Homeಕರ್ನಾಟಕಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

ಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

- Advertisement -
- Advertisement -

ನೀವು ಇದನ್ನು ಓದಿ ಮುಗಿಸುವ ಹೊತ್ತಿಗೆ ಮಸ್ಕಿ ಕ್ಷೇತ್ರದ ವಟಗಲ್‌ನಿಂದ ಒಂದು ರೊಕ್ಕ ಹಂಚುವ ವಿಡಿಯೋ ವೈರಲ್ ಆಗಬಹುದು. ಇಂದು ವಟಗಲ್‌ನಲ್ಲಿ ವೋಟಿಗೆ ಸಾವಿರ ರೂಪಾಯಿ ಕೊಡುವ ‘ಕಾರ್ಯಕ್ರಮ’ವನ್ನು ಬಿಜೆಪಿ ಹಮ್ಮಿಕೊಂಡಿದೆ ಮತ್ತು ಬೇರೆ ಊರುಗಳಲ್ಲಿ ಇದು ನಡೆಯುತ್ತಿದೆ ಎಂಬ ವಿಷಯ ಕ್ಷೇತ್ರದಲ್ಲಿ ಹರಿದಾಡುತ್ತಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ 5-ಎ ಕಾಲುವೆ ನೀರಾವರಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಗರಡ್ಡೆಪ್ಪ ದೇವರಮನಿ, ‘ಹಿಂದೆಲ್ಲ ಮತದಾನದ ಹಿಂದಿನ ದಿನ ಹಣ-ಹೆಂಡ ಹಂಚಲಾಗುತ್ತಿತ್ತು. ಆದರೆ ಈಗ ಇಲ್ಲಿ ಚುನಾವಣೆಗೆ ವಾರ ಮೊದಲೇ ಮಟಮಟ ಮಧ್ಯಾಹ್ನವೇ ವೋಟಿಗೆ ಒಂದು ಸಾವಿರ ರೂಪಾಯಿ ಹಂಚಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ವಟಗಲ್‌ನಲ್ಲಿ ಈಗಾಗಲೇ ಇದು ಶುರು ಆಗಿರಬಹುದು. ಯಾವ ಕ್ಷಣದಲ್ಲಾದರೂ ವಿಡಿಯೋಗಳು ಹೊರ ಬೀಳಬಹುದು’ ಎಂದರು.

ನಿನ್ನೆ ಬಿಜೆಪಿ ಇಲ್ಲಿನ ಮೂರು ತಾಂಡಾಗಳಲ್ಲಿ ಬಂಜಾರಾ ಸಮುದಾಯದ ಪ್ರತಿಭಾನ್ವಿತ ಗಾಯಕಿ ಮಂಗ್ಲಿ ಅವರಿಂದ ಗಾಯನ ಕಾರ್ಯಕ್ರಮ ನಡೆಸಿತು. ಬಿಜೆಪಿಯ ಸ್ಥಳೀಯ ನಾಯಕರ ಜೊತೆಗೆ ಕಲಬುರ್ಗಿ ಸಂಸದ ಉಮೇಶ ಜಾಧವ್ ಕೂಡ ಇದ್ದರು. ಕೊವಿಡ್ ಪೀಡಿತ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಕ್ವಾರಂಟೈನ್‌ನಲ್ಲಿ ಇದ್ದ ಕಾರಣ ಬಂದಿರಲಿಲ್ಲ ಅಷ್ಟೇ.

ಇನ್ನು ಮೊದಲಿಗೆ ‘ನೀರಾವರಿ ಹೋರಾಟ ಬೆಂಬಲಿಸಿ, ಪ್ರತಾಪಗೌಡರನ್ನು ಸೋಲಿಸಿ’ ಎಂಬ ಧ್ಯೇಯ ಹೊಂದಿದ್ದ ನೀರಾವರಿ ಹೋರಾಟ ಸಮಿತಿ ಈಗ ನೇರವಾಗಿ ಪ್ರಚಾರಕ್ಕೆ ಇಳಿದಿದ್ದು ಕಾಂಗ್ರೆಸ್ ಗೆಲ್ಲಿಸಿ ಎಂದು 5-ಎ ಕಾಲುವೆ ವ್ಯಾಪ್ತಿಗೆ ಬರುವ 58 ಹಳ್ಳಿಗಳಲ್ಲಿ ಪ್ರಚಾರ ಮಾಡುತ್ತಿದೆ.

‘ಈಗ ನಾವು ನೇರವಾಗಿಯೇ ಕಣಕ್ಕೆ ಧುಮುಕಿದ್ದೇವೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹೋರಾಟದ ಸ್ಥಳಕ್ಕೆ ಬಂದು ಸ್ಪಷ್ಟ ಭರವಸೆ ನೀಡಿದ ನಂತರ ನಾವು ನೇರವಾಗಿಯೇ ಕಾಂಗ್ರೆಸ್ ಗೆಲ್ಲಿಸಿ ಎಂದು ಪ್ರಚಾರ ನಡೆಸಿದ್ದೇವೆ. ಜನ ಕೂಡ ನಮ್ಮ ಮನವಿಯನ್ನು ಬೆಂಬಲಿಸುತ್ತಿದ್ದಾರೆ’ ಎನ್ನುವ ದೇವರಮನಿಯವರು, ‘ಹಣದಿಂದಲೇ ಎಲ್ಲವನ್ನೂ ಗೆಲ್ಲುತ್ತೇವೆ ಎಂದು ಭಾವಿಸಿರುವ ಬಿಜೆಪಿಗೆ ಇಲ್ಲಿ ದೊಡ್ಡ ನಿರಾಶೆ ಕಾದಿದೆ. ಪೊಲೀಸ್ ಮತ್ತು ಆಡಳಿತಯಂತ್ರದ ರಕ್ಷಣೆ ಇರುವ ಕಾರಣ ಅವರು ಮಟಮಟ ಮಧ್ಯಾಹ್ನವೇ ಹಣ ಹಂಚುವ ಹೀನ ಕ್ರಿಯೆಗೆ ಇಳಿದಿದ್ದಾರೆ. ಇದು ಬಿಜೆಪಿಯ ಹತಾಶೆಗೆ ಸಾಕ್ಷಿಯಾಗಿದೆ’ ಎಂದರು.

ಆರಂಭದಲ್ಲಿ ಇಲ್ಲಿ ಜೋರಾಗಿಯೇ ಸಭೆಗಳನ್ನು ಮಾಡುತ್ತ, ಜಾತಿವಾರು ಸಭೆಗಳನ್ನು ಮಾಡಿ, ಸ್ಥಳೀಯ ನಾಯಕರನ್ನು ‘ಒಲಿಸಿಕೊಳ್ಳಲು’ ಯತ್ನಿಸಿದ್ದ ವಿಜಯೇಂದ್ರ ಸದ್ಯ ಕ್ಷೇತ್ರದಲ್ಲಿ ಕಾಣುತ್ತಿಲ್ಲ. ನಾಳೆ ರಾತ್ರಿಯವರೆಗೆ ಬಹಿರಂಗ ಪ್ರಚಾರ ಇರಲಿದ್ದು ನಂತರ ಇನ್ನಷ್ಟು ಹಣದ ಹೊಳೆ ಹರಿಯಲಿದೆ ಎಂದು ರೈತರು ಅನುಮಾನ ವ್ಯಕ್ತಪಡಿಸಿದ್ದಾರೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮಸ್ಕಿ: ಬಿಜೆಪಿ ಹಣ ಹಂಚಿಕೆ ಆರೋಪದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...