Homeಕರ್ನಾಟಕಪ್ರತಾಪಗೌಡ ಪಾಟೀಲ್ ನೀವೇನು ವಿಶ್ವೇಶ್ವರಯ್ಯನವರ? ತರಾಟೆಗೆ ತೆಗೆದುಕೊಂಡ ನೀರಾವರಿ ಹೋರಾಟಗಾರರು

ಪ್ರತಾಪಗೌಡ ಪಾಟೀಲ್ ನೀವೇನು ವಿಶ್ವೇಶ್ವರಯ್ಯನವರ? ತರಾಟೆಗೆ ತೆಗೆದುಕೊಂಡ ನೀರಾವರಿ ಹೋರಾಟಗಾರರು

- Advertisement -
- Advertisement -

ಮಸ್ಕಿ ತಾಲ್ಲೂಕಿನ 58 ಬರಪೀಡಿತ ಹಳ್ಳಿಗಳಿಗೆ NRBC_5A ಕಾಲುವೆ ಮೂಲಕ ನೀರಾವರಿ ಯೋಜನೆ ಬೇಕೆಂದು ಹೋರಾಡುವವರಿಗೆ ನೀವೇನು ವಿಶ್ವೇಶ್ವರಯ್ಯನವರ ಥರ ವಿಜ್ಞಾನಿಗಳ ಎಂದು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಕೇಳಿದ್ದಾರೆ. ಇಲ್ಲಿಗೆ ನೀರು ಬರುವುದಿಲ್ಲ ಎಂದು ಹೇಳಲು ಅವರೇನು ವಿಶ್ವೇಶ್ವರಯ್ಯನವರೇ ಎಂದು ಹೋರಾಟ ಸಮಿತಿ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ ತರಾಟೆಗೆ ತಗೆದುಕೊಂಡಿದ್ದಾರೆ.

NRBC_5A ನೀರಾವರಿ ಯೋಜನೆಗಾಗಿ ನಡೆಯುತ್ತಿರುವ ಹೋರಾಟ ಇಂದಿಗೆ 136ನೇ ದಿನಕ್ಕೆ ಕಾಲಿಟ್ಟಿದೆ. ಪಾಮನಕಲ್ಲೂರಿನ ರೈತರ ಧರಣಿ ಸ್ಥಳದ ಮುಂದೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ, ಸಚಿವ ಬಿ. ಶ್ರೀರಾಮುಲು, ಸಂಸದ ಸಂಗಣ್ಣ ಕರಡಿ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ, ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಶಿವನಗೌಡ ಗೊರಬಾಳರವರು ಬಿಜೆಪಿ ಪರವಾಗಿ ಮತ ಕೇಳಲು ಆಗಮಿಸಿದಾಗ ಅವರನ್ನು ಹೋರಾಟಗಾರರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಹೋರಾಟ ಸಮಿತಿ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ ಮಾತನಾಡಿ, “ಇಷ್ಟು ದಿನ ನಾವು ಹೋರಾಟ ಮಾಡುತ್ತಿದ್ದೇವೆ, ನೀವೇಕೆ ತಿರುಗಿ ನೋಡಲಿಲ್ಲ? ಇಲ್ಲಿ ವಾಲ್ಮೀಕಿ ಭವನದ ಉದ್ಘಾಟನೆಗೆ ಶ್ರೀರಾಮುಲುರವರು ಬರಬೇಕಿತ್ತು, ಏಕೆ ಬರಲಿಲ್ಲ? ನಾವು ನೀರು ಬೇಕು ಎಂದು ಎಷ್ಟು ಸಲ ಕೇಳಿದ್ದೇವೆ ಗೊತ್ತೆ? ಸಂಗಣ್ಣ ಕರಡಿಯವರಿಗೆ ಗೊತ್ತಿದೆ, ಅವರು ಹೇಳಬೇಕು” ಎಂದು ಒತ್ತಾಯಿಸಿದರು.

ಮಸ್ಕಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ನೀರಾವರಿ ಹೋರಾಟಗಾರರು ತರಾಟೆಗೆ ತೆಗೆದುಕೊಂಡ ವಿಡಿಯೋ ನೋಡಿ..

ನೀವು ನೀರು ಕೊಡಲು ಆಗುವುದಿಲ್ಲ ಎನ್ನಲು ಕಾರಣವೇನು? ಇಂಜಿನಿಯರ್‌ಗಳು ನೀರು ಕೊಡಲು ಸಾಧ್ಯ ಎಂದು ವರದಿ ಕೊಟ್ಟಿದ್ದಾರೆ. ಎಂಡಿಆರ್‌ಎಫ್‌ ನವರನ್ನು ಕೇಳಿದರೆ ಸರ್ಕಾರ ಆದೇಶ ಮಾಡಿದರೆ ನಾವು ನೀರಾವರಿ ಮಾಡುತ್ತೇವೆ ಎನ್ನುತ್ತಾರೆ. ಸರ್ಕಾರ ಎಂದರೆ ನೀವೇ ತಾನೇ? ಏಕೆ ನೀವು ಮಾಡುತ್ತಿಲ್ಲ? ನೀರು ಇಲ್ಲವೇ? ಹಾಗಾದರೆ ಬಸವೇಶ್ವರ ಏತ ನೀರಾವರಿಗೆ ನೀರು ಎಲ್ಲಿಂದ ಬರುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ರೈತರಿಗೆ ಒಳ್ಳೆಯದಾಗುವುದನ್ನು ಮಾಡಿದರೆ ರೈತರು ನಿಮ್ಮನ್ನ ಮರೆಯುವುದಿಲ್ಲ. ದೇವದುರ್ಗದಲ್ಲಿ ದೇವೇಗೌಡರು ಕಾಲುವೆ ಮಾಡಿಸಿದ್ದಕ್ಕೆ ಎಲ್ಲರ ಮನೆಯಲ್ಲಿ ಅವರ ಫೋಟೊ ಇದೆ ಗೊತ್ತೆ? ನಿಮಗ್ಯಾಕೆ ಇದು ಸಾಧ್ಯವಿಲ್ಲ? ರಂಗರಾಮ್‌ ವರದಿಯ ಪ್ರಕಾರ ಈ ಪ್ರದೇಶಕ್ಕೆ NRBC_5A ಮೂಲಕ ಮಾತ್ರ ನೀರು ಕೊಡಲು ಸಾಧ್ಯ ಎನ್ನಲಾಗಿದೆ. ಹಾಗಿದ್ದರೂ ಪ್ರತಾಪಗೌಡ ಪಾಟೀಲರು ನೀರು ಕೊಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಹಾಗಾಗಿಯೇ ನಾವು ಅವರನ್ನು ವ್ಯಕ್ತಿಯಾಗಿ ವಿರೋಧಿಸುತ್ತಿದ್ದೇವೆಯೇ ಹೊರತು ಪಕ್ಷವನ್ನಲ್ಲ ಎಂದಿದ್ದಾರೆ.

13 ವರ್ಷದಲ್ಲಿ ಈ ಯೋಜನೆ ಮಾಡಿ ಎಂದು ಪ್ರತಾಪಗೌಡಪಾಟೀಲರು ಎಷ್ಟು ಅರ್ಜಿ ಕೊಟ್ಟಿದ್ದಾರೆ ಲೆಕ್ಕ ಕೊಡಲಿ? NRBC_5A ಯೋಜನೆ ಜಾರಿ ಮಾಡದೇ ರಾಯಚೂರು ಜಿಲ್ಲೆಗೆ ಕಾಲಿಡುವುದಿಲ್ಲ ಎಂದು ಯಡಿಯೂರಪ್ಪನವರು ಹೇಳಿದ್ದರು. ಆದರೂ ಏಕೆ ಯೋಜನೆ ಜಾರಿಯಾಗಲಿಲ್ಲ ಎಂದು ತಿಮ್ಮನಗೌಡ ಚಿಲ್ಕರಾಗಿ ಕಿಡಿಕಾರಿದರು.

ಶಾಸಕರು NRBC_5A ಯೋಜನೆ ಜಾರಿ ಮಾಡಬೇಕೆಂದು ಪ್ರತಾಪಗೌಡರು ಹೇಳಿದರೆ ನಾವು ಮಾಡುತ್ತೇವೆ ಎಂದು ಮೈತ್ರಿ ಸರ್ಕಾರದ ಸಚಿವರು ಹೇಳಿದ್ದರು. ಆದರೆ ಇವರು ಒಮ್ಮೆಯೂ ಹೇಳಲಿಲ್ಲ. ಹಾಗಾಗಿ ನಾವು ಬಿಜೆಪಿ ಆಗಿದ್ದರೂ ಪ್ರತಾಪಗೌಡರನ್ನು ವಿರೋಧಿಸುತ್ತೇವೆ ಎಂದರು.

ಮಸ್ಕಿಯ ಸಾವಿರಾರು ಯುವಕರು ದುಡಿಯಲು ಬೆಂಗಳೂರಿಗೆ ವಲಸೆ ಹೋಗುತ್ತಿದ್ದಾರೆ. ಇಲ್ಲಿ ವಯಸ್ಸಾದವರು ಮಾತ್ರ ಇದ್ದೇವೆ. ಅನಾವೃಷ್ಟಿಯಿಂದ ನರಳುತ್ತಿದ್ದೇವೆ. ನಮಗೆ ಬೆಳೆಯೇ ಬರುತ್ತಿಲ್ಲ. ಈ ಕಷ್ಟ ಬಿಜೆಪಿಯವರಿಗೆ ಗೊತ್ತಾಗುವುದಿಲ್ಲವೇ? ಎಂದು ಕಿಡಿಕಾರಿದರು.

ನಾವು ರೈತರೇನು ಭಯೋತ್ಪಾದಕರೇ? ನಮ್ಮ ಸರ್ಕಾರದ ಪ್ರತಿನಿಧಿಗಳಾಗಿ ನಿಮ್ಮನ್ನು ನಾವು ಎಂದಾದರೂ ಅವಮಾನ ಮಾಡಿದ್ದೇವೆಯೇ? ನೀವು ಅಷ್ಟೇ ರೈತರಿಗೆ ಅವಮಾನ ಮಾಡಬೇಡಿ. ನಾವು ಯಾರು ನಮಗೆ ಮನೆ ಕೊಡಿ ಎಂದು ಕೇಳುತ್ತಿಲ್ಲ. ಈ ಪ್ರದೇಶಕ್ಕೆ ಒಂದು ನೀರಾವರಿ ಯೋಜನೆ ಕೊಡಿ ಎಂದಷ್ಟೇ ಕೇಳುತ್ತಿದ್ದೇವೆ. ರೈತರಿಲ್ಲದಿದ್ದರೆ ದೇಶ ಉಳಿಯುವುದಿಲ್ಲ. ಇದನ್ನು ಅರಿಯದ ಸರ್ಕಾರ ನಮಗೆ ಏಕೆ ಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಇದನ್ನೂ ಓದಿ: NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...