Homeಕರ್ನಾಟಕಪ್ರತಾಪಗೌಡ ಪಾಟೀಲ್ ನೀವೇನು ವಿಶ್ವೇಶ್ವರಯ್ಯನವರ? ತರಾಟೆಗೆ ತೆಗೆದುಕೊಂಡ ನೀರಾವರಿ ಹೋರಾಟಗಾರರು

ಪ್ರತಾಪಗೌಡ ಪಾಟೀಲ್ ನೀವೇನು ವಿಶ್ವೇಶ್ವರಯ್ಯನವರ? ತರಾಟೆಗೆ ತೆಗೆದುಕೊಂಡ ನೀರಾವರಿ ಹೋರಾಟಗಾರರು

- Advertisement -
- Advertisement -

ಮಸ್ಕಿ ತಾಲ್ಲೂಕಿನ 58 ಬರಪೀಡಿತ ಹಳ್ಳಿಗಳಿಗೆ NRBC_5A ಕಾಲುವೆ ಮೂಲಕ ನೀರಾವರಿ ಯೋಜನೆ ಬೇಕೆಂದು ಹೋರಾಡುವವರಿಗೆ ನೀವೇನು ವಿಶ್ವೇಶ್ವರಯ್ಯನವರ ಥರ ವಿಜ್ಞಾನಿಗಳ ಎಂದು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಕೇಳಿದ್ದಾರೆ. ಇಲ್ಲಿಗೆ ನೀರು ಬರುವುದಿಲ್ಲ ಎಂದು ಹೇಳಲು ಅವರೇನು ವಿಶ್ವೇಶ್ವರಯ್ಯನವರೇ ಎಂದು ಹೋರಾಟ ಸಮಿತಿ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ ತರಾಟೆಗೆ ತಗೆದುಕೊಂಡಿದ್ದಾರೆ.

NRBC_5A ನೀರಾವರಿ ಯೋಜನೆಗಾಗಿ ನಡೆಯುತ್ತಿರುವ ಹೋರಾಟ ಇಂದಿಗೆ 136ನೇ ದಿನಕ್ಕೆ ಕಾಲಿಟ್ಟಿದೆ. ಪಾಮನಕಲ್ಲೂರಿನ ರೈತರ ಧರಣಿ ಸ್ಥಳದ ಮುಂದೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ, ಸಚಿವ ಬಿ. ಶ್ರೀರಾಮುಲು, ಸಂಸದ ಸಂಗಣ್ಣ ಕರಡಿ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ, ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಶಿವನಗೌಡ ಗೊರಬಾಳರವರು ಬಿಜೆಪಿ ಪರವಾಗಿ ಮತ ಕೇಳಲು ಆಗಮಿಸಿದಾಗ ಅವರನ್ನು ಹೋರಾಟಗಾರರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಹೋರಾಟ ಸಮಿತಿ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ ಮಾತನಾಡಿ, “ಇಷ್ಟು ದಿನ ನಾವು ಹೋರಾಟ ಮಾಡುತ್ತಿದ್ದೇವೆ, ನೀವೇಕೆ ತಿರುಗಿ ನೋಡಲಿಲ್ಲ? ಇಲ್ಲಿ ವಾಲ್ಮೀಕಿ ಭವನದ ಉದ್ಘಾಟನೆಗೆ ಶ್ರೀರಾಮುಲುರವರು ಬರಬೇಕಿತ್ತು, ಏಕೆ ಬರಲಿಲ್ಲ? ನಾವು ನೀರು ಬೇಕು ಎಂದು ಎಷ್ಟು ಸಲ ಕೇಳಿದ್ದೇವೆ ಗೊತ್ತೆ? ಸಂಗಣ್ಣ ಕರಡಿಯವರಿಗೆ ಗೊತ್ತಿದೆ, ಅವರು ಹೇಳಬೇಕು” ಎಂದು ಒತ್ತಾಯಿಸಿದರು.

ಮಸ್ಕಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ನೀರಾವರಿ ಹೋರಾಟಗಾರರು ತರಾಟೆಗೆ ತೆಗೆದುಕೊಂಡ ವಿಡಿಯೋ ನೋಡಿ..

ನೀವು ನೀರು ಕೊಡಲು ಆಗುವುದಿಲ್ಲ ಎನ್ನಲು ಕಾರಣವೇನು? ಇಂಜಿನಿಯರ್‌ಗಳು ನೀರು ಕೊಡಲು ಸಾಧ್ಯ ಎಂದು ವರದಿ ಕೊಟ್ಟಿದ್ದಾರೆ. ಎಂಡಿಆರ್‌ಎಫ್‌ ನವರನ್ನು ಕೇಳಿದರೆ ಸರ್ಕಾರ ಆದೇಶ ಮಾಡಿದರೆ ನಾವು ನೀರಾವರಿ ಮಾಡುತ್ತೇವೆ ಎನ್ನುತ್ತಾರೆ. ಸರ್ಕಾರ ಎಂದರೆ ನೀವೇ ತಾನೇ? ಏಕೆ ನೀವು ಮಾಡುತ್ತಿಲ್ಲ? ನೀರು ಇಲ್ಲವೇ? ಹಾಗಾದರೆ ಬಸವೇಶ್ವರ ಏತ ನೀರಾವರಿಗೆ ನೀರು ಎಲ್ಲಿಂದ ಬರುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ರೈತರಿಗೆ ಒಳ್ಳೆಯದಾಗುವುದನ್ನು ಮಾಡಿದರೆ ರೈತರು ನಿಮ್ಮನ್ನ ಮರೆಯುವುದಿಲ್ಲ. ದೇವದುರ್ಗದಲ್ಲಿ ದೇವೇಗೌಡರು ಕಾಲುವೆ ಮಾಡಿಸಿದ್ದಕ್ಕೆ ಎಲ್ಲರ ಮನೆಯಲ್ಲಿ ಅವರ ಫೋಟೊ ಇದೆ ಗೊತ್ತೆ? ನಿಮಗ್ಯಾಕೆ ಇದು ಸಾಧ್ಯವಿಲ್ಲ? ರಂಗರಾಮ್‌ ವರದಿಯ ಪ್ರಕಾರ ಈ ಪ್ರದೇಶಕ್ಕೆ NRBC_5A ಮೂಲಕ ಮಾತ್ರ ನೀರು ಕೊಡಲು ಸಾಧ್ಯ ಎನ್ನಲಾಗಿದೆ. ಹಾಗಿದ್ದರೂ ಪ್ರತಾಪಗೌಡ ಪಾಟೀಲರು ನೀರು ಕೊಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಹಾಗಾಗಿಯೇ ನಾವು ಅವರನ್ನು ವ್ಯಕ್ತಿಯಾಗಿ ವಿರೋಧಿಸುತ್ತಿದ್ದೇವೆಯೇ ಹೊರತು ಪಕ್ಷವನ್ನಲ್ಲ ಎಂದಿದ್ದಾರೆ.

13 ವರ್ಷದಲ್ಲಿ ಈ ಯೋಜನೆ ಮಾಡಿ ಎಂದು ಪ್ರತಾಪಗೌಡಪಾಟೀಲರು ಎಷ್ಟು ಅರ್ಜಿ ಕೊಟ್ಟಿದ್ದಾರೆ ಲೆಕ್ಕ ಕೊಡಲಿ? NRBC_5A ಯೋಜನೆ ಜಾರಿ ಮಾಡದೇ ರಾಯಚೂರು ಜಿಲ್ಲೆಗೆ ಕಾಲಿಡುವುದಿಲ್ಲ ಎಂದು ಯಡಿಯೂರಪ್ಪನವರು ಹೇಳಿದ್ದರು. ಆದರೂ ಏಕೆ ಯೋಜನೆ ಜಾರಿಯಾಗಲಿಲ್ಲ ಎಂದು ತಿಮ್ಮನಗೌಡ ಚಿಲ್ಕರಾಗಿ ಕಿಡಿಕಾರಿದರು.

ಶಾಸಕರು NRBC_5A ಯೋಜನೆ ಜಾರಿ ಮಾಡಬೇಕೆಂದು ಪ್ರತಾಪಗೌಡರು ಹೇಳಿದರೆ ನಾವು ಮಾಡುತ್ತೇವೆ ಎಂದು ಮೈತ್ರಿ ಸರ್ಕಾರದ ಸಚಿವರು ಹೇಳಿದ್ದರು. ಆದರೆ ಇವರು ಒಮ್ಮೆಯೂ ಹೇಳಲಿಲ್ಲ. ಹಾಗಾಗಿ ನಾವು ಬಿಜೆಪಿ ಆಗಿದ್ದರೂ ಪ್ರತಾಪಗೌಡರನ್ನು ವಿರೋಧಿಸುತ್ತೇವೆ ಎಂದರು.

ಮಸ್ಕಿಯ ಸಾವಿರಾರು ಯುವಕರು ದುಡಿಯಲು ಬೆಂಗಳೂರಿಗೆ ವಲಸೆ ಹೋಗುತ್ತಿದ್ದಾರೆ. ಇಲ್ಲಿ ವಯಸ್ಸಾದವರು ಮಾತ್ರ ಇದ್ದೇವೆ. ಅನಾವೃಷ್ಟಿಯಿಂದ ನರಳುತ್ತಿದ್ದೇವೆ. ನಮಗೆ ಬೆಳೆಯೇ ಬರುತ್ತಿಲ್ಲ. ಈ ಕಷ್ಟ ಬಿಜೆಪಿಯವರಿಗೆ ಗೊತ್ತಾಗುವುದಿಲ್ಲವೇ? ಎಂದು ಕಿಡಿಕಾರಿದರು.

ನಾವು ರೈತರೇನು ಭಯೋತ್ಪಾದಕರೇ? ನಮ್ಮ ಸರ್ಕಾರದ ಪ್ರತಿನಿಧಿಗಳಾಗಿ ನಿಮ್ಮನ್ನು ನಾವು ಎಂದಾದರೂ ಅವಮಾನ ಮಾಡಿದ್ದೇವೆಯೇ? ನೀವು ಅಷ್ಟೇ ರೈತರಿಗೆ ಅವಮಾನ ಮಾಡಬೇಡಿ. ನಾವು ಯಾರು ನಮಗೆ ಮನೆ ಕೊಡಿ ಎಂದು ಕೇಳುತ್ತಿಲ್ಲ. ಈ ಪ್ರದೇಶಕ್ಕೆ ಒಂದು ನೀರಾವರಿ ಯೋಜನೆ ಕೊಡಿ ಎಂದಷ್ಟೇ ಕೇಳುತ್ತಿದ್ದೇವೆ. ರೈತರಿಲ್ಲದಿದ್ದರೆ ದೇಶ ಉಳಿಯುವುದಿಲ್ಲ. ಇದನ್ನು ಅರಿಯದ ಸರ್ಕಾರ ನಮಗೆ ಏಕೆ ಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಇದನ್ನೂ ಓದಿ: NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...