Homeಕರ್ನಾಟಕಪ್ರತಾಪಗೌಡ ಪಾಟೀಲ್ ನೀವೇನು ವಿಶ್ವೇಶ್ವರಯ್ಯನವರ? ತರಾಟೆಗೆ ತೆಗೆದುಕೊಂಡ ನೀರಾವರಿ ಹೋರಾಟಗಾರರು

ಪ್ರತಾಪಗೌಡ ಪಾಟೀಲ್ ನೀವೇನು ವಿಶ್ವೇಶ್ವರಯ್ಯನವರ? ತರಾಟೆಗೆ ತೆಗೆದುಕೊಂಡ ನೀರಾವರಿ ಹೋರಾಟಗಾರರು

- Advertisement -
- Advertisement -

ಮಸ್ಕಿ ತಾಲ್ಲೂಕಿನ 58 ಬರಪೀಡಿತ ಹಳ್ಳಿಗಳಿಗೆ NRBC_5A ಕಾಲುವೆ ಮೂಲಕ ನೀರಾವರಿ ಯೋಜನೆ ಬೇಕೆಂದು ಹೋರಾಡುವವರಿಗೆ ನೀವೇನು ವಿಶ್ವೇಶ್ವರಯ್ಯನವರ ಥರ ವಿಜ್ಞಾನಿಗಳ ಎಂದು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಕೇಳಿದ್ದಾರೆ. ಇಲ್ಲಿಗೆ ನೀರು ಬರುವುದಿಲ್ಲ ಎಂದು ಹೇಳಲು ಅವರೇನು ವಿಶ್ವೇಶ್ವರಯ್ಯನವರೇ ಎಂದು ಹೋರಾಟ ಸಮಿತಿ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ ತರಾಟೆಗೆ ತಗೆದುಕೊಂಡಿದ್ದಾರೆ.

NRBC_5A ನೀರಾವರಿ ಯೋಜನೆಗಾಗಿ ನಡೆಯುತ್ತಿರುವ ಹೋರಾಟ ಇಂದಿಗೆ 136ನೇ ದಿನಕ್ಕೆ ಕಾಲಿಟ್ಟಿದೆ. ಪಾಮನಕಲ್ಲೂರಿನ ರೈತರ ಧರಣಿ ಸ್ಥಳದ ಮುಂದೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ, ಸಚಿವ ಬಿ. ಶ್ರೀರಾಮುಲು, ಸಂಸದ ಸಂಗಣ್ಣ ಕರಡಿ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ, ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಶಿವನಗೌಡ ಗೊರಬಾಳರವರು ಬಿಜೆಪಿ ಪರವಾಗಿ ಮತ ಕೇಳಲು ಆಗಮಿಸಿದಾಗ ಅವರನ್ನು ಹೋರಾಟಗಾರರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಹೋರಾಟ ಸಮಿತಿ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ ಮಾತನಾಡಿ, “ಇಷ್ಟು ದಿನ ನಾವು ಹೋರಾಟ ಮಾಡುತ್ತಿದ್ದೇವೆ, ನೀವೇಕೆ ತಿರುಗಿ ನೋಡಲಿಲ್ಲ? ಇಲ್ಲಿ ವಾಲ್ಮೀಕಿ ಭವನದ ಉದ್ಘಾಟನೆಗೆ ಶ್ರೀರಾಮುಲುರವರು ಬರಬೇಕಿತ್ತು, ಏಕೆ ಬರಲಿಲ್ಲ? ನಾವು ನೀರು ಬೇಕು ಎಂದು ಎಷ್ಟು ಸಲ ಕೇಳಿದ್ದೇವೆ ಗೊತ್ತೆ? ಸಂಗಣ್ಣ ಕರಡಿಯವರಿಗೆ ಗೊತ್ತಿದೆ, ಅವರು ಹೇಳಬೇಕು” ಎಂದು ಒತ್ತಾಯಿಸಿದರು.

ಮಸ್ಕಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ನೀರಾವರಿ ಹೋರಾಟಗಾರರು ತರಾಟೆಗೆ ತೆಗೆದುಕೊಂಡ ವಿಡಿಯೋ ನೋಡಿ..

ನೀವು ನೀರು ಕೊಡಲು ಆಗುವುದಿಲ್ಲ ಎನ್ನಲು ಕಾರಣವೇನು? ಇಂಜಿನಿಯರ್‌ಗಳು ನೀರು ಕೊಡಲು ಸಾಧ್ಯ ಎಂದು ವರದಿ ಕೊಟ್ಟಿದ್ದಾರೆ. ಎಂಡಿಆರ್‌ಎಫ್‌ ನವರನ್ನು ಕೇಳಿದರೆ ಸರ್ಕಾರ ಆದೇಶ ಮಾಡಿದರೆ ನಾವು ನೀರಾವರಿ ಮಾಡುತ್ತೇವೆ ಎನ್ನುತ್ತಾರೆ. ಸರ್ಕಾರ ಎಂದರೆ ನೀವೇ ತಾನೇ? ಏಕೆ ನೀವು ಮಾಡುತ್ತಿಲ್ಲ? ನೀರು ಇಲ್ಲವೇ? ಹಾಗಾದರೆ ಬಸವೇಶ್ವರ ಏತ ನೀರಾವರಿಗೆ ನೀರು ಎಲ್ಲಿಂದ ಬರುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ರೈತರಿಗೆ ಒಳ್ಳೆಯದಾಗುವುದನ್ನು ಮಾಡಿದರೆ ರೈತರು ನಿಮ್ಮನ್ನ ಮರೆಯುವುದಿಲ್ಲ. ದೇವದುರ್ಗದಲ್ಲಿ ದೇವೇಗೌಡರು ಕಾಲುವೆ ಮಾಡಿಸಿದ್ದಕ್ಕೆ ಎಲ್ಲರ ಮನೆಯಲ್ಲಿ ಅವರ ಫೋಟೊ ಇದೆ ಗೊತ್ತೆ? ನಿಮಗ್ಯಾಕೆ ಇದು ಸಾಧ್ಯವಿಲ್ಲ? ರಂಗರಾಮ್‌ ವರದಿಯ ಪ್ರಕಾರ ಈ ಪ್ರದೇಶಕ್ಕೆ NRBC_5A ಮೂಲಕ ಮಾತ್ರ ನೀರು ಕೊಡಲು ಸಾಧ್ಯ ಎನ್ನಲಾಗಿದೆ. ಹಾಗಿದ್ದರೂ ಪ್ರತಾಪಗೌಡ ಪಾಟೀಲರು ನೀರು ಕೊಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಹಾಗಾಗಿಯೇ ನಾವು ಅವರನ್ನು ವ್ಯಕ್ತಿಯಾಗಿ ವಿರೋಧಿಸುತ್ತಿದ್ದೇವೆಯೇ ಹೊರತು ಪಕ್ಷವನ್ನಲ್ಲ ಎಂದಿದ್ದಾರೆ.

13 ವರ್ಷದಲ್ಲಿ ಈ ಯೋಜನೆ ಮಾಡಿ ಎಂದು ಪ್ರತಾಪಗೌಡಪಾಟೀಲರು ಎಷ್ಟು ಅರ್ಜಿ ಕೊಟ್ಟಿದ್ದಾರೆ ಲೆಕ್ಕ ಕೊಡಲಿ? NRBC_5A ಯೋಜನೆ ಜಾರಿ ಮಾಡದೇ ರಾಯಚೂರು ಜಿಲ್ಲೆಗೆ ಕಾಲಿಡುವುದಿಲ್ಲ ಎಂದು ಯಡಿಯೂರಪ್ಪನವರು ಹೇಳಿದ್ದರು. ಆದರೂ ಏಕೆ ಯೋಜನೆ ಜಾರಿಯಾಗಲಿಲ್ಲ ಎಂದು ತಿಮ್ಮನಗೌಡ ಚಿಲ್ಕರಾಗಿ ಕಿಡಿಕಾರಿದರು.

ಶಾಸಕರು NRBC_5A ಯೋಜನೆ ಜಾರಿ ಮಾಡಬೇಕೆಂದು ಪ್ರತಾಪಗೌಡರು ಹೇಳಿದರೆ ನಾವು ಮಾಡುತ್ತೇವೆ ಎಂದು ಮೈತ್ರಿ ಸರ್ಕಾರದ ಸಚಿವರು ಹೇಳಿದ್ದರು. ಆದರೆ ಇವರು ಒಮ್ಮೆಯೂ ಹೇಳಲಿಲ್ಲ. ಹಾಗಾಗಿ ನಾವು ಬಿಜೆಪಿ ಆಗಿದ್ದರೂ ಪ್ರತಾಪಗೌಡರನ್ನು ವಿರೋಧಿಸುತ್ತೇವೆ ಎಂದರು.

ಮಸ್ಕಿಯ ಸಾವಿರಾರು ಯುವಕರು ದುಡಿಯಲು ಬೆಂಗಳೂರಿಗೆ ವಲಸೆ ಹೋಗುತ್ತಿದ್ದಾರೆ. ಇಲ್ಲಿ ವಯಸ್ಸಾದವರು ಮಾತ್ರ ಇದ್ದೇವೆ. ಅನಾವೃಷ್ಟಿಯಿಂದ ನರಳುತ್ತಿದ್ದೇವೆ. ನಮಗೆ ಬೆಳೆಯೇ ಬರುತ್ತಿಲ್ಲ. ಈ ಕಷ್ಟ ಬಿಜೆಪಿಯವರಿಗೆ ಗೊತ್ತಾಗುವುದಿಲ್ಲವೇ? ಎಂದು ಕಿಡಿಕಾರಿದರು.

ನಾವು ರೈತರೇನು ಭಯೋತ್ಪಾದಕರೇ? ನಮ್ಮ ಸರ್ಕಾರದ ಪ್ರತಿನಿಧಿಗಳಾಗಿ ನಿಮ್ಮನ್ನು ನಾವು ಎಂದಾದರೂ ಅವಮಾನ ಮಾಡಿದ್ದೇವೆಯೇ? ನೀವು ಅಷ್ಟೇ ರೈತರಿಗೆ ಅವಮಾನ ಮಾಡಬೇಡಿ. ನಾವು ಯಾರು ನಮಗೆ ಮನೆ ಕೊಡಿ ಎಂದು ಕೇಳುತ್ತಿಲ್ಲ. ಈ ಪ್ರದೇಶಕ್ಕೆ ಒಂದು ನೀರಾವರಿ ಯೋಜನೆ ಕೊಡಿ ಎಂದಷ್ಟೇ ಕೇಳುತ್ತಿದ್ದೇವೆ. ರೈತರಿಲ್ಲದಿದ್ದರೆ ದೇಶ ಉಳಿಯುವುದಿಲ್ಲ. ಇದನ್ನು ಅರಿಯದ ಸರ್ಕಾರ ನಮಗೆ ಏಕೆ ಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಇದನ್ನೂ ಓದಿ: NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...