Homeಕರ್ನಾಟಕಪ್ರತಾಪಗೌಡ ಪಾಟೀಲ್ ನೀವೇನು ವಿಶ್ವೇಶ್ವರಯ್ಯನವರ? ತರಾಟೆಗೆ ತೆಗೆದುಕೊಂಡ ನೀರಾವರಿ ಹೋರಾಟಗಾರರು

ಪ್ರತಾಪಗೌಡ ಪಾಟೀಲ್ ನೀವೇನು ವಿಶ್ವೇಶ್ವರಯ್ಯನವರ? ತರಾಟೆಗೆ ತೆಗೆದುಕೊಂಡ ನೀರಾವರಿ ಹೋರಾಟಗಾರರು

- Advertisement -
- Advertisement -

ಮಸ್ಕಿ ತಾಲ್ಲೂಕಿನ 58 ಬರಪೀಡಿತ ಹಳ್ಳಿಗಳಿಗೆ NRBC_5A ಕಾಲುವೆ ಮೂಲಕ ನೀರಾವರಿ ಯೋಜನೆ ಬೇಕೆಂದು ಹೋರಾಡುವವರಿಗೆ ನೀವೇನು ವಿಶ್ವೇಶ್ವರಯ್ಯನವರ ಥರ ವಿಜ್ಞಾನಿಗಳ ಎಂದು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಕೇಳಿದ್ದಾರೆ. ಇಲ್ಲಿಗೆ ನೀರು ಬರುವುದಿಲ್ಲ ಎಂದು ಹೇಳಲು ಅವರೇನು ವಿಶ್ವೇಶ್ವರಯ್ಯನವರೇ ಎಂದು ಹೋರಾಟ ಸಮಿತಿ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ ತರಾಟೆಗೆ ತಗೆದುಕೊಂಡಿದ್ದಾರೆ.

NRBC_5A ನೀರಾವರಿ ಯೋಜನೆಗಾಗಿ ನಡೆಯುತ್ತಿರುವ ಹೋರಾಟ ಇಂದಿಗೆ 136ನೇ ದಿನಕ್ಕೆ ಕಾಲಿಟ್ಟಿದೆ. ಪಾಮನಕಲ್ಲೂರಿನ ರೈತರ ಧರಣಿ ಸ್ಥಳದ ಮುಂದೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ, ಸಚಿವ ಬಿ. ಶ್ರೀರಾಮುಲು, ಸಂಸದ ಸಂಗಣ್ಣ ಕರಡಿ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ, ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಶಿವನಗೌಡ ಗೊರಬಾಳರವರು ಬಿಜೆಪಿ ಪರವಾಗಿ ಮತ ಕೇಳಲು ಆಗಮಿಸಿದಾಗ ಅವರನ್ನು ಹೋರಾಟಗಾರರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಹೋರಾಟ ಸಮಿತಿ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ ಮಾತನಾಡಿ, “ಇಷ್ಟು ದಿನ ನಾವು ಹೋರಾಟ ಮಾಡುತ್ತಿದ್ದೇವೆ, ನೀವೇಕೆ ತಿರುಗಿ ನೋಡಲಿಲ್ಲ? ಇಲ್ಲಿ ವಾಲ್ಮೀಕಿ ಭವನದ ಉದ್ಘಾಟನೆಗೆ ಶ್ರೀರಾಮುಲುರವರು ಬರಬೇಕಿತ್ತು, ಏಕೆ ಬರಲಿಲ್ಲ? ನಾವು ನೀರು ಬೇಕು ಎಂದು ಎಷ್ಟು ಸಲ ಕೇಳಿದ್ದೇವೆ ಗೊತ್ತೆ? ಸಂಗಣ್ಣ ಕರಡಿಯವರಿಗೆ ಗೊತ್ತಿದೆ, ಅವರು ಹೇಳಬೇಕು” ಎಂದು ಒತ್ತಾಯಿಸಿದರು.

ಮಸ್ಕಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ನೀರಾವರಿ ಹೋರಾಟಗಾರರು ತರಾಟೆಗೆ ತೆಗೆದುಕೊಂಡ ವಿಡಿಯೋ ನೋಡಿ..

ನೀವು ನೀರು ಕೊಡಲು ಆಗುವುದಿಲ್ಲ ಎನ್ನಲು ಕಾರಣವೇನು? ಇಂಜಿನಿಯರ್‌ಗಳು ನೀರು ಕೊಡಲು ಸಾಧ್ಯ ಎಂದು ವರದಿ ಕೊಟ್ಟಿದ್ದಾರೆ. ಎಂಡಿಆರ್‌ಎಫ್‌ ನವರನ್ನು ಕೇಳಿದರೆ ಸರ್ಕಾರ ಆದೇಶ ಮಾಡಿದರೆ ನಾವು ನೀರಾವರಿ ಮಾಡುತ್ತೇವೆ ಎನ್ನುತ್ತಾರೆ. ಸರ್ಕಾರ ಎಂದರೆ ನೀವೇ ತಾನೇ? ಏಕೆ ನೀವು ಮಾಡುತ್ತಿಲ್ಲ? ನೀರು ಇಲ್ಲವೇ? ಹಾಗಾದರೆ ಬಸವೇಶ್ವರ ಏತ ನೀರಾವರಿಗೆ ನೀರು ಎಲ್ಲಿಂದ ಬರುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ರೈತರಿಗೆ ಒಳ್ಳೆಯದಾಗುವುದನ್ನು ಮಾಡಿದರೆ ರೈತರು ನಿಮ್ಮನ್ನ ಮರೆಯುವುದಿಲ್ಲ. ದೇವದುರ್ಗದಲ್ಲಿ ದೇವೇಗೌಡರು ಕಾಲುವೆ ಮಾಡಿಸಿದ್ದಕ್ಕೆ ಎಲ್ಲರ ಮನೆಯಲ್ಲಿ ಅವರ ಫೋಟೊ ಇದೆ ಗೊತ್ತೆ? ನಿಮಗ್ಯಾಕೆ ಇದು ಸಾಧ್ಯವಿಲ್ಲ? ರಂಗರಾಮ್‌ ವರದಿಯ ಪ್ರಕಾರ ಈ ಪ್ರದೇಶಕ್ಕೆ NRBC_5A ಮೂಲಕ ಮಾತ್ರ ನೀರು ಕೊಡಲು ಸಾಧ್ಯ ಎನ್ನಲಾಗಿದೆ. ಹಾಗಿದ್ದರೂ ಪ್ರತಾಪಗೌಡ ಪಾಟೀಲರು ನೀರು ಕೊಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಹಾಗಾಗಿಯೇ ನಾವು ಅವರನ್ನು ವ್ಯಕ್ತಿಯಾಗಿ ವಿರೋಧಿಸುತ್ತಿದ್ದೇವೆಯೇ ಹೊರತು ಪಕ್ಷವನ್ನಲ್ಲ ಎಂದಿದ್ದಾರೆ.

13 ವರ್ಷದಲ್ಲಿ ಈ ಯೋಜನೆ ಮಾಡಿ ಎಂದು ಪ್ರತಾಪಗೌಡಪಾಟೀಲರು ಎಷ್ಟು ಅರ್ಜಿ ಕೊಟ್ಟಿದ್ದಾರೆ ಲೆಕ್ಕ ಕೊಡಲಿ? NRBC_5A ಯೋಜನೆ ಜಾರಿ ಮಾಡದೇ ರಾಯಚೂರು ಜಿಲ್ಲೆಗೆ ಕಾಲಿಡುವುದಿಲ್ಲ ಎಂದು ಯಡಿಯೂರಪ್ಪನವರು ಹೇಳಿದ್ದರು. ಆದರೂ ಏಕೆ ಯೋಜನೆ ಜಾರಿಯಾಗಲಿಲ್ಲ ಎಂದು ತಿಮ್ಮನಗೌಡ ಚಿಲ್ಕರಾಗಿ ಕಿಡಿಕಾರಿದರು.

ಶಾಸಕರು NRBC_5A ಯೋಜನೆ ಜಾರಿ ಮಾಡಬೇಕೆಂದು ಪ್ರತಾಪಗೌಡರು ಹೇಳಿದರೆ ನಾವು ಮಾಡುತ್ತೇವೆ ಎಂದು ಮೈತ್ರಿ ಸರ್ಕಾರದ ಸಚಿವರು ಹೇಳಿದ್ದರು. ಆದರೆ ಇವರು ಒಮ್ಮೆಯೂ ಹೇಳಲಿಲ್ಲ. ಹಾಗಾಗಿ ನಾವು ಬಿಜೆಪಿ ಆಗಿದ್ದರೂ ಪ್ರತಾಪಗೌಡರನ್ನು ವಿರೋಧಿಸುತ್ತೇವೆ ಎಂದರು.

ಮಸ್ಕಿಯ ಸಾವಿರಾರು ಯುವಕರು ದುಡಿಯಲು ಬೆಂಗಳೂರಿಗೆ ವಲಸೆ ಹೋಗುತ್ತಿದ್ದಾರೆ. ಇಲ್ಲಿ ವಯಸ್ಸಾದವರು ಮಾತ್ರ ಇದ್ದೇವೆ. ಅನಾವೃಷ್ಟಿಯಿಂದ ನರಳುತ್ತಿದ್ದೇವೆ. ನಮಗೆ ಬೆಳೆಯೇ ಬರುತ್ತಿಲ್ಲ. ಈ ಕಷ್ಟ ಬಿಜೆಪಿಯವರಿಗೆ ಗೊತ್ತಾಗುವುದಿಲ್ಲವೇ? ಎಂದು ಕಿಡಿಕಾರಿದರು.

ನಾವು ರೈತರೇನು ಭಯೋತ್ಪಾದಕರೇ? ನಮ್ಮ ಸರ್ಕಾರದ ಪ್ರತಿನಿಧಿಗಳಾಗಿ ನಿಮ್ಮನ್ನು ನಾವು ಎಂದಾದರೂ ಅವಮಾನ ಮಾಡಿದ್ದೇವೆಯೇ? ನೀವು ಅಷ್ಟೇ ರೈತರಿಗೆ ಅವಮಾನ ಮಾಡಬೇಡಿ. ನಾವು ಯಾರು ನಮಗೆ ಮನೆ ಕೊಡಿ ಎಂದು ಕೇಳುತ್ತಿಲ್ಲ. ಈ ಪ್ರದೇಶಕ್ಕೆ ಒಂದು ನೀರಾವರಿ ಯೋಜನೆ ಕೊಡಿ ಎಂದಷ್ಟೇ ಕೇಳುತ್ತಿದ್ದೇವೆ. ರೈತರಿಲ್ಲದಿದ್ದರೆ ದೇಶ ಉಳಿಯುವುದಿಲ್ಲ. ಇದನ್ನು ಅರಿಯದ ಸರ್ಕಾರ ನಮಗೆ ಏಕೆ ಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಇದನ್ನೂ ಓದಿ: NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...