Homeಕರ್ನಾಟಕಪ್ರತಾಪಗೌಡ ಪಾಟೀಲ್ ನೀವೇನು ವಿಶ್ವೇಶ್ವರಯ್ಯನವರ? ತರಾಟೆಗೆ ತೆಗೆದುಕೊಂಡ ನೀರಾವರಿ ಹೋರಾಟಗಾರರು

ಪ್ರತಾಪಗೌಡ ಪಾಟೀಲ್ ನೀವೇನು ವಿಶ್ವೇಶ್ವರಯ್ಯನವರ? ತರಾಟೆಗೆ ತೆಗೆದುಕೊಂಡ ನೀರಾವರಿ ಹೋರಾಟಗಾರರು

- Advertisement -
- Advertisement -

ಮಸ್ಕಿ ತಾಲ್ಲೂಕಿನ 58 ಬರಪೀಡಿತ ಹಳ್ಳಿಗಳಿಗೆ NRBC_5A ಕಾಲುವೆ ಮೂಲಕ ನೀರಾವರಿ ಯೋಜನೆ ಬೇಕೆಂದು ಹೋರಾಡುವವರಿಗೆ ನೀವೇನು ವಿಶ್ವೇಶ್ವರಯ್ಯನವರ ಥರ ವಿಜ್ಞಾನಿಗಳ ಎಂದು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಕೇಳಿದ್ದಾರೆ. ಇಲ್ಲಿಗೆ ನೀರು ಬರುವುದಿಲ್ಲ ಎಂದು ಹೇಳಲು ಅವರೇನು ವಿಶ್ವೇಶ್ವರಯ್ಯನವರೇ ಎಂದು ಹೋರಾಟ ಸಮಿತಿ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ ತರಾಟೆಗೆ ತಗೆದುಕೊಂಡಿದ್ದಾರೆ.

NRBC_5A ನೀರಾವರಿ ಯೋಜನೆಗಾಗಿ ನಡೆಯುತ್ತಿರುವ ಹೋರಾಟ ಇಂದಿಗೆ 136ನೇ ದಿನಕ್ಕೆ ಕಾಲಿಟ್ಟಿದೆ. ಪಾಮನಕಲ್ಲೂರಿನ ರೈತರ ಧರಣಿ ಸ್ಥಳದ ಮುಂದೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ, ಸಚಿವ ಬಿ. ಶ್ರೀರಾಮುಲು, ಸಂಸದ ಸಂಗಣ್ಣ ಕರಡಿ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ, ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಶಿವನಗೌಡ ಗೊರಬಾಳರವರು ಬಿಜೆಪಿ ಪರವಾಗಿ ಮತ ಕೇಳಲು ಆಗಮಿಸಿದಾಗ ಅವರನ್ನು ಹೋರಾಟಗಾರರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಹೋರಾಟ ಸಮಿತಿ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ ಮಾತನಾಡಿ, “ಇಷ್ಟು ದಿನ ನಾವು ಹೋರಾಟ ಮಾಡುತ್ತಿದ್ದೇವೆ, ನೀವೇಕೆ ತಿರುಗಿ ನೋಡಲಿಲ್ಲ? ಇಲ್ಲಿ ವಾಲ್ಮೀಕಿ ಭವನದ ಉದ್ಘಾಟನೆಗೆ ಶ್ರೀರಾಮುಲುರವರು ಬರಬೇಕಿತ್ತು, ಏಕೆ ಬರಲಿಲ್ಲ? ನಾವು ನೀರು ಬೇಕು ಎಂದು ಎಷ್ಟು ಸಲ ಕೇಳಿದ್ದೇವೆ ಗೊತ್ತೆ? ಸಂಗಣ್ಣ ಕರಡಿಯವರಿಗೆ ಗೊತ್ತಿದೆ, ಅವರು ಹೇಳಬೇಕು” ಎಂದು ಒತ್ತಾಯಿಸಿದರು.

ಮಸ್ಕಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ನೀರಾವರಿ ಹೋರಾಟಗಾರರು ತರಾಟೆಗೆ ತೆಗೆದುಕೊಂಡ ವಿಡಿಯೋ ನೋಡಿ..

ನೀವು ನೀರು ಕೊಡಲು ಆಗುವುದಿಲ್ಲ ಎನ್ನಲು ಕಾರಣವೇನು? ಇಂಜಿನಿಯರ್‌ಗಳು ನೀರು ಕೊಡಲು ಸಾಧ್ಯ ಎಂದು ವರದಿ ಕೊಟ್ಟಿದ್ದಾರೆ. ಎಂಡಿಆರ್‌ಎಫ್‌ ನವರನ್ನು ಕೇಳಿದರೆ ಸರ್ಕಾರ ಆದೇಶ ಮಾಡಿದರೆ ನಾವು ನೀರಾವರಿ ಮಾಡುತ್ತೇವೆ ಎನ್ನುತ್ತಾರೆ. ಸರ್ಕಾರ ಎಂದರೆ ನೀವೇ ತಾನೇ? ಏಕೆ ನೀವು ಮಾಡುತ್ತಿಲ್ಲ? ನೀರು ಇಲ್ಲವೇ? ಹಾಗಾದರೆ ಬಸವೇಶ್ವರ ಏತ ನೀರಾವರಿಗೆ ನೀರು ಎಲ್ಲಿಂದ ಬರುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ರೈತರಿಗೆ ಒಳ್ಳೆಯದಾಗುವುದನ್ನು ಮಾಡಿದರೆ ರೈತರು ನಿಮ್ಮನ್ನ ಮರೆಯುವುದಿಲ್ಲ. ದೇವದುರ್ಗದಲ್ಲಿ ದೇವೇಗೌಡರು ಕಾಲುವೆ ಮಾಡಿಸಿದ್ದಕ್ಕೆ ಎಲ್ಲರ ಮನೆಯಲ್ಲಿ ಅವರ ಫೋಟೊ ಇದೆ ಗೊತ್ತೆ? ನಿಮಗ್ಯಾಕೆ ಇದು ಸಾಧ್ಯವಿಲ್ಲ? ರಂಗರಾಮ್‌ ವರದಿಯ ಪ್ರಕಾರ ಈ ಪ್ರದೇಶಕ್ಕೆ NRBC_5A ಮೂಲಕ ಮಾತ್ರ ನೀರು ಕೊಡಲು ಸಾಧ್ಯ ಎನ್ನಲಾಗಿದೆ. ಹಾಗಿದ್ದರೂ ಪ್ರತಾಪಗೌಡ ಪಾಟೀಲರು ನೀರು ಕೊಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಹಾಗಾಗಿಯೇ ನಾವು ಅವರನ್ನು ವ್ಯಕ್ತಿಯಾಗಿ ವಿರೋಧಿಸುತ್ತಿದ್ದೇವೆಯೇ ಹೊರತು ಪಕ್ಷವನ್ನಲ್ಲ ಎಂದಿದ್ದಾರೆ.

13 ವರ್ಷದಲ್ಲಿ ಈ ಯೋಜನೆ ಮಾಡಿ ಎಂದು ಪ್ರತಾಪಗೌಡಪಾಟೀಲರು ಎಷ್ಟು ಅರ್ಜಿ ಕೊಟ್ಟಿದ್ದಾರೆ ಲೆಕ್ಕ ಕೊಡಲಿ? NRBC_5A ಯೋಜನೆ ಜಾರಿ ಮಾಡದೇ ರಾಯಚೂರು ಜಿಲ್ಲೆಗೆ ಕಾಲಿಡುವುದಿಲ್ಲ ಎಂದು ಯಡಿಯೂರಪ್ಪನವರು ಹೇಳಿದ್ದರು. ಆದರೂ ಏಕೆ ಯೋಜನೆ ಜಾರಿಯಾಗಲಿಲ್ಲ ಎಂದು ತಿಮ್ಮನಗೌಡ ಚಿಲ್ಕರಾಗಿ ಕಿಡಿಕಾರಿದರು.

ಶಾಸಕರು NRBC_5A ಯೋಜನೆ ಜಾರಿ ಮಾಡಬೇಕೆಂದು ಪ್ರತಾಪಗೌಡರು ಹೇಳಿದರೆ ನಾವು ಮಾಡುತ್ತೇವೆ ಎಂದು ಮೈತ್ರಿ ಸರ್ಕಾರದ ಸಚಿವರು ಹೇಳಿದ್ದರು. ಆದರೆ ಇವರು ಒಮ್ಮೆಯೂ ಹೇಳಲಿಲ್ಲ. ಹಾಗಾಗಿ ನಾವು ಬಿಜೆಪಿ ಆಗಿದ್ದರೂ ಪ್ರತಾಪಗೌಡರನ್ನು ವಿರೋಧಿಸುತ್ತೇವೆ ಎಂದರು.

ಮಸ್ಕಿಯ ಸಾವಿರಾರು ಯುವಕರು ದುಡಿಯಲು ಬೆಂಗಳೂರಿಗೆ ವಲಸೆ ಹೋಗುತ್ತಿದ್ದಾರೆ. ಇಲ್ಲಿ ವಯಸ್ಸಾದವರು ಮಾತ್ರ ಇದ್ದೇವೆ. ಅನಾವೃಷ್ಟಿಯಿಂದ ನರಳುತ್ತಿದ್ದೇವೆ. ನಮಗೆ ಬೆಳೆಯೇ ಬರುತ್ತಿಲ್ಲ. ಈ ಕಷ್ಟ ಬಿಜೆಪಿಯವರಿಗೆ ಗೊತ್ತಾಗುವುದಿಲ್ಲವೇ? ಎಂದು ಕಿಡಿಕಾರಿದರು.

ನಾವು ರೈತರೇನು ಭಯೋತ್ಪಾದಕರೇ? ನಮ್ಮ ಸರ್ಕಾರದ ಪ್ರತಿನಿಧಿಗಳಾಗಿ ನಿಮ್ಮನ್ನು ನಾವು ಎಂದಾದರೂ ಅವಮಾನ ಮಾಡಿದ್ದೇವೆಯೇ? ನೀವು ಅಷ್ಟೇ ರೈತರಿಗೆ ಅವಮಾನ ಮಾಡಬೇಡಿ. ನಾವು ಯಾರು ನಮಗೆ ಮನೆ ಕೊಡಿ ಎಂದು ಕೇಳುತ್ತಿಲ್ಲ. ಈ ಪ್ರದೇಶಕ್ಕೆ ಒಂದು ನೀರಾವರಿ ಯೋಜನೆ ಕೊಡಿ ಎಂದಷ್ಟೇ ಕೇಳುತ್ತಿದ್ದೇವೆ. ರೈತರಿಲ್ಲದಿದ್ದರೆ ದೇಶ ಉಳಿಯುವುದಿಲ್ಲ. ಇದನ್ನು ಅರಿಯದ ಸರ್ಕಾರ ನಮಗೆ ಏಕೆ ಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಇದನ್ನೂ ಓದಿ: NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...