೆಗಳಲ್ಲಿ ಆಡಳಿತ ಪಕ್ಷವಾದ ಬಿಜೆಪಿ ಹಣದ ಹೊಳೆ ಹರಿಸಿ, ಜಾತಿವಾರು ಧೂರ್ತ ನಾಯಕರನ್ನು ಖರೀದಿಸಿ ಮತ್ತು ಭಾವನಾತ್ಮಕ ವಿಷಯವನ್ನು ಅಲ್ಲಲ್ಲಿ ಮುಂದು ಮಾಡಿ ಗೆಲ್ಲುತ್ತಲೇ ಬಂದಿದೆ. ಆದರೆ, ಈ ಎಲ್ಲವನ್ನೂ ಪ್ರಯೋಗಿಸಿಯೂ ಅದು 30 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋತಿದೆ.

ಇದಕ್ಕೆ ಹಲವು ಕಾರಣಗಳಿವೆ:
• ಪ್ರತಾಪಗೌಡ ಸತತವಾಗಿ ಮುರು ಸಲ ಈ ಕ್ಷೇತ್ರ ಪ್ರತಿನಿಧಿಸಿದ್ದಾರೆ. 2018ರಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಜಿಗಿದು ಗೆದ್ದರು. ಆಪರೇಷನ್ ಕಮಲದಲ್ಲಿ ಆಸಕ್ತಿ ವಹಿಸಿದರೆ ಹೊರತು ನೀರಾವರಿ ಮನವಿಯ ಕುರಿತಲ್ಲ ಎಂದು ಅವರ ಬಗ್ಗೆ ಅಸಮಾಧಾನವಿತ್ತು.
• ಕಳೆದ ಸಲ ಬಿಜೆಪಿಯಿಂದ ಸ್ಪರ್ಧಿಸಿದ್ದ ಬಸನಗೌಡ ತುರವಿಹಾಳ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರತಾಪಗೌಡರ ಎದುರು ಕೇವಲ 231 ಮತಗಳಿಂದ ಸೋತಿದ್ದರು. ಈ ಸಲ ಕಾಂಗ್ರೆಸ್ ಅಭ್ಯರ್ಥಿ ಆದ ಅವರಿಗೆ ಒಂದು ಮಟ್ಟದ ಅನುಕಂಪ ಇತ್ತು.

ಟರ್ನಿಂಗ್ ಪಾಯಿಂಟ್!

ಮೇಲಿನ ಎರಡು ಕಾರಣಗಳಷ್ಟೇ ಇದ್ದರೆ ಹಣ ಮತ್ತು ಜಾತಿ ಲೆಕ್ಕದಲ್ಲಿ ಪ್ರತಾಪಗೌಡ ಹೇಗೋ ಗೆಲ್ಲುತ್ತಿದ್ದರು. ಇಡೀ ಚುನಾವಣಾ ಪ್ರಕ್ರಿಯೆಗೆ ಟ್ವಿಸ್ಟ್ ಕೊಟ್ಟಿದ್ದೇ 5-ಎ ಕಾಲುವೆ ನೀರಾವರಿ ಹೋರಾಟ. 58 ಹಳ್ಳಿಗಳ ಈ ಹೋರಾಟವು, ಭೂ ಮಾಲೀಕ ಲಿಂಗಾಯತ ರೆಡ್ಡಿಗಳು, ಸಣ್ಣ ಹಿಡುವಳಿಯ ಕುರುಬರು, ನಾಯಕರು, ದಲಿತರು ಮತ್ತು ಗುಳೆ ಹೋಗಿಯೇ ಬದುಕು ಸವೆಸುತ್ತ ಬಂದ ಎಲ್ಲ ಜಾತಿಗಳ ಭೂರಹಿತರನ್ನು ಒಟ್ಟು ಮಾಡಿತು.

ಹೋರಾಟ ಸಮಿತಿಯ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ, ಅಧ್ಯಕ್ಷ ಬಸವರಾಜಪ್ಪ ಹರ್ವಾಪುರ, ಪ್ರಧಾನ ಕಾರ್ಯದರ್ಶಿ ನಾಗರಡ್ಡೆಪ್ಪ ದೇವರಮನಿ, ಖಜಾಂಚಿ ಶಿವನಗೌಡ ವಟಗಲ್ ಮತ್ತು ಸಾವಿರಾರು ಯುವ ಹೋರಾಟಗಾರರು ಹಳ್ಳಿ ಹಳ್ಳಿಗಳಿಗೆ ತಲುಪಿ, ಬಿಜೆಪಿ ಸೋಲಿಸಿ ಎಂಬ ಭಾಷಣಗಳನ್ನು ಮಾಡಿದ್ದಲ್ಲದೇ, ಪ್ರಜಾಪ್ರಭುತ್ವದ ಆಶಯಗಳ ಅರಿವು ಮೂಡಿಸಿದರು. ಈಗ ಹೋರಾಟ 164ನೇ ದಿನಕ್ಕೆ ತಲುಪಿದೆ. ಈಗಿನ ಹೊಸ ಶಾಸಕ ಕನಿಷ್ಠ, ಕೊಡೆಕಲ್ ಬಸವಣ್ಣ ಯೋಜನೆ ಬದಲು ಎನ್‌ಆರ್‌ಬಿಸಿ 5-ಎ ಕಾಲುವೆ ಯೋಜನೆ ಬಗ್ಗೆ ಧ್ವನಿ ಎತ್ತಬೇಕು ಎಂದು ಹೋರಾಟ ಸಮಿತಿ ಹೇಳಿದೆ. ಹೋರಾಟ ಎಂದಿನಂತೆ ಮುಂದುವರೆಯಲಿದೆ ಎಂದೂ ಸ್ಪಷ್ಟಪಡಿಸಿದೆ. ಇಂದು ಫಲಿತಾಂಶದ ದಿನವೂ ಹೋರಾಟ ನಡೆಯುತ್ತಿದೆ.

ಹಣದ ಹೊಳೆಯನ್ನು ಒಂದು ಹೋರಾಟದ ಪುಟ್ಟ ಕಾಲುವೆ ಹಿಮ್ಮೆಟ್ಟಿಸಿದ ಕತೆಯಿದು. ಇಲ್ಲಿ ಜಿಲ್ಲಾ ಮತ್ತು ತಾಲೂಕಾ ಮಟ್ಟದಲ್ಲಿ ಹೋರಾಟ ಮಾಡುವವರಿಗೆ ಕೆಲವು ಪಾಠಗಳಂತೂ ಇವೆ…
* ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...